Congress: ಕುರುಡುಮಲೆ ದೇವಸ್ಥಾನದಿಂದ “ಪ್ರಜಾಧ್ವನಿ-2’ಕ್ಕೆ ನಾಳೆ ಚಾಲನೆ
Team Udayavani, Apr 5, 2024, 6:41 AM IST
ಬೆಂಗಳೂರು: ಕೋಲಾರ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಉಂಟಾದ ಗೊಂದಲದಿಂದ ಮುಂದೂಡಲ್ಪಟ್ಟಿದ್ದ ಕಾಂಗ್ರೆಸ್ನ ಲೋಕಸಭಾ ಚುನಾವಣ ಪ್ರಚಾರ ಕಾರ್ಯಕ್ರಮ ಶನಿವಾರ (ಎ. 6) ನಿಗದಿಯಾಗಿದ್ದು, ಅಂದು ಕುರುಡುಮಲೆ ದೇವಸ್ಥಾನದಿಂದ “ಪ್ರಜಾಧ್ವನಿ-2’ಕ್ಕೆ ಚಾಲನೆ ದೊರೆಯಲಿದೆ.
ಅಂದು ಬೆಳಗ್ಗೆ 10.30ಕ್ಕೆ ಮುಳಬಾಗಿಲು ವಿಧಾನಸಭಾ ಕ್ಷೇತ್ರದಲ್ಲಿರುವ ಕುರುಡುಮಲೆ ದೇವಸ್ಥಾನದಲ್ಲಿ ಪೂಜೆ ಸಲ್ಲಿಸುವುದರೊಂದಿಗೆ ಚುನಾವಣ ಪ್ರಚಾರಕ್ಕೆ ಕೆಪಿಸಿಸಿ ಅಧಿಕೃತ ಚಾಲನೆ ನೀಡಲಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಪಕ್ಷದ ಹಿರಿಯ ನಾಯಕರು ಭಾಗವಹಿಸಲಿದ್ದಾರೆ.
ಈ ಮೊದಲು ಮಾ.29ರಂದು ಮುಳಬಾಗಿಲಿನ ಕುರುಡುಮಲೆ ಹಾಗೂ ಮಾ.30ರಂದು ಹಾಸನದ ಹೊಳೆನರಸೀಪುರದಿಂದ “ಪ್ರಜಾಧ್ವನಿ-2’ಕ್ಕೆ ಚಾಲನೆ ನೀಡಲು ಕಾಂಗ್ರೆಸ್ ಉದ್ದೇಶಿಸಿತ್ತು. ಈ ಸಂಬಂಧ ಎಲ್ಲ ಸಿದ್ಧತೆಗಳೂ ಪೂರ್ಣಗೊಂಡಿದ್ದವು. ಆದರೆ ಕೋಲಾರದಲ್ಲಿ ಪಕ್ಷದ ನಾಯಕರ ಭಿನ್ನಮತ ಸ್ಫೋಟಗೊಂಡು, ಅದು ರಾಜೀನಾಮೆ ಪ್ರಹಸನಕ್ಕೂ ತಲುಪಿದ್ದ ಹಿನ್ನೆಲೆಯಲ್ಲಿ ಪ್ರಚಾರ ಕಾರ್ಯಕ್ರಮ ಮುಂದೂಡಿಕೆಯಾಗಿತ್ತು.
ಅದಕ್ಕೂ ಮುನ್ನ ಮಾ. 26ರಂದು ಬೀದರ್ನ ಬಸವಕಲ್ಯಾಣ ಮತ್ತು ಕುರುಡುಮಲೆಯಿಂದ ಹೊರಟು ಶಿವಮೊಗ್ಗದಲ್ಲಿ ಮೊದಲ ಹಂತದ ಪ್ರಚಾರ ಅಂತ್ಯಗೊಳಿಸಲು ತೀರ್ಮಾನಿಸಲಾಗಿತ್ತು. ಆದರೆ ಹಲವು ಕ್ಷೇತ್ರಗಳಲ್ಲಿ ಅಭ್ಯರ್ಥಿ ಘೋಷಣೆ ಬಳಿಕ ಅಸಮಾಧಾನ ಸ್ಫೋಟಗೊಂಡಿದ್ದರಿಂದ ಪ್ರಚಾರದ ವೇಳೆ ದುಷ್ಪರಿಣಾಮ ಬೀರಬಾರದೆಂದು, ಅತೃಪ್ತಿ ಶಮನಕ್ಕೆ ಮೊದಲ ಆದ್ಯತೆ ನೀಡಿ, ಎ. 1ರಿಂದ ಪ್ರವಾಸ ಕೈಗೊಳ್ಳಲು ಸಿಎಂ ಚಿಂತನೆ ನಡೆಸಿದ್ದರು. ಅಂತಿಮವಾಗಿ ಈಗ ಎ. 6ಕ್ಕೆ ಮುಹೂರ್ತ ನಿಗದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಳಿಂಗ ನಾವಡ ಪ್ರಶಸ್ತಿಗೆ ಕೋಟ ಶಿವಾನಂದ ಆಯ್ಕೆ
PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ
Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Talk Fight: ಯಾರು ಏನೇ ಅಂದ್ರೂ ಬಿಜೆಪಿ ಕಾರ್ಯಕರ್ತರು ನನ್ನ ಒಪ್ಪಿದ್ದಾರೆ: ವಿಜಯೇಂದ್ರ
Munirathna:ಒಕ್ಕಲಿಗ ಹೆಣ್ಣುಮಕ್ಕಳ ಬಗ್ಗೆ ಹೇಳಿಕೆ; ಸಮುದಾಯದ ಸಚಿವ, ಶಾಸಕರಿಂದ ಸಿಎಂಗೆ ಮನವಿ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.