Congress; ಸಂಡೂರು ಅಂತಿಮ: ಶಿಗ್ಗಾವಿ, ಚನ್ನಪಟ್ಟಣ ತಲೆನೋವು
ಶಿಗ್ಗಾವಿಗೆ ಲಿಂಗಾಯತ ಅಭ್ಯರ್ಥಿ; ಚನ್ನಪಟ್ಟಣಕ್ಕೆ ಯಾರು?
Team Udayavani, Oct 21, 2024, 6:30 AM IST
ಬೆಂಗಳೂರು: ಎರಡು ವಿಧಾನ ಸಭಾ ಕ್ಷೇತ್ರಗಳಿಗೆ ವಿಪಕ್ಷ ಬಿಜೆಪಿಯು ಅಭ್ಯರ್ಥಿ ಘೋಷಿಸಿದ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ನಲ್ಲೂ ಅಭ್ಯರ್ಥಿ ಆಯ್ಕೆ ಕಸರತ್ತು ಚುರುಕು ಗೊಂಡಿದ್ದು, ಸಿಎಂ ಸಿದ್ದ ರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವ ಕುಮಾರ್ ನೇತೃತ್ವದಲ್ಲಿ ಇಡೀ ಸಚಿವ ಸಂಪುಟ ಸದಸ್ಯರೊಂದಿಗೆ ನಡೆದ ಸಭೆಯಲ್ಲಿ ಸಂಡೂರು ಅಂತಿಮ ಗೊಂಡಿದೆ. ಆದರೆ ಉಳಿದೆರಡು ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಇನ್ನೂ ಕಗ್ಗಂಟಾಗಿ ಉಳಿದಿದೆ.
ಅದರಲ್ಲೂ ಶಿಗ್ಗಾವಿ ಕ್ಷೇತ್ರ ದಲ್ಲಿ ಅಭ್ಯರ್ಥಿಯ ಆಯ್ಕೆ ಕಾಂಗ್ರೆಸ್ ಪಾಲಿಗೆ ಧರ್ಮ ಸಂಕಟವಾಗಿದೆ.
ಸಂಡೂರು ಕ್ಷೇತ್ರಕ್ಕೆ ಸಂಸದ ಇ. ತುಕಾರಾಂ ಕುಟುಂಬದ ಸದಸ್ಯ ರೊಬ್ಬರು, ಅದರಲ್ಲೂ ಪತ್ನಿ ಅನ್ನಪೂರ್ಣಾ ಅವರಿಗೆ ಟಿಕೆಟ್ ನೀಡಲು ಸಭೆಯಲ್ಲಿ ಒಮ್ಮತದ ಅಭಿ ಪ್ರಾಯ ವ್ಯಕ್ತವಾಗಿದೆ. ಆದರೆ ಪ್ರತಿಷ್ಠಿತ ಕ್ಷೇತ್ರವಾದ ಚನ್ನಪಟ್ಟಣ ಮತ್ತು ಶಿಗ್ಗಾವಿ ಕ್ಷೇತ್ರಗಳ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಹಲವು ಕಾರಣಗಳಿಂದ ಯಾವುದೇ ತೀರ್ಮಾನಕ್ಕೆ ಬರಲಾಗಿಲ್ಲ ಎಂದು ಮೂಲಗಳು ತಿಳಿಸಿವೆ.
ಚನ್ನಪಟ್ಟಣದಲ್ಲಿ ಮಾಜಿ ಸಂಸದ ಡಿ.ಕೆ. ಸುರೇಶ್ ಅವರನ್ನೇ ಕಣಕ್ಕಿಳಿಸುವ ಬಗ್ಗೆ ಬಹುತೇಕ ಸಚಿವರು ಅಭಿಪ್ರಾಯಪಟ್ಟಿದ್ದಾರೆ. ಅವರು ಒಪ್ಪದಿದ್ದರೆ ಮಾತ್ರ 2ನೇ ಆಯ್ಕೆಗೆ ಹೋಗೋಣ ಎಂದು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ನಿರ್ಧಾರವನ್ನು ಈಗ ಸುರೇಶ್ ಅವರಿಗೆ ಬಿಡಲಾಗಿದೆ ಎಂದು ಸಚಿವರೊಬ್ಬರು ಮಾಹಿತಿ ನೀಡಿದರು.
