Congress; ಮತ್ತೆ ಆಪರೇಶನ್‌ ಕಮಲ ಆರೋಪ; ಮೋದಿ, ಅಮಿತ್‌ ಶಾ ಅವರಿಂದಲೇ ಪ್ರಯತ್ನ: ಕೈ ದೂರು

ಕಾಂಗ್ರೆಸ್‌ ಶಾಸಕರಿಗೆ 100 ಕೋಟಿ ರೂ. ಆಮಿಷ: ಆರೋಪ

Team Udayavani, Aug 26, 2024, 7:25 AM IST

Congress; ಮತ್ತೆ ಆಪರೇಶನ್‌ ಕಮಲ ಆರೋಪ; ಮೋದಿ, ಅಮಿತ್‌ ಶಾ ಅವರಿಂದಲೇ ಪ್ರಯತ್ನ: ಕೈ ದೂರು

ಬೆಂಗಳೂರು: ವಿವಿಧ ಹಗರಣಗಳ ಸಂಬಂಧ ಸರಕಾರ ಹಾಗೂ ವಿಪಕ್ಷಗಳ ನಡುವೆ ಸಂಘರ್ಷ ತಾರಕಕ್ಕೇರಿರುವ ಸಂದರ್ಭದಲ್ಲೇ ಮತ್ತೆ ಬಿಜೆಪಿ ವಿರುದ್ಧ “ಆಪರೇಷನ್‌ ಕಮಲದ ಆರೋಪ ಕೇಳಿ ಬಂದಿದೆ.ಸರಕಾರವನ್ನು ಅಸ್ಥಿರಗೊಳಿಸಲು ಕಾಂಗ್ರೆಸ್‌ ಶಾಸಕರಿಗೆ 100 ಕೋಟಿ ರೂ.ವರೆಗೂ ಆಮಿಷವೊಡ್ಡಲಾಗು ತ್ತಿದೆ. ಬಿಜೆಪಿಯ ದಿಲ್ಲಿ ನಾಯಕರ ಕಡೆಯಿಂದಲೇ ಈ ಪ್ರಯತ್ನ ನಡೆದಿದೆ ಎಂದು ಕಾಂಗ್ರೆಸ್‌ ಆರೋಪಿಸಿದೆ.

ಸ್ವತಃ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್‌ ಶಾ ಇದರ ಹಿಂದಿದ್ದಾರೆ. ಅಲ್ಲದೆ ರಾಜ್ಯದ ನಾಲ್ಕೈದು ಪ್ರಮುಖ ನಾಯಕರು ಈ ಕಾರ್ಯಾಚರಣೆಯಲ್ಲಿ ನಿರತರಾಗಿದ್ದಾರೆ ಎಂದು ಆಡಳಿತಾರೂಢ ಕಾಂಗ್ರೆಸ್‌ನ ಸಚಿವರು, ಶಾಸ ಕರು ರವಿವಾರ ಗಂಭೀರ ಆರೋಪ ಮಾಡಿದ್ದಾರೆ.

ಆಮಿಷ ನಿಜ: ಸಚಿವ ಮಹದೇವಪ್ಪ
ಬೆಂಗಳೂರಿನ ತಮ್ಮ ನಿವಾಸದಲ್ಲಿ ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಡಾ| ಎಚ್‌. ಸಿ. ಮಹದೇವಪ್ಪ, “ಬಿಜೆಪಿ ನಾಯಕರಿಂದ ನಮ್ಮ ಶಾಸಕರಿಗೆ ಆಮಿಷ ಬರುತ್ತಿರುವುದು ನಿಜ. ಇದೇನೂ ಹೊಸ ಸಂಗತಿ ಅಲ್ಲ. ಬಿಜೆಪಿ-ಜೆಡಿಎಸ್‌ನ ಹಳೆಯ ಚಾಳಿ. ಅವರು ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಗಟ್ಟಿಗೊಳಿಸುವುದಾಗಲಿ ಅಥವಾ ಗೌರವಿಸುವುದಾಗಲಿ ಮಾಡುವುದಿಲ್ಲ. ಇತ್ತ ಜನಾ ದೇಶವನ್ನೂ ಗೌರವಿಸುವುದಿಲ್ಲ. ಅಧಿಕಾರದ ಆಸೆ ತೋರಿಸಿ, 2 ಬಾರಿ ಆಪರೇಷನ್‌ ಕಮಲ ಮಾಡಿದರು. ಆದರೆ ಯಶಸ್ವಿ ಆಗಲಿಲ್ಲ. ಮತ್ತೂಂದು ಅಂಥದ್ದೇ ಪ್ರಯೋಗ ನಡೆದಿದೆ’ ಎಂದು ದೂರಿದರು.

