ಕೈಗೆ ಬಂದ ತುತ್ತು ಬಾಯಿಗಿಲ್ಲ ! ನೇಮಕಾತಿ ಅಕ್ರಮ: ವರದಿ ಕೇಳಿದ ಕಾಂಗ್ರೆಸ್‌ ಹೈಕಮಾಂಡ್‌


Team Udayavani, May 3, 2022, 7:10 AM IST

ಕೈಗೆ ಬಂದ ತುತ್ತು ಬಾಯಿಗಿಲ್ಲ ! ನೇಮಕಾತಿ ಅಕ್ರಮ: ವರದಿ ಕೇಳಿದ ಕಾಂಗ್ರೆಸ್‌ ಹೈಕಮಾಂಡ್‌

ಬೆಂಗಳೂರು: ಪಿಎಸ್‌ಐ, ಪ್ರಾಧ್ಯಾಪಕರ ನೇಮಕಾತಿ ಅಕ್ರಮ, 40 ಪರ್ಸೆಂಟ್‌ ಕಮಿಷನ್‌ ಹಗರಣ ಬಗ್ಗೆ ಸಮಗ್ರ ವರದಿ ನೀಡಲು ರಾಜ್ಯ ಕಾಂಗ್ರೆಸ್‌ ನಾಯಕರಿಗೆ ಹೈಕಮಾಂಡ್‌ ಸೂಚನೆ ನೀಡಿದೆ.

ಮೂರೂ ವಿಷಯಗಳಲ್ಲಿ ರಾಷ್ಟ್ರಮಟ್ಟದ ಹೋರಾಟಕ್ಕೆ ಮುಂದಾಗಿರುವ ಕಾಂಗ್ರೆಸ್‌ ಹೈಕಮಾಂಡ್‌ಗೆ ಈಗ “ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ’ ಎಂಬಂತಾಗಿದೆ. ಪಿಎಸ್‌ಐ ನೇಮಕಾತಿ ಹಗರಣದಲ್ಲಿ ಕಾಂಗ್ರೆಸ್‌ ನಾಯಕರೂ ಭಾಗಿಯಾಗಿರುವ ಆರೋಪ ಕೇಳಿಬಂದಿರುವ ಕಾರಣ, ಹೈಕಮಾಂಡ್‌ ಈ ಕುರಿತು ವಾಸ್ತವಾಂಶದ ವರದಿ ಕೇಳಿದೆ ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ.

ಪಿಎಸ್‌ಐ ಮತ್ತು ಪ್ರಾಧ್ಯಾಪಕರ ನೇಮ ಕಾತಿ ಅಕ್ರಮ, ಬೇರೆ ಇಲಾಖೆಗಳಲ್ಲೂ ಶೇ. 40 ಕಮಿಷನ್‌ ಆರೋಪದ ಕುರಿತು ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ್‌ ಸುಜೇì ವಾಲ ಹೈಕಮಾಂಡ್‌ಗೆ ಪ್ರಾಥಮಿಕ ವರದಿ ನೀಡಿದ್ದರು. ಇದರ ಆಧಾರದಲ್ಲಿ ಗುಜರಾತ್‌, ಕರ್ನಾಟಕ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆ ಎದುರಿಸುವ ನಿಟ್ಟಿನಲ್ಲಿ ರಾಷ್ಟ್ರಮಟ್ಟದ ಹೋರಾಟ ರೂಪಿಸಲು ದಿಲ್ಲಿಯ ನಾಯಕರು ತೀರ್ಮಾನಿಸಿದ್ದರು.

ಆದರೆ ಪಿಎಸ್‌ಐ ನೇಮಕಾತಿ ಅಕ್ರಮದಲ್ಲಿ ಸ್ಥಳೀಯ ಕಾಂಗ್ರೆಸ್‌ ನಾಯಕರು ಕೂಡ ಭಾಗಿಯಾಗಿರುವ ಆರೋಪ ಕೇಳಿಬಂದಿದೆ. ಹೀಗಾಗಿ ಮುಂದೆ ಇರಿಸು ಮುರಿಸು ಉಂಟಾಗಬಾರದು ಎಂದು ಮೂರೂ ವಿಚಾರಗಳಲ್ಲಿ ಮಾಹಿತಿ ನೀಡುವಂತೆ ನಿರ್ದೇಶನ ನೀಡಲಾಗಿದೆ.

ಪಿಎಸ್‌ಐ ಅಕ್ರಮದ ಬಗ್ಗೆ ಮೊದಲು ಮಾತನಾಡಿದ್ದು ಪ್ರಿಯಾಂಕ್‌ ಖರ್ಗೆ. ಅನಂತರ ಕೆಲವು ಕಾಂಗ್ರೆಸ್‌ ಮುಖಂಡರ ಬಂಧನ ಮತ್ತು ವಿಚಾರಣೆ ನಡೆಸಲಾಗಿದೆ. ಬಿಜೆಪಿ ನಾಯಕರು ಕಾಂಗ್ರೆಸ್‌ನತ್ತ ಕೈತೋರಿ ಸುತ್ತಿದ್ದಾರೆ. ಇದರಲ್ಲಿ ಸತ್ಯಾಂಶ ಎಷ್ಟು, ವಾಸ್ತವ ಏನು ಎಂಬುದು ಹೈಕಮಾಂಡ್‌ ಬಯಸಿರುವ ಮಾಹಿತಿ. ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರಿಂದ ಈ ಕುರಿತು ಮಾಹಿತಿ ಪಡೆದು ಅನಂತರ ಮುಂದಿನ ತೀರ್ಮಾನ ಕೈಗೊಳ್ಳಲು ಹೈಕಮಾಂಡ್‌ ನಿರ್ಧರಿಸಿದೆ ಎನ್ನಲಾಗಿದೆ.

