ಆಡಳಿತ ” ಕುಂಟಿತ”: ಪರಿವಾರದಿಂದ ಮುಂದಿನ ವಾರ ಚಿಂತನಾ ಬೈಠಕ್


Team Udayavani, Jun 17, 2022, 9:54 AM IST

ಆಡಳಿತ ” ಕುಂಟಿತ”: ಪರಿವಾರದಿಂದ ಮುಂದಿನ ವಾರ ಚಿಂತನಾ ಬೈಠಕ್

ಬೆಂಗಳೂರು: ಚುನಾವಣಾ ವರ್ಷದಲ್ಲೂ ರಾಜ್ಯ ಸರಕಾರದ ಆಡಳಿತ ನಿರೀಕ್ಷಿತ ವೇಗದಲ್ಲಿ ನಡೆಯದೇ ಇರುವ ಬಗ್ಗೆ ಸಂಘ-ಪರಿವಾರದ ಮುಖಂಡರು ಅಸಮಾಧಾನಗೊಂಡಿದ್ದು, ಇದೇ ತಿಂಗಳು ಬೆಂಗಳೂರಿನಲ್ಲಿ ಮಹತ್ವದ ಚಿಂತನಾ ಬೈಠಕ್‌ ನಡೆಸಲು ತೀರ್ಮಾನಿಸಲಾಗಿದೆ.

ಜೂನ್ 21, 22 ರಂದು ಬೆಂಗಳೂರಿನ ಕೇಶವ ಕೃಪಾದಲ್ಲಿ ಚಿಂತನಾ ಬೈಠಕ್ ನಡೆಯಲಿದೆ ಎಂದು ಬಿಜೆಪಿ‌ ಮೂಲಗಳು ತಿಳಿಸಿವೆ. ಸಿಎಂ‌ ಬಸವರಾಜ್ ಬೊಮ್ಮಾಯಿ ಹಾಗೂ ಸಂಪುಟದ ಆಯ್ದ ಸಚಿವರಿಗೆ ಮಾತ್ರ ಈ ಸಭೆಗೆ ಆಹ್ವಾನ ನೀಡಲಾಗಿದ್ದು, ಸರಕಾರದ ಆಡಳಿತ ವೈಖರಿ, ನೀತಿ- ನಿರೂಪಣಾ ವ್ಯವಸ್ಥೆಯ ಬಗ್ಗೆ ಶಸ್ತ್ರಚಿಕಿತ್ಸೆ ನಡೆಸಲಾಗುತ್ತದೆ ಎಂದು ತಿಳಿದು ಬಂದಿದೆ.

ಈ ಸಭೆಯಲ್ಲಿ ಕೇಂದ್ರ ಸರಕಾರದ ಪ್ರತಿನಿಧಿಯಾಗಿ ಹಿರಿಯ ಸಚಿವರೊಬ್ಬರು ಭಾಗವಹಿಸುವ ನಿರೀಕ್ಷೆ ಇದೆ. ಜತೆಗೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಸಂಘ ಪರಿವಾರದ ಮುಖಂಡರಾದ ಮುಕುಂದ್, ರವಿಕುಮಾರ್, ತಿಪ್ಪೇಸ್ವಾಮಿ ಮೊದಲಾದವರು ಭಾಗವಹಿಸಲಿದ್ದಾರೆ.

ಇದನ್ನೂ ಓದಿ:ಭ್ರಷ್ಟರ ಬೇಟೆಗಿಳಿದ ಎಸಿಬಿ: ರಾಜ್ಯದ 80 ಸ್ಥಳಗಳಲ್ಲಿ ಏಕಕಾಲಕ್ಕೆ ದಾಳಿ

ಚುನಾವಣಾ ವರ್ಷದಲ್ಲೂ ಬಿಜೆಪಿ ಸರಕಾರದ ಆಡಳಿತ ಜನಸಾಮಾನ್ಯರಿಗೆ ಸಮರ್ಪಕವಾಗಿ ತಲುಪುತ್ತಿಲ್ಲ. ಸರಕಾರದ ಬಗ್ಗೆ ಸಾರ್ವಜನಿಕರಲ್ಲಿ ಇನ್ನೂ ಉತ್ತಮ ಅಭಿಪ್ರಾಯ ಮೂಡುತ್ತಿಲ್ಲ. ಸ್ಪಂದನಾಶೀಲತೆ ಸಮರ್ಪಕವಾಗಿ ಇಲ್ಲ. ತಳಹಂತದ ಭ್ರಷ್ಟಾಚಾರ ಹಾಗೂ ದೋಷಪೂರಿತ ಕಾಮಗಾರಿಗಳು ಜನರಲ್ಲಿ ಬೇಸರ ಮೂಡಿಸುತ್ತಿವೆ. ಇದೆಲ್ಲದಕ್ಕೂ ಸರಕಾರ ಪರಿಹಾರ ಕಲ್ಪಿಸದೇ‌ ಇದ್ದರೆ ಚುನಾವಣಾ ವರ್ಷದಲ್ಲಿ ಸಮಸ್ಯೆ ಸೃಷ್ಟಿಯಾಗುತ್ತದೆ ಎಂಬ ಮಾಹಿತಿಯನ್ನು ಸಂಘ – ಪರಿವಾರದ ಮುಖಂಡರು ಸಂಗ್ರಹಿಸಿದ್ದಾರೆ. ಈ ಬಗ್ಗೆ ಚಿಂತನಾ ಸಭೆಯಲ್ಲಿ ಚರ್ಚೆಯಾಗಲಿದೆ ಎಂದು ತಿಳಿದು ಬಂದಿದೆ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.