BY Election: ಕಾಂಗ್ರೆಸ್ಗೆ ಚನ್ನಪಟ್ಟಣ, ಶಿಗ್ಗಾವಿಯೇ ಕಗ್ಗಂಟು
ಚನ್ನಪಟ್ಟಣದಿಂದ ಯೋಗೇಶ್ವರ್ಗೆ ಚಾನ್ಸ್ ತಪ್ಪಿದರೆ ರಘನಂದನ್ ಅಭ್ಯರ್ಥಿ?
Team Udayavani, Oct 23, 2024, 12:10 AM IST
ಬೆಂಗಳೂರು: ಶಿಗ್ಗಾವಿ ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ನಿಂದ ಸ್ಪರ್ಧಿಸಲು ತೀವ್ರ ಪೈಪೋಟಿ ಇದ್ದು, “ಕೈ’ ನಾಯಕರು ಮೂವರ ಹೆಸರನ್ನು ಅಂತಿಮಗೊಳಿಸಿ ಹೈಕಮಾಂಡ್ಗೆ ಕಳುಹಿಸಿದ್ದಾರೆ ಎನ್ನಲಾಗಿದೆ.
ಶಾಸಕ ವಿನಯ ಕುಲಕರ್ಣಿ ಪುತ್ರಿ ವೈಶಾಲಿ, ವಿಧಾನ ಪರಿಷತ್ತಿನ ಮಾಜಿ ಸದಸ್ಯ ಸೋಮಣ್ಣ ಬೇವಿನಮರದ, ಮಾಜಿ ಶಾಸಕ ಮಂಜುನಾಥ ಕುನ್ನೂರು ಪುತ್ನ ರಾಜು ಕುನ್ನೂರು ಅವರ ಹೆಸರನ್ನು ಪಕ್ಷದ ಚುನಾವಣ ಸಮಿತಿಗೆ ಶಿಫಾರಸು ಮಾಡಲಾಗಿದೆ.
ಸಂಡೂರಿನಿಂದ ಸಂಸದ ಇ. ತುಕಾರಾಂ ಪತ್ನಿ ಅನ್ನಪೂರ್ಣ ಅಥವಾ ಪುತ್ರಿ ಸೌಪರ್ಣಿಕಾ ಅವರು ಕಣಕ್ಕಿಳಿಯುವ ಸಾಧ್ಯತೆ ದಟ್ಟವಾಗಿದೆ. ಇನ್ನು ಯೋಗೇಶ್ವರ್ ಅವರನ್ನು ಪಕ್ಷಕ್ಕೆ ಕರೆತಂದರೆ, ಅವರನ್ನೇ ಚನ್ನಪಟ್ಟಣದಿಂದ ಅಖಾಡಕ್ಕಿಳಿಸುವುದು. ಒಂದು ವೇಳೆ ಸಾಧ್ಯವಾಗದಿದ್ದರೆ, ರಘುನಂದನ್ ರಾಮಣ್ಣ ಅವರನ್ನು ಅಭ್ಯರ್ಥಿಯಾಗಿ ಘೋಷಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ಯೋಗೇಶ್ವರ್ ಬರಮಾಡಿಕೊಳ್ಳಲು ಸಿದ್ಧತೆ ಮಾಡಿಕೊಂಡ ಕಾಂಗ್ರೆಸ್?
ಪರಿಷತ್ತಿನ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಯೋಗೇಶ್ವರ್ ಅವರೊಂದಿಗೆ ಬಿಜೆಪಿ ಇನ್ನೂ ಮಾತುಕತೆ ನಡೆಸಿರುವಾಗಲೇ ಆಡಳಿತಾರೂಢ ಕಾಂಗ್ರೆಸ್ ನಾಯಕರು ರತ್ನಗಂಬಳಿಯೊಂದಿಗೆ ಯೋಗೇಶ್ವರ್ ಅವರನ್ನು ಸ್ವಾಗತಿಸಲು ಭೂಮಿಕೆ ಸಿದ್ಧಪಡಿಸಿಕೊಳ್ಳುತ್ತಿದೆ. ಒಂದು ದಿನದ ಹಿಂದಷ್ಟೇ ಕಾದುನೋಡುವ ತಂತ್ರ ಅನುಸರಿಸುತ್ತಿದ್ದ ಕೈ ನಾಯಕರು ಮಂಗಳವಾರ ಇನ್ನೂ ಒಂದು ಹೆಜ್ಜೆ ಮುಂದೆಹೋಗಿ ಪಕ್ಷದ ತತ್ವ-ಸಿದ್ಧಾಂತ ಒಪ್ಪಿ ಬರುವುದಾದರೆ, ಯೋಗೇಶ್ವರ ಅವರಿಗೆ ಸ್ವಾಗತ ಎಂದು ಪರೋಕ್ಷವಾಗಿ ಆಹ್ವಾನ ನೀಡಿದೆ. ಮತ್ತೂಂದೆಡೆ ತೆರೆಮರೆಯಲ್ಲೇ ಸೈನಿಕನಿಗೆ ಗಾಳವನ್ನೂ ಹಾಕುತ್ತಿದೆ. ಆ ಮೂಲಕ ಮೈತ್ರಿಪಕ್ಷಗಳಿಗೆ ಸ್ಪಷ್ಟ ಸಂದೇಶ ರವಾನಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Organaisation: ಅಮೆರಿಕದಲ್ಲಿ ಆರೆಸ್ಸೆಸ್ ಸಂಘಟನೆಗೆ ಉತ್ತಮ ಸ್ಪಂದನೆ: ವಿಪುಲ್ ರೈ
Costal: ಡ್ರಗ್ಸ್ ಮಟ್ಟ ಹಾಕಲು ಕಾನೂನು ಬದಲಾವಣೆ ಚರ್ಚೆ: ಎಂಎಲ್ಸಿ ಮಂಜುನಾಥ ಭಂಡಾರಿ
Mangaluru: ಸರಕಾರಿ ಕಾಲೇಜಿನ ಎಂಎಸ್ಡಬ್ಲ್ಯು ವಿದ್ಯಾರ್ಥಿಗಳಿಗೆ ಸಂಕಷ್ಟ
Madikeri: ಹಣ ನೀಡದೆ ವಂಚನೆ: ಖಾಸಗಿ ಸಂಸ್ಥೆ ವಿರುದ್ಧ ದೂರು
Putturu: ವಾಹನದಲ್ಲಿ ದೋಷ: ನಷ್ಟ ಪರಿಹಾರ ನೀಡಲು ಗ್ರಾಹಕ ನ್ಯಾಯಾಲಯ ಆದೇಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.