![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Feb 17, 2023, 5:35 AM IST
ಬೆಂಗಳೂರು: ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಮತ್ತು ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮಕ್ಕೆ ತಲಾ 10 ಕೋಟಿ ಹೆಚ್ಚುವರಿ ಅನುದಾನವನ್ನು ಇದೇ ಆರ್ಥಿಕ ವರ್ಷದಲ್ಲಿ ಕೊಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಪ್ರಶ್ನೋತ್ತರ ಅವಧಿಯಲ್ಲಿ ಜೆಡಿಎಸ್ ಸದಸ್ಯ ಟಿ.ಎ. ಶರವಣ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಯವರು, ಈ ಬಾರಿಯ ಲೇಖಾನುದಾನದಲ್ಲಿ ಇದಕ್ಕೆ ಅವಕಾಶ ಮಾಡಿಕೊಡಲಾಗುವುದು ಎಂದು ಭರವಸೆ ನೀಡಿದರು.
ಹೆಚ್ಚುವರಿ ಅನುದಾನ ಕೋರಿ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಹಾಗೂ ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮ ಪ್ರಸ್ತಾವನೆ ಸಲ್ಲಿಸಿರುವುದು ಸರಕಾರದ ಗಮನಕ್ಕೆ ಬಂದಿದೆ. 2022-23ನೇ ಸಾಲಿನಲ್ಲಿ ಬ್ರಾಹ್ಮಣ ಅಭಿವೃದ್ಧಿ ಮಂಡಳಿ 60 ಕೋಟಿ ರೂ. ಹೆಚ್ಚುವರಿ ಅನುದಾನ ಕೋರಿದೆ. ಆದರೆ, ಮಂಡಳಿಯ ಬ್ಯಾಂಕ್ ಖಾತೆಯಲ್ಲಿ 6.15 ಕೋಟಿ ರೂ. ಇದ್ದು, ಹಾಗೂ 2022-23ನೇ ಸಾಲಿನಲ್ಲಿ ಒದಗಿಸಿರುವ 3 ಕೋಟಿ ಅನುದಾನ ವೆಚ್ಚವಾಗದೇ ಉಳಿದ ಕಾರಣ ಹೆಚ್ಚುವರಿ ಅನುದಾನ ಒದಗಿಸಿರುವುದಿಲ್ಲ.
ಅದೇ ರೀತಿ 2022-23ನೇ ಆರ್ಥಿಕ ಸಾಲಿಗೆ ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮಕ್ಕೆ ಬಜೆಟ್ನಲ್ಲಿ 5 ಕೋಟಿ ರೂ. ನಿಗದಿಯಾಗಿದ್ದು, ಶೇ.50ರಷ್ಟು ಖರ್ಚಾಗದೇ ಉಳಿದಿರುವುರಿಂದ ಹೆಚ್ಚುವರಿ ಅನುದಾನದ ಪ್ರಸ್ತಾವನೆ ಅನುಮೋದಿಸಿರುವುದಿಲ್ಲ ಎಂದು ಮುಖ್ಯಮಂತ್ರಿಯವರು ಮಾಹಿತಿ ನೀಡಿದರು.
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
You seem to have an Ad Blocker on.
To continue reading, please turn it off or whitelist Udayavani.