Congress ಎರಡನೇ ಪಟ್ಟಿ ಅಂತಿಮ ಇಂದು; ಸುರ್ಜೇವಾಲಾ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಸಭೆ

12-18 ಕ್ಷೇತ್ರಗಳಿಗೆ ಆಯ್ಕೆ? ಇಂದೇ ಸಿಇಸಿಗೆ ರವಾನೆ

Team Udayavani, Mar 11, 2024, 7:15 AM IST

Congress ಎರಡನೇ ಪಟ್ಟಿ ಅಂತಿಮ ಇಂದು; ಸುರ್ಜೇವಾಲಾ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಸಭೆ

ಬೆಂಗಳೂರು: ಲೋಕ ಸಭಾ ಚುನಾವಣೆಗೆ ಮತ್ತೊಂದು ಸುತ್ತಿನ ಅಭ್ಯರ್ಥಿಗಳ ಆಯ್ಕೆ ಕಸರತ್ತು ನಡೆಸಲಿರುವ ಕಾಂಗ್ರೆಸ್‌ ಇದಕ್ಕಾಗಿ ರಾಜ್ಯ ಉಸ್ತುವಾರಿ ರಣದೀಪ್‌ಸಿಂಗ್‌ ಸುರ್ಜೇವಾಲ ನೇತೃತ್ವದಲ್ಲಿ ಮಹತ್ವದ ಸಭೆಯನ್ನು ಸೋಮವಾರ ಬೆಂಗಳೂರಿನಲ್ಲಿ ಹಮ್ಮಿ ಕೊಂಡಿದೆ. ರಾಜ್ಯದ ಗಮನ ಸೆಳೆಯಲಿರುವ ಪ್ರತಿಷ್ಠಿತ ಮತ್ತು ಸಚಿವರನ್ನು ಅಗ್ನಿಪರೀಕ್ಷೆಗೆ ಒಡ್ಡಬಹುದಾದ ಕ್ಷೇತ್ರಗಳೂ 2ನೇ ಪಟ್ಟಿಯಲ್ಲಿ ಅಂತಿಮ ಗೊಳ್ಳುವ ಸಾಧ್ಯತೆ ಇರುವುದರಿಂದ ಕೈ ಪಾಳಯದ ಚಿತ್ತ ಈಗ ಸೋಮವಾರದ ಸಭೆಯತ್ತ ನೆಟ್ಟಿದೆ.

ಕಾಂಗ್ರೆಸ್‌ ಸ್ಕ್ರೀನಿಂಗ್‌ ಸಮಿತಿ ಸದಸ್ಯರು, ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳನ್ನು ಒಳಗೊಂಡ ಈ ಸಭೆಯಲ್ಲಿ ಉಳಿದ 21 ಕ್ಷೇತ್ರಗಳ ಪೈಕಿ ಸಣ್ಣ ಪುಟ್ಟ ಗೊಂದಲಗಳ ನಿವಾರಣೆಗೆ ಕ್ರಮ ಕೈಗೊಳ್ಳಲಿದೆ. ಜತೆಗೆ ಪರಸ್ಪರ ಬಣಗಳ ಮನವೊಲಿಕೆಯೊಂದಿಗೆ ಸಾಧ್ಯವಾದಷ್ಟು ಹೆಚ್ಚು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಉದ್ದೇಶ ಹೊಂದಿದೆ. 2ನೇ ಹಂತದಲ್ಲಿ ಕನಿಷ್ಠ 12ರಿಂದ 15 ಕಡೆ ಅಭ್ಯರ್ಥಿ ಗಳನ್ನು ಅಂತಿಮಗೊಳಿಸುವ ಸಾಧ್ಯತೆ ಇದೆ. ಇಲ್ಲಿ ಅಂತಿಮಗೊಳ್ಳುವ ಆಯ್ಕೆ ಪಟ್ಟಿಯನ್ನು ಸಂಜೆ ಹೊಸದಿಲ್ಲಿಯಲ್ಲಿ ನಡೆಯಲಿರುವ ಸಿಇಸಿ (ಕಾಂಗ್ರೆಸ್‌ ಚುನಾವಣ ಸಮಿತಿ)ಗೆ ಕಳುಹಿಸಿ ಕೊಡ ಲಾಗುತ್ತದೆ ಎಂದು ಹೇಳಲಾಗಿದೆ.

