ಸದೃಢ-ಭವ್ಯ ರಾಮ ಮಂದಿರ ನಿರ್ಮಾಣ
Team Udayavani, Feb 22, 2020, 3:06 AM IST
ಮಂಗಳೂರು: ಅಯೋಧ್ಯೆಯಲ್ಲಿ ನಿರ್ಮಾಣವಾಗುವ ರಾಮ ಮಂದಿರವು ಶತ ಶತಮಾನಗಳ ಕಾಲ ಶಾಶ್ವತವಾಗಿ ಉಳಿಯಬೇಕೆಂಬ ಹಿನ್ನೆಲೆಯಲ್ಲಿ ಕಟ್ಟಡವನ್ನು ಯೋಜನಾಬದ್ಧವಾಗಿ, ಸದೃಢವಾಗಿ, ಭವ್ಯವಾಗಿ ನಿರ್ಮಿಸಲಾಗುವುದು ಎಂದು ರಾಮ ಮಂದಿರ ಟ್ರಸ್ಟ್ನ ಸದಸ್ಯರಾಗಿರುವ ಉಡುಪಿ ಶ್ರೀ ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನತೀರ್ಥ ಸ್ವಾಮೀಜಿ ತಿಳಿಸಿದರು.
ಹೊಸದಿಲ್ಲಿಯಲ್ಲಿ ಬುಧವಾರ ನಡೆದ ರಾಮ ಮಂದಿನ ಟ್ರಸ್ಟ್ನ ಮೊದಲ ಸಭೆಯಲ್ಲಿ ಭಾಗವಹಿಸಿ ವಾಪಸಾದ ಶ್ರೀಗಳು, ಗುರುವಾರ ಪೇಜಾವರದ ಮೂಲ ಮಠ ಮತ್ತು ಶುಕ್ರವಾರ ಬೆಳಗ್ಗೆ ಕಣ್ವತೀರ್ಥದಲ್ಲಿರುವ ಉಪ ಮಠಕ್ಕೆ ಭೇಟಿ ನೀಡಿದರು. ಬಳಿಕ ಮಧ್ಯಾಹ್ನ ಮಂಗಳೂರಿನ ಕಲ್ಕೂರ ಪ್ರತಿಷ್ಠಾನದ ಎಸ್. ಪ್ರದೀಪ್ ಕುಮಾರ್ ಕಲ್ಕೂರ ಅವರ ನಿವಾಸದಲ್ಲಿ ಪತ್ರಿಕಾಗೋಷ್ಠಿ ನಡೆಸಿದರು.
ರಾಮ ಮಂದಿರ ಟ್ರಸ್ಟ್ನಲ್ಲಿ ನಾನು ದಕ್ಷಿಣ ಭಾರತ ಪ್ರತಿನಿಧಿಯಾಗಿ ಜವಾಬ್ದಾರಿ ನಿಭಾಯಿಸುತ್ತಿದ್ದೇನೆ. ಭವ್ಯ ರಾಮ ಮಂದಿರ ನಿರ್ಮಾಣಕ್ಕೆ ದಕ್ಷಿಣ ಭಾರತದ ಎಲ್ಲ ಆಸ್ತಿಕರ ಸಹಕಾರ ಬೇಕು ಎಂದು ಶ್ರೀಗಳು ಹೇಳಿದರು. ಮಂದಿರ ನಿರ್ಮಾಣಕ್ಕೆ ಬೇಕಾಗಿರುವ ನಿಧಿ ಸಂಚಯನಕ್ಕಾಗಿ ಅಯೋಧ್ಯೆಯ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಯಲ್ಲಿ ಖಾತೆಯನ್ನು ತೆರೆಯಲಾಗುವುದು. ಬಳಿಕ ಖಾತೆ ಸಂಖ್ಯೆಯನ್ನು ಸಾರ್ವಜನಿಕರಿಗೆ ನೀಡಲಾಗುವುದು. ಸಾರ್ವಜನಿಕರು ತಮ್ಮ ದೇಣಿಗೆಯನ್ನು ಈ ಖಾತೆಗೆ ಸಂದಾಯ ಮಾಡಬಹುದಾಗಿದೆ. ಪೇಜಾವರ ಮಠದ ಹೆಸರಿನಲ್ಲಿ 5 ಲಕ್ಷ ರೂ. ಗಳನ್ನು ತಾನು ದಿಲ್ಲಿಯಲ್ಲಿ ಹಸ್ತಾಂತರಿಸಿದ್ದೇನೆ ಎಂದು ಸ್ವಾಮೀಜಿ ವಿವರಿಸಿದರು.
