Mysuru ಚಾಮುಂಡೇಶ್ವರಿ ಅಭಿವೃದ್ಧಿ ಪ್ರಾಧಿಕಾರ: ಹೈಕೋರ್ಟ್ ತಡೆ
ಚಾಮುಂಡಿ ಬೆಟ್ಟ ರಾಜಮನೆತದ ಆಸ್ತಿ: ಪ್ರಮೋದಾದೇವಿ ಒಡೆಯರ್
Team Udayavani, Aug 13, 2024, 6:30 AM IST
ಬೆಂಗಳೂರು: ಮೈಸೂರಿನ ಚಾಮುಂಡೇಶ್ವರಿ ಬೆಟ್ಟ, ದೇವಸ್ಥಾನದ ಅಭಿವೃದ್ಧಿ ಹಾಗೂ ನಿರ್ವಹಣೆಯಲ್ಲಿ ಮೈಸೂರು ರಾಜಮನೆತನದ ಅಧಿಕಾರ ಮೊಟಕುಗೊಳಿಸುವ ಮತ್ತು ರಾಜಮನೆತನದ ಖಾಸಗಿ ಆಸ್ತಿಗಳನ್ನು ಸರಕಾರದ ವ್ಯಾಪ್ತಿಗೆ ತೆಗೆದುಕೊಳ್ಳುವ ಉದ್ದೇಶ ಹೊಂದಿದೆ ಎನ್ನಲಾದ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಕಾಯ್ದೆ-2024 ಜಾರಿಗೆ ಹೈಕೋರ್ಟ್ ತಾತ್ಕಾಲಿಕ ತಡೆ ನೀಡಿದೆ.
ರಾಜ್ಯ ಸರಕಾರದ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಕಾಯ್ದೆ-2024ರ ಹಲವು ಸೆಕ್ಷನ್ಗಳನ್ನು ಪ್ರಶ್ನಿಸಿ ಮೈಸೂರು ಒಡೆಯರ್ ವಂಶಸ್ಥೆ ರಾಣಿ ಪ್ರಮೋದಾದೇವಿ ಒಡೆಯರ್ ಸಲ್ಲಿಸಿರುವ ತಕರಾರು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ, ಮುಂದಿನ ವಿಚಾರಣೆವರೆಗೆ ಕಾಯ್ದೆಯನ್ನು ಜಾರಿಗೆ ತಾರದಂತೆ ತಾತ್ಕಾಲಿಕ ತಡೆ ನೀಡಿ ವಿಚಾರಣೆಯನ್ನು ಆಗಸ್ಟ್ 22ಕ್ಕೆ ಮುಂದೂಡಿದೆ.
ಚಾಮುಂಡಿ ಬೆಟ್ಟ ರಾಜಮನೆತದ ಆಸ್ತಿ: ಪ್ರಮೋದಾದೇವಿ ಒಡೆಯರ್
ಚಾಮುಂಡಿಬೆಟ್ಟ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಹೈಕೋರ್ಟ್ ತಡೆ ನೀಡಿದ ಹಿನ್ನೆಲೆಯಲ್ಲಿ ಪ್ರಾಧಿಕಾರ ತನ್ನ ಅಸ್ತಿತ್ವ ಕಳೆದುಕೊಂಡಿದೆ ಎಂದು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ತಿಳಿಸಿದರು. ಅರಮನೆ ಆವರಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸರಕಾರವು ಕಾನೂನು ಬಾಹಿರವಾಗಿ ಆಸ್ತಿ ವಶಕ್ಕೆ ಪಡೆದ ವೇಳೆ ಚಾಮುಂಡಿಬೆಟ್ಟದ ದೇಗುಲಗಳು ಸೇರಿ ಇತರೆ ಆಸ್ತಿಗಳು ಮೈಸೂರು ರಾಜಮನೆತನಕ್ಕೆ ಸೇರಿವೆ ಹೈಕೋರ್ಟಿನಲ್ಲಿ ದಾವೆ ಹೂಡಲಾಗಿದೆ. ಅದು ವಿಚಾರಣೆ ಹಂತದಲ್ಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಳಿಂಗ ನಾವಡ ಪ್ರಶಸ್ತಿಗೆ ಕೋಟ ಶಿವಾನಂದ ಆಯ್ಕೆ
PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ
Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Talk Fight: ಯಾರು ಏನೇ ಅಂದ್ರೂ ಬಿಜೆಪಿ ಕಾರ್ಯಕರ್ತರು ನನ್ನ ಒಪ್ಪಿದ್ದಾರೆ: ವಿಜಯೇಂದ್ರ
Munirathna:ಒಕ್ಕಲಿಗ ಹೆಣ್ಣುಮಕ್ಕಳ ಬಗ್ಗೆ ಹೇಳಿಕೆ; ಸಮುದಾಯದ ಸಚಿವ, ಶಾಸಕರಿಂದ ಸಿಎಂಗೆ ಮನವಿ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.