CM Siddaramaiah: ಆತ್ಮಸಾಕ್ಷಿಯೇ ಸರ್ವ ಶ್ರೇಷ್ಠ ನ್ಯಾಯಾಲಯ
ನಿವೇಶನ ವಾಪಸ್ ಚರ್ಚೆ ನಡುವೆ ಸಿಎಂ ಭಾವನಾತ್ಮಕ ದಾಳ
Team Udayavani, Oct 3, 2024, 7:05 AM IST
ಬೆಂಗಳೂರು: ಮುಡಾ ಹಗರಣದ ಉರುಳು ಬಿಗಿಯಾಗುತ್ತಿರುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ “ಆತ್ಮಸಾಕ್ಷಿ’ಯ ಮಂತ್ರ ಜಪಿಸಿದ್ದಾರೆ.
ಜತೆಗೆ ಗಾಂಧೀಜಿಯವರ ಮಾತನ್ನು ಉದ್ಧರಿಸುತ್ತ, “ಇಂದಿನ ನ್ಯಾಯಾಲಯ ಗಳಲ್ಲಿ ನ್ಯಾಯ ಸಿಗದೆ ಹೋಗ ಬಹುದು. ಆದರೆ ನಾವು ಆತ್ಮಸಾಕ್ಷಿಗೆ ತಕ್ಕಂತೆ ನಡೆದುಕೊಳ್ಳ ಬೇಕು. ಏಕೆಂದರೆ ಎಲ್ಲ ನ್ಯಾಯಾಲಯ ಗಳಿಗಿಂತ ಮೇಲೆ ಅತ್ಯುನ್ನತವಾದ ಆತ್ಮ ಸಾಕ್ಷಿಯ ನ್ಯಾಯಾಲಯವಿದೆ’ ಎಂದು ಮಾರ್ಮಿಕ ವಾಗಿ ನುಡಿದಿದ್ದಾರೆ.
ಅತ್ತ ಪತ್ನಿ ಪಾರ್ವತಿ 14 ನಿವೇಶನ ಹಿಂದಿರುಗಿಸುವ ವೇಳೆ ಬರೆದ ಪತ್ರದಲ್ಲಿ ಭಾವನಾತ್ಮಕ ಅಂಶಗಳನ್ನು ಉಲ್ಲೇಖೀಸಿದ್ದು, ಇತ್ತ ಸಿಎಂ ಕೂಡ “ಆತ್ಮ ಸಾಕ್ಷಿ’ಯ ಮಾತನಾಡಿ ಮತ್ತೂಂದು ರೀತಿಯ ದಾಳ ಉರುಳಿಸಿದ್ದಾರೆ ಎಂದೇ ವಿಶ್ಲೇಷಿಸಲಾಗುತ್ತಿದೆ.
ಗಾಂಧಿ ಜಯಂತಿಯ ಅಂಗವಾಗಿ ಗಾಂಧಿ ಭವನ ಹಾಗೂ ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ 2 ಕಾರ್ಯಕ್ರಮಗಳಲ್ಲಿ ತಮ್ಮ ಭಾಷಣದುದ್ದಕ್ಕೂ ಗಾಂಧೀಜಿಯ ಮಾತನ್ನು ಉಲ್ಲೇಖಿಸಿದ ಸಿಎಂ “ಆತ್ಮಸಾಕ್ಷಿ’ಯ ಬಗ್ಗೆ ಮಾತನಾಡಿದ್ದಾರೆ.
ವಿಪಕ್ಷ ಟೀಕೆ: ಸಿಎಂ ಅವರ “ಆತ್ಮಸಾಕ್ಷಿ’ಯ ಮಾತಿಗೆ ತಿರುಗೇಟು ನೀಡಿರುವ ರಾಜ್ಯ ಬಿಜೆಪಿ, ಆರಂಭದಲ್ಲೇ ನಿವೇಶನ ವಾಪಸ್ ಕೊಟ್ಟಿದ್ದರೆ ಈ ಪರಿಸ್ಥಿತಿ ಬರುತ್ತಿರಲಿಲ್ಲ. ಈಗ ಆತ್ಮಸಾಕ್ಷಿ ಇತ್ಯಾದಿ ಮಾತುಗಳನ್ನು ಆಡುವುದು ಎಷ್ಟು ಸರಿ ಅನ್ನುವುದನ್ನು ಸಿಎಂ ಸಿದ್ದರಾಮಯ್ಯ ಅವರೇ ಹೇಳಬೇಕು ಎಂದಿದೆ.
