
ಅಭ್ಯರ್ಥಿಗಳ ಆಯ್ಕೆಗೆ ಇಂದು, ನಾಳೆ ಕಾಂಗ್ರೆಸ್ ಸಭೆ
Team Udayavani, Mar 7, 2023, 7:05 AM IST

ಬೆಂಗಳೂರು: ಸುಮಾರು 70ರಿಂದ 80 ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆಗೆ 2ನೇ ಹಂತದ ಕಸರತ್ತು ಮಂಗಳವಾರ ಹಾಗೂ ಬುಧವಾರ ಎರಡು ದಿನಗಳ ಕಾಲ ನಡೆಯಲಿದೆ.
ನಗರದ ಹೊರವಲಯದ ರೆಸಾರ್ಟ್ನಲ್ಲಿ ಪ್ರಮುಖರಾದ ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಹಾಗೂ ರಣದೀಪ್ ಸಿಂಗ್ ಸುರ್ಜೇವಾಲಾ ಸಮ್ಮುಖದಲ್ಲಿ ಈ ಸಭೆ ನಡೆಯಲಿದೆ. ಪ್ರಥಮ ಹಂತದಲ್ಲಿ ಈಗಾಗಲೇ 130ರಿಂದ 150 ಕ್ಷೇತ್ರಗಳಿಗೆ ಒಂದೊಂದೇ ಅಭ್ಯರ್ಥಿ ಆಯ್ಕೆ ಮಾಡಿ ಸ್ಕ್ರೀನಿಂಗ್ ಕಮಿಟಿ ಸಭೆಯಲ್ಲೂ ಸಮ್ಮತಿ ಪಡೆಯಲಿದೆ. ಉಳಿದಂತೆ ಒಂದಕ್ಕಿಂತ ಹೆಚ್ಚು ಟಿಕೆಟ್ ಆಕಾಂಕ್ಷಿಗಳಿರುವ 70 ರಿಂದ 80 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸುವ ಬಗ್ಗೆ ಈ ಸಭೆ ನಡೆಯಲಿದೆ.
ಪ್ರತಿಯೊಂದು ಕ್ಷೇತ್ರಕ್ಕೂ ಟಿಕೆಟ್ ಆಕಾಂಕ್ಷಿಗಳಾಗಿರುವ ಎಲ್ಲರನ್ನೂ ಒಟ್ಟಿಗೆ ಸೇರಿ ಒಮ್ಮತದ ಅಭ್ಯರ್ಥಿಯನ್ನು ಆಯ್ಕೆ ಮಾಡುವುದಕ್ಕೆ ಆದ್ಯತೆ ನೀಡಲಾಗುತ್ತಿದೆ. ಯಾರಿಗೆ ಟಿಕೆಟ್ ನೀಡಿದರೂ ಒಟ್ಟಾಗಿ ಕೆಲಸ ಮಾಡಿ ಪಕ್ಷ ಗೆಲ್ಲಿಸುವಂತೆ ಸೂಚನೆ ನೀಡುವುದೇ ಈ ಸಭೆಯ ಉದ್ದೇಶವಾಗಿದೆ.
ಲಿಂಗಾಯತರ ಪ್ರತ್ಯೇಕ ಸಭೆ
ಈ ಮಧ್ಯೆ ಪಕ್ಷದ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರ ನಿವಾಸದಲ್ಲಿ ಲಿಂಗಾಯತ ನಾಯಕರು ಸಭೆ ಸೇರಿ ಸಮಾಲೋಚನೆ ನಡೆಸಿರುವುದು ಅಚ್ಚರಿ ತಂದಿದೆ. ಈ ಸಭೆಯಲ್ಲಿ ಮಾಜಿ ಸಚಿವರಾದ ಎಂ.ಬಿ.ಪಾಟೀಲ್, ವಿನಯ ಕುಲಕರ್ಣಿ ಸಹಿತ ಅನೇಕರು ಭಾಗವಹಿಸಿದ್ದರು. ಈಗಾಗಲೇ ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರನ್ನು ಪ್ರತ್ಯೇಕವಾಗಿ ಭೇಟಿ ಮಾಡಿ ಈ ಸಲ ವೀರಶೈವ-ಲಿಂಗಾಯತ ಸಮಾಜದವರಿಗೆ 70ರಿಂದ 80 ಸೀಟು ಕೊಡಬೇಕೆಂದು ಬೇಡಿಕೆ ಸಲ್ಲಿಸಿದ್ದಾರೆ. ಮಂಗಳವಾರ, ಬುಧವಾರ ಅಭ್ಯರ್ಥಿ ಆಯ್ಕೆಗೆ ಸಭೆ ಸೇರುತ್ತಿರುವ ಹಿನ್ನೆಲೆಯಲ್ಲಿ ಈ ಸಭೆ ಮಹತ್ವ ಪಡೆದುಕೊಂಡಿದೆ.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Adalat: 39 ಲಕ್ಷ ಕೇಸ್ ಇತ್ಯರ್ಥ; ಪುನಃ ಒಂದಾದ 307 ದಂಪತಿ

ಮೂಲಗೇಣಿದಾರರ ಅರ್ಜಿ ತತ್ಕ್ಷಣ ಇತ್ಯರ್ಥಗೊಳಿಸಲು ಐವನ್ ಮನವಿ

Karnataka Govt.,: ಮಂಗಳೂರಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಮನವಿ

Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.