ಪ್ರಧಾನಿ ಮೋದಿ ಅವರ ಆಪ್ತ ನೃಪೇಂದ್ರ ಮಿಶ್ರಾ ಅವರು ಅಧ್ಯಕ್ಷರಾಗಿರುವ ರಾಮ ಮಂದಿರ ನಿರ್ಮಾಣ ಸಮಿತಿಯು ಮಂದಿರದ ರೂಪು-ರೇಷೆ ತಯಾರಿಸಿ, ಯೋಜನಾ ವೆಚ್ಚವನ್ನು ನಿಗದಿಪಡಿಸಿ ಶಂಕು ಸ್ಥಾಪನೆಗೆ ದಿನಾಂಕ ನಿಗದಿಪಡಿಸಲಿದೆ. ಚತುಷ್ಪಥ ರಸ್ತೆ, ವಸತಿ ಸೌಲಭ್ಯ, ಕಲಾ ಭವನ ಇತ್ಯಾದಿಗಳನ್ನು ಮಂದಿರ ಒಳಗೊಂಡಿರುತ್ತದೆ. ಪ್ರಸ್ತುತ 67 ಎಕರೆ ಜಮೀನು ಲಭ್ಯವಿದ್ದು, ಮುಂದೆ ಸುತ್ತಮುತ್ತಲಿನ ಹೆಚ್ಚುವರಿ ಜಮೀನನ್ನು ಪಡೆಯವುದಕ್ಕೆ ಟ್ರಸ್ಟ್ ಪ್ರಯತ್ನಿಸಲಿದೆ ಎಂದು ವಿವರಿಸಿದರು.
ಮನೆ ಮನೆಯಲ್ಲಿ ರಾಮ ನಾಮ ಜಪ, ಭಜನೆ: ಹಿಂದೂ ಸಂಸ್ಕೃತಿಯ ಪುನರುಜ್ಜೀವನ ಆಗಬೇಕಾಗಿದ್ದು, ಈ ನಿಟ್ಟಿನಲ್ಲಿ ರಾಮ ಮಂದಿರ ನಿರ್ಮಾಣ ಸಾಂಕೇತಿಕ ಮಾತ್ರ. ಸಾತ್ವಿಕ ಬಲವಾಗಿ ಮನೆ ಮನೆಗಳಲ್ಲಿ 108 ರಾಮ ನಾಮ ಜಪ, ಭಜನೆ, ರಾಮಾಯಣ ವಾಚನ ಮತ್ತು ಪ್ರವಚನ ನಡೆಯಬೇಕು. ಈ ವಿಷಯವನ್ನು ಸಭೆಯಲ್ಲಿ ನಾನೇ ಪ್ರಸ್ತಾವಿಸಿದ್ದು, ಅದಕ್ಕೆ ಒಪ್ಪಿಗೆ ಲಭಿಸಿದೆ ಎಂದರು.
ರಾಮನವಮಿ ದಿನವಾದ ಏ.4ರಂದು ಶಿಲಾನ್ಯಾಸ ನೆರವೇರಿ ಸಲು ಉದ್ದೇಶಿಸಿದ್ದರೂ ಅಂದು 15ರಿಂದ 20 ಲಕ್ಷ ಜನರು ಅಯೋಧ್ಯೆಯಲ್ಲಿ ಸೇರುವ ನಿರೀಕ್ಷೆ ಇರುವುದರಿಂದ ಅಂದು ಶಂಕುಸ್ಥಾಪನೆ ಬೇಡವೆಂದು ಅಭಿಪ್ರಾಯಪಡಲಾಗಿದೆ ಎಂದು ಸ್ವಾಮೀಜಿ ತಿಳಿಸಿದರು. ಏ.4ರಂದು ಪ್ರತಿ ಜಿಲ್ಲೆಯಲ್ಲಿ ರಾಮೋತ್ಸವ ಆಚರಿಸಲು ನಿರ್ಧರಿಸಲಾಗಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದ ವಿಶ್ವ ಹಿಂದೂ ಪರಿಷತ್ತಿನ ಪ್ರಾಂತೀಯ ಕಾರ್ಯಾಧ್ಯಕ್ಷ ಎಂ.ಬಿ. ಪುರಾಣಿಕ್ ತಿಳಿಸಿದರು. ಪ್ರದೀಪ್ ಕುಮಾರ್ ಕಲ್ಕೂರ, ಕಾರ್ಪೊರೇಟರ್ ಶಕೀಲಾ ಕಾವ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಳಿಂಗ ನಾವಡ ಪ್ರಶಸ್ತಿಗೆ ಕೋಟ ಶಿವಾನಂದ ಆಯ್ಕೆ
PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ
Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Talk Fight: ಯಾರು ಏನೇ ಅಂದ್ರೂ ಬಿಜೆಪಿ ಕಾರ್ಯಕರ್ತರು ನನ್ನ ಒಪ್ಪಿದ್ದಾರೆ: ವಿಜಯೇಂದ್ರ
Munirathna:ಒಕ್ಕಲಿಗ ಹೆಣ್ಣುಮಕ್ಕಳ ಬಗ್ಗೆ ಹೇಳಿಕೆ; ಸಮುದಾಯದ ಸಚಿವ, ಶಾಸಕರಿಂದ ಸಿಎಂಗೆ ಮನವಿ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.