ಇಂದು ಸಿಎಂ, ಡಿಸಿಎಂ ಹೈಕಮಾಂಡ್‌ ಭೇಟಿ

ಮೇ 31/ ಜೂ.1ರಂದು ಮೇಲ್ಮನೆ ಚುನಾವಣೆಯ ಅಭ್ಯರ್ಥಿ ಪಟ್ಟಿ ಹೊರಬೀಳುವ ಸಾಧ್ಯತೆ

Team Udayavani, May 28, 2024, 6:35 AM IST

ಇಂದು ಸಿಎಂ, ಡಿಸಿಎಂ ಹೈಕಮಾಂಡ್‌ ಭೇಟಿ

ಬೆಂಗಳೂರು: ವಿಧಾನಸಭೆಯಿಂದ ವಿಧಾನಪರಿಷತ್ತಿಗೆ 7 ಸ್ಥಾನ ಗೆಲ್ಲುವ ಅವಕಾಶವುಳ್ಳ ಆಡಳಿತಾ ರೂಢ ಕಾಂಗ್ರೆಸ್‌, ಅಭ್ಯರ್ಥಿಗಳನ್ನು ಅಂತಿಮಗೊಳಿಸಿಕೊಳ್ಳಲು ಹೈಕಮಾಂಡ್‌ ಮುಂದೆ ಪರೇಡ್‌ ನಡೆಸಲಿದೆ. ಮಂಗಳವಾರ ಬೆಳಗ್ಗೆ 11 ಗಂಟೆಗೆ ದಿಲ್ಲಿಗೆ ತೆರಳಲಿರುವ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌, ಹೈಕಮಾಂಡ್‌ ನಾಯಕರನ್ನು ಭೇಟಿ ಮಾಡಲಿದ್ದಾರೆ.

ಈಗಾಗಲೇ ಕಾಂಗ್ರೆಸ್‌ ನಾಯಕರೇ ಹೇಳಿಕೊಂಡಂತೆ 7 ಸ್ಥಾನಗಳಿಗೆ 70 ಆಕಾಂಕ್ಷಿಗಳಿದ್ದು, ಇಷ್ಟು ಜನರಲ್ಲಿ ಯಾರಿಗೆ ಟಿಕೆಟ್‌ ಕೊಡಬೇಕೆಂಬುದು ಕಾಂಗ್ರೆಸ್‌ಗೆ ತಲೆನೋವಾಗಿದೆ. ಇದರ ಬೆನ್ನಲ್ಲೇ ಈಗಾಗಲೇ ದಿಲ್ಲಿ ತಲುಪಿರುವ ಕೆಲವು ಆಕಾಂಕ್ಷಿಗಳು, ಟಿಕೆಟ್‌ ಪಡೆಯಲು ಕಸರತ್ತು ನಡೆಸಿದ್ದು, ಹಲವು ನಾಯಕರನ್ನು ಭೇಟಿ ಮಾಡಿ ಒತ್ತಡ ಕೂಡ ಹಾಕಿದ್ದಾರೆ.

ಕೆಪಿಸಿಸಿಯಿಂದ ಒಂದು ಪಟ್ಟಿ ಸಿದ್ಧವಾಗಿದ್ದು, ಇದೇ ಪಟ್ಟಿಯನ್ನು ಡಿಸಿಎಂ ಶಿವಕುಮಾರ್‌ ಅವರು ಮಂಗಳವಾರ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುಜೇìವಾಲ, ಕೆ.ವೇಣುಗೋಪಾಲ್‌ ಅವರ ಮುಂದಿಡಲಿದ್ದಾರೆ. ಅದೇ ರೀತಿ ಸಿಎಂ ಸಿದ್ದರಾಮಯ್ಯ ಕೂಡ ಪ್ರತ್ಯೇಕ ಪಟ್ಟಿಯನ್ನು ಹೈಕಮಾಂಡ್‌ ಮುಂದಿಡುವ ಸಾಧ್ಯತೆಗಳಿದ್ದು, ಎರಡೂ ಪಟ್ಟಿಯಲ್ಲಿರುವ ಸಾಮಾನ್ಯ ಹೆಸರುಗಳು ಹಾಗೂ ಹೈಕಮಾಂಡ್‌ ಮಾಡಿಕೊಂಡಿರುವ ಪಟ್ಟಿಯನ್ನು ತುಲನೆ ಮಾಡಿ ಟಿಕೆಟ್‌ ಹಂಚಿಕೆ ಮಾಡುವ ಸಾಧ್ಯತೆಗಳು ದಟ್ಟವಾಗಿದೆ.

