CM ಗದ್ದಲ: ರಾಹುಲ್‌ಗೆ ದೂರು; 6 ಮಂದಿಯ ಸಿಎಂ ಹೇಳಿಕೆಯಿಂದ ಪಕ್ಷಕ್ಕೆ ಮುಜುಗರ


Team Udayavani, Sep 11, 2024, 7:15 AM IST

raCM ಗದ್ದಲ: ರಾಹುಲ್‌ಗೆ ದೂರು; 6 ಮಂದಿಯ ಸಿಎಂ ಹೇಳಿಕೆಯಿಂದ ಪಕ್ಷಕ್ಕೆ ಮುಜುಗರ

ಬೆಂಗಳೂರು: ಮುಖ್ಯಮಂತ್ರಿ ಕುರ್ಚಿಗಾಗಿ ಪೈಪೋಟಿಗೆ ಬಿದ್ದಿರುವ ಕಾಂಗ್ರೆಸ್‌ನ ಕೆಲವು ನಾಯಕರ ವಿರುದ್ಧ ಹೈಕಮಾಂಡ್‌ಗೆ ದೂರು ನೀಡಿರುವ ಹಲವು ಹಿರಿಯ ಮುಖಂಡರು, “ಪಕ್ಷಕ್ಕೆ ಮುಜುಗರ ಆಗುವಂತಹ ಹೇಳಿಕೆಗಳನ್ನು ನೀಡುತ್ತಿರುವವರಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡುವುದರ ಜತೆಗೆ ಇಂತಹ ವರ್ತನೆಗಳು ಪುನರಾವರ್ತನೆ ಆಗದಂತೆ ಸೂಚನೆ ನೀಡಬೇಕು’ ಎಂದು ಮನವಿ ಮಾಡಿದ್ದಾರೆ.

“ಸಿಎಂ ಕುರ್ಚಿಗೆ ಸಂಬಂಧಿಸಿ ಹಿರಿಯ ಸಚಿವರ ಸಹಿತ ಆರು ಮಂದಿ ಮುಖಂಡರು ನೀಡುತ್ತಿರುವ ಹೇಳಿಕೆಗಳು ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸುವಂತೆ ಮಾಡುತ್ತಿವೆ.

ಅಷ್ಟೇ ಅಲ್ಲ, ಈ ಅಂತಃಕಲಹ ಮತ್ತು ಬೇಜವಾಬ್ದಾರಿಯ ಹೇಳಿಕೆಗಳು ಸರಕಾರದ ಮೇಲೆ ಜನ ಮತ್ತು ಪಕ್ಷದ ಕಾರ್ಯಕರ್ತರು ನಂಬಿಕೆ ಹಾಗೂ ವಿಶ್ವಾಸ ಕಳೆದುಕೊಳ್ಳುವಂತೆಯೂ ಮಾಡಿದೆ. ಇದಕ್ಕೆ ಕೂಡಲೇ ಕಡಿವಾಣ ಹಾಕಬೇಕು’ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಲೋಕಸಭಾ ವಿಪಕ್ಷ ನಾಯಕ ಹಾಗೂ ಕಾಂಗ್ರೆಸ್‌ ರಾಷ್ಟ್ರೀಯ ನಾಯಕ ರಾಹುಲ್‌ ಗಾಂಧಿ ಅವರಿಗೆ ಹಿರಿಯ ನಾಯಕರು ದೂರು ನೀಡಿದ್ದಾರೆ.

ಮೇಲ್ಮನೆ ಸದಸ್ಯರಾದ ಮಂಜುನಾಥ ಭಂಡಾರಿ ಮತ್ತು ದಿನೇಶ್‌ ಗೂಳಿಗೌಡ ಒಂದು ದಿನದ ಹಿಂದೆ ಈ ಸಂಬಂಧ ಖರ್ಗೆ ಅವರಿಗೆ ಪತ್ರ ಬರೆದು, ಸಿಎಂ ಕುರ್ಚಿ ಬಗ್ಗೆ ಹೇಳಿಕೆ ನೀಡುತ್ತಿರುವ ನಾಯಕರ ವಿರುದ್ಧ ಕ್ರಮದ ಎಚ್ಚರಿಕೆ ನೀಡುವಂತೆ ಪತ್ರ ಬರೆದಿದ್ದರು. ಅದರ ಮುಂದುವರಿದ ಭಾಗವಾಗಿ ಮತ್ತೆ ಹಲವರು ಪತ್ರ ಬರೆದಿದ್ದಾರೆ. ಈ ಸಲ ಮಾಜಿ ಸಚಿವರಾದ ಬಿ.ಎಲ್‌. ಶಂಕರ್‌, ಎಚ್‌.ಎಂ. ರೇವಣ್ಣ, ಮಾಜಿ ಸಭಾಪತಿ ವಿ.ಆರ್‌. ಸುದರ್ಶನ್‌, ಮಾಜಿ ಸಂಸದರಾದ ವಿ.ಎಸ್‌. ಉಗ್ರಪ್ಪ, ಬಿ.ಎನ್‌. ಚಂದ್ರಪ್ಪ, ಎಲ್‌. ಹನುಮಂತಯ್ಯ, ಮೇಲ್ಮನೆ ಸದಸ್ಯ ಪ್ರಕಾಶ್‌ ರಾಠೊಡ್‌, ಮೇಲ್ಮನೆ ಮಾಜಿ ಸದಸ್ಯ ಪಿ.ಆರ್‌. ರಮೇಶ್‌, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಸಿ.ಎಸ್‌. ದ್ವಾರಕಾನಾಥ್‌, ಎಚ್‌.ಎಸ್‌. ಚಂದ್ರಮೌಳಿ, ಕಾನೂನು ಘಟಕದ ಅಧ್ಯಕ್ಷ ಎಚ್‌.ಡಿ. ಅಮರನಾಥ್‌, ರಾಜ್ಯ ವಕ್ಫ್ ಮಂಡಳಿ ಮಾಜಿ ಅಧ್ಯಕ್ಷ ಖಾಲಿದ್‌ ಅಹಮದ್‌, ಪದಾಧಿಕಾರಿ ಮಹಬೂಬ್‌ ಪಾಷಾ ಸಹಿತ ಹಲವರು ಸಹಿಯೊಂದಿಗೆ ಹೈಕಮಾಂಡ್‌ಗೆ ಪತ್ರ ಬರೆದಿದ್ದಾರೆ.