ಹೈಕಮಾಂಡ್‌ ಅಸಮಾಧಾನ
ಈ ಮಧ್ಯೆ ಪಿಎಸ್‌ಐ ಮತ್ತು ಪ್ರಾಧ್ಯಾಪಕರ ನೇಮಕಾತಿ ಅಕ್ರಮ ವಿಚಾರದಲ್ಲಿ ರಾಜ್ಯದ ಕಾಂಗ್ರೆಸ್‌ ನಾಯಕರು ಪರಿಣಾಮಕಾರಿ ಹೋರಾಟ ಮಾಡುತ್ತಿಲ್ಲ. ಹೋರಾಟದಲ್ಲೂ “ಆಯ್ಕೆ’ ಮಾಡಿಕೊಳ್ಳಲಾಗುತ್ತಿದೆ ಎಂಬ ದೂರು ಹೈಕಮಾಂಡ್‌ ತಲುಪಿದೆ. ಈಶ್ವರಪ್ಪ ವಿಚಾರದಲ್ಲಿ ನಡೆದ ಹೋರಾಟ ಇತರ ಸಚಿವರ ವಿರುದ್ಧ ಆರೋಪ ಕೇಳಿ ಬಂದಾಗ ನಡೆಯಲಿಲ್ಲ. ದಾಖಲೆಗಳಿದ್ದರೂ ಮೌನ ವಹಿಸಲಾಗಿದೆ ಎಂದು ಕೆಲವು ನಾಯಕರು ದೂರು ನೀಡಿದ್ದಾರೆ. ಈ ವಿಚಾರದಲ್ಲಿ ಹೈಕಮಾಂಡ್‌ ಅಸಮಾಧಾನಗೊಂಡಿದೆ ಎಂದು ತಿಳಿದು ಬಂದಿದೆ.

ಆಡಳಿತಾರೂಢ ಬಿಜೆಪಿ ವಿರುದ್ಧ ಹೋರಾಟ ರೂಪಿಸುವಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್‌ ಒಮ್ಮತದ ತೀರ್ಮಾನ ಕೈಗೊಳ್ಳುತ್ತಿಲ್ಲ. ಪ್ರತ್ಯೇಕ ಹೋರಾಟ ಮಾಡಲಾಗುತ್ತಿದೆ. ಒಂದೇ ವಿಚಾರ ವಾಗಿ ಭಿನ್ನ ಹೇಳಿಕೆ ನೀಡಲಾಗುತ್ತಿದೆ. ಇದ ರಿಂದ ಪಕ್ಷದ ನಿಲುವಿನ ಬಗ್ಗೆ ಮುಖಂಡರು ಮತ್ತು ಕಾರ್ಯಕರ್ತರಲ್ಲಿ ಗೊಂದಲ ಮೂಡುವಂತಾಗಿದೆ ಎಂದು ಹೆಸರು ಹೇಳಲು ಇಚ್ಛಿಸದ ನಾಯಕರೊಬ್ಬರು ಹೇಳಿದ್ದಾರೆ.

ದಿಲ್ಲಿಯಲ್ಲೇ ಹೋರಾಟದ ರೂಪುರೇಷೆ
ರಾಜ್ಯದ ವಿದ್ಯಮಾನಗಳ ಬಗ್ಗೆ ವರದಿ ಪಡೆದ ಅನಂತರ ದಿಲ್ಲಿಯಲ್ಲಿ ಪ್ರಮುಖರ ಸಭೆ ನಡೆಸಲು ಹೈಕಮಾಂಡ್‌ ತೀರ್ಮಾನಿಸಿದೆ. ಆ ಸಭೆಗೆ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್‌, ಮಲ್ಲಿಕಾರ್ಜುನ ಖರ್ಗೆ, ಬಿ.ಕೆ. ಹರಿಪ್ರಸಾದ್‌, ಎಂ.ಬಿ. ಪಾಟೀಲ್‌ ಮತ್ತು ಕೆಪಿಸಿಸಿ ಕಾರ್ಯಾ ಧ್ಯಕ್ಷ ರಿಗೆ ಮಾತ್ರ ಆಹ್ವಾನ ಇರಲಿದೆ. ಆ ಸಭೆ ಯಲ್ಲಿ ಮುಂದಿನ ಹೋರಾಟದ ರೂಪುರೇಷೆ ನಿರ್ಧಾರ ವಾಗಲಿದೆ ಎಂದು ಮೂಲಗಳು ತಿಳಿಸಿವೆ.

- ಎಸ್‌. ಲಕ್ಷ್ಮೀನಾರಾಯಣ

ಟಾಪ್ ನ್ಯೂಸ್

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

Devegowda

Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್‌.ಡಿ.ದೇವೇಗೌಡ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.