ಬುಧವಾರ ಮಲ್ಲಿಕಾರ್ಜುನ ಖರ್ಗೆ ಸಮ್ಮುಖದಲ್ಲಿ ಅಂತಿಮ ಸಭೆ ನಡೆಯಲಿದ್ದು, ರಾಹುಲ್‌ ಗಾಂಧಿ ಸಹಿತ ಪಕ್ಷದ ಮುಖಂಡರು ಸಮಾಲೋಚಿಸಿ ಮೇ 31 ಅಥವಾ ಜೂ.1ರಂದು ಅಂತಿಮ ಪಟ್ಟಿ ಹೊರಬೀಳುವ ಸಾಧ್ಯತೆಗಳಿವೆ.

ಬಿಜೆಪಿಯಲ್ಲಿ 3 ಸ್ಥಾನಕ್ಕೆ 40 ಆಕಾಂಕ್ಷಿಗಳು!
ಇತ್ತ 3 ಸ್ಥಾನ ಗೆಲ್ಲುವ ಅವಕಾಶ ಇರುವ ಬಿಜೆಪಿಯು ಸೋಮವಾರ ಪಟ್ಟಿ ಬಿಡುಗಡೆ ಮಾಡಬಹುದೆಂದು ನಿರೀಕ್ಷೆ ಹುಸಿಯಾಗಿದ್ದು, ವರಿಷ್ಠರು ಕೈಗೆ ಸಿಗದೆ ಇರುವುದರಿಂದ ಅಭ್ಯರ್ಥಿಗಳನ್ನು ಆಖೈರುಗೊಳಿಸಲಾಗಿಲ್ಲ. ಅಲ್ಲದೆ ಇರುವ ಮೂರು ಸ್ಥಾನಗಳಿಗೆ 40ಕ್ಕೂ ಹೆಚ್ಚು ಆಕಾಂಕ್ಷಿಗಳಿರುವುದರಿಂದ ತಲೆಬಿಸಿ ಹೆಚ್ಚಾಗಿದೆ.

ಜೆಡಿಎಸ್‌ನಿಂದ ಕುಪೇಂದ್ರ ರೆಡ್ಡಿ?
ಅತ್ತ ಜೆಡಿಎಸ್‌ನ ಬಿ.ಎಂ. ಫಾರೂಕ್‌ ನಿವೃತ್ತಿಯಿಂದ ತೆರವಾಗುತ್ತಿರುವ ತಮ್ಮ ಸ್ಥಾನಕ್ಕೆ ಅವರೇ ಮರು ಆಯ್ಕೆ ಬಯಸುತ್ತಿದ್ದು, ಪಕ್ಷದ ನಾಯಕರು ಅಷ್ಟಾಗಿ ಆಸಕ್ತಿ ತೋರುತ್ತಿಲ್ಲ. ಬೇರೆಯವರಿಗೆ ಅವಕಾಶ ಮಾಡಿಕೊಡಬೇಕೆಂಬ ಒತ್ತಡವೂ ಇದೆ. ರಾಜ್ಯಸಭೆ ಮಾಜಿ ಸದಸ್ಯ ಕುಪೇಂದ್ರ ರೆಡ್ಡಿ ಅವರಿಗೆ ಟಿಕೆಟ್‌ ಕೊಡುವ ಸಂಭವವಿದ್ದು, ಮಿತ್ರಪಕ್ಷದಿಂದ ಹೆಚ್ಚುವರಿ ಅಭ್ಯರ್ಥಿ ಕಣಕ್ಕಿಳಿಸಿದರೂ ಅಚ್ಚರಿಯಿಲ್ಲ.

 

