Congress ಕರ್ನಾಟಕದ ಮೀಸಲು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಮೇಲುಗೈ!

7ರಲ್ಲಿ 4 ಕಾಂಗ್ರೆಸ್‌ ಪಾಲು, 2 ಎಸ್‌ಸಿ - 2 ಎಸ್‌ಟಿ ಕ್ಷೇತ್ರದಲ್ಲಿ ಗೆಲುವು; ಗೆದ್ದ-ಸೋತ ಕ್ಷೇತ್ರಗಳಲ್ಲಿ ಮತ ಗಳಿಕೆ ಹೆಚ್ಚಳ

Team Udayavani, Jun 6, 2024, 7:20 AM IST

Congress ಕರ್ನಾಟಕದ ಮೀಸಲು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಮೇಲುಗೈ!

ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದ ಎಲ್ಲ ಐದು ಕ್ಷೇತ್ರಗಳನ್ನು ಬಾಚಿಕೊಂಡಿರುವ ಕಾಂಗ್ರೆಸ್‌, ರಾಜ್ಯದ ಏಳು ಮೀಸಲು ಕ್ಷೇತ್ರಗಳ ಪೈಕಿ ನಾಲ್ಕರಲ್ಲಿ ಗೆದ್ದಿದೆ. ಆದರೆ, ನಾಲ್ಕು ಕ್ಷೇತ್ರಗಳು ಬಿಜೆಪಿ ತೆಕ್ಕೆಯಲ್ಲಿದ್ದವು ಗಮನಾರ್ಹ!

ಕಾಂಗ್ರೆಸ್‌ ಗೆದ್ದಿರುವ 9 ಕ್ಷೇತ್ರಗಳ ಪೈಕಿ ನಾಲ್ಕು ಮೀಸಲು ಕ್ಷೇತ್ರಗಳಿವೆ. ಅದರಲ್ಲೂ 9ರಲ್ಲಿ ಐದು ಕ್ಷೇತ್ರಗಳು ಕಲ್ಯಾಣ ಕರ್ನಾಟಕ ಭಾಗದ ಕ್ಷೇತ್ರಗಳಾಗಿವೆ. ನಾಲ್ಕು ಮೀಸಲು ಕ್ಷೇತ್ರಗಳಲ್ಲಿ ಕಳೆದ ಬಾರಿಗಿಂತ ಹೆಚ್ಚು ಮತಗಳನ್ನು ಪಡೆದಿದೆ. ಅಲ್ಲದೆ, ಸೋತ ಮೂರು ಕ್ಷೇತ್ರಗಳಲ್ಲಿಯೂ ಕಳೆದ ಬಾರಿಗಿಂತ ಹೆಚ್ಚು ಮತಗಳನ್ನು ಕಾಂಗ್ರೆಸ್‌ ಈ ಬಾರಿ ಪಡೆದುಕೊಂಡಿದೆ.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದ 51 ಮೀಸಲು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ 32 ಕಡೆ ಗೆದ್ದಿತ್ತು. ಲೋಕಸಭೆ ಚುನಾವಣೆಯಲ್ಲಿ ಅದೂ ಪುನರಾವರ್ತನೆ ಆಗಿದ್ದು, ಏಳು ಮೀಸಲು ಲೋಕಸಭಾ ಕ್ಷೇತ್ರಗಳ ಪೈಕಿ ನಾಲ್ಕರಲ್ಲಿ ಗೆದ್ದಿದೆ. ಕಲಬುರಗಿ, ರಾಯಚೂರು, ಬಳ್ಳಾರಿ, ಚಾಮರಾಜನಗರದಲ್ಲಿ ಕಾಂಗ್ರೆಸ್‌ ಗೆದ್ದಿದ್ದರೆ, ಚಿತ್ರದುರ್ಗ ಹಾಗೂ ವಿಜಯಪುರ ಕ್ಷೇತ್ರಗಳನ್ನು ಉಳಿಸಿಕೊಳ್ಳುವಲ್ಲಿ ಬಿಜೆಪಿ ಯಶಸ್ವಿಯಾಗಿದೆ. ಆದರೆ, ಮೈತ್ರಿ ಕಾರಣಕ್ಕೆ ತನ್ನ ಬಳಿ ಇದ್ದ ಕೋಲಾರ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಟ್ಟಿದ್ದರಿಂದ ಆ ಕ್ಷೇತ್ರವನ್ನೂ ಬಿಜೆಪಿ ಕಳೆದುಕೊಂಡಿದೆ.

