CM ಪುತ್ರ ಯತೀಂದ್ರ, ಸಚಿವ ಬೋಸರಾಜ್‌ಗೆ ಕಾಂಗ್ರೆಸ್‌ ಟಿಕೆಟ್‌?

11 ಸ್ಥಾನಗಳ ಪರಿಷತ್‌ ಚುನಾವಣೆ: ಉಗ್ರಪ್ಪ, ಇಸ್ಮಾಯಿಲ್‌, ಕಾರ್ತಿಕ್‌, ಐವನ್‌ಗೆ ಅವಕಾಶ?

Team Udayavani, May 30, 2024, 7:15 AM IST

CM ಪುತ್ರ ಯತೀಂದ್ರ, ಸಚಿವ ಬೋಸರಾಜ್‌ಗೆ ಕಾಂಗ್ರೆಸ್‌ ಟಿಕೆಟ್‌?

ಬೆಂಗಳೂರು: ಸಣ್ಣ ನೀರಾವರಿ ಸಚಿವ ಎನ್‌.ಎಸ್‌.ಬೋಸರಾಜ್‌ ಹಾಗೂ ಸಿಎಂ ಪುತ್ರ ಡಾ| ಯತೀಂದ್ರ ಅವರಿಗೆ ವಿಧಾನ ಪರಿಷತ್ತಿನ ಚುನಾವಣೆಯ ಟಿಕೆಟ್‌ ದೊರೆಯುವುದು ಬಹುತೇಕ ಖಚಿತ. ಹಾಲಿ ಸದಸ್ಯ ಕೆ. ಗೋವಿಂದ ರಾಜ್‌ ಮತ್ತೆ ಟಿಕೆಟ್‌ ಗಿಟ್ಟಿಸುವಲ್ಲಿ ವಿಫ‌ಲವಾಗಿದ್ದು, ಅವರ ಬದಲಿಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಆಪ್ತ ವಿನಯ್‌ ಕಾರ್ತಿಕ್‌ಗೆ ಅದೃಷ್ಟ ಒಲಿದಿದೆ ಎನ್ನಲಾಗಿದೆ.

ಪರಿಷತ್ತಿನ 11 ಸ್ಥಾನಗಳಿಗೆ ಜೂ. 13ರಂದು ನಡೆಯುವ ಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿ ಗಳ ಆಯ್ಕೆಗೆ ಎರಡು ದಿನಗಳಿಂದ ದಿಲ್ಲಿಯಲ್ಲಿ ಕಸರತ್ತು ನಡೆದಿದೆ. ಎಐಸಿಸಿ ಅಧ್ಯಕ್ಷ ಮಲ್ಲಿ ಕಾರ್ಜುನ ಖರ್ಗೆ ಅಧ್ಯಕ್ಷತೆಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯು ಸಂಭವನೀಯರ ಪಟ್ಟಿಗೆ ಅಂತಿಮ ಸ್ಪರ್ಶ ನೀಡಿದ್ದು, ಗುರುವಾರ ರಾಹುಲ್‌ ಗಾಂಧಿ ಒಪ್ಪಿಗೆ ಪಡೆದು ಘೋಷಿ ಸುವ ಸಾಧ್ಯತೆ ಇದೆ ಎನ್ನಲಾಗಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್‌, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ. ವೇಣುಗೋಪಾಲ್‌, ರಣದೀಪ್‌ ಸಿಂಗ್‌ ಸುಜೇìವಾಲ ಸಭೆಯಲ್ಲಿದ್ದರು.