ಟಾಪ್ ನ್ಯೂಸ್

1-india

Semi Final 2; ಇಂಗ್ಲೆಂಡ್ ವಿರುದ್ಧ ಅಮೋಘ ಜಯ ಸಾಧಿಸಿದ ಭಾರತ ಫೈನಲ್ ಗೆ ಲಗ್ಗೆ

DKShi

Congress;ಚುನಾವಣ ರಾಜಕೀಯಕ್ಕೆ ನಮ್ಮ ಕುಟುಂಬದವರು ಬರುವ ಪ್ರಶ್ನೆಯೇ ಇಲ್ಲ:ಡಿ.ಕೆ.ಶಿವಕುಮಾರ್

1-wedsadsad

Govt ನಿರ್ಲಕ್ಷ್ಯ; 2000 ಕೋಟಿ ರೂ.ಬಂಡವಾಳದ ಕಂಪನಿ ಮಹಾರಾಷ್ಟ್ರಕ್ಕೆ: ಬೆಲ್ಲದ ಆರೋಪ

MLA Harish Gowda: ನನಗೆ ಯಾರೂ ಹನಿಟ್ರ್ಯಾಪ್‌ ಮಾಡಲು ಸಾಧ್ಯವಿಲ್ಲ

MLA Harish Gowda: ನನಗೆ ಯಾರೂ ಹನಿಟ್ರ್ಯಾಪ್‌ ಮಾಡಲು ಸಾಧ್ಯವಿಲ್ಲ

jio

Jio ಪ್ರಿಪೇಡ್ /ಪೋಸ್ಟ್ ಪೇಡ್ ಪ್ಲಾನ್ ಗಳ ದರ ಏರಿಕೆ

26

Bantwal: ಬೈಕ್‌ ಸ್ಕೀಡ್; ಗಂಭೀರ ಗಾಯಗೊಂಡು ಸಹಸವಾರೆ ಮೃತ್ಯು

Mangalore: ಗಾಂಜಾ ಸೇವನೆ; ಮೂವರು ವಶಕ್ಕೆ

Mangalore: ಗಾಂಜಾ ಸೇವನೆ; ಮೂವರು ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwwe

Uttara Kannada: ಸರಕಾರಿ ಆಸ್ತಿ ರಕ್ಷಣೆಯಲ್ಲಿ ಉತ್ತರ ಕನ್ನಡ ಪ್ರಥಮ

Rain: ಇನ್ನೂ ಎರಡು ದಿನ ವರುಣನ ಅಬ್ಬರ

Rain: ಇನ್ನೂ ಎರಡು ದಿನ ವರುಣನ ಅಬ್ಬರ

9

Price Rise: ದರ ಏರಿಕೆ; ನಾಳೆ ರಾಜ್ಯಾದ್ಯಂತ ಬಿಜೆಪಿಯಿಂದ ಕ್ಷೀರ ಅಭಿಯಾನ

1-asss

R. Ashok ವಾಗ್ಧಾಳಿ; ದೋಚುವ ಸರಕಾರಕ್ಕೆ ಜನ ಕಪಾಳಮೋಕ್ಷ ಮಾಡಬೇಕು

DKShi

Congress;ಚುನಾವಣ ರಾಜಕೀಯಕ್ಕೆ ನಮ್ಮ ಕುಟುಂಬದವರು ಬರುವ ಪ್ರಶ್ನೆಯೇ ಇಲ್ಲ:ಡಿ.ಕೆ.ಶಿವಕುಮಾರ್

MUST WATCH

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

udayavani youtube

ಹರ್ನಿಯಾ ಸಮಸ್ಯೆಗೆ ಕಾರಣವೇನು?ಚಿಕಿತ್ಸಾ ವಿಧಾನಗಳು ಯಾವುವು?

ಹೊಸ ಸೇರ್ಪಡೆ

1-weqwwe

Uttara Kannada: ಸರಕಾರಿ ಆಸ್ತಿ ರಕ್ಷಣೆಯಲ್ಲಿ ಉತ್ತರ ಕನ್ನಡ ಪ್ರಥಮ

Rain: ಇನ್ನೂ ಎರಡು ದಿನ ವರುಣನ ಅಬ್ಬರ

Rain: ಇನ್ನೂ ಎರಡು ದಿನ ವರುಣನ ಅಬ್ಬರ

9

Price Rise: ದರ ಏರಿಕೆ; ನಾಳೆ ರಾಜ್ಯಾದ್ಯಂತ ಬಿಜೆಪಿಯಿಂದ ಕ್ಷೀರ ಅಭಿಯಾನ

1-india

Semi Final 2; ಇಂಗ್ಲೆಂಡ್ ವಿರುದ್ಧ ಅಮೋಘ ಜಯ ಸಾಧಿಸಿದ ಭಾರತ ಫೈನಲ್ ಗೆ ಲಗ್ಗೆ

priyanka gandhi (2)

Constitution;’ಜೈ ಸಂವಿಧಾನ’ ಹೇಳುವುದು ತಪ್ಪಾ?: ಪ್ರಿಯಾಂಕಾ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.