ಬಳ್ಳಾರಿ ಕ್ಷೇತ್ರ: ಬಳ್ಳಾರಿ ಮೀಸಲು ಕ್ಷೇತ್ರದಲ್ಲಿ 2018ರಲ್ಲಿ ನಡೆದಿದ್ದ ಉಪ ಚುನಾವಣೆಯ ಒಂದು ವರ್ಷದ ಅವಧಿ ಬಿಟ್ಟರೆ, 2004ರಿಂದ ಸತತವಾಗಿ ಇಲ್ಲಿ ಬಿಜೆಪಿ ಗೆಲ್ಲುತ್ತಾ ಬಂದಿತ್ತು. ಈ ಬಾರಿ ಶ್ರೀರಾಮುಲು ಅವರನ್ನು ಮಣಿಸುವ ಮೂಲಕ ತುಕರಾಂ ಈ ಕ್ಷೇತ್ರವನ್ನು ಕಾಂಗ್ರೆಸ್‌ಗೆ ತಂದು ಕೊಟ್ಟಿದ್ದಾರೆ. ಕಳೆದ ಬಾರಿ ಇಲ್ಲಿ ಕಾಂಗ್ರೆಸ್‌ ಅಭ್ಯರ್ಥಿ 5.60 ಲಕ್ಷ ಮತ ಪಡೆದಿದ್ದರೆ, ಈ ಬಾರಿ 7.30 ಲಕ್ಷ ಮತಗಳನ್ನು ಪಡೆದಿದ್ದಾರೆ.

ಕಲಬುರಗಿ ಕ್ಷೇತ್ರ: ಕಾಂಗ್ರೆಸ್‌ನ ಭದ್ರಕೋಟೆಯಾಗಿದ್ದ ಕಲಬುರಗಿಯಲ್ಲಿ ಕಳೆದ ಬಾರಿ ಡಾ. ಉಮೇಶ್‌ ಜಾಧವ್‌ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೋಲಿಸುವ ಮೂಲಕ ಮೊದಲ ಬಾರಿಗೆ ಕಮಲ ಅರಳಿಸಿದ್ದರು. ಈ ಬಾರಿ ತಮ್ಮ ಅಳಿಯನ ಮೂಲಕ ಖರ್ಗೆಯವರು ಸೋಲಿನ ಸೇಡು ತೀರಿಸಿಕೊಂಡಿದ್ದಾರೆ. ಕಳೆದ ಬಾರಿ ಕಾಂಗ್ರೆಸ್‌ 5.24 ಲಕ್ಷ ಮತ ಪಡೆದಿದ್ದರೆ, ಈ ಬಾರಿ 6.25 ಲಕ್ಷ ಮತಗಳನ್ನು ಪಡೆದಿದೆ.

ರಾಯಚೂರು ಕ್ಷೇತ್ರ: ರಾಯಚೂರು ಕ್ಷೇತ್ರದಲ್ಲಿ 2009 ಮತ್ತು 2019ರಲ್ಲಿ ಬಿಜೆಪಿ ಗೆದ್ದಿತ್ತು. ಈ ಬಾರಿ ನಿವೃತ್ತ ಐಎಎಸ್‌ ಅಧಿಕಾರಿ ಜಿ. ಕುಮಾರ್‌ ನಾಯಕ್‌ ಕಾಂಗ್ರೆಸ್‌ನಿಂದ ಗೆದ್ದಿದ್ದಾರೆ. ಕಳೆದ ಬಾರಿ ಇಲ್ಲಿ ಕಾಂಗ್ರೆಸ್‌ 4.80 ಲಕ್ಷ ಮತ ಗಳಿಸಿದ್ದರೆ, ಈ ಬಾರಿ 6.70 ಲಕ್ಷ ಮತಗಳನ್ನು ಪಡೆದಿದೆ.

