![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Oct 14, 2022, 12:56 PM IST
ಬೆಂಗಳೂರು: ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಸೋಮವಾರ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ನಾಯಕರು ಮಲ್ಲಿಕಾರ್ಜುನ ಖರ್ಗೆ ಪರ ಮತಯಾಚನೆ ಪ್ರಾರಂಭಿಸಿದ್ದಾರೆ.
ಮಾಜಿ ಸಚಿವ ಕೃಷ್ಣಪ್ಪ, ವಿಧಾನ ಪರಿಷತ್ ಮಾಜಿ ಸಭಾಪತಿ ವಿ.ಆರ್.ಸುದರ್ಶನ, ಶಾಸಕರಾದ ಹ್ಯಾರಿಸ್, ಬೈರತಿ ಸುರೇಶ್, ಯು.ಬಿ.ವೆಂಕಟೇಶ್, ಶಿವಣ್ಣ ನೇತೃತ್ವದ ಕಾಂಗ್ರೆಸ್ ನಾಯಕರು ರಾಜ್ಯದ ಎಲ್ಲ ಪಿಸಿಸಿ ಸದಸ್ಯರ ಪರ ಮತ ಚಲಾಯಿಸುವಂತೆ ಮನವಿ ಮಾಡಿದ್ದಾರೆ.
ರಾಜ್ಯದ 479 ಪಿಸಿಸಿ ಪ್ರತಿನಿಧಿಗಳು, ಕಾಂಗ್ರೆಸ್ ಶಾಸಕಾಂಗ ಪಕ್ಷದ 15 ಸದಸ್ಯರು ಈ ಚುನಾವಣೆಯಲ್ಲಿ ಮತ ಹಾಕುವ ಅರ್ಹತೆ ಹೊಂದಿದ್ದಾರೆ. ಇವರೆಲ್ಲರೂ ಖರ್ಗೆ ಪರ ಮತ ಚಲಾಯಿಸುವಂತೆ ಕಾಂಗ್ರೆಸ್ ಪ್ರಚಾರ ನಿಯೋಗ ಮನವಿ ಮಾಡಿದೆ.
ಇದನ್ನೂ ಓದಿ:ಗುಜರಾತ್ ಆಪ್ ಮುಖಂಡರಿಂದ ಪ್ರಧಾನಿ ಮೋದಿ ತಾಯಿಗೆ ಅವಮಾನ: ಸ್ಮೃತಿ ಇರಾನಿ ಆಕ್ರೋಶ
ಖರ್ಗೆಯವರು ರಾಷ್ಟ್ರ ಹಾಗೂ ರಾಜ್ಯ ರಾಜಕಾರಣದ ಹಲವು ಮಜಲುಗಳನ್ನು ಕಂಡಿದ್ದಾರೆ. ಕಾಂಗ್ರೆಸ್ ನಲ್ಲಿ ಆಂತರಿಕ ಪ್ರಜಾಪ್ರಭುತ್ವ ಇದೆ. ನಿಜಲಿಂಗಪ್ಪ ಅವರ ನಂತರ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ನಿಭಾಯಿಸುವ ಅವಕಾಶ ಈಗ ಲಭಿಸಿದೆ. ಕಾಂಗ್ರೆಸ್ ಇತಿಹಾಸದಲ್ಲಿ ಐದನೇ ಬಾರಿಗೆ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದೆ. ಹೀಗಾಗಿ ಖರ್ಗೆಯವರನ್ನು ಗೆಲ್ಲಿಸುವ ಪ್ರಯತ್ನ ನಡೆಸಬೇಕು ಎಂದು ಮನವಿ ಮಾಡಿದರು.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.