Tax; ಕೇಂದ್ರ Vs ರಾಜ್ಯ ಮತ್ತೆ ತೆರಿಗೆ ತಿಕ್ಕಾಟ! ಬೇಡಿಕೆ ತಿರಸ್ಕರಿಸಿದ 16ನೇ ಹಣಕಾಸು ಆಯೋಗ

80 ಸಾವಿರ ಕೋ.ರೂ. ನಷ್ಟ ಪರಿಹಾರಕ್ಕೆ ರಾಜ್ಯ ಆಗ್ರಹ

Team Udayavani, Aug 30, 2024, 6:35 AM IST

Finಕೇಂದ್ರ Vs ರಾಜ್ಯ ಮತ್ತೆ ತೆರಿಗೆ ತಿಕ್ಕಾಟ!  ಬೇಡಿಕೆ ತಿರಸ್ಕರಿಸಿದ 16ನೇ ಹಣಕಾಸು ಆಯೋಗ

ಬೆಂಗಳೂರು: ತೆರಿಗೆ ಪಾಲು, ಅನುದಾನ ಹಂಚಿಕೆಗೆ ಸಂಬಂಧಿಸಿ ಕೇಂದ್ರದ ವಿರುದ್ಧ ಸಮರ ಸಾರಿ ರುವ ರಾಜ್ಯ ಸರಕಾರಕ್ಕೆ ಮತ್ತೂಂದು ಹಿನ್ನಡೆಯಾಗಿದ್ದು, ಈ ಹೋರಾಟ ಮತ್ತೊಂದು ಹಂತಕ್ಕೆ ಹೋಗುವ ಲಕ್ಷಣ ಗೋಚ ರಿಸುತ್ತಿದೆ.

ರಾಜ್ಯಕ್ಕೆ 5 ವರ್ಷಗಳಿಂದ ವಿಶೇಷ ಅನುದಾನ ಹಾಗೂ ತೆರಿಗೆ ಹಂಚಿಕೆಯಲ್ಲಿ 80 ಸಾವಿರ ಕೋಟಿ ರೂ. ಅನುದಾನ ನಷ್ಟವನ್ನು ಪರಿಹರಿಸಬೇಕೆಂದು 16ನೇ ಹಣಕಾಸು ಆಯೋಗದ ಮುಂದೆ ರಾಜ್ಯ ಸರಕಾರ ಪ್ರತಿಪಾದಿಸಿದರೆ, “ಹಿಂದಿನ ಹಣಕಾಸು ಆಯೋಗದ ಕ್ರಮದಿಂದ ರಾಜ್ಯಗಳಿಗೆ ಆದ ನಷ್ಟವನ್ನು ಮುಂದೆ ಬರುವ ಆಯೋಗ ಪರಿಹರಿಸುವ ಪದ್ಧತಿ ಇಲ್ಲ’ ಎಂದು 16ನೇ ಹಣಕಾಸು ಆಯೋಗದ ಅಧ್ಯಕ್ಷ ಡಾ| ಅರವಿಂದ ಪನಗಾರಿಯಾ ಹೇಳಿದ್ದಾರೆ.

ರಾಜ್ಯಕ್ಕೆ ಆಗಮಿಸಿರುವ ಡಾ| ಪನ ಗಾರಿಯಾ ಅಧ್ಯಕ್ಷತೆಯ 16ನೇ ಹಣಕಾಸು ಆಯೋಗದ ನಿಯೋಗದ ಜತೆಗೆ ಸುದೀರ್ಘ‌ ಚರ್ಚೆ ನಡೆಸಿದ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ನಿಯೋಗ 15ನೇ ಹಣಕಾಸು ಆಯೋಗದಿಂದ ಕರ್ನಾಟಕಕ್ಕೆ ಆಗಿರುವ ನಷ್ಟದ ಜತೆಗೆ 16ನೇ ಆಯೋಗ ರಾಜ್ಯಕ್ಕೆ ಅನುದಾನ ಹಂಚಿಕೆ ಮಾಡುವಾಗ ಈಗ ಪಾಲಿಸುತ್ತಿರುವ ಮಾನದಂಡಗಳಲ್ಲಿ ಪರಿಷ್ಕರಣೆ ಮಾಡಲೇ ಬೇಕೆಂದು ಆಗ್ರಹಿಸಿತು.

