Siddaramaiah: ಬಿಜೆಪಿಗಿಂತ ಕುಮಾರಸ್ವಾಮಿ ಜಾಸ್ತಿ ಹತಾಶರಾಗಿದ್ದಾರೆ: ಸಿಎಂ ವಾಗ್ದಾಳಿ

ರಾಜ್ಯ ಆರ್ಥಿಕವಾಗಿ ದಿವಾಳಿ ಆಗಲು ಬಿಜೆಪಿ ಕಾರಣ

Team Udayavani, Oct 25, 2023, 1:34 PM IST

TDY-10

ಮೈಸೂರು: ರಾಜಕೀಯದಲ್ಲಿ ವಿಲನ್ ಇದ್ದರೆ ಅದು ಮಿಸ್ಟರ್ ಕುಮಾರಸ್ವಾಮಿ. ಸರಕಾರ ಬೀಳುವಾಗ ಅಮೆರಿಕದಲ್ಲಿ ಕೂತಿದರು ಇದಕ್ಕೆ ಏನೂ ಕರೆಯಬೇಕು. ಇಡೀ ಒಂದು ವರ್ಷ ಎರಡು ತಿಂಗಳು ತಾಜ್ ವೆಸ್ಟ್ ಎಂಡ್ ನಲ್ಲಿ ಕಾಲ ಕಳೆದರು. ವಿಧಾನಸಭೆಯಲ್ಲಿ ಬಿಜೆಪಿ ಅವರೇ ಸರಕಾರ ಬೀಳಿಸಿದ್ದು ಅಂತಾ ಹೇಳಿದರು. ಇದು ರೆಕಾರ್ಡ್ ಆಗಿದೆ. ಅಸೆಂಬ್ಲಿ ರೆಕಾರ್ಡ್ ಬೇಕಾದರೆ ಬಿಡುಗಡೆ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ನಗರದಲ್ಲಿ ಮಾತನಾಡಿದ ಅವರು,ಸಚಿವರು, ಶಾಸಕರ ಭೇಟಿ ಮಾಡದೆ ಹೋಟೆಲ್ ನಲ್ಲಿ ಕುಳಿತು ಈಗ ನನ್ನ ಮೇಲೆ ಆರೋಪ ಮಾಡುತ್ತಾರೆ. ಕುಮಾರಸ್ವಾಮಿ ಅವರು ರಾಜಕೀಯವಾಗಿ ಹತಾಶರಾಗಿ ಬಾಯಿಗೆ ಬಂದ ರೀತಿ ಮಾತಾಡಿದ್ದಾರೆ. ಬಿಜೆಪಿಯವರು ಹತಾಶರಾಗಿದ್ದಾರೆ. ಬಿಜೆಪಿಗಿಂತ ಕುಮಾರಸ್ವಾಮಿ ಜಾಸ್ತಿ ಹತಾಶರಾಗಿದ್ದಾರೆ. ಬಿಜೆಪಿ – ಜೆಡಿಎಸ್ ದ್ದು ಎಳವರು, ಕುರುಡರ ಕಥೆ ಆಗಿದೆ. ಇವರು ಅವರ ಮೇಲೆ ಅವರು ಇವರ ಮೇಲೆ ಡಿಪೇಂಡ್ ಆಗಿದ್ದಾರೆ ಖಾಲಿ ಡಬ್ಬ ಮಾತ್ರ ಶಬ್ದ ಜಾಸ್ತಿ ಮಾಡುತ್ತದೆ. ತುಂಬಿದ ಕೊಡ ತುಳುಕುವುದಿಲ್ಲ ಎಂದು ಟೀಕಿಸಿದರು.

ರಾಮನಗರ ವಿಚಾರದಲ್ಲಿ ಮಾತನಾಡಿದ ಅವರು, ರಾಮನಗರ ವಿಚಾರ ಅವರನ್ನೆ ಕೇಳಿ. ನನಗೆ ಅದು ಗೊತ್ತಿಲ್ಲ.  ನನ್ನ ಜೊತೆ ಅವರು ಚರ್ಚೆ ಮಾಡಿಲ್ಲ. ನನಗೆ ಅವರ ಮೈಂಡ್ ನಲ್ಲಿ ಏನೂ ಇದೆ ಎಂಬುದು ಗೊತ್ತಿಲ್ಲ. ‌ಗೊತ್ತಿಲ್ಲದ ವಿಚಾರದ ಬಗ್ಗೆ ಹೆಚ್ಚಾಗಿ ಮಾತಾಡುವುದಿಲ್ಲ ಎಂದರು.