ಸಿಎಂ ಸ್ಥಾನದ ಬಗ್ಗೆ ಚರ್ಚೆ ಅನಗತ್ಯ. ಮುಖ್ಯಮಂತ್ರಿ ಆಗುತ್ತೀರಾ ಎಂದು ಮಾಧ್ಯಮದವರು ಕೇಳಿದಾಗ, ನಾವು ಬೇಡ ಎಂದು ಹೇಗೆ ಹೇಳಲಿ ಎಂಬುದಾಗಿ ಆ ಸ್ನೇಹಿತರು ನನಗೆ ತಿಳಿಸಿದ್ದಾರೆ. ಅಷ್ಟು ಬಿಟ್ಟರೆ, ಇದರಲ್ಲಿ ಬೇರೇನೂ ಇಲ್ಲ.
-ಡಾ| ಪರಮೇಶ್ವರ್‌, ಗೃಹಸಚಿವ

ಕಾಂಗ್ರೆಸ್‌ ಅತ್ಯಂತ ಶಿಸ್ತಿನ ಪಕ್ಷವಾಗಿದೆ. ಸಿಎಂ ಕುರ್ಚಿ ಬಗ್ಗೆ ಹಾದಿಬೀದಿಯಲ್ಲಿ ಚರ್ಚಿಸುವುದು ಸರಿಯಲ್ಲ. ಅದಕ್ಕಾಗಿ ನಾನು ಹೈಕಮಾಂಡ್‌ಗೆ ಪತ್ರ ಬರೆದಿದ್ದೇನೆ. ಆ ಮೂಲಕ ನನ್ನ ಅಭಿಪ್ರಾಯ ತಿಳಿಸಿದ್ದೇನೆ ಅಷ್ಟೆ. ಮತ್ತೂಬ್ಬರ ಹೇಳಿಕೆಗೆ ನಾನು ಪ್ರತಿಕ್ರಿಯಿಸುವುದಿಲ್ಲ.
-ಮಂಜುನಾಥ ಭಂಡಾರಿ, ಕೆಪಿಸಿಸಿ ಕಾರ್ಯಾಧ್ಯಕ್ಷ

ಟಾಪ್ ನ್ಯೂಸ್

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್

7-road-mishap

ರಸ್ತೆ ಪಕ್ಕ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಲಾರಿ ಹರಿದು ಇಬ್ಬರು ಸಾವು

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

dandeli

Dandeli: ನಗರದಲ್ಲಿ ಸರಣಿ ಕಳ್ಳತನ… ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು, ಪೊಲೀಸರ ಭೇಟಿ

ಮುನಿರತ್ನ ವಿರುದ್ಧ ಅತ್ಯಾಚಾರ, ಹನಿಟ್ರ್ಯಾಪ್ ಆರೋಪ‌ ಮಾಡಿದ ಮಹಿಳೆ; ಎಫ್‌ಐಆರ್

Munirathna: ಮುನಿರತ್ನ ವಿರುದ್ಧ ಅತ್ಯಾಚಾರ, ಹನಿಟ್ರ್ಯಾಪ್ ಆರೋಪ‌ ಮಾಡಿದ ಮಹಿಳೆ; ಎಫ್‌ಐಆರ್

Traffic: ಆಗುಂಬೆ ಘಾಟಿಯಲ್ಲಿ ವಾಹನ ಬ್ರೇಕ್ ಫೇಲ್, ಟ್ರಾಫಿಕ್ ನಲ್ಲಿ ಸಿಲುಕಿದ ಆಂಬ್ಯುಲೆನ್ಸ್

Traffic: ಆಗುಂಬೆ ಘಾಟಿಯಲ್ಲಿ ವಾಹನ ಬ್ರೇಕ್ ಫೇಲ್, ಟ್ರಾಫಿಕ್ ನಲ್ಲಿ ಸಿಲುಕಿದ ಆಂಬ್ಯುಲೆನ್ಸ್

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Mysore Dasara: ಮರದ ಅಂಬಾರಿ ಹೊತ್ತು ಅಭಿಮನ್ಯು ತಾಲೀಮು

Mysore Dasara: ಮರದ ಅಂಬಾರಿ ಹೊತ್ತು ಅಭಿಮನ್ಯು ತಾಲೀಮು

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

8-chikkamagaluru

ಗಣಪತಿ ವಿಸರ್ಜನೆ ವೇಳೆ ಕುಣಿಯುವ ವಿಚಾರಕ್ಕೆ ಗಲಾಟೆ; ಯುವಕನಿಗೆ ಬ್ಲೇಡ್ ನಿಂದ ಹಲ್ಲೆ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

ಮಲ್ಪೆ ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Malpe ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವಚ್ಛತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.