ಮೋದಿ, ಶಾ ಷಡ್ಯಂತ್ರ: ಸಚಿವ ಡಾ| ಪಾಟೀಲ್‌
ಕಲಬುರಗಿಯಲ್ಲಿ ಸಚಿವ ಡಾ| ಶರಣಪ್ರಕಾಶ ಪಾಟೀಲ್‌ ಮಾತನಾಡಿ, “100 ಕೋಟಿ ರೂ. ಆಮಿಷ ಒಡ್ಡಿದ್ದಾರೆ ಎಂದು ನಮ್ಮ ಪಕ್ಷದ ಶಾಸಕರೊಬ್ಬರು ಹೇಳಿದ್ದಾರೆ. ಅವರಿಗೆ ಆ ರೀತಿ ಆಮಿಷ ಬಂದದ್ದಕ್ಕೆ ಅವರು ಆ ರೀತಿ ಹೇಳಿರಬಹುದು. ನಮ್ಮ ಕೆಲವು ಶಾಸಕರನ್ನು ಸೆಳೆಯಲು ಬಿಜೆಪಿ ಪ್ರಯತ್ನ ಮಾಡುತ್ತಿದೆ ಎಂದು ಇತ್ತೀಚೆಗೆ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಮುಖ್ಯಮಂತ್ರಿಯವರೇ ಹೇಳಿದ್ದರು.

ಸರಕಾರವನ್ನು ಬುಡಮೇಲು ಮಾಡಲು ಪ್ರಧಾನಿ ಮೋದಿ ಮತ್ತು ಕೇಂದ್ರ ಸಚಿವ ಅಮಿತ್‌ ಶಾ ಅವರೇ ಷಡ್ಯಂತ್ರ ರೂಪಿಸಿದ್ದಾರೆ. ರಾಜಭವನದ ಮೂಲಕ ಈ ಪ್ರಯತ್ನ ನಡೆಸಿದ್ದಾರೆ. ಆದರೆ ಇಂತಹ ಪ್ರಯತ್ನಗಳು ಫ‌ಲ ನೀಡುವುದಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

100 ಕೋಟಿ ರೂ. ಆಮಿಷ: ರವಿ ಗಾಣಿಗ
ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ರವಿ ಗಾಣಿಗ, ಈಗಾಗಲೇ 50 ಶಾಸಕರ ಖರೀದಿಗೆ ಪ್ರಯತ್ನ ನಡೆಸಲಾಗುತ್ತಿದೆ. ಬಿಜೆಪಿಯ ದಲ್ಲಾಳಿಗಳು ಪ್ರತಿನಿತ್ಯ ನಮ್ಮ ಶಾಸಕರನ್ನು ಸಂಪರ್ಕಿಸುತ್ತಿದ್ದಾರೆ. 50 ಕೋಟಿ ರೂ.ದಿಂದ 100 ಕೋಟಿ ರೂ.ವರೆಗೂ ಆಮಿಷ ಇದೆ. ಮೊನ್ನೆಯೂ ಕೆಲವು ಕಾಂಗ್ರೆಸ್‌ ಶಾಸಕರಿಗೆ ಕರೆ ಬಂದಿದೆ ಎಂದು ತಿಳಿಸಿದರು.