ಅಲ್ಲದೆ 16ನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ ಶೇ. 50ರಷ್ಟು ತೆರಿಗೆ ಪಾಲು ನೀಡಬೇಕೆಂಬ ಮಹತ್ವದ ಹಕ್ಕೊತ್ತಾಯ ಮಂಡಿಸಿರುವ ರಾಜ್ಯ ಸರಕಾರವು ಸೆಸ್‌ ಹಾಗೂ ಸರ್ಚಾರ್ಜ್‌ ಮೂಲಕ ಕೇಂದ್ರ ಸರಕಾರ ಸಂಗ್ರಹಿಸುವ ಸಂಪನ್ಮೂಲವೂ ರಾಜ್ಯಕ್ಕೆ ಹಂಚಿಕೆಯಾಗಬೇಕೆಂದು ಆಗ್ರಹಿಸಿದೆ. ರಾಜ್ಯಕ್ಕೆ ಕಳೆದ 5 ವರ್ಷಗಳಿಂದ ವಿಶೇಷ ಅನುದಾನ ಹಾಗೂ ತೆರಿಗೆ ಹಂಚಿಕೆಯಲ್ಲಿ 80 ಸಾವಿರ ಕೋಟಿ ರೂ. ಅನುದಾನ ನಷ್ಟವನ್ನು ಪರಿಹರಿಸಬೇಕೆಂದು ಪ್ರತಿಪಾದಿಸಿತು.

ನಷ್ಟದ ಪಟ್ಟಿ
-ರಾಜ್ಯ ನೀಡುವ ಪ್ರತೀ ಒಂದು ರೂಪಾಯಿಗೆ ಕೇವಲ 15 ಪೈಸೆ ಮಾತ್ರ ವಾಪಸ್‌ ಬರುತ್ತಿದೆ.
-15ನೇ ಹಣಕಾಸು ಆಯೋಗ ಕರ್ನಾಟಕಕ್ಕೆ ನೀಡುವ ಪಾಲು ಶೇ. 4.713ರಿಂದ ಶೇ.3.647ಗೆ ಇಳಿಕೆಯಾಗಿದೆ. ಇದರಿಂದ 5 ವರ್ಷದಲ್ಲಿ 68,275 ಕೋ.ರೂ. ನಷ್ಟ ಉಂಟಾಗಿದೆ.
-15ನೇ ಹಣಕಾಸು ಆಯೋಗದ ಅವಧಿಯಲ್ಲಿ ಕರ್ನಾಟಕಕ್ಕೆ ಒಟ್ಟು 80,000 ಕೋಟಿ ರೂ. ನಷ್ಟ ಉಂಟಾಗಿದೆ.
-ಪಾಲಿನ ಪರಿಗಣನೆಯಲ್ಲಿ ಅಸಮತೋಲನದಿಂದಾಗಿ ಆರ್ಥಿಕವಾಗಿ ಹಾಗೂ ಜನಸಂಖ್ಯೆ ನಿಯಂತ್ರಣ ಕಾರ್ಯದಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸಿದ ಕರ್ನಾಟಕ ಹಾಗೂ ಈ ರೀತಿಯ ರಾಜ್ಯಗಳು ದಂಡ ಎದುರಿಸುವಂತಾಗಿದೆ.

ರಾಜ್ಯದ ಬೇಡಿಕೆಗಳೇನು?
-5 ವರ್ಷಗಳ ವಿಶೇಷ ಅನುದಾನ, ತೆರಿಗೆ ಹಂಚಿಕೆಗಳ ಬಗ್ಗೆ ವಿವರಣೆ
-ಈಗ ಪಾಲಿಸುತ್ತಿರುವ ಮಾನದಂಡಗಳಲ್ಲಿ ಪರಿಷ್ಕರಣೆಗೆ ರಾಜ್ಯ ಆಗ್ರಹ
-ಬೆಂಗಳೂರಿನ ಅಭಿವೃದ್ಧಿಗೆ 27 ಸಾವಿರ ಕೋಟಿ ರೂ. ಬೇಕು: ಬೇಡಿಕೆ
-ಕಲ್ಯಾಣ ಕರ್ನಾಟಕ ಭಾಗಕ್ಕೆ 25 ಸಾವಿರ ಕೋಟಿ ರೂ. ಹಣ ಕೊಡಿ
-ಪಶ್ಚಿಮಘಟ್ಟ ವಲಯ ನಿರ್ವಹಣೆಗೆ 10 ಸಾವಿರ ಕೋಟಿ ರೂ. ಬೇಕು