ಕಾನೂನು ಬಿಟ್ಟು ತಮ್ಮದೇ ನಡೆ ಸಲ್ಲದು
ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಬಿಬಿಎಂಪಿ ಆಯೋಜಿಸಿದ್ದ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ ಜನ್ಮ ದಿನಾಚರಣೆ ಮತ್ತು ಸ್ವತ್ಛತಾ ಆಂದೋಲನ ಪ್ರತಿಜ್ಞಾ ವಿಧಿ ಕಾರ್ಯಕ್ರಮದಲ್ಲಿ ಮಾತನಾಡಿದ ಸಿದ್ದರಾಮಯ್ಯ, “ಗಾಂಧೀಜಿಯವರು ನಮ್ಮೆಲ್ಲ ನ್ಯಾಯಾಲಯಗಳ ಮೇಲೆ ಒಂದು ಅತ್ಯುನ್ನತವಾದ ನ್ಯಾಯಾಲಯವಿದೆ; ಅದೇ ಆತ್ಮಸಾಕ್ಷಿಯ ನ್ಯಾಯಾಲಯ ಎಂದಿದ್ದರು. ಆದ್ದರಿಂದ ನಾವು ನಮ್ಮ ಆತ್ಮಸಾಕ್ಷಿಗೆ ಅನುಗುಣವಾಗಿ ನಡೆದುಕೊಳ್ಳುವ ಪ್ರಯತ್ನ ನಡೆಸಬೇಕು’ ಎಂದರಲ್ಲದೆ, “ಇವತ್ತು ಅನೇಕ ಜನರು ನ್ಯಾಯಾಲಯದ ಕಾನೂನುಗಳನ್ನು ಬಿಟ್ಟು ತಮ್ಮದೇ ಆದ ರೀತಿಯಲ್ಲಿ ನಡೆಯುತ್ತಿದ್ದಾರೆ. ಹೀಗಾಗಿ ನಾವು ಆತ್ಮಸಾಕ್ಷಿಗೆ ಅನುಗುಣವಾಗಿ ನಡೆದುಕೊಳ್ಳುವ ಪ್ರಯತ್ನ ಮಾಡಬೇಕಾಗುತ್ತದೆ. ಇದು ನಾವು ಮಹಾತ್ಮಾ ಗಾಂಧಿ ಅವರಿಗೆ ಸಲ್ಲಿಸಬಹುದಾದ ಗೌರವ’ ಎಂದರು.
ಹೊಗಳಲಿ, ತೆಗಳಲಿ…
ಇತ್ತ ಗಾಂಧಿಭವನದ ಕಾರ್ಯ ಕ್ರಮದಲ್ಲಿ ಮಾತನಾಡುವಾಗಲೂ ಇವೇ ಮಾತುಗಳನ್ನು ಪುನರುಚ್ಚರಿಸಿದ ಸಿಎಂ, “ಯಾರಾದರೂ ಹೊಗಳಲಿ, ತೆಗಳಲಿ; ಟೀಕೆ ಮಾಡಲಿ, ಬಿಡಲಿ. ಉಳಿದವರು ಗುರುತಿಸಲಿ ಬಿಡಲಿ, ಪ್ರತಿಯೊಬ್ಬರೂ ಆತ್ಮಸಾಕ್ಷಿಯ ನ್ಯಾಯಾಲಯದಲ್ಲಿ ಆತ್ಮಸಾಕ್ಷಿಗೆ ತಕ್ಕಂತೆ ನಡೆದುಕೊಳ್ಳಬೇಕು. ಆತ್ಮಸಾಕ್ಷಿಯ ನ್ಯಾಯಾಲಯ ಎಲ್ಲ ನ್ಯಾಯಾಲಯಗಳಿಗಿಂತ ಮಿಗಿಲು. ಆಅದೇ ಗಾಂಧಿಯವರಿಗೆ ನಾವು ಸಲ್ಲಿಸುವ ದೊಡ್ಡ ಗೌರವ’ ಎಂದಿದ್ದಾರೆ.