ಈಗಾಗಲೇ ಸಾಕಷ್ಟು ಸಮಯವಾಗಿದೆ. ವಿಳಂಬ ವಾದಷ್ಟು ತಳಮಟ್ಟದಲ್ಲಿ ಗೊಂದಲಗಳು ಮತ್ತು ಪ್ರಚಾರ ಕಾರ್ಯಕ್ಕೆ ತೊಂದರೆ ಆಗುವುದೇ ಹೆಚ್ಚು. ಆದ್ದರಿಂದ ತೀರಾ ಪೈಪೋಟಿ ಇರುವ ಹಾಗೂ ವಿಪಕ್ಷಗಳಲ್ಲಿ ಅಭ್ಯರ್ಥಿ ಗಳ ಬದಲಾವಣೆ ಮಾಡುವ ಸಾಧ್ಯತೆ ಇರುವಂತಹ ಆರೆಂಟು ಕ್ಷೇತ್ರಗಳನ್ನು ಹೊರತುಪಡಿಸಿ, ಉಳಿದ ಕಡೆ ಪಕ್ಷದ ಉಮೇದುವಾರರ ಹೆಸರು ಘೋಷಿ ಸುವ ಲೆಕ್ಕಾಚಾರ ಇದೆ ಎಂದು ಕಾಂಗ್ರೆಸ್‌ ಮೂಲಗಳು ತಿಳಿಸಿವೆ.

ರಾಜ್ಯ ರಾಜಧಾನಿಯಲ್ಲೇ ಎರ ಡನೇ ಪಟ್ಟಿ ಅಂತಿಮಗೊಳಿಸಿ, ಕಾಂಗ್ರೆಸ್‌ ಚುನಾವಣ ಸಮಿತಿಗೆ ಅದನ್ನು ಕಳುಹಿಸಿಕೊಡಲಾಗುವುದು. ಅಲ್ಲಿ ಸಣ್ಣಪುಟ್ಟ ಮಾರ್ಪಾಡು ಗಳೊಂದಿಗೆ ಅದನ್ನು ಅಂತಿಮಗೊಳಿಸ ಲಾಗುವುದು.

ಪಕ್ಷದ ಚುನಾವಣ ಸಮಿತಿ ಸಭೆ ಕೂಡ ಅದೇ ದಿನ ನಡೆಯಲಿದೆ. ಹಾಗಾಗಿ ಸೋಮ ಅಥವಾ ಮಂಗಳವಾರ ಈ ಕುತೂಹಲಕ್ಕೆ ಬಹುತೇಕ ತೆರೆಬೀಳುವ ಸಾಧ್ಯತೆ ಇದೆ.

ಕೆಲವೆಡೆ ಬಿಜೆಪಿಯು ಹಾಲಿ ಸಂಸದರನ್ನು ಕೈಬಿಟ್ಟು ಹೊಸ ಮುಖವನ್ನು ಪರಿಚಯಿಸಲು ಮುಂದಾಗಿದೆ. ಹಲವೆಡೆ ಪಕ್ಷ ಇನ್ನೂ ಅಂತಿಮಗೊಳಿಸಬೇಕಿದೆ. ಉಡುಪಿ-ಚಿಕ್ಕಮಗಳೂರು ಕ್ಷೇತ್ರ ಅಭ್ಯರ್ಥಿ ಅಂತಿಮವಾಗಿದ್ದರೂ ಪಕ್ಷ ಸೇರ್ಪಡೆ ಕಾರ್ಯಕ್ರಮ ಆಗಿಲ್ಲ. ಇಂತಹ ಹಲವು ಕಾರಣಗಳಿಂದ ಅನಂತರದ ಹಂತದಲ್ಲಿ ಪ್ರಕಟಗೊಳ್ಳಲಿವೆ ಎಂದು ಮೂಲಗಳು ಸ್ಪಷ್ಟಪಡಿಸಿವೆ.