ಒಗ್ಗಟ್ಟಿನ ಪಾಠ ಮಾಡಿದ ಸಿಎಂ
ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, ಮೂರೂ ಕ್ಷೇತ್ರಗಳಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳು ಗೆಲ್ಲುವ ಸಾಧ್ಯತೆಗಳು ಹೆಚ್ಚಿವೆ. ಲೋಕಸಭಾ ಚುನಾವಣೆಯಲ್ಲಾದ ತಪ್ಪು ಸರಿಪಡಿಸಿಕೊಳ್ಳಲು ಇದು ಉತ್ತಮ ಅವಕಾಶ. ಮೂರೂ ಕ್ಷೇತ್ರಗಳನ್ನು ಗೆಲ್ಲಲು ಎಲ್ಲ ಸಚಿವರು ಒಟ್ಟಾಗಿ ಕೆಲಸ ಮಾಡಬೇಕು ಎಂದು ಒಗ್ಗಟ್ಟಿನ ಪಾಠ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕ್ಷುಲ್ಲಕ ವಿಚಾರಕ್ಕೆ ಮೂವರು ಮಕ್ಕಳಿಗೆ ವಿಷ ಉಣಿಸಿ ತಾನು ಆತ್ಮಹತ್ಯೆಗೆ ಯತ್ನಿಸಿದ ತಾಯಿ
Tourism: ರಾಜ್ಯದ 7 ಐತಿಹಾಸಿಕ ತಾಣಗಳ ಅಭಿವೃದ್ಧಿಗೆ ಮುನ್ನುಡಿ
Server Problem: ಸಿಗದ ಅನ್ನಭಾಗ್ಯ! ವಿಳಂಬದ ಜತೆಗೆ ಮಂದಗತಿಯಲ್ಲಿದೆ ಪಡಿತರ ವಿತರಣೆ
ಮಳೆ ಅಬ್ಬರಕ್ಕೆ ಜಮೀನಲ್ಲೇ ಕೊಳೆಯುತ್ತಿರುವ ಬೆಳೆಗಳು!
C. P. Yogeshwara; ತೆನೆ ಕೊಡುಗೆ ಒಪ್ಪದ ಸೈನಿಕ: ಚನ್ನಪಟ್ಟಣ ಕಗ್ಗಂಟು
MUST WATCH
ಹೊಸ ಸೇರ್ಪಡೆ
ಕ್ಷುಲ್ಲಕ ವಿಚಾರಕ್ಕೆ ಮೂವರು ಮಕ್ಕಳಿಗೆ ವಿಷ ಉಣಿಸಿ ತಾನು ಆತ್ಮಹತ್ಯೆಗೆ ಯತ್ನಿಸಿದ ತಾಯಿ
Jayarama Acharya: ತೆಂಕುತಿಟ್ಟಿನ ಪ್ರಸಿದ್ಧ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ನಿಧನ
Tourism: ರಾಜ್ಯದ 7 ಐತಿಹಾಸಿಕ ತಾಣಗಳ ಅಭಿವೃದ್ಧಿಗೆ ಮುನ್ನುಡಿ
Heavy Rain: ಅನ್ನದಾತರಿಗೆ ಚಿತ್ರಾ ಮಳೆ ತಂದ ಚಿಂತೆ! ಹಿಂಗಾರು ಬಿತ್ತನೆಗೂ ಅಡ್ಡಿ
Baba Siddiqui Case: ಸಲ್ಮಾನ್ ಹತ್ಯೆಗೆ ಸಂಚು ಆರೋಪಿಗೆ ಪೊಲೀಸರಿಂದ ಹನಿಟ್ರ್ಯಾಪ್ ಬಲೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.