ನಾಡಹಬ್ಬ ರೀ ಲುಕ್ ಮಾಡುವ ವಿಚಾರದಲ್ಲಿ ಮಾತನಾಡಿದ ಅವರು,ಮೈಸೂರು ಜನರ ಅಭಿಪ್ರಾಯ ಕೇಳಿ ರೀ ಲುಕ್ ಬಗ್ಗೆ ತೀರ್ಮಾನ ಆಗುತ್ತದೆ. ಜನರ ಅಭಿಪ್ರಾಯದ ಪ್ರಕಾರ ತೀರ್ಮಾನ ಮಾಡುತ್ತೇವೆ. ಈ ಬಾರಿ ದಸರಾ ಶಾಂತಿಯುತವಾಗಿ ಇತ್ತು.ಅಧಿಕಾರಿಗಳು ಟೀಂ‌ ವರ್ಕ್ ಆಗಿ ಕೆಲಸ ಮಾಡಿದ್ದಾರೆ. ಜನಪ್ರತಿನಿಧಿಗಳು ಸಹಕರಿಸಿದ್ದಾರೆ ಎಂದರು.

ಇದು ಎಟಿಎಂ ಸರಕಾರ ಎಂಬ ಬಿಜೆಪಿ ಟ್ವೀಟ್ ಗೆ ತಿರುಗೇಟು ನೀಡಿದ ಅವರು, ಬಿಜೆಪಿ ಗೆ ಮಾನ ಮರ್ಯಾದೆ ಇದ್ಯಾ? ಕೋಟ್ಯಂತರ ರೂಪಾಯಿ ಹಣದಲ್ಲಿ ಆಪರೇಷನ್ ಕಮಲ ಮಾಡಿದವರು ನಮ್ಮ ಬಗ್ಗೆ ಮಾತಾಡುತ್ತಾರೆ? ರಾಜ್ಯ ಆರ್ಥಿಕವಾಗಿ ದಿವಾಳಿ ಆಗಲು ಬಿಜೆಪಿ ಕಾರಣ. ವಿದ್ಯುತ್ ತೊಂದರೆ ಆಗಿದ್ದರೆ ಅದಕ್ಕೆ ಬಿಜೆಪಿ ಕಾರಣ. ಬಿಜೆಪಿ ಆಡಳಿತ ಅವಧಿಯಲ್ಲಿ ಒಂದು ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಿಲ್ಲ. ಬಿಜೆಪಿ ಗೆ ಕಾಂಗ್ರೆಸ್ ಬಗ್ಗೆ ಮಾತಾಡಲು ನೈತಿಕತೆ ಇಲ್ಲ ಎಂದರು.

ಬಿಜೆಪಿಯವರುಸಾಲ ಮಾಡಿ ಆರ್ಥಿಕವಾಗಿ ರಾಜ್ಯ ದಿವಾಳಿ ಮಾಡಿ ಹೋಗಿದ್ದಾರೆ. ಹಣ ಇರದಿದ್ದರೂ ಕಾಮಗಾರಿ ಟೆಂಡರ್ ಕರೆದು 30 ಸಾವಿರ ಕೋಟಿ ರೂ ಪೆಂಡಿಂಗ್ ಬಿಲ್ ಇದೆ. ಇದಕ್ಕೆ ಯಾರು ಹೊಣೆ? ನಮ್ಮ ಐದು ವರ್ಷದ ಆಡಳಿತ ಅರ್ಥಿಕ ಪರಿಸ್ಥಿತಿ, ಬಿಜೆಪಿ ಅವಧಿಯ ಆರ್ಥಿಕ ಪರಿಸ್ಥಿತಿ ಬಗ್ಗೆ ಶ್ವೇತ ಪತ್ರ ಹೊರಡಿಸುತ್ತೇನೆ. ಹೈಕಮಾಂಡ್ ಗೆ ದುಡ್ಡು ಕಳಿಸುತ್ತೇವೆ ಎಂಬುದು ಸುಳ್ಳು. ನಾವು ಯಾರಿಗೂ ಒಂದು ಪೈಸೆ ಕೊಟ್ಟಿಲ್ಲ ಎಂದರು.

ಸಂಪುಟ ಪುನಾರಚನೆ  ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಎಲ್ಲರಿಗೂ ಮಂತ್ರಿಯಾಗುವ ಆಸೆ ಇರುತ್ತದೆ. ವಿಸ್ತರಣೆ ಹಾಗೂ ಮತ್ತೊಂದು ವಿಚಾರ ಹೈಕಮಾಂಡ್ ಗೆ ಬಿಟ್ಟಿದ್ದು. ಈ ರೀತಿಯ ಚರ್ಚೆ ಯಾವುದು ಇಲ್ಲ. ಎಲ್ಲಾ ಹೈಕಮಾಂಡ್ ತೀರ್ಮಾನ ಎಂದರು.