ಪೈಪೋಟಿ ಹೆಚ್ಚಿರುವ ಆಯ್ದ ಕ್ಷೇತ್ರಗಳಲ್ಲಿ ಸಚಿವರನ್ನು ಕಣಕ್ಕಿಳಿಸಲು ಪಕ್ಷದ ಹೈಕಮಾಂಡ್‌ ಯೋಚಿಸಿತ್ತು. ಆದರೆ ಈ ಹೊರೆಯಿಂದ ನುಣುಚಿಕೊಳ್ಳಲು ಇನ್ನಿಲ್ಲದ ಕಸರತ್ತು ನಡೆಸಿರುವ ಸಚಿವರು ಕುಟುಂಬದ ಕುಡಿಗಳನ್ನೇ ಅಖಾಡಕ್ಕಿಳಿಸಿ, ಗೆಲ್ಲಿಸಿಕೊಂಡು ಬರುವುದಾಗಿ ತಮ್ಮ ನಾಯಕರ ಮನವೊಲಿಸುವಲ್ಲಿ ಭಾಗಶಃ ಯಶಸ್ವಿಯಾಗಿದೆ. ಆದರೂ ಪಟ್ಟಿ ಅಂತಿಮಗೊಳ್ಳುವವರೆಗೂ ತಳಮಳ ಮನೆ ಮಾಡಿದೆ.

ಇಂದು ಯಾವುದು ಅಂತಿಮ?
ಮಂಗಳೂರು, ಬೆಂಗಳೂರು ದಕ್ಷಿಣ, ಕೇಂದ್ರ ಮತ್ತು ಉತ್ತರ, ಚಿತ್ರದುರ್ಗ, ಹುಬ್ಬಳ್ಳಿ-ಧಾರವಾಡ, ಬಳ್ಳಾರಿ, ಉತ್ತರ ಕನ್ನಡ, ಬಳ್ಳಾರಿ, ಬೀದರ್‌, ಕಲಬುರಗಿ, ಕೊಪ್ಪಳ ಕ್ಷೇತ್ರಗಳು.

ಕಗ್ಗಂಟಾಗಿರುವ ಕ್ಷೇತ್ರಗಳು
ಉಡುಪಿ-ಚಿಕ್ಕಮಗಳೂರು, ಬೆಳಗಾವಿ, ಚಿಕ್ಕೋಡಿ, ಚಿಕ್ಕಬಳ್ಳಾಪುರ, ರಾಯಚೂರು, ಬಾಗಲಕೋಟೆ ಸೇರಿದಂತೆ ಆರೆಂಟು ಕ್ಷೇತ್ರಗಳು. ಇವುಗಳ ಬಗ್ಗೆ ಮತ್ತೂಂದು ಹಂತದಲ್ಲಿ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.

ಗ್ಯಾರಂಟಿ ಸಮಿತಿ
ನೇಮಕಕ್ಕೆ ಚರ್ಚೆ?
ಬೆಂಗಳೂರಿನಲ್ಲಿ ನಡೆಯಲಿರುವ ಸಭೆಯಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿಗಳಿಗೆ ಪದಾಧಿಕಾರಿಗಳ ನೇಮಕದ ಬಗ್ಗೆಯೂ ಚರ್ಚೆ ನಡೆಯಲಿದೆ ಎನ್ನಲಾಗಿದೆ. ಎಲ್ಲ ಐದು ಗ್ಯಾರಂಟಿಗಳ ಅನುಷ್ಠಾನ ಮತ್ತು ಮೇಲುಸ್ತುವಾರಿಗೆ ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಸಮಿತಿಗಳ ರಚನೆ ಆಗಬೇಕಿದೆ. ಇದಕ್ಕಾಗಿ ಸುಮಾರು ಆರೇಳು ಸಾವಿರ ಕಾರ್ಯಕರ್ತರಿಗೆ ಈ ಸಮಿತಿಗಳ ಮೂಲಕ ಕಾಂಗ್ರೆಸ್‌ ಅಧಿಕಾರ ಭಾಗ್ಯ ನೀಡಲಿದೆ. ಈ ಸಂಬಂಧದ ಕಸರತ್ತು ಕೂಡ ಇದೇ ವೇಳೆ ನಡೆಯುವ ಸಾಧ್ಯತೆ ಇದೆ.

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

Devegowda

Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್‌.ಡಿ.ದೇವೇಗೌಡ

Sathish-rajanna-mahadevappa

Congress Siddu Team: ಸಿದ್ದರಾಮಯ್ಯ ಆಪ್ತರಿಂದ ಈಗ ʼಮಾಸ್‌ ಲೀಡರ್‌ʼ ಅಸ್ತ್ರ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.