German ಅಧಿಕಾರಿಗಳ ಜತೆ ಸಂಪರ್ಕ; ಪ್ರಜ್ವಲ್‌ ಪತ್ತೆ ಮಾಹಿತಿ ಕಲೆ ಹಾಕುತ್ತಿರುವ ಅಧಿಕಾರಿಗಳು


Team Udayavani, May 14, 2024, 10:55 PM IST

ಜರ್ಮನಿ ಅಧಿಕಾರಿಗಳ ಜತೆ ಸಂಪರ್ಕ; ಪ್ರಜ್ವಲ್‌ ಪತ್ತೆ ಮಾಹಿತಿ ಕಲೆ ಹಾಕುತ್ತಿರುವ ಅಧಿಕಾರಿಗಳು

ಬೆಂಗಳೂರು: ಹಾಸನದ ಅಶ್ಲೀಲ ಪೆನ್‌ಡ್ರೈವ್‌ ಪ್ರಕರಣದಲ್ಲಿ ಸಂಸದ ಪ್ರಜ್ವಲ್‌ ರೇವಣ್ಣ ಅವರಿಗಾಗಿ ವಿಶೇಷ ತನಿಖಾ ತಂಡವು (ಎಸ್‌ಐಟಿ) ತಲಾಶ್‌ ಚುರುಕುಗೊಳಿಸಿದ್ದು, ಜರ್ಮನಿಯ ಕೆಲವು ಅಧಿಕಾರಿಗಳೊಂದಿಗೆ ಸಂಪರ್ಕ ಸಾಧಿಸಿದ್ದಾರೆ ಎಂದು ತಿಳಿದು ಬಂದಿದೆ.

ಸಂಸದ ಪ್ರಜ್ವಲ್‌ ರೇವಣ್ಣ ಪತ್ತೆಗಾಗಿ ಎಸ್‌ಐಟಿ ತಂಡವು ಹುಡುಕಾಟ ಮುಂದುವರೆಸಿದೆ. ಈ ನಿಟ್ಟಿನಲ್ಲಿ ಜರ್ಮನಿಯ ಕೆಲ ಅಧಿಕಾರಿಗಳ ಸಂಪರ್ಕ ಸಾಧಿಸಿರುವ ಎಸ್‌ಐಟಿ ಅವರಿಂದ ಮಾಹಿತಿ ಕಲೆ ಹಾಕುತ್ತಿದೆ. ಆದರೆ, ನಿಖರವಾಗಿ ಪ್ರಜ್ವಲ್‌ ರೇವಣ್ಣ ವಾಸಿಸುತ್ತಿರುವ ಪ್ರದೇಶದ ಕುರಿತು ಖಚಿತತೆ ಸಿಕ್ಕಿಲ್ಲ. ವಿದೇಶಿ ಅಧಿಕಾರಿಗಳು ಎಸ್‌ಐಟಿ ತಂಡಕ್ಕೆ ತಮ್ಮ ವ್ಯಾಪ್ತಿಯಲ್ಲಿ ಕೊಡಬಹುದಾದ ಕೆಲವು ಮಾಹಿತಿಗಳನ್ನು ಕೊಟ್ಟಿದ್ದಾರೆ ಎಂದು ಗೊತ್ತಾಗಿದೆ.

ಪ್ರಜ್ವಲ್‌ ಭಾರತಕ್ಕೆ ವಾಪಸಾಗಬಹುದು ಎಂಬ ನಿರೀಕ್ಷೆಯಲ್ಲಿದ್ದ ಎಸ್‌ಐಟಿಯು ಇದುವರೆಗೆ ಕಾದು ನೋಡುವ ತಂತ್ರ ಅನುಸರಿಸಿತ್ತು. ಇದೀಗ ಪ್ರಜ್ವಲ್‌ ಸದ್ಯ ಭಾರತಕ್ಕೆ ಮರಳುವುದೇ ಅನುಮಾನ ಎಂಬುದು ಗೊತ್ತಾಗುತ್ತಿದ್ದಂತೆ ವಿದೇಶಿ ಅಧಿಕಾರಿಗಳ ಸಂಪರ್ಕ ಸಾಧಿಸಿ ಮಾಹಿತಿ ಕಲೆ ಹಾಕಲು ಮುಂದಾಗಿದೆ.

