![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Oct 30, 2019, 3:00 AM IST
ಸುಬ್ರಹ್ಮಣ್ಯ: ಸುಬ್ರಹ್ಮಣ್ಯ ನಗರಕ್ಕೆ ಕುಡಿಯುವ ನೀರು ಸರಬರಾಜಾಗುವ ಕಲ್ಲಪಣೆಯ ಜಲಸಂಗ್ರಹ ಘಟಕದಲ್ಲಿ ಕ್ಲೋರಿನ್ ಸೋರಿಕೆಯಾಗಿ ಉಸಿರಾಟದ ತೊಂದರೆ ಕಂಡುಬಂದು ದರಿಂದ ಸ್ಥಳೀಯರು ಮನೆ ತೊರೆದು ಹೊರಬಂದ ಘಟನೆ ಸೋಮವಾರ ತಡರಾತ್ರಿ ನಡೆದಿದೆ.
ತಡರಾತ್ರಿ 1 ಗಂಟೆ ವೇಳೆಗೆ ಕ್ಲೋರಿನ್ ಸೋರಿಕೆಯಾಗುತ್ತಿದ್ದಂತೆ ಪರಿಸರದಲ್ಲಿ ದುರ್ವಾಸನೆ ಪಸರಿಸಿತು. ಉಸಿರಾಟದ ತೊಂದರೆಗೊಳಗಾದ ಜನರು ಭಯದಿಂದ ರಾತೋರಾತ್ರಿ ಮನೆ ತೊರೆದು ಸಂಬಂಧಿಕರಲ್ಲಿ, ಪರಿಚಯಸ್ಥರಲ್ಲಿ ಆಶ್ರಯ ಪಡೆದರು.
ಘಟನೆ ವೇಳೆ ಘಟಕದಲ್ಲಿ ಇಬ್ಬರು ಸಿಬ್ಬಂದಿ ಮಾತ್ರ ಕರ್ತವ್ಯದಲ್ಲಿದ್ದರು. ಕೂಡಲೇ ದೇವಸ್ಥಾನ ಹಾಗೂ ಪೊಲೀಸರಿಗೆ ವಿಷಯ ತಿಳಿಸಲಾಯಿತು. ಸುಳ್ಯದಿಂದ ಅಗ್ನಿಶಾಮಕ ದವರು ಬಂದು ಮುಂಜಾನೆ 5ರ ಹೊತ್ತಿಗೆ ಸೋರಿಕೆ ತಡೆಗಟ್ಟಿದರು.
50 ಕುಟುಂಬಗಳಲ್ಲಿ ಭೀತಿ: ದೀಪಾವಳಿ ಸಂಭ್ರಮಾಚರಿಸಿ ನಿದ್ರೆಗೆ ಜಾರಿದ್ದ 50ಕ್ಕೂ ಅಧಿಕ ಕುಟುಂಬಗಳ ಜನರು ಏಕಾಏಕಿ ನಡೆದ ಘಟನೆಯಿಂದ ಆತಂಕಕ್ಕೊಳಗಾಗಿದ್ದರು. ಸ್ಥಳೀಯರೆಲ್ಲರೂ ಬೆಳಗಿನ ತನಕವೂ ಭಯದಲ್ಲೇ ಇರುವಂತಾಯಿತು.
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.