CM ಕುರ್ಚಿ ಮೇಲಿರೋದು ‘ಟಗರು’ ಅಲ್ಲಾಡಿಸಲು ಆಗಲ್ಲ: ಜಮೀರ್
Team Udayavani, Oct 7, 2024, 6:30 AM IST
ದಾವಣಗೆರೆ: ಮುಖ್ಯಮಂತ್ರಿ ಕುರ್ಚಿಯಲ್ಲಿ ಟಗರು ಗಟ್ಟಿಯಾಗಿ ಕುಳಿತಿದೆ. ಅದನ್ನು ಅಲ್ಲಾಡಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ವಸತಿ ಸಚಿವ ಜಮೀರ್ ಅಹಮ್ಮದ್ ಹೇಳಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ಎಲ್ಲ ಜಾತಿಯವರಿಗೂ ಮುಖ್ಯಮಂತ್ರಿ ಆಗಬೇಕು ಎಂಬ ಆಸೆ ಇದೆ. ಆದರೆ ಈ 5 ವರ್ಷದ ಅವ ಧಿ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ. ಸಿಎಂ ಹುದ್ದೆಯಿಂದ ಟಗರನ್ನು (ಸಿದ್ದರಾಮಯ್ಯ) ಅಲ್ಲಾಡಿಸಲು ಸಾಧ್ಯವೇ ಇಲ್ಲ. ಮಾಜಿ ಸಂಸದ ಡಿ.ಕೆ. ಸುರೇಶ್ ಅವರೇ ಸಿದ್ದರಾಮಯ್ಯ ಅವರೇ 5 ವರ್ಷ ಸಿಎಂ ಎಂಬುದಾಗಿ ಹೇಳಿದ್ದಾರೆ. ಹಾಗಾಗಿ ಬೇರೆ ಮುಖ್ಯಮಂತ್ರಿ ಬಗ್ಗೆ ಮಾತೇ ಇಲ್ಲ. ದೇಶದಲ್ಲಿ ಸಿದ್ದರಾಮಯ್ಯ ಅವರಷ್ಟು ಜನಪ್ರಿಯ ವ್ಯಕ್ತಿ ಯಾರೂ ಇಲ್ಲ. ರಾಜ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಗಿಂತಲೂ ನಮ್ಮ ಸಿದ್ದರಾಮಯ್ಯ ಬಹಳ ಪ್ರಸಿದ್ಧಿ. ಬೇಕಾದರೆ ರಾಜ್ಯದಲ್ಲಿ ಸಿದ್ದರಾಮಯ್ಯ ಹಾಗೂ ಪ್ರಧಾನಿ ಕಾರ್ಯಕ್ರಮ ಮಾಡಿ. ಸಿದ್ದರಾಮಯ್ಯ ಕಾರ್ಯಕ್ರಮಕ್ಕೇ ಜನ ಹೆಚ್ಚು ಸೇರುವುದು. ಸ್ವಯಂ ಪ್ರೇರಿತವಾಗಿ ಜನ ಸೇರುವುದು ಸಿದ್ದರಾಮಯ್ಯ ಸಲುವಾಗಿಯೇ. ಏಕೆಂದರೆ ನಮ್ಮ ಟಗರು ಯಾವತ್ತಿದ್ದರೂ ಟಗರು ಎಂದು ಹೇಳಿದರು.
ಮುಡಾ ವಿಚಾರದ ಬಗ್ಗೆ ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ಸರಿಯಾಗಿಯೇ ಹೇಳಿದ್ದಾರೆ. ಅವರು ಮುಡಾ ಸದಸ್ಯರಾಗಿದ್ದವರು. ಹಾಗಾಗಿ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಅಗತ್ಯ ಇಲ್ಲ ಎಂದಿದ್ದಾರೆ. ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಜಾಮೀನು ಮೇಲೆ ಇದ್ದಾರೆ. ಅವರು ರಾಜೀನಾಮೆ ಕೊಡುತ್ತಾರಾ ಎಂದು ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Mudigere: ಚಲಿಸುತ್ತಿರುವ ಕಾರಿನ ಬಾಗಿಲಲ್ಲಿ ಕುಳಿತು ಮಹಿಳೆ ಹುಚ್ಚಾಟ…
Mumtaz Ali Missing: ಮೊದಿನ್ ಬಾವಾ ಸೋದರ ಮಮ್ತಾಜ್ ಆಲಿ ಆತ್ಮಹ*ತ್ಯೆ?
Hebri: ವರುಣನ ರುದ್ರ ನರ್ತನ: ಮುದ್ರಾಡಿ ಬಲ್ಲಾಡಿ ಪರಿಸರ ತತ್ತರ
Mangaluru: ಅಸಭ್ಯ ವರ್ತನೆ, ಹಲ್ಲೆ ಘಟನೆ ಯುವಕನನ್ನು ಕೆಲಸದಿಂದ ತೆಗೆದ ಮಾಲಕರು
Gangolli: ಶ್ರೀ ಮಹಾಂಕಾಳಿ ದೇಗುಲದ ಅಡವಿರಿಸಿದ್ದ 256 ಗ್ರಾಂ ಚಿನ್ನಾಭರಣ ವಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.