ಭಾಷಣವಷ್ಟೇ ಕಾಂಗ್ರೆಸ್ ಸಾಧನೆ: ಸಿಎಂ
Team Udayavani, Oct 13, 2022, 11:10 PM IST
ಹೂವಿನಹಡಗಲಿ: ರಾಜ್ಯದ ಜನತೆಗೆ ಶಿಕ್ಷಣ, ಉದ್ಯೋಗ, ಆರೋಗ್ಯ ಹಾಗೂ ಇತರ ಕ್ಷೇತ್ರಗಳ ಅಭಿವೃದ್ಧಿಗೆ ಪೂರಕ ಕೆಲಸಗಳು ನಿರಂತರವಾಗಿ ನಡೆಯಬೇಕು. ಹಾಗಿದ್ದಲ್ಲಿ ಮಾತ್ರ ರಾಜ್ಯ ಸಮಗ್ರ ಅಭಿವೃದ್ಧಿ ಕಾಣಲು ಸಾಧ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ತಾಲೂಕು ಕ್ರೀಡಾಂಗಣದಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಜನಸಂಕಲ್ಪ ಯಾತ್ರೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಜನಸಂಖ್ಯೆ ಹೆಚ್ಚಾದಂತೆ ಮೀಸಲಾತಿ ಹೆಚ್ಚಬೇಕು. ಅದರಂತೆ ರಾಜ್ಯದ ಎಸ್ಸಿ ಹಾಗೂ ಎಸ್ಟಿ ಜನಾಂಗದ ಮೀಸಲಾತಿ ಹೆಚ್ಚಿಸಲಾಗಿದೆ. ಇದನ್ನು ಕಾಂಗ್ರೆಸ್ನವರು ತಮ್ಮ ಅವಧಿಯಲ್ಲೇ ಯಾಕೆ ಮಾಡಲಿಲ್ಲ? ಕೇವಲ ಎಸ್ಸಿ, ಎಸ್ಟಿ ಜನಾಂಗ ಕುರಿತು ಭಾಷಣ ಮಾಡುತ್ತಲೇ ಬಂದರು. ಭಾಷಣದಿಂದ ಏನನ್ನೂ ಸಾಧಿಸಲು ಆಗುವುದಿಲ್ಲ ಎನ್ನುವುದನ್ನು ಅರಿಯಬೇಕು ಎಂದರು.
ಕಾಂಗ್ರೆಸ್ನಿಂದ ಲೂಟಿ :
ಮಾಜಿ ಸಿಎಂ ಬಿ.ಎಸ್. ಯಡಿ ಯೂರಪ್ಪ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರಕಾರಗಳ ಚುನಾ ವಣೆ ಸರ್ವೇ ಪ್ರಕಾರ ಮತ್ತೂಮ್ಮೆ ಬಿಜೆಪಿಗೆ ಸ್ಪಷ್ಟ ಬಹುಮತ ದೊರಕಲಿದ್ದು, 150 ಸ್ಥಾನಗಳನ್ನು ಗೆಲ್ಲಲಿದೆ. ಕಾಂಗ್ರೆಸ್ ಮುಖಂಡ ರಮೇಶಕುಮಾರ್ ಹೇಳಿದಂತೆ, ಕಾಂಗ್ರೆಸ್ ಪಕ್ಷದವರು 3-4 ತಲೆಮಾರಿನಷ್ಟು ಆಸ್ತಿ ಮಾಡಿದ್ದಾರೆ ಎಂದು ಹೇಳಿದರು.
ಸಚಿವರಾದ ಗೋವಿಂದ ಕಾರಜೋಳ ಬಿ.ಶ್ರೀರಾಮುಲು, ಶಶಿಕಲಾ ಜೊಲ್ಲೆ, ಆನಂದ್ ಸಿಂಗ್, ಸಂಸದ ವೈ. ದೇವೇಂದ್ರಪ್ಪ, ಶಾಸಕ ಕರುಣಾಕರ ರೆಡ್ಡಿ ಸಹಿತ ಹಲವಾರು ಪ್ರಮುಖರು ಉಪಸ್ಥಿತರಿದ್ದರು.
