ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

737 ಕೇಂದ್ರಗಳಲ್ಲಿ ಪರೀಕ್ಷೆ

Team Udayavani, Apr 18, 2024, 6:45 AM IST

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

ಬೆಂಗಳೂರು: ರಾಜ್ಯದಲ್ಲಿ ವೃತ್ತಿಪರ ಕೋರ್ಸ್‌ಗಳ ಪ್ರವೇಶ ಪರೀಕ್ಷೆ ಸಿಇಟಿ ಗುರುವಾರದಿಂದ ಆರಂಭಗೊಳ್ಳಲಿದ್ದು ದಾಖಲೆಯ 3.49 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಾಯಿಸಿಕೊಂಡಿದ್ದಾರೆ. ರಾಜ್ಯಾದ್ಯಂತ 737 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.

ಕಳೆದ ವರ್ಷ 2.60 ಲಕ್ಷ ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆ ಬರೆದಿದ್ದು ಈವರೆಗಿನ ದಾಖಲೆಯಾಗಿತ್ತು. ಆದರೆ ಈ ವರ್ಷ ಸುಮಾರು ಮೂರೂವರೆ ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಾಯಿಸಿಕೊಂಡಿದ್ದು ಹೊಸ ದಾಖಲೆ ನಿರ್ಮಾಣಗೊಳ್ಳಲಿದೆ.

ಇಂಜಿನಿಯರಿಂಗ್‌, ಕೃಷಿ ವಿಜ್ಞಾನ, ಪಶುವೈದ್ಯ ಸೇರಿದಂತೆ ಹಲವು ವೃತ್ತಿಪರ ಕೋರ್ಸುಗಳ ಪ್ರವೇಶಾತಿಗಾಗಿ ಗುರುವಾರ ಮತ್ತು ಶುಕ್ರವಾರ ಪರೀಕ್ಷೆ ನಡೆಯಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ)ಯ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್‌. ರಮ್ಯಾ ತಿಳಿಸಿದ್ದಾರೆ.

ಸಿಇಟಿ ಕರ್ತವ್ಯಕ್ಕೆ ಒಟ್ಟಾರೆ 20,300 ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು ರಾಜಧಾನಿ ಬೆಂಗಳೂರಿನಲ್ಲಿ ಗರಿಷ್ಠ 167 ಪರೀಕ್ಷಾ ಕೇಂದ್ರಗಳಿದ್ದು, ಈ ಬಾರಿ 648 ವಿಶೇಷ ಚೇತನ ಅಭ್ಯರ್ಥಿಗಳು ಸಿಇಟಿ ಬರೆಯುತ್ತಿದ್ದಾರೆ.

ಗುರುವಾರ ಜೀವಶಾಸ್ತ್ರ, ಗಣಿತ ಹಾಗೂ ಶುಕ್ರವಾರ ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರ ಪರೀಕ್ಷೆಗಳು ನಡೆಯಲಿವೆ. ಇಂಗ್ಲಿಷ್‌ ಮತ್ತು ಕನ್ನಡ ಎರಡರಲ್ಲೂ ಪ್ರಶ್ನೆಪತ್ರಿಕೆ ಇರಲಿದೆ. ಕಲಬುರಗಿ ಮುಂತಾದ ಉತ್ತರ ಕರ್ನಾಟಕದ ಭಾಗಗಳ ಕೆಲವು ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರದ ಗೊಂದಲವನ್ನು ಬಗೆಹರಿಸಿದ್ದು ಸಾಧ್ಯವಾದಷ್ಟೂ ವಿದ್ಯಾರ್ಥಿಗಳಿಗೆ ಅವರ ಸಮೀಪದ ಕೇಂದ್ರಗಳಲ್ಲೇ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗಿದೆ. ಬೇಸಿಗೆಯ ಝಳ ಇರುವುದರಿಂದ ಎಲ್ಲ ಪರೀಕ್ಷಾ ಕೇಂದ್ರಗಳಲ್ಲೂ ಕುಡಿಯುವ ನೀರಿಗೆ ವ್ಯವಸ್ಥೆ ಮಾಡಲಾಗಿದೆ. ಆಶಾ ಕಾರ್ಯಕರ್ತೆಯರು, ಎನ್‌ಸಿಸಿ ಮತ್ತು ಎನ್‌ಎಸ್‌ಎಸ್‌ ಕೆಡೆಟ್‌ಗಳು ಪರೀಕ್ಷೆಯು ಸುಗಮವಾಗಿ ನಡೆಯಲು ಸಹಕರಿಸಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