ಎಲ್ಲ ನ್ಯಾಯಾಲಯಗಳ ಮೇಲೊಂದು ಅತ್ಯುನ್ನತ ನ್ಯಾಯಾಲಯ ಇದೆ. ಅದು ಆತ್ಮಸಾಕ್ಷಿಯ ನ್ಯಾಯಾಲಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಗಾಂಧೀಜಿ ಅವರ ಈ ಅರ್ಥಪೂರ್ಣ ಮಾತುಗಳನ್ನೇ ಸಿಎಂ ಕೂಡ
ಪುನರುಚ್ಚರಿಸಿದ್ದಾರೆ.
– ಎಚ್.ಕೆ. ಪಾಟೀಲ್, ಕಾನೂನು ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಗಣೇಶ ಮೂರ್ತಿಯ ಮಂಟಪದ ಗಾಜಿಗೆ ಕಿಡಿಗೇಡಿಗಳಿಂದ ಕಲ್ಲು ತೂರಿ ಹಾನಿ
ಬಳ್ಳಾರಿ ಪ್ರವೇಶಕ್ಕೆ ಸುಪ್ರೀಂ ಒಪ್ಪಿಗೆ: ಜನ್ಮ ಇರುವವರೆಗೂ ಗಂಗಾವತಿ ಮರೆಯಲ್ಲ: ಶಾಸಕ ರೆಡ್ಡಿ
Mysuru Dasara Utsava: 414ನೇ ದಸರಾ ಉತ್ಸವಕ್ಕೆ ಇಂದು ಚಾಲನೆ
Competitive Exam: ರೈಲ್ವೇ ಪರೀಕ್ಷೆಯಲ್ಲಿ ಇನ್ನು ಕನ್ನಡ ಕಡ್ಡಾಯ: ಕೇಂದ್ರ ಸಚಿವ ಸೋಮಣ್ಣ
MUDA Case: ಮಧ್ಯರಾತ್ರಿವರೆಗೆ ಕಡತ ವಿಲೇವಾರಿ ಮಾಡಿದ ಸಿಎಂ ಸಿದ್ದರಾಮಯ್ಯ?
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Vijayapura: ಗಣೇಶ ಮೂರ್ತಿಯ ಮಂಟಪದ ಗಾಜಿಗೆ ಕಿಡಿಗೇಡಿಗಳಿಂದ ಕಲ್ಲು ತೂರಿ ಹಾನಿ
Tragedy: ರೋಗಿಗಳಂತೆ ಆಸ್ಪತ್ರೆಗೆ ಬಂದು ವೈದ್ಯನನ್ನೇ ಗುಂಡಿಕ್ಕಿ ಕೊಂದ ದುಷ್ಕರ್ಮಿಗಳು…
Contract Carriage: ಬೈಕ್ಗಳಿಗೂ ವಾಣಿಜ್ಯ ಸ್ಥಾನಮಾನಕ್ಕೆ ಕೇಂದ್ರ ಸಿದ್ಧತೆ
Japan Airport: 2ನೇ ಮಹಾಯುದ್ಧದ 226 ಕೆ.ಜಿ. ಬಾಂಬ್ ಈಗ ಸ್ಫೋಟ!
World War 3…?: ಇಸ್ರೇಲ್ ಮೇಲೆ ಇರಾನ್ ದಾಳಿ 3ನೇ ಮಹಾಯುದ್ಧಕ್ಕೆ ಮುನ್ನುಡಿ: ಚರ್ಚೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.