ಕುಣಿದು ಕುಪ್ಪಳಿಸಿದರೂ ಸಿದ್ದುವಿಗೆ ಅಧಿಕಾರ ಸಿಗದು: ಯಡಿಯೂರಪ್ಪ :
ಭಾರತ್ ಜೋಡೋ ಯಾತ್ರೆಯಲ್ಲಿ ಕುಣಿದು ಕುಪ್ಪಳಿಸಿದರೂ ವಿಪಕ್ಷ ನಾಯಕ ಸಿದ್ದರಾಮಯ್ಯ ಅಧಿಕಾರಕ್ಕೆ ಬರುವುದಿಲ್ಲ. ಬಿಜೆಪಿ ಮತ್ತೂಂದು ಬಾರಿ ಅಧಿಕಾರಕ್ಕೆ ಬರುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದರು. ಹಾಲಸ್ವಾಮಿ ಮಠಕ್ಕೆ ಭೇಟಿ ನೀಡಿ ಶ್ರೀಗಳಿಂದ ಆಶೀರ್ವಾದ ಪಡೆದ ಬಳಿಕ ಪತ್ರಕರ್ತ ರೊಂದಿಗೆ ಮಾತನಾಡಿದ ಅವರು, ಬಿಜೆಪಿಯಲ್ಲಿ ಒಡಕು ಮೂಡಿಸಲು ಕಾಂಗ್ರೆಸ್ನವರು ಏನೇನೋ ಹೇಳುತ್ತಿದ್ದಾರೆ. ಅದಕ್ಕೆಲ್ಲ ನಾವು ಪ್ರತಿಕ್ರಿ ಯಿಸುವುದಿಲ್ಲ ಎಂದರು. ಶ್ರೀಗಳಿಂದ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಇತರ ಸಚಿವರು ಆಶೀರ್ವಾದ ಪಡೆದುಕೊಂಡರು. ಅನಂತರ ದಲಿತ ಮಹಿಳೆ ನವಲಿ ಹನುಂತವ್ವರ ಮನೆಯಲ್ಲಿ ಉಪಾಹಾರ ಸೇವಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ: ಶೆಟ್ಟರ್
Tirupati Case; ಮತಾಂತರಗೊಂಡ ಜಗನ್ ರಿಂದ ಹಿಂದೂಗಳಿಗೆ ನೋವುಂಟು ಮಾಡುವ ಕೆಲಸ: ಈಶ್ವರಪ್ಪ
Mysuru; ಬಿಜೆಪಿಯವರ ಕುಮ್ಮಕ್ಕಿನಿಂದಲೇ ರಾಜ್ಯದಲ್ಲಿ ಗಲಾಟೆ: ಸಿಎಂ ಸಿದ್ದರಾಮಯ್ಯ ಆರೋಪ
Mysuru Dasara 2024: ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ
Karnataka HC: ಪಾಕಿಸ್ತಾನ ಹೇಳಿಕೆ ನೀಡಿದ ಹೈಕೋರ್ಟ್ ಜಡ್ಜ್ ಗೆ ಸುಪ್ರೀಂ ಕೋರ್ಟ್ ತರಾಟೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Flipkart Big Billion Day ಸೆ. 27 ರಿಂದ ಆರಂಭ
FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ
Belagavi: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ: ಶೆಟ್ಟರ್
Ankola: ಶಿರೂರು ಗುಡ್ಡ ಕುಸಿತ ಪ್ರಕರಣ; ಗೋವಾದಿಂದ ಯಂತ್ರ; ಇಂದಿನಿಂದ ಶೋಧ ಕಾರ್ಯ
Moradabad ರಕ್ತದಾನಿಯಂತೆ ಪೋಸ್ ನೀಡಿ ಸಿಕ್ಕಾಪಟ್ಟೆ ಟ್ರೋಲ್ ಆದ ಬಿಜೆಪಿ ಮೇಯರ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.