ಕಂಬಳಕ್ಕೆ ಒತ್ತು ಕೊಡಿ; ಮೇಲ್ಮನೆಯಲ್ಲಿ ಕರಾವಳಿ ಶಾಸಕರ ಆಗ್ರಹ


Team Udayavani, Mar 30, 2022, 7:05 AM IST

ಕಂಬಳಕ್ಕೆ ಒತ್ತು ಕೊಡಿ; ಮೇಲ್ಮನೆಯಲ್ಲಿ ಕರಾವಳಿ ಶಾಸಕರ ಆಗ್ರಹ

ಬೆಂಗಳೂರು: ಮೇಲ್ಮನೆಯಲ್ಲಿ ಮಂಗಳವಾರ ಇಡೀ ಸದನ ಕರಾವಳಿ ಸಂಸ್ಕೃತಿಯ ಪ್ರತೀಕ “ಕಂಬಳ’ ಪರ ಧ್ವನಿಯಾಯಿತು. ಈ ಅಪ್ಪಟ ಗ್ರಾಮೀಣ ಕ್ರೀಡೆ ಮತ್ತು ಓಟಗಾರರ ನೆರವಿಗೆ ಧಾವಿಸುವಂತೆ ಸಭಾಪತಿಗಳಾದಿಯಾಗಿ ಸದಸ್ಯರೆಲ್ಲರೂ ಒಕ್ಕೊರಲಿನಿಂದ ಸರಕಾರವನ್ನು ಒತ್ತಾಯಿಸಿದರು.

ಆರಂಭದಲ್ಲಿ ನಿಯಮ 330ರ ಅಡಿ ಕಾಂಗ್ರೆಸ್‌ನ ಮಂಜುನಾಥ ಭಂಡಾರಿ ವಿಷಯ ಪ್ರಸ್ತಾವಿಸಿ, ಕಂಬಳಕ್ಕೆ ತನ್ನದೇ ಆದ ಇತಿಹಾಸವಿದೆ. ಕರಾವಳಿಯಲ್ಲಿ ಕೋಣಗಳು ಕೃಷಿ ಬದುಕಿನ ಅವಿಭಾಜ್ಯ ಅಂಗ. ಕಂಬಳದ ಕೋಣಗಳನ್ನು ಸಾಕುವುದು ಪ್ರತಿಷ್ಠೆ ಎಂದರು.

ಜಾತಿ, ಧರ್ಮ ಮರೆತು ನಡೆಯುವ ಕ್ರೀಡೆ ಎನ್ನುವುದೇ ಕಂಬಳದ ವಿಶೇಷ. ಇಂದು ವಾರ್ಷಿಕ 200 ಸಾಂಪ್ರದಾಯಿಕ ಮತ್ತು 20 ಆಧುನಿಕ ಕಂಬಳಗಳು ನಡೆಯುತ್ತಿವೆ. ಇವುಗಳ ವೀಕ್ಷಣೆಗೆ 75 ಸಾವಿರದಿಂದ ಒಂದು ಲಕ್ಷ ಜನ ಸೇರುತ್ತಾರೆ. ಆಧುನಿಕ ಕಂಬಳದಲ್ಲಿ ಭಾಗವಹಿಸುವ ಒಂದು ಜೋಡಿ ಕೋಣಗಳ ಸಾಕಾಣಿಕೆ ವೆಚ್ಚ ವಾರ್ಷಿಕ 10-12 ಲಕ್ಷ ರೂ. ಆಗುತ್ತದೆ. ಕಂಬಳ ಓಟ ಗಾರರು ಉಸೇನ್‌ ಬೋಲ್ಟ್ ದಾಖಲೆಯನ್ನು ಸರಿಗಟ್ಟಿದ ಉದಾಹರಣೆಗಳೂ ಇವೆ. ಸರಕಾರ ನೆರವಿಗೆ ಧಾವಿಸಬೇಕಿದೆ ಎಂದು ಆಗ್ರಹಿಸಿದರು.