20ರಂದು ಹೊರನಾಡು ಕನ್ನಡಿಗರಿಗೆ ಪರೀಕ್ಷೆ:
ಇದೇ 20ರಂದು ಬೆಳಗಾವಿ, ಮಂಗಳೂರು ಮತ್ತು ಬೆಂಗಳೂರು ಕೇಂದ್ರಗಳಲ್ಲಿ ಹೊರನಾಡು ಮತ್ತು ಗಡಿನಾಡು ಕನ್ನಡ ಅಭ್ಯರ್ಥಿಗಳಿಗೆ ಬೆಳಿಗ್ಗೆ 11.30ರಿಂದ 12.30ರವರೆಗೆ ಕನ್ನಡ ಪರೀಕ್ಷೆ ನಡೆಯಲಿದೆ. ಈ ಸಲ ಒಟ್ಟು 1,545 ವಿದ್ಯಾರ್ಥಿಗಳು ಈ ಪರೀಕ್ಷೆ ಬರೆಯಲಿ¨ªಾರೆ ಎಂದು ಅವರು ವಿವರಿಸಿದರು.

ಪರೀಕ್ಷಾರ್ಥಿಗಳಿಗೆ ಸೂಚನೆಗಳು
ಅಭ್ಯರ್ಥಿಗಳು ಪ್ರವೇಶಪತ್ರ ಮತ್ತು ಗುರುತಿನ ಪತ್ರದೊಂದಿಗೆ ಬರುವುದು ಕಡ್ಡಾಯ. ನೀಲಿ ಅಥವಾ ಕಪ್ಪು ಬಣ್ಣದ ಪೆನ್‌ ಮಾತ್ರ ಬಳಸಬೇಕು. ತುಂಬುದೋಳಿನ ಅಂಗಿ ಧರಿಸಿಕೊಂಡು ಬರುವಂತಿಲ್ಲ. ಮೊಬೈಲ್ ಬ್ಲೂಟೂತ್‌, ಟ್ಯಾಬ್ಲೆಟ್‌, ಕೈಗಡಿಯಾರ, ಕ್ಯಾಲುಕುಲೇಟರ್‌, ನೋಟ್‌ ಪ್ಯಾಡ್‌, ಐ-ಪಾಡ್‌, ಇಯರ್‌ ಫೋನ್‌ ಇತ್ಯಾದಿಗಳನ್ನು ತರುವಂತಿಲ್ಲ. ಒಮ್ಮೆ ಉತ್ತರವನ್ನು ಗುರುತು ಮಾಡಿದ ಬಳಿಕ ಅದನ್ನು ಅಳಿಸಲು ಅವಕಾಶವಿರುವುದಿಲ್ಲ. ಓಎಂಆರ್‌ ಶೀಟಲ್ಲಿ ಪ್ರವೇಶಪತ್ರ ಸಂಖ್ಯೆ, ಪ್ರಶ್ನೆಪತ್ರಿಕೆಯ ವರ್ಶನ್‌ ಕೋಡ್‌ ನಮೂದಿಸುವುದು ಕಡ್ಡಾಯ. ಓಎಂಆರ್‌ ಶೀಟ್‌ನ ಕೆಳಭಾಗದಲ್ಲಿ ಅಭ್ಯರ್ಥಿಗಳು ಮರೆಯದೆ ಸಹಿ ಮಾಡಬೇಕು. ಓಎಂಆì ಶೀಟ್ನಲ್ಲಿರುವ ಟೈಮಿಂಗ್‌ ಮಾರ್ಕ್‌ ಮೇಲೆ ಏನನ್ನೂ ಬರೆಯುವುದಾಗಲಿ, ಗೀಚುವುದಾಗಲಿ ಮಾಡಬೇಡಿ ಎಂದು ಸೂಚಿಸಲಾಗಿದೆ.

ಹಿಜಾಬ್‌ ಗೊಂದಲ
ವಿದ್ಯಾರ್ಥಿನಿಯರು ಹಿಜಾಬ್‌ ಧರಿಸಿ ಪರೀಕ್ಷೆ ಬರೆಯಬಹುದೇ ಅಥವಾ ಪರೀಕ್ಷಾ ಕೇಂದ್ರದ ಹೊರಗೆ ಹಿಜಾಬ್‌ ಬಿಟ್ಟು ಬರಬೇಕೇ ಎಂಬುದರ ಬಗ್ಗೆ ಸ್ಪಷ್ಟನೆ ನೀಡಲು ಕೆಇಎ ಅಧಿಕಾರಿಗಳು ನಿರಾಕರಿಸಿದ್ದು ಗೊಂದಲ ಸೃಷ್ಟಿಸಿದೆ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.