ಬಾಂಗ್ಲಾ ವಿಮೋಚನಾ ಯುದ್ಧದ ಸುವರ್ಣ ಸಂಭ್ರಮ: ಗಣ್ಯರ ಸ್ಮರಣೆ
Team Udayavani, Dec 16, 2021, 10:48 AM IST
ಬೆಂಗಳೂರು: 1971ರ ಬಾಂಗ್ಲಾ ವಿಮೋಚನಾ ಯುದ್ಧದ ವಿಜಯೋತ್ಸವಕ್ಕೆ ಇಂದು 50 ವರ್ಷದ ಸಂಭ್ರಮ. ಈ ನಿಟ್ಟಿನಲ್ಲಿ ಇಡೀ ದೇಶಾದ್ಯಂತ ಸಂಭ್ರಮಾಚರಣೆ ನಡೆಸಲಾಗುತ್ತಿದೆ. ಈ ಸಂದರ್ಭದಲ್ಲಿ ಗಣ್ಯರು ಈ ಮಹೋನ್ನತದ ದಿನದ ಸ್ಮರಣೆ ಮಾಡಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ಮರಣೆ ಮಾಡಿದ್ದು, “ವಿಜಯ್ ದಿವಸ್, ಬಾಂಗ್ಲಾದೇಶದ ವಿಮೋಚನೆಗೆ ಕಾರಣವಾದ 1971 ರ ಯುದ್ಧದಲ್ಲಿ ಭಾರತವು ಪಾಕಿಸ್ತಾನವನ್ನು ನಿರ್ಣಾಯಕವಾಗಿ ಸೋಲಿಸಿದ ಐತಿಹಾಸಿಕ ದಿನವಾಗಿದೆ. ದೇಶಕ್ಕಾಗಿ ಹೋರಾಡಿದ ನಮ್ಮ ಧೀರ ಹೃದಯಗಳಿಗೆ ನಾನು ವಂದಿಸುತ್ತೇನೆ. ಬನ್ನಿ ಈ #SwarnimVijayVarsh ದಂದು ನಮ್ಮ ಧೀರರನ್ನು ಸ್ಮರಿಸೋಣ ಎಂದು ಕೂ ಮಾಡಿದ್ದಾರೆ.
ಬಾಂಗ್ಲಾದೇಶಕ್ಕೆ ಸ್ವಾತಂತ್ರ್ಯ ನೀಡಿ ಅಲ್ಲಿನ ಜನರಿಗೆ ನೆಮ್ಮದಿಯ ಬದುಕು ಕಲ್ಪಿಸಿದ #VijayDiwas ರಂದು ಭಾರತೀಯ ಯೋಧರ ಶೌರ್ಯ, ತ್ಯಾಗ, ಸಮರ್ಪಣೆಗೆ ಗೌರವದ ಪ್ರಣಾಮಗಳನ್ನು ಸಲ್ಲಿಸೋಣ. ಪಾಕಿಸ್ತಾನಕ್ಕೆ ಪಾಠ ಕಲಿಸಿ ಭಾರತದ ಶಕ್ತಿ ತೋರಿದ ಯೋಧರ ಸಾಹಸ, ರಾಷ್ಟ್ರಪ್ರೇಮ ಸ್ಮರಣಾರ್ಹವಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಇದನ್ನೂ ಓದಿ:ಭಾರತ ಸೇನೆಯ ವಿಜಯಗಾಥೆ ಸರಣಿ: ಪಾಕ್ ಸೈನಿಕರ ಹೆಣಗಳ ರಾಶಿ ಮೇಲೆ ನಡೆದಿದ್ದೆವು!
ಮಾಜಿ ಪ್ರಧಾನಿ, ಉಕ್ಕಿನ ಮಹಿಳೆ ಶ್ತೀಮತಿ ಇಂದಿರಾ ಗಾಂಧಿ ಅವರ ದಿಟ್ಟ, ಚಾಣಾಕ್ಷ ನಿರ್ಧಾರಗಳಿಂದ ಪಾಕಿಸ್ತಾನವನ್ನು ಬಗ್ಗು ಬಡಿದು, ಪೂರ್ವ ಪಾಕಿಸ್ತಾನವನ್ನು ಅದರ ಕಪಿಮುಷ್ಠಿಯಿಂದ ವಿಮುಕ್ತಿಗೊಳಿಸಿ ’ಬಾಂಗ್ಲಾದೇಶ’ಉದಯಕ್ಕೆ ಕಾರಣವಾದ, ಐತಿಹಾಸಿಕ ’ವಿಜಯ ದಿನ’ ದಂದು ಭಾರತೀಯ ಸೈನ್ಯದ ಅಪ್ರತಿಮ ಶೌರ್ಯ, ಸಾಹಸ, ಬಲಿದಾನವನ್ನು ಸ್ಮರಿಸುತ್ತೇವೆ ಎಂದು ಕರ್ನಾಟಕ ಕಾಂಗ್ರೆಸ್ ಕೂ ಮಾಡಿದೆ.
“ನೀವು ಶರಣಾಗಿ ಅಥವಾ ನಾವು ನಿಮ್ಮನ್ನು ಅಳಿಸಿ ಹಾಕುತ್ತೇವೆ”- ಫೀಲ್ಡ್ ಮಾರ್ಷಲ್ ಸ್ಯಾಮ್ ಮಾಣೆಕ್ ಷಾ ಅವರ 13ನೇ ಡಿಸೆಂಬರ್ 1971 ರಂದು ಪಾಕಿಸ್ತಾನಕ್ಕೆ ಹೇಳಿದ ಮಾತು. ಬಾಂಗ್ಲಾದೇಶದ ವಿಮೋಚನೆ ಯುದ್ಧದ ಸಂದರ್ಭದಲ್ಲಿ ವೀರ ಸೇನಾಧಿಕಾರಿ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಅವರ ದಿಟ್ಟ ನಾಯಕತ್ವದ ಪರಿಣಾಮ, 93,000 ಪಾಕ್ ಸೈನಿಕರು ಭಾರತಕ್ಕೆ ಶರಣಾಗಿದ್ದರು ಎಂದು ಸಚಿವ ಕೆ. ಸುಧಾಕರ್ ಸ್ಮರಣೆ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Koppal: ಚಿಕನ್, ಮಟನ್ ಸೆಂಟರ್ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ
Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್?
Caste census: ನಾಡಿದ್ದು ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ
Result: ಇಂದು ಯುಜಿನೀಟ್ ಪರಿಷ್ಕೃತ ತಾತ್ಕಾಲಿಕ ಫಲಿತಾಂಶ ಪ್ರಕಟ
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.