![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Oct 9, 2021, 7:09 PM IST
ಬೆಂಗಳೂರು: ರಾಜ್ಯದಲ್ಲಿ ಕಲ್ಲಿದ್ದಲು ಕೊರತೆಯಾಗುತ್ತಿದೆ. ಈ ನಿಟ್ಟಿನಲ್ಲಿ ಕಲ್ಲಿದ್ದಲ್ಲು ಕಡಿಮೆಯಾಗಬಾರದೆಂಬ ದೃಷ್ಟಿಯಿಂದ ಕೇಂದ್ರ ಗಣಿ ಸಚಿವರನ್ನು ಭೇಟಿ ಮಾಡಿ, ನಮ್ಮ ಬೇಡಿಕೆಗಳನೆಲ್ಲಾ ಅವರ ಬಳಿ ಹೇಳಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಒಟ್ಟು ನಮಗೆ 10 ರ್ಯಾಟ್ ಕಲ್ಲಿದ್ದಲು ಬರ್ತಿದೆ. ಅದನ್ನು 14 ರ್ಯಾಟ್ ಗೆ ಏರಿಕೆ ಮಾಡಿದ್ರೆ ನಮಗೆ ಸರಿ ಹೋಗುತ್ತದೆ. ಇದಕ್ಕೆ ಸಂಬಂಧಿಸಿದಂತೆ ಎರಡ್ಮೂರು ಮೈನಿಂಗ್ ಅಧಿಕಾರಿಗಳ ಜೊತೆ ಸಭೆ ನಡೆಸಿ ಸೂಚನೆ ಕೊಟ್ಟಿದ್ದಾರೆ ಒಟ್ಟಾರೆ ಕರ್ನಾಟಕದಲ್ಲಿ ಕಲ್ಲಿದ್ದಲು ಕೊರತೆಯಾಗದಂತೆ ಕೇಂದ್ರ ಸಚಿವರು ಭರವಸೆ ನೀಡಿದ್ದಾರೆ ಎಂದರು.
ರಾಜ್ಯದಲ್ಲಿ ಕೋವಿಡ್ ವ್ಯಾಕ್ಸಿನ್ ವಿಚಾರದ ಕುರಿತು ಮಾತಾನಾಡಿದ ಅವರು, ಮೊದಲನೇ ಡೋಸ್ ಈಗಾಗಲೇ 81% ವರೆಗೆ ಇದೆ .ನಮ್ಮ ಗುರಿ ಡಿಸೆಂಬರ್ ಒಳಗೆ 90% ವರೆಗೆ ಕಂಪ್ಲೀಟ್ ಮಾಡಬೇಕು ಅದಕ್ಕೆ ಕೇಂದ್ರ ಆರೋಗ್ಯ ಸಚಿವರು ಸಹಕಾರ ಕೊಡ್ತೀನಿ ಅಂತ ಹೇಳಿದ್ದಾರೆ ಇದೇ ರೀತಿ ಎರಡನೇ ಡೋಸ್ ಕೂಡ 38% ಇದೆ. ಅದನ್ನು 70% ಗೆ ಹೆಚ್ಚು ಮಾಡಬೇಕು ಅಂತ ಇದ್ದಿವಿ. ಇಡೀ ಕರ್ನಾಟಕದ ಜನಸಂಖ್ಯೆಯನ್ನು ವ್ಯಾಕ್ಸಿನೇಷನ್ ಅಡಿಯಲ್ಲಿ ತರಬೇಕು. ಅದು ಕೂಡ ಈ ವರ್ಷದ ಅಂತ್ಯದಲ್ಲಿ ತರಬೇಕೆಂಬ ಪ್ಲ್ಯಾನ್ ಇದೆ ಎಂದು ಹೇಳಿದರು.
ರಾಜ್ಯದಲ್ಲಿ ಗೊಬ್ಬರ ಕೊರತೆ ವಿಚಾರದ ಕುರಿತು ಮಾತಾನಾಡಿದ ಅವರು,ಕೇಂದ್ರ ರಸಗೊಬ್ಬರ ಸಚಿವರ ಭೇಟಿಯಾಗಿ ಮನವಿ ಮಾಡಲಾಗಿದೆ. 32 ಸಾವಿರ ಮೆಟ್ರಿಕ್ ಟನ್ ಡಿಎಪಿ 10 ಸಾವಿರ ಮೆಟ್ರಿಕ್ ಟನ್ MOP ಪೂರೈಕೆಗೆ ಮನವಿ ಮಾಡಿದ್ದೇವೆ. ಇದಕ್ಕೆ ಕೇಂದ್ರ ಸಚಿವರು ಒಪ್ಪಿಗೆ ನೀಡಿದ್ದಾರೆ ಒಂದು ವಾರದೊಳಗೆ ಅದನ್ನು ಪೂರೈಕೆ ಮಾಡೋದಾಗಿ ಭರವಸೆ ನೀಡಿದ್ದಾರೆ ಎಂದರು.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.