ಕಂಬಳ ಆಯೋಜನೆಗೆ ಸರಕಾರದಿಂದ ಸಹಾಯ ಧನ ನೀಡಬೇಕು. ಕಂಬಳದ ಓಟಗಾರ ರಿಗೆ ತರಬೇತಿ, ಕೌಶಲಾಭಿವೃದ್ಧಿಗೆ ವಾರ್ಷಿಕ ಕನಿಷ್ಠ 10 ಲಕ್ಷ ರೂ. ಅನುದಾನ ಬಿಡುಗಡೆ ಮಾಡ ಬೇಕು. ಕರಾವಳಿಯ ಎರಡು ಜಿಲ್ಲೆಗಳಿಗೆ ಕಂಬಳ ಆಯೋಜಕರನ್ನು ಒಳಗೊಂಡ ಕಂಬಳ ಸಮಿತಿ ರಚಿಸಬೇಕು. ಮೂಡುಬಿದರೆಯಲ್ಲಿ ಕಂಬಳ ಮ್ಯೂಸಿಯಂ ಸ್ಥಾಪನೆಗೆ 2 ಕೋ.ರೂ. ಮೀಸಲಿಡಬೇಕು. ಓಟಗಾರರಿಗೆ ವಿಮೆ, ಪಿಂಚಣಿ ಸೌಲಭ್ಯ ಕಲ್ಪಿಸಬೇಕು. ವೀಕ್ಷಕ ರಿಗೆ ಮೂಲಸೌಕರ್ಯ ಹಾಗೂ ಕಂಬಳ ತಾಣಗಳಿಗೆ ಸಂಪರ್ಕ ರಸ್ತೆ ಅಭಿವೃದ್ಧಿಪಡಿಸಬೇಕು ಎಂದು ಒತ್ತಾಯಿಸಿದರು.

ಇದನ್ನೂ ಓದಿ:ಮಂಗಳೂರು: ಬೆಂಕಿಗಾಹುತಿಯಾದ ಕಾರು: ಮಹಿಳೆ, ನಾಯಿ ಪಾರು

ಕಂಬಳಕ್ಕೆ ಪ್ರೋತ್ಸಾಹ ಸರಕಾರದ ಕರ್ತವ್ಯ
ಕಂಬಳ ಮಾತ್ರ ಅಲ್ಲ; ಕರಾವಳಿ ಎಂದರೆ ಯಕ್ಷಗಾನ, ಕೋಳಿ ಅಂಕ, ಪಾಡªನ ಸೇರಿದಂತೆ ಹಲವು ಸಂಸ್ಕೃತಿಗಳ ಸಮ್ಮಿಲನ. ಆದರೆ ಇತ್ತೀಚಿನ ವರ್ಷಗಳಲ್ಲಿ ಅವು ನಶಿಸಿ ಹೋಗುತ್ತಿವೆ. ಇವುಗಳನ್ನು ಉಳಿಸುವುದು ಸರಕಾರದ ಕರ್ತವ್ಯ ಎಂದು ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್‌ ಅವರು ದನಿಗೂಡಿಸಿದರು.

ಕಂಬಳವನ್ನು ದಸರಾ ಕ್ರೀಡಾಕೂಟದಲ್ಲಿ ಸೇರಿಸಬೇಕು. ಮಂಡ್ಯ, ಮೈಸೂರು ಸುತ್ತ ಭತ್ತದ ಗದ್ದೆಗಳಿವೆ. ಸರಕಾರ ಮನಸ್ಸು ಮಾಡಿದರೆ ಅಲ್ಪಾವಧಿಯಲ್ಲೇ ಕಂಬಳಕ್ಕೆ ಅಗತ್ಯವಿರುವ ಕೆಸರು ಗದ್ದೆ ಗಳನ್ನು ತಯಾರು ಮಾಡಬಹುದು ಎಂದು ಉಪನಾಯಕ ಡಾ| ಕೆ. ಗೋವಿಂದರಾಜು ಅಭಿಪ್ರಾಯ ಪಟ್ಟರು. ಸರಕಾರವು ಪ್ರತೀ ಕಂಬಳಕ್ಕೆ 5 ಲಕ್ಷ ರೂ. ಅನುದಾನ ನೀಡಬೇಕು ಎಂದು ಕಾಂಗ್ರೆಸ್‌ನ ಹರೀಶ್‌ ಕುಮಾರ್‌ ಆಗ್ರಹಿಸಿದರು.