 

ಟಾಪ್ ನ್ಯೂಸ್

9-bbk11

BBK-11: ಬಿಗ್ ಬಾಸ್ ಮನೆಗೆ ನಾಲ್ವರು ಎಂಟ್ರಿ; ಉಳಿದ ಸ್ಪರ್ಧಿಗಳು ಇವರೇನಾ?

8-health

Iron Deficiency: ರಕ್ತಹೀನತೆ ಇಲ್ಲದ ಕಬ್ಬಿಣದಂಶ ಕೊರತೆ

ಬೈಕ್‌ ನಲ್ಲಿದ್ದ ಪೊಲೀಸ್‌ ಗೆ ಡಿಕ್ಕಿ ಹೊಡೆದ ಕಾರು; ಅಕ್ರಮ ಮದ್ಯ ದಂಧೆ ಶಂಕೆ

Delhi: ಬೈಕ್‌ ನಲ್ಲಿದ್ದ ಪೊಲೀಸ್‌ ಗೆ ಡಿಕ್ಕಿ ಹೊಡೆದ ಕಾರು; ಅಕ್ರಮ ಮದ್ಯ ದಂಧೆ ಶಂಕೆ

7-social-media-2

Social Media: ಮಾನಸಿಕ ಆರೋಗ್ಯದ ಮೇಲೆ ಸಾಮಾಜಿಕ ಮಾಧ್ಯಮಗಳ ಪರಿಣಾಮ

Ibbani Tabbida Ileyali From 50 Screen to 200 Screen…

Ibbani Tabbida Ileyali 50 ಸ್ಕ್ರೀನ್‌ನಿಂದ 200 ಸ್ಕ್ರೀನ್‌ವರೆಗೆ…

Agra: A woman policewoman dressed as a tourist and roamed around late at night

Agra: ಪ್ರವಾಸಿಗರಂತೆ ವೇಷ ಧರಿಸಿ ತಡರಾತ್ರಿ ಓಡಾಡಿದ ಮಹಿಳಾ ಪೋಲೀಸ್; ಮಂದೆ ಆಗಿದ್ದೇನು?

6-hangyo-bigg-boss

Hangyo Ice Cream: ಬಿಗ್‌ಬಾಸ್‌ ಕನ್ನಡ ಮನೆಯೊಳಗೆ ಹಾಂಗ್ಯೋ ಐಸ್‌ಕ್ರೀಂ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

bjp-congress

BJP vs Congress ; ಕೇಸ್‌ ಮೇಲೆ ಕೇಸ್‌

BJP 2

CM Siddaramaiah ಕಂಡಲ್ಲೆಲ್ಲ ಕಪ್ಪುಪಟ್ಟಿ ಪ್ರದರ್ಶನಕ್ಕೆ ಬಿಜೆಪಿ ಸಜ್ಜು

1-mali

Karnataka; ಮಳಿಗೆಯಲ್ಲಿ 10 ಸಿಬಂದಿ ಇದ್ದರೆ 24 ತಾಸೂ ವ್ಯವಹಾರಕ್ಕೆ ಅವಕಾಶ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

9-bbk11

BBK-11: ಬಿಗ್ ಬಾಸ್ ಮನೆಗೆ ನಾಲ್ವರು ಎಂಟ್ರಿ; ಉಳಿದ ಸ್ಪರ್ಧಿಗಳು ಇವರೇನಾ?

8-health

Iron Deficiency: ರಕ್ತಹೀನತೆ ಇಲ್ಲದ ಕಬ್ಬಿಣದಂಶ ಕೊರತೆ

ಬೈಕ್‌ ನಲ್ಲಿದ್ದ ಪೊಲೀಸ್‌ ಗೆ ಡಿಕ್ಕಿ ಹೊಡೆದ ಕಾರು; ಅಕ್ರಮ ಮದ್ಯ ದಂಧೆ ಶಂಕೆ

Delhi: ಬೈಕ್‌ ನಲ್ಲಿದ್ದ ಪೊಲೀಸ್‌ ಗೆ ಡಿಕ್ಕಿ ಹೊಡೆದ ಕಾರು; ಅಕ್ರಮ ಮದ್ಯ ದಂಧೆ ಶಂಕೆ

7-social-media-2

Social Media: ಮಾನಸಿಕ ಆರೋಗ್ಯದ ಮೇಲೆ ಸಾಮಾಜಿಕ ಮಾಧ್ಯಮಗಳ ಪರಿಣಾಮ

Ibbani Tabbida Ileyali From 50 Screen to 200 Screen…

Ibbani Tabbida Ileyali 50 ಸ್ಕ್ರೀನ್‌ನಿಂದ 200 ಸ್ಕ್ರೀನ್‌ವರೆಗೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.