ಎಸ್‌ಐಟಿಗೆ ದೊಡ್ಡ ತಲೆನೋವು
ಪ್ರಜ್ವಲ್‌ ಜರ್ಮನಿಯಲ್ಲೇ ಇರುವ ಸಾಧ್ಯತೆಗಳಿವೆ ಎಂದು ತಿಳಿದು ಬಂದಿದ್ದು, ಇಷ್ಟಾದರೂ ಪ್ರಜ್ವಲ್‌ ಬಂಧಿಸುವುದೇ ಎಸ್‌ಐಟಿಗೆ ದೊಡ್ಡ ತಲೆನೋವಾಗಿದೆ. ಪ್ರಜ್ವಲ್‌ ಬಗ್ಗೆ ನಿಖರವಾದ ಮಾಹಿತಿ ಸಿಕ್ಕಿದರೆ ಮುಂದಿನ ಕ್ರಮ ಕೈಗೊಳ್ಳಲು ಎಸ್‌ಐಟಿ ಚಿಂತನೆ ನಡೆಸಿದೆ. ಸದ್ಯ ಸಂತ್ರಸ್ತೆಯರ ಹೇಳಿಕೆ ದಾಖಲಿಸಿಕೊಳ್ಳಲಾಗುತ್ತಿದೆ.

ಸಂತ್ರಸ್ತೆಯರನ್ನು ಕೃತ್ಯ ನಡೆದ ಸ್ಥಳಕ್ಕೆ ಕರೆದೊಯ್ದು ಮಹಜರು ನಡೆಸುವ ಪ್ರಕ್ರಿಯೆಯನ್ನೂ ನಡೆಸಲಾಗುತ್ತಿದೆ. ಮತ್ತೂಂದೆಡೆ ಪ್ರಕರಣಕ್ಕೆ ಬೇಕಾಗಿರುವ ಸಾಕ್ಷ್ಯಗಳನ್ನು ಕಲೆ ಹಾಕಲಾಗುತ್ತಿದೆ ಎಂದು ತಿಳಿದು ಬಂದಿದೆ.

ಟಾಪ್ ನ್ಯೂಸ್

4-belthanagdy

Ujire: ಬೆಳ್ಳಂಬೆಳಗ್ಗೆ ಭೀಕರ ಅಪಘಾತ;ಪ್ರಜ್ವಲ್ ಕಾಂಪ್ಲೆಕ್ಸ್ ಮಾಲೀಕರ ಪುತ್ರ ಪ್ರಜ್ವಲ್ ನಿಧನ

3-Shivamogga

Shivamogga: ಅಂಬ್ಯುಲೆನ್ಸ್ – ಬೈಕ್ ಅಪಘಾತ ; ಮೂವರು ಬೈಕ್ ಸವಾರರು ಸಾವು

2-gadag

Gadag: ಪೊಲೀಸರ ಮೇಲೆ‌ ಹಲ್ಲೆ ನಡೆಸಿ ಪರಾರಿಯಾದ ದುಷ್ಕರ್ಮಿಗಳು

ಅಡಿಕೆಗೆ ಬೆಳೆವಿಮೆ: ಇಂದೇ ಕೊನೆ ಅವಕಾಶ!

PMFBY ಅಡಿಕೆಗೆ ಬೆಳೆವಿಮೆ: ಇಂದೇ ಕೊನೆ ಅವಕಾಶ!