ಕಂಬಳಕ್ಕೆ ಪ್ರೋತ್ಸಾಹ ನೀಡುವುದು ಸರಕಾರದ ಕರ್ತವ್ಯ ಎಂದು ಬಿಜೆಪಿಯ ಪ್ರತಾಪ್‌ಸಿಂಹ ನಾಯಕ್‌ ಹೇಳಿದರು. ಕಂಬಳದ ಆಯೋಜನೆ ದುಬಾರಿಯಾಗಿದೆ. ಇದಕ್ಕೆ ಸರಕಾರ ಸಹಾಯ ಮಾಡಬೇಕು ಎಂದು ಜೆಡಿಎಸ್‌ನ ಭೋಜೇಗೌಡ ಒತ್ತಾಯಿಸಿ ದರು. ಕಂಬಳದ ಕೋಣಗಳನ್ನು, ಅಂಕದ ಕೋಳಿಗಳನ್ನು ಸಾಕುವುದು ಕರಾವಳಿ ಭಾಗದ ಕುಟುಂಬಗಳಿಗೆ ಪ್ರತಿಷ್ಠೆಯಾಗಿದೆ. ಈ ಕ್ರೀಡೆಗಳು ಉಳಿಯಬೇಕು ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಆಶಿಸಿದರು.

ಅಧಿವೇಶನ ಮುಗಿದೊಡನೆ ಸಭೆ
ಕಂಬಳವನ್ನು ಪ್ರೋತ್ಸಾಹಿಸಲು ಸಭಾಪತಿ ಯವರ ನೇತೃತ್ವದಲ್ಲಿ ಸಂಬಂಧಪಟ್ಟ ಮೇಲ್ಮನೆ ಸದಸ್ಯರು ಮತ್ತು ಇಲಾಖೆ ಅಧಿಕಾರಿಗಳ ಸಭೆ ನಡೆಸಲಾಗುವುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ| ಕೆ.ಸಿ. ನಾರಾಯಣಗೌಡ ತಿಳಿಸಿದರು.

ನಿಯಮ 330ರಡಿ ಕಾಂಗ್ರೆಸ್‌ನ ಮಂಜುನಾಥ ಭಂಡಾರಿ ಪ್ರಸ್ತಾವಿಸಿದ ವಿಷಯಕ್ಕೆ ಪ್ರತಿಕ್ರಿಯಿಸಿದ ಅವರು, ಕಂಬಳಕ್ಕೆ ಹೆಚ್ಚು ಶಕ್ತಿ ತುಂಬಲು ಸರಕಾರ ಬದ್ಧವಾಗಿದೆ ಎಂದರು. ಕಂಬಳಕ್ಕೆ ಸರಕಾರ ವಿಶೇಷ ಆದ್ಯತೆ ನೀಡುತ್ತಿದೆ.

“ಕರ್ನಾಟಕ ಕ್ರೀಡಾ ರತ್ನ’, “ಕ್ರೀಡಾ ಪೋಷಕ’ ಪ್ರಶಸ್ತಿಗಳನ್ನು ಕಂಬಳದ ಬೆಳವಣಿಗೆಗೆ ಗಣನೀಯ ಕೊಡುಗೆ ಕೊಟ್ಟಿರುವವರಿಗೆ ನೀಡಿ ಗೌರವಿಸ ಲಾಗುತ್ತಿದೆ. ಮೂಡುಬಿದಿರೆಯಲ್ಲಿ “ಕೋಟಿ-ಚೆನ್ನಯ’ ಜೋಡುಕರೆ ನಿರ್ಮಾಣ ಮಾಡಲಾಗಿದ್ದು, ವೀಕ್ಷಕರ ಗ್ಯಾಲರಿಯ ಸಹಿತ ಮೂಲಸೌಕರ್ಯಗಳನ್ನು ಕಲ್ಪಿಸಲಾಗಿದೆ. ಉಡುಪಿ ಜಿಲ್ಲೆಯ ಕಾರ್ಕಳದ 5 ಎಕರೆಯಲ್ಲಿ “ಲವ-ಕುಶ’ ಕಂಬಳ ಕ್ರೀಡಾಂಗಣ ನಿರ್ಮಿಸಲಾಗಿದೆ ಎಂದು ವಿವರಿಸಿದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.