ಕಾಂಗ್ರೆಸ್‌ಗೆ ಲಭ್ಯವಾಗುವ 7 ಸ್ಥಾನಗಳಲ್ಲಿ ಹಿಂದುಳಿದ ವರ್ಗ, ಅಲ್ಪಸಂಖ್ಯಾಕರಿಗೆ (ಒಂದು ಮುಸ್ಲಿಂ ಮತ್ತೂಂದು ಕ್ರಿಶ್ಚಿಯನ್‌) ತಲಾ ಎರಡು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ತಲಾ ಒಂದೊಂದು, ಒಕ್ಕಲಿಗ ಸಮುದಾಯಕ್ಕೆ ಒಂದು ಸ್ಥಾನ ಕೊಡುವ ಬಗ್ಗೆ ತೀರ್ಮಾನಿಸಲಾಗಿದೆ. ಅದರಂತೆ ಹಿಂದುಳಿದ ವರ್ಗದಿಂದ ಹಾಲಿ ಸದಸ್ಯ ಹಾಗೂ ಸಚಿವ ಬೋಸರಾಜು, ಡಾ| ಯತೀಂದ್ರ, ಅಲ್ಪಸಂಖಾಕ‌ರ ಕೋಟಾ ದಲ್ಲಿ ಮೇಲ್ಮನೆ ಮಾಜಿ ಸದಸ್ಯ ಐವನ್‌ ಡಿ’ ಸೋಜ (ಕ್ರಿಶ್ಚಿಯನ್‌), ಹುಬ್ಬಳ್ಳಿ ಅಂಜುಮಾನ್‌ ಇಸ್ಲಾಂ ಸಂಸ್ಥೆಯ ಅಧ್ಯಕ್ಷ ಇಸ್ಮಾಯಿಲ್‌ ತಮಟಗಾರ, ಪರಿಶಿಷ್ಟ ಪಂಗಡದಿಂದ ಮಾಜಿ ಸಂಸದ ವಿ.ಎಸ್‌.ಉಗ್ರಪ್ಪ ಅವರಿಗೆ ಟಿಕೆಟ್‌ ಸಿಗುವುದು ಬಹುತೇಕ ಖಾತರಿಯಾಗಿದೆ ಎಂದು ಮೂಲಗಳು ತಿಳಿಸಿವೆ.

ಪರಿಶಿಷ್ಟ ಜಾತಿಯಿಂದ ಇದುವರೆಗೂ ಪ್ರಾತಿನಿಧ್ಯ ಸಿಗದ ಕೊರಮ, ಕೊರಚ ಸಮುದಾಯಕ್ಕೆ ಅವಕಾಶ ಕೊಡಬೇಕೆಂಬ ಬೇಡಿಕೆ ಇದೆ, ಒಕ್ಕಲಿಗ ಕೋಟಾದಲ್ಲಿ ಕೆಪಿಸಿಸಿ ಖಜಾಂಚಿ ವಿನಯ್‌ ಕಾರ್ತಿಕ್‌ಗೆ ಅದೃಷ್ಟ ಒಲಿದಿದೆ ಎನ್ನಲಾಗಿದೆ.

ಸೋತವರಿಗೆ ಇಲ್ಲ
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋತಿದ್ದರೂ, ಮಾಜಿ ಸ್ಪೀಕರ್‌ ಕೆ.ಆರ್‌.ರಮೇಶ್‌ಕುಮಾರ್‌, ಮಾಜಿ ಸಚಿವ ಪಿ.ಟಿ.ಪರಮೇಶ್ವರ್‌ ನಾಯ್ಕ ಸಹಿತ ಹಲವರ ಹೆಸರು ಚರ್ಚೆಗೆ ಬಂದಿತ್ತು. ಆದರೆ ಸೋತವರಿಗೆ ಅವಕಾಶ ಕೊಡಬಾರದೆಂಬ ಮಾನದಂಡದಡಿ ಇವರನ್ನು ಹೊರಗಿಡಲಾಗಿದೆ.

ಶೆಟ್ಟರ್‌ ಸ್ಥಾನ ಲಿಂಗಾಯತರಿಗೆ
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋತಿದ್ದರೂ ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ಅವರನ್ನು ಕಾಂಗ್ರೆಸ್‌ ವಿಧಾನ ಪರಿಷತ್ತಿಗೆ ಕಳುಹಿಸಿತ್ತು. ಆದರೆ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಅವರು ಮತ್ತೆ ಬಿಜೆಪಿ ಸೇರಿದ್ದರಿಂದ ಪರಿಷತ್ತಿನ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಹೀಗೆ ತೆರವಾಗಿರುವ ಸ್ಥಾನಕ್ಕೆ ಇನ್ನೂ ಚುನಾವಣೆ ಘೋಷಣೆ ಆಗಿಲ್ಲ. ಆದರೆ ಲಿಂಗಾಯತ ಸಮುದಾಯಕ್ಕೆ ಟಿಕೆಟ್‌ ಕೊಡಲಿಲ್ಲ ಎಂಬ ಆಕ್ರೋಶ ಎದುರಿಸುವ ಬದಲಿಗೆ ಶೆಟ್ಟರ್‌ ಸ್ಥಾನಕ್ಕೆ ಲಿಂಗಾಯತ ಅಭ್ಯರ್ಥಿಯನ್ನೇ ಘೋಷಿಸಲಿದೆ. ಶೆಟ್ಟರ್‌ ತೆರವುಗೊಳಿಸಿರುವ ಅವಧಿಯು 2028ರ ಜೂನ್‌ 14ರ ವರೆಗೂ ಇದೆ.