ಗುಜರಾತಿನ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಮೋದಿಯವರು ತೆರಿಗೆ ಹಂಚಿಕೆಯಲ್ಲಿ ಶೇ. 50ರಷ್ಟು ಪಾಲಿಗೆ ಬೇಡಿಕೆಯಿಟ್ಟಿದ್ದರು. ಅನೇಕ ರಾಜ್ಯಗಳು ಈ ರೀತಿ ಬೇಡಿಕೆ ಸಲ್ಲಿಸಿರುವುದರಿಂದ ಕರ್ನಾಟಕದ ಬೇಡಿಕೆಯನ್ನು ಈಡೇರಿಸಬಹುದೆಂಬ ವಿಶ್ವಾಸವಿದೆ.
-ಸಿದ್ದರಾಮಯ್ಯ, ಮುಖ್ಯಮಂತ್ರಿ

ಟಾಪ್ ನ್ಯೂಸ್

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

Video: ಕೇವಲ ಒಂದೇ ಚಕ್ರದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿದ ಪೈಲೆಟ್

Video: ಕೇವಲ ಒಂದೇ ಚಕ್ರದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿದ ಪೈಲೆಟ್

18-pavagada

Pavagada: ಆಂಬ್ಯುಲೆನ್ಸ್ ಸಿಗದೆ ವೃದ್ದ ಮೃತದೇಹವನ್ನು ಬೈಕ್ ನಲ್ಲಿಯೇ ಕೊಂಡೊಯ್ದ ಮಕ್ಕಳು

India: ಭಾರತದ ಈ ಏಳು ರೈಲ್ವೆ ನಿಲ್ದಾಣಗಳ ಹೆಸರೇ ತುಂಬಾ ತಮಾಷೆಯಾಗಿದೆ… ಎಲ್ಲಿವೆ ಅವು!

India: ಭಾರತದ ಈ ಏಳು ರೈಲ್ವೆ ನಿಲ್ದಾಣಗಳ ಹೆಸರೇ ತುಂಬಾ ತಮಾಷೆಯಾಗಿದೆ… ಎಲ್ಲಿವೆ ಅವು!

Kharge (2)

One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ

1-congress

Rahul Gandhi ವಿರುದ್ಧ ಕೇಂದ್ರ ಸಚಿವ, ಬಿಜೆಪಿಗರ ಹೇಳಿಕೆ;ದೇಶದ ವಿವಿಧೆಡೆ ಕೈ ಪ್ರತಿಭಟನೆ

12

Actress Sakunthala: ಹೃದಯಾಘಾತದಿಂದ ಬಹುಭಾಷಾ ನಟಿ ʼಸಿ.ಐ.ಡಿ. ಶಕುಂತಲಾʼ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-araga

Thirthahalli ಹಣಗೆರೆಕಟ್ಟೆಯಲ್ಲಿ ಪ್ಯಾಲೆಸ್ತೀನ್ ಪರ ಫ್ಲೆಕ್ಸ್:ಕ್ರಮಕ್ಕೆ ಆರಗ ಒತ್ತಾಯ

1-qwewewqe

Cabinet meeting ತೃಪ್ತಿ ತಂದಿಲ್ಲ: ಬಿ.ಆರ್.ಪಾಟೀಲ ಮತ್ತೊಮ್ಮೆ ಅಸಮಧಾನ

10-ns-bosuaju

Raichur: ಬಿಜೆಪಿಯವರು ಮೈಮೇಲೆ ಬಂದಂತೆ ಆಡುತ್ತಿದ್ದಾರೆ: ಸಚಿವ ಎನ್.ಎಸ್.ಭೋಸರಾಜು

Upendra: ಸಿನಿರಂಗದಲ್ಲಿ ಗಂಡಸರಿಗೂ ಶೋಷಣೆ ಆಗಿದೆ- ಉಪೇಂದ್ರ

Upendra: ಸಿನಿರಂಗದಲ್ಲಿ ಗಂಡಸರಿಗೂ ಶೋಷಣೆ ಆಗಿದೆ- ಉಪೇಂದ್ರ

1-bus

Haveri; ಖಾಸಗಿ ಬಸ್ ಪಲ್ಟಿ: 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

15

Nice Road Kannada Movie: ನೈಸ್‌ ರೋಡ್‌ ಅಲ್ಲ,ನೈಟ್‌ ರೋಡ್‌!

17-uv-fusion

UV Fusion: ಪ್ರಕೃತಿಯನ್ನು ಮರೆತ ನಮ್ಮ ಉಳಿವು ಅಸಾಧ್ಯ

14

Rummy Aata Movie: ಸೆ.20ರಿಂದ ರಮ್ಮಿ ಆಟ ಶುರು

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

Video: ಕೇವಲ ಒಂದೇ ಚಕ್ರದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿದ ಪೈಲೆಟ್

Video: ಕೇವಲ ಒಂದೇ ಚಕ್ರದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿದ ಪೈಲೆಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.