ಚಾಮರಾಜನಗರ ಕ್ಷೇತ್ರ: ಚಾಮರಾಜನಗರದಲ್ಲಿ 2019ರಲ್ಲಿ ಮೊದಲ ಬಾರಿ ಬಿಜೆಪಿ ಖಾತೆ ತೆರೆದಿತ್ತು. ಮೂಲತಃ ಕಾಂಗ್ರೆಸ್‌ನವರಾದ ವಿ. ಶ್ರೀನಿವಾಸ್‌ ಪ್ರಸಾದ್‌ ಇಲ್ಲಿ ಬಿಜೆಪಿಯಿಂದ ಗೆದ್ದಿದ್ದರು. ಈ ಬಾರಿ ಕಾಂಗ್ರೆಸ್‌ ಗೆದ್ದಿದೆ. ಕಳೆದ ಬಾರಿ ಕಾಂಗ್ರೆಸ್‌ 5.66 ಲಕ್ಷ ಮತ ಪಡೆದಿದ್ದರೆ, ಈ ಬಾರಿ 7.51ಲಕ್ಷ ಮತಗಳನ್ನು ಪಡೆದಿದೆ.

ಚಿತ್ರದುರ್ಗ ಕ್ಷೇತ್ರ: ಚಿತ್ರದುರ್ಗದಲ್ಲಿ ಈ ಬಾರಿಯೂ ಕಾಂಗ್ರೆಸ್‌ ಸೋತಿದೆ. ಕಳೆದ ಬಾರಿ ಕಾಂಗ್ರೆಸ್‌ 5.46 ಲಕ್ಷ ಮತಗಳನ್ನು ಪಡೆದಿದ್ದರೆ, ಈ ಬಾರಿ 6.36 ಲಕ್ಷ ಮತಗಳನ್ನು ಪಡೆದಿದೆ. ಇಲ್ಲಿ ಎರಡೂ ಬಾರಿ ಬಿ.ಎನ್‌. ಚಂದ್ರಪ್ಪ ಸೋತಿದ್ದಾರೆ.

ವಿಜಯಪುರ ಕ್ಷೇತ್ರ: ವಿಜಯಪುರದಲ್ಲಿ ಕಳೆದ ಬಾರಿ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಅಭ್ಯರ್ಥಿಯಾಗಿ ಜೆಡಿಎಸ್‌ನಿಂದ ಡಾ. ಸುನೀತಾ ಚೌಹಾಣ್‌ ಸ್ಪರ್ಧಿಸಿ ಸೋತಿದ್ದರು. ಕೋಲಾರದಲ್ಲಿ ಸತತ ಏಳು ಬಾರಿ ಗೆದ್ದಿದ್ದ ಕೆ.ಎಚ್‌. ಮುನಿಯಪ್ಪ 2019ರಲ್ಲಿ ಸೋತರು. ಇಲ್ಲಿ ಮೊದಲ ಬಾರಿಗೆ ಕಮಲ ಅರಳಿತ್ತು. ಕಳೆದ ಬಾರಿ ಕಾಂಗ್ರೆಸ್‌ 4.99 ಲಕ್ಷ ಮತ ಗಳಿಸಿತ್ತು. ಈ ಬಾರಿ 6.20 ಲಕ್ಷ ಮತಗಳನ್ನು ಪಡೆದಿದೆ.

ಸುರಪುರ ಸಹ ಮರು ವಶಕ್ಕೆ
ರಾಜಾ ವೆಂಕಟಪ್ಪ ನಾಯಕ್‌ ಅವರ ನಿಧನದಿಂದ ತೆರವಾಗಿದ್ದ ಸುರಪುರ ವಿಧಾನಸಭಾ (ಎಸ್ಟಿ ಮೀಸಲು) ಕ್ಷೇತ್ರಕ್ಕೆ ನಡೆದ ಚುನಾವಣೆಯಲ್ಲಿ ಅವರ ಪುತ್ರ ರಾಜಾ ವೇಣುಗೋಪಾಲ ನಾಯಕ್‌ ಗೆಲ್ಲುವ ಮೂಲಕ ಆ ವಿಧಾನಸಭಾ ಕ್ಷೇತ್ರವನ್ನೂ ಕಾಂಗ್ರೆಸ್‌ ಮರು ವಶಕ್ಕೆ ಪಡೆದುಕೊಂಡತಾಗಿದೆ.

