ಚಾಮರಾಜಪೇಟೆ ಮೈದಾನ ವಿವಾದ: 2006ರಲ್ಲಿ ಮಾಡಿಕೊಂಡ ಒಪ್ಪಂದ ಈವರೆಗೆ ಜಾರಿಗೆ ತಂದಿಲ್ಲ
Team Udayavani, Jun 10, 2022, 7:40 AM IST
ಬೆಂಗಳೂರು: ಚಾಮರಾಜಪೇಟೆ ಆಟದ ಮೈದಾನದಲ್ಲಿ ಎಲ್ಲ ಸಮುದಾಯಗಳ ಹಬ್ಬ, ಪ್ರಾರ್ಥನೆ ಹಾಗೂ ಆಚರಣೆಗಳಿಗೆ ಅನುಮತಿ ನೀಡುವ ಕುರಿತಂತೆ 2006ರಲ್ಲಿಯೇ ಸ್ಥಳೀಯ ಶಾಸಕರು ಹಾಗೂ ಇನ್ನಿತರ ಪ್ರಮುಖರು ಮಾಡಿಕೊಂಡ ಒಪ್ಪಂದವನ್ನು ಈವರೆಗೆ ಜಾರಿಗೆ ತಂದಿಲ್ಲ.
ಮೈದಾನ ಬಳಕೆ ಕುರಿತಂತೆ 2006ರ ಸೆಪ್ಟಂಬರ್ನಲ್ಲಿ ಚಾಮರಾಜಪೇಟೆಯ ಅಂದಿನ ಎಸಿಪಿ ಹಾಗೂ ಶಾಸಕ ಜಮೀರ್ ಅಹ್ಮದ್, ಪ್ರಮುಖರಾದ ಪ್ರಮೀಳಾ ನೇಸರ್ಗಿ, ಆರ್.ವಿ. ದೇವರಾಜ್ ನೇತೃತ್ವದಲ್ಲಿ ಸಭೆ ನಡೆಸಲಾಗಿತ್ತು. ಈ ವೇಳೆ ಮೈದಾನವನ್ನು ಯಾವುದೇ ರೀತಿಯಲ್ಲಿ ಮಾರ್ಪಡಿಸದೆ ಯಥಾಸ್ಥಿತಿಯಲ್ಲಿ ಇರಿಸುವಂತೆ ನೋಡಿಕೊಳ್ಳಬೇಕು. ಅಲ್ಲಿ ನಿರ್ಮಿಸಲಾದ ಶೌಚಗೃಹವನ್ನು ಸಾರ್ವಜನಿಕ ಬಳಕೆಗೆ ಮುಕ್ತವಾಗಿಸಬೇಕು. ಮುಖ್ಯವಾಗಿ ಮೈದಾನದಲ್ಲಿ ದಸರಾ, ಶಿವರಾತ್ರಿ, ಗಣೇಶೋತ್ಸವ, ಕರ್ನಾಟಕ ರಾಜ್ಯೋತ್ಸವ, ಕ್ರೀಡಾಕೂಟ ಮುಂತಾದ ಚಟುವಟಿಕೆಗಳನ್ನು ನಡೆಸಲು ಅನುಮತಿಸಬೇಕು ಎಂದು ಒಪ್ಪಂದ ಮಾಡಿಕೊಳ್ಳಲಾಗಿತ್ತು.
ಅದಾದ ಬಳಿಕ ಪೊಲೀಸ್ ಇಲಾಖೆ ಮತ್ತು ಬಿಬಿಎಂಪಿ ಮುಸ್ಲಿಂ ಸಮುದಾಯದವರಿಗೆ ವರ್ಷದಲ್ಲಿ ಎರಡು ಬಾರಿ ಪ್ರಾರ್ಥನೆ ಸಲ್ಲಿಸಲು ಮಾತ್ರ ಅವಕಾಶ ನೀಡುತ್ತಿವೆ. ಬೇರೆ ಯಾವುದೇ ಸಮಾರಂಭ, ಆಚರಣೆಗೂ ಅನುಮತಿ ನೀಡುತ್ತಿಲ್ಲ. ಇದು 2006ರಲ್ಲಿ ಸ್ಥಳೀಯ ಮುಖಂಡರು ಮಾಡಿಕೊಂಡ ಒಪ್ಪಂದದ ಉಲ್ಲಂಘನೆಯಾಗಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.
ಈ ಬಾರಿ 3 ಅರ್ಜಿ ಸಲ್ಲಿಕೆ :
ಚಾಮರಾಜಪೇಟೆಯ ಆಟದ ಮೈದಾನದಲ್ಲಿ ಸಭೆ- ಸಮಾರಂಭ ನಡೆಸಲು ಈ ಬಾರಿ 3 ಅರ್ಜಿಗಳು ಸಲ್ಲಿಕೆಯಾಗಿವೆ. ಶ್ರೀರಾಮಸೇನೆಯಿಂದ ಜೂ. 21ರಂದು ಯೋಗ ದಿನಾಚರಣೆ, ವಿಶ್ವ ಸಾಧನಾ ಪರಿಷತ್ ವತಿಯಿಂದ ಆ. 14-15ರಂದು ಸ್ವಾತಂತ್ರ್ಯ ದಿನಾಚರಣೆ ಹಾಗೂ ವಂದೇ ಮಾತರಂ ಸಮಾಜ ಸಂಸ್ಥೆಯಿಂದ ಆ. 15ರಂದು ಸ್ವಾತಂತ್ರ್ಯ ದಿನ ಆಚರಣೆ ಅವಕಾಶ ನೀಡುವಂತೆ ಮನವಿ ಪತ್ರ ಸಲ್ಲಿಸಲಾಗಿದೆ. ಈ ಬಗ್ಗೆ ಪೊಲೀಸ್ ಇಲಾಖೆ ಮತ್ತು ಬಿಬಿಎಂಪಿ ಸ್ಥಳೀಯ ಅಧಿಕಾರಿಗಳು ಸಭೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಬಿಬಿಎಂಪಿ ಆಡಳಿತ ವಿಭಾಗದ ವಿಶೇಷ ಆಯುಕ್ತ ರಂಗಪ್ಪ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು
ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸವಿದೆ ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ
ನನ್ನಂತ ದಲಿತರಿಗೆ ಒಳ್ಳೆಯದಾಗದಿದ್ದರೆ ಮುಂದೆ ಯಾವ ದಲಿತರಿಗೂ ಒಳ್ಳೆದಾಗಲ್ಲ: ಜಿಗಜಿಣಗಿ ಭಾವುಕ
ಅ*ತ್ಯಾಚಾರ ಪ್ರಕರಣ:ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ-14 ದಿನ ನ್ಯಾಯಾಂಗ ಬಂಧನ
ಕೇಂದ್ರದಿಂದ ರಾಜ್ಯ ಸರ್ಕಾರದ ಅಸ್ಥಿರ ಪ್ರಯತ್ನ ಎಂಬುದು ಕಾಂಗ್ರೆಸ್ ನ ಭ್ರಮೆ: ಸಂಸದ ಜಿಗಜಿಣಗಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
IFFI: ಗೋವಾದಲ್ಲಿ 55ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ನ.20ರಿಂದ ಆರಂಭ
PM: ಕಾಂಗ್ರೆಸ್ ಡ್ರಗ್ಸ್ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ
Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು
IFFI: ನವೆಂಬರ್ 20ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ
Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್ ಹಾದಿ ಹೀಗಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.