1-24-saturday

Daily Horoscope: ಉದ್ಯೋಗದಲ್ಲಿ ಉತ್ತಮ ಸ್ಥಾನಮಾನ ಹಾಗೂ ಪ್ರತಿಫ‌ಲ

Panic Button ಅಳವಡಿಕೆ ಕಡ್ಡಾಯ: ಸಾರ್ವಜನಿಕ ಸಂಪರ್ಕ ವಾಹನಗಳಿಗೆ ವಿಎಲ್‌ಟಿಯೂ ಅಗತ್ಯ

Panic Button ಅಳವಡಿಕೆ ಕಡ್ಡಾಯ: ಸಾರ್ವಜನಿಕ ಸಂಪರ್ಕ ವಾಹನಗಳಿಗೆ ವಿಎಲ್‌ಟಿಯೂ ಅಗತ್ಯ

Google ಭಾಷಾಂತರಕ್ಕೆ ತುಳು ಸೇರ್ಪಡೆ: ಸದ್ಯ ಭಾಷಾಂತರ ಸೇವೆ ವೆಬ್‌ನಲ್ಲಿ ಮಾತ್ರವೇ ಲಭ್ಯ

Google ಭಾಷಾಂತರಕ್ಕೆ ತುಳು ಸೇರ್ಪಡೆ: ಸದ್ಯ ಭಾಷಾಂತರ ಸೇವೆ ವೆಬ್‌ನಲ್ಲಿ ಮಾತ್ರವೇ ಲಭ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-Shivamogga

Shivamogga: ಅಂಬ್ಯುಲೆನ್ಸ್ – ಬೈಕ್ ಅಪಘಾತ ; ಮೂವರು ಬೈಕ್ ಸವಾರರು ಸಾವು

2-gadag

Gadag: ಪೊಲೀಸರ ಮೇಲೆ‌ ಹಲ್ಲೆ ನಡೆಸಿ ಪರಾರಿಯಾದ ದುಷ್ಕರ್ಮಿಗಳು

Renukaswamy Case 5 ತಿಂಗಳಿನಿಂದ ಪವಿತ್ರಾಗೆ ಅಶ್ಲೀಲ ಸಂದೇಶ ಕಳುಹಿಸುತ್ತಿದ್ದ!

Renukaswamy Case 5 ತಿಂಗಳಿನಿಂದ ಪವಿತ್ರಾಗೆ ಅಶ್ಲೀಲ ಸಂದೇಶ ಕಳುಹಿಸುತ್ತಿದ್ದ!

Pen Drive Case: ಪ್ರಜ್ವಲ್‌ ಧ್ವನಿ ಬದಲಾಯಿಸಲು ಯತ್ನ

Pen Drive Case: ಪ್ರಜ್ವಲ್‌ ಧ್ವನಿ ಬದಲಾಯಿಸಲು ಯತ್ನ

CT Ravi; ವಾಲ್ಮೀಕಿ ಅಭಿವೃದ್ಧಿ ನಿಗಮ ಅಕ್ರಮಕ್ಕೆ ಹನಿ ಟ್ರ್ಯಾಪ್‌ ನಂಟು

CT Ravi; ವಾಲ್ಮೀಕಿ ಅಭಿವೃದ್ಧಿ ನಿಗಮ ಅಕ್ರಮಕ್ಕೆ ಹನಿ ಟ್ರ್ಯಾಪ್‌ ನಂಟು

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

4-belthanagdy

Ujire: ಬೆಳ್ಳಂಬೆಳಗ್ಗೆ ಭೀಕರ ಅಪಘಾತ;ಪ್ರಜ್ವಲ್ ಕಾಂಪ್ಲೆಕ್ಸ್ ಮಾಲೀಕರ ಪುತ್ರ ಪ್ರಜ್ವಲ್ ನಿಧನ

3-Shivamogga

Shivamogga: ಅಂಬ್ಯುಲೆನ್ಸ್ – ಬೈಕ್ ಅಪಘಾತ ; ಮೂವರು ಬೈಕ್ ಸವಾರರು ಸಾವು

2-gadag

Gadag: ಪೊಲೀಸರ ಮೇಲೆ‌ ಹಲ್ಲೆ ನಡೆಸಿ ಪರಾರಿಯಾದ ದುಷ್ಕರ್ಮಿಗಳು

ಅಡಿಕೆಗೆ ಬೆಳೆವಿಮೆ: ಇಂದೇ ಕೊನೆ ಅವಕಾಶ!

PMFBY ಅಡಿಕೆಗೆ ಬೆಳೆವಿಮೆ: ಇಂದೇ ಕೊನೆ ಅವಕಾಶ!

1-24-saturday

Daily Horoscope: ಉದ್ಯೋಗದಲ್ಲಿ ಉತ್ತಮ ಸ್ಥಾನಮಾನ ಹಾಗೂ ಪ್ರತಿಫ‌ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.