ಟಾಪ್ ನ್ಯೂಸ್

Gurudath Kamath: ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ನಿಧನ

Gurudath Kamath: ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ನಿಧನ

ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್

MUDA; ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್

ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಮತ್ತೋರ್ವನ ಬಂಧನ

Hubli: ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಮತ್ತೋರ್ವನ ಬಂಧನ

Haryana: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 3 ಮೃತ್ಯು, 7 ಮಂದಿಗೆ ಗಾಯ

Haryana: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 3 ಮೃತ್ಯು, 7 ಮಂದಿಗೆ ಗಾಯ

13-rabiesd-ay

World Rabies Day 2024: ಈ ಮಾರಣಾಂತಿಕ ಕಾಯಿಲೆಯ ಬಗ್ಗೆ ತಿಳಿವಳಿಕೆ ಕೊರತೆ!

Tour: ಹೊಳೆ ಆಂಜನೇಯ,ಸೋಮನಾಥಪುರ ದೇವಾಲಯ… ಸ್ನೇಹಿತರೊಂದಿಗಿನ ಏಕದಿನದ ನವೋಲ್ಲಾಸ

Tour: ಹೊಳೆ ಆಂಜನೇಯ,ಸೋಮನಾಥಪುರ ದೇವಾಲಯ… ಸ್ನೇಹಿತರೊಂದಿಗಿನ ಏಕದಿನದ ನವೋಲ್ಲಾಸ

Google 25th Birthday! ಗ್ಯಾರೇಜ್‌ನಿಂದ ಮೌಂಟ್‌ವಿವ್‌ವರೆಗೆ….ಗೂಗಲ್‌ ರಜತ ಸಂಭ್ರಮ

Google 25th Birthday! ಗ್ಯಾರೇಜ್‌ನಿಂದ ಮೌಂಟ್‌ವಿವ್‌ವರೆಗೆ….ಗೂಗಲ್‌ ರಜತ ಸಂಭ್ರಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gurudath Kamath: ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ನಿಧನ

Gurudath Kamath: ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ನಿಧನ

ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್

MUDA; ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್

SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್‌ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ

SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್‌ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ

eshwarappa

Shimoga; ನಿಮಗೊಂದು ಕಾನೂನು ನಮಗೊಂದು ಕಾನೂನು ಇದೆಯೇ..: ಸಿದ್ದರಾಮಯ್ಯ ವಿರುದ್ದ ಈಶ್ವರಪ್ಪ

Belagavi; Letter to CM on division of Belgaum district after Dussehra: Hebbalkar

Belagavi; ದಸರಾ ಬಳಿಕ ಬೆಳಗಾವಿ ಜಿಲ್ಲೆ ವಿಭಜನೆ ಕುರಿತು ಸಿಎಂಗೆ ಪತ್ರ: ಹೆಬ್ಬಾಳಕರ್

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Gurudath Kamath: ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ನಿಧನ

Gurudath Kamath: ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ನಿಧನ

moksha Kushal recent photoshoot

Moksha Kushal: ಹಾಟ್‌ ಫೋಟೋಶೂಟ್‌ನಲ್ಲಿ ಮೋಕ್ಷಾ ಮಿಂಚು

ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್

MUDA; ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್

ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಮತ್ತೋರ್ವನ ಬಂಧನ

Hubli: ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಮತ್ತೋರ್ವನ ಬಂಧನ

Haryana: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 3 ಮೃತ್ಯು, 7 ಮಂದಿಗೆ ಗಾಯ

Haryana: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 3 ಮೃತ್ಯು, 7 ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.