“ಕೆಲವು ಶಾಸಕರಿಗೆ ಕರೆ ಮಾಡಿರುವ ವ್ಯಕ್ತಿಯು 100 ಕೋಟಿ ರೂ. ಸಿದ್ಧವಿದೆ. ಎಲ್ಲಿಗೆ ಬರುತ್ತೀರಿ?, 50 ಮಂದಿ ಖರೀದಿಗೆ ಹಂಚಿಕೆ ಹಾಕಲಾಗಿದೆ ಎಂದು ಹೇಳಿ ದ್ದ. ನನಗೆ ಯಾರೋ ಒಬ್ಬ ಫೋನ್‌ ಮಾಡಿದ್ದ, 100 ಕೋಟಿ ಸಿದ್ಧ ಎಂದು ಹೇಳಿದ್ದ. ಆಗ ನಾನು 100 ಕೋಟಿ ರೂ. ನೀನೇ ಇಟ್ಟುಕೋ ಎಂದು ಹೇಳಿದ್ದು, ಇ.ಡಿ.ಯವರಿಗೆ ಕರೆ ಮಾಡಬೇಕು ಎಂದುಕೊಂಡಿದ್ದೆ. ನಮ್ಮ ಸರಕಾರವನ್ನು ಬೀಳಿಸಲು ದಿನನಿತ್ಯ ಪ್ರಯತ್ನ ನಡೆಯುತ್ತಿದೆ’ ಎಂದು ಆರೋಪ ಮಾಡಿದರು.

ಬಿಜೆಪಿಯ ಬಿ.ಎಲ್‌. ಸಂತೋಷ್‌, ಶೋಭಾ ಕರಂದ್ಲಾಜೆ, ಪ್ರಹ್ಲಾದ್‌ ಜೋಷಿ, ಜೆಡಿಎಸ್‌ನ ಎಚ್‌. ಡಿ. ಕುಮಾರಸ್ವಾಮಿ ಇವರೆಲ್ಲ ಒಂದು ಗ್ಯಾಂಗ್‌ ಆಗಿದ್ದಾರೆ. ಕಾಂಗ್ರೆಸ್‌ ಸರಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿದ್ದಾರೆ. ಸರಕಾರವನ್ನು ಬೀಳಿಸುವುದಾಗಿ ಮೋದಿಗೆ ಮಾತು ಕೊಟ್ಟಿದ್ದಾರೆ. ಆದರೆ ನಮ್ಮದು 136 ಶಾಸಕರಿರುವ ಬಂಡೆಯಂಥ ಸರಕಾರ. ನಮ್ಮ ಶಾಸ ಕರು ಆಮಿಷಗಳಿಗೆ ಬಲಿಯಾಗುವುದಿಲ್ಲ. ಫೋನ್‌ ಮಾಡಿ ಆಮಿಷ ಒಡ್ಡಿದವನ ಆಡಿಯೋವನ್ನು ಸೂಕ್ತ ಸಮಯದಲ್ಲಿ ಬಿಡುಗಡೆ ಮಾಡುತ್ತೇವೆ. ಸಾಕ್ಷಿ ಸಹಿತ ಐ.ಟಿ., ಇ.ಡಿ.ಗೆ ಹಿಡಿದು ಕೊಡುತ್ತೇವೆ ಎಂದರು.

ಶಾಸಕ ರವಿ ಗಾಣಿಗ
ವಿರುದ್ಧ ದೂರು ದಾಖಲು
ಹುಬ್ಬಳ್ಳಿ: ಕಾಂಗ್ರೆಸ್‌ ನಾಯಕರು ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಬಿಜೆಪಿ ಕೆಂಡ ಕಾರಿದೆ. ಈ ಸಂಬಂಧ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ ಅವರು ಕಾಂಗ್ರೆಸ್‌ ಶಾಸಕ ರವಿ ಗಾಣಿಗ ವಿರುದ್ಧ ರವಿವಾರ ಇಲ್ಲಿನ ಉಪನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಕಾಂಗ್ರೆಸ್‌ ಸರಕಾರವನ್ನು ಕೆಡವಲು ಸಂಚು ರೂಪಿಸಿ ಪ್ರತಿಯೊಬ್ಬ ಶಾಸಕರಿಗೆ 50-100 ಕೋಟಿ ರೂ. ಆಮಿಷ ಒಡ್ಡುತ್ತಿದ್ದಾರೆ ಎಂದು ಬಿಜೆಪಿ ನಾಯಕರ ಹೆಸರು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಹೀಗಾಗಿ ರವಿ ಗಾಣಿಗ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ಒತ್ತಾಯಿಸಲಾಗಿದೆ.

ಟಾಪ್ ನ್ಯೂಸ್

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ

Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ

sidda

‘One Nation One Election’ ಪ್ರಸ್ತಾವ: ಒಕ್ಕೂಟ ವ್ಯವಸ್ಥೆಗೆ ವಿರುದ್ಧ: ಸಿಎಂ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.