ಸಂಭಾವ್ಯ ಅಭ್ಯರ್ಥಿಗಳು
1. ಎನ್‌.ಎಸ್‌.ಬೋಸರಾಜ್‌
2. ಡಾ| ಯತೀಂದ್ರ
3. ಐವನ್‌ ಡಿ’ಸೋಜಾ
4.ಇಸ್ಮಾಯಿಲ್‌ ತಮಟಗಾರ
5. ವಿ.ಎಸ್‌.ಉಗ್ರಪ್ಪ

ಯಾರಿಗೆಲ್ಲ ತಪ್ಪಬಹುದು?
1.ಕೆ.ಗೋವಿಂದರಾಜ್‌
2. ಕೆ.ಆರ್‌.ರಮೇಶ್‌ ಕುಮಾರ್‌
3. ಪಿ.ಟಿ.ಪರಮೇಶ್ವರ್‌ ನಾಯ್ಕ

 

ಟಾಪ್ ನ್ಯೂಸ್

snemahamayi-Krishna

MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್‌ ಕೊಟ್ಟ ಸ್ನೇಹಮಯಿ ಕೃಷ್ಣ!

1-qweewq

Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ

BBK11: ಬಿಗ್‌ ಬಾಸ್‌ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು..

BBK11: ಬಿಗ್‌ ಬಾಸ್‌ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು

IPL retention: IPL new rule gave good news to Chennai-Mumbai Franchise

IPL retention: ಚೆನ್ನೈ-ಮುಂಬೈಗೆ ಗುಡ್‌ ನ್ಯೂಸ್‌ ನೀಡಿದ ಐಪಿಎಲ್‌ ಹೊಸ ನಿಯಮ

1-HDK

Documents ಬಿಡುಗಡೆಯಾದರೆ 6-7 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ: ಎಚ್ ಡಿಕೆ

Food-1

Food Adulteration: ನೀವೇ ಮನೆಯಲ್ಲಿ ಆಹಾರ ಕಲಬೆರಕೆಯನ್ನು ಪತ್ತೆ ಹಚ್ಚಿ!

001

BBK11: ಬಿಗ್‌ ಬಾಸ್‌ ಕನ್ನಡ-11ರ ಮೊದಲ ಅಧಿಕೃತ ಸ್ಪರ್ಧಿ ಇವರೇ ನೋಡಿ..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

snemahamayi-Krishna

MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್‌ ಕೊಟ್ಟ ಸ್ನೇಹಮಯಿ ಕೃಷ್ಣ!

1-HDK

Documents ಬಿಡುಗಡೆಯಾದರೆ 6-7 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ: ಎಚ್ ಡಿಕೆ

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Basangouda Patil Yatnal

BJP: ಹೈಕಮಾಂಡ್ ಅನುಮತಿಸಿದರೆ ಬಸವಕಲ್ಯಾಣದಿಂದ ಬೆಂಗಳೂರಿಗೆ ಪಾದಯಾತ್ರೆ: ಶಾಸಕ ಯತ್ನಾಳ

Gurudath Kamath: ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ನಿಧನ

Gurudath Kamath: ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ನಿಧನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

snemahamayi-Krishna

MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್‌ ಕೊಟ್ಟ ಸ್ನೇಹಮಯಿ ಕೃಷ್ಣ!

1-qweewq

Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ

1-frrr

Food street ನಲ್ಲಿ ಅರೆಬಟ್ಟೆಯಲ್ಲಿ ಸುತ್ತಾಡಿದ ಯುವತಿ ವಿರುದ್ಧ ಪ್ರಕರಣ ದಾಖಲು!

BBK11: ಬಿಗ್‌ ಬಾಸ್‌ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು..

BBK11: ಬಿಗ್‌ ಬಾಸ್‌ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು

Sullia: ಅಂಗಡಿ, ಹೊಟೇಲ್‌ನಿಂದ ನಗದು ಕಳವು

Sullia: ಅಂಗಡಿ, ಹೊಟೇಲ್‌ನಿಂದ ನಗದು ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.