ಸಿಎಂ ಬೊಮ್ಮಾಯಿ ದಾವೋಸ್ ಪ್ರವಾಸ ಖಚಿತ: 26 ಕ್ಕೆ ವಾಪಸ್
ದೇಶದ ಇಬ್ಬರು ಸಿಎಂಗಳು ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ಭಾಗಿ
Team Udayavani, May 20, 2022, 5:50 PM IST
ಬೆಂಗಳೂರು : ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ದಾವೋಸ್ ಪ್ರವಾಸಕ್ಕೆ ತೆರಳುವುದು ಖಚಿತವಾಗಿದ್ದು, ಸಚಿವಾಲಯ ಅವರ ಪ್ರವಾಸದ ವೇಳಾಪಟ್ಟಿಯನ್ನು ಶುಕ್ರವಾರ ಬಿಡುಗಡೆ ಮಾಡಿದೆ.
ಮುಖ್ಯಮಂತ್ರಿಗಳು ಮೇ 22 ರಂದು ಬೆಳಗ್ಗೆ 10.30 ಕ್ಕೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಪ್ರಯಾಣ ಆರಂಭಿಸಲಿದ್ದು, ದುಬೈ ಗೆ ತೆರಳಿ ಅಲ್ಲಿಂದ ಅದೇ ದಿನ ರಾತ್ರಿ 12 ಗಂಟೆಯ ವೇಳೆಗೆ ಸ್ವಿಟ್ಜರ್ ಲ್ಯಾಂಡ್ ನ ದಾವೋಸ್ ತಲುಪಲಿದ್ದಾರೆ.
ಮೇ 23 ಮತ್ತು 24 ರಂದು ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಮೇ 26 ರಂದು ರಾತ್ರಿ 9 ಗಂಟೆಗೆ ಬೆಂಗಳೂರಿಗೆ ಮರಳಲಿದ್ದಾರೆ ಎಂದು ವೇಳಾಪಟ್ಟಿಯಲ್ಲಿ ತಿಳಿಸಲಾಗಿದೆ.
ವಿಶ್ವ ಆರ್ಥಿಕ ಶೃಂಗ ಸಭೆಗೆ ದೇಶದ ಇಬ್ಬರು ಮುಖ್ಯಮಂತ್ರಿಗಳಿಗೆ ಆಹ್ವಾನ ನೀಡಲಾಗಿದ್ದು, ಬಸವರಾಜ ಬೊಮ್ಮಾಯಿ ಅವರೊಂದಿಗೆ ತೆಲಂಗಾಣ ಸಿಎಂ ಕೆ.ಚಂದ್ರಶೇಖರ್ ರಾವ್ ಅವರಿಗೆ ಆಹ್ವಾನ ನೀಡಲಾಗಿದೆ.
ರಾಜ್ಯದಲ್ಲಿ ನಡೆದ ರಾಜಕೀಯ ವಿದ್ಯಮಾನಗಳು, ಮುಂಬರಲಿರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು, ಸಂಪುಟ ವಿಚಾರದ ಗೊಂದಲ, ಮತ್ತು ಅವರು ಶುಕ್ರವಾರ ದಿಢೀರ್ ದೆಹಲಿ ಪ್ರವಾಸಕ್ಕೆ ತೆರಳಿದ್ದು, ದಾವೋಸ್ ಪ್ರವಾಸಕ್ಕೆ ತೆರಳುವ ಬಗೆಗೆ ಅನುಮಾನ ಹುಟ್ಟು ಹಾಕಿತ್ತು, ಆದರೆ ದೆಹಲಿಯಿಂದ ಪೊಲಿಟಿಕಲ್ ಕ್ಲಿಯರೆನ್ಸ್ ಸಿಕ್ಕ ಕಾರಣ ಸಿಎಂ ಪ್ರವಾಸ ಅಧಿಕೃತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.