ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣ: ಮಾಜಿ ಸಚಿವ ಈಶ್ವರಪ್ಪಗೆ ಮತ್ತೆ ಸಂಕಷ್ಟ
Team Udayavani, Aug 24, 2022, 6:35 AM IST
ಬೆಂಗಳೂರು: ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಬಿಗ್ ರಿಲೀಫ್ ಪಡೆದುಕೊಂಡಿದ್ದ ಮಾಜಿ ಸಚಿವ ಈಶ್ವರಪ್ಪಗೆ ಇದೀಗ ಮತ್ತೆ ಸಂಕಷ್ಟ ಶುರವಾಗಿದೆ.
ಪ್ರಕರಣದಲ್ಲಿ ಮಾಜಿ ಸಚಿವರಿಗೆ ಕ್ಲೀನ್ಚಿಟ್ ನೀಡಿದ್ದ ತನಿಖಾಧಿಕಾರಿಗಳ ಕ್ರಮ ಪ್ರಶ್ನಿಸಿ ಸಂತೋಷ್ ಪಾಟೀಲ್ ಕುಟುಂಬ ಸದಸ್ಯರು ಕೋರ್ಟ್ ಮೊರೆ ಹೋಗಿದ್ದಾರೆ. ಪ್ರಕರಣದ ಸಂಬಂಧ ವಿಶೇಷ ತನಿಖಾ ತಂಡದ (ಎಸ್ಐಟಿ) ಅಧಿಕಾರಿಗಳು ಸಲ್ಲಿಸಿರುವ ಬಿ-ವರದಿ ಪ್ರಶ್ನಿಸಿ ಮೃತ ಸಂತೋಷ್ ಪಾಟೀಲ್ ಸಹೋದರ ಪ್ರಶಾಂತ್ ಪಾಟೀಲ್ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಪ್ರತಿರೋಧ ಅರ್ಜಿ (ಪ್ರೊಟೆಸ್ಟ್ ಪಿಟಿಷನ್) ಸಲ್ಲಿಸಿದ್ದಾರೆ. ಬುಧವಾರ ವಿಚಾರಣೆ ನಡೆಯುವ ಸಾಧ್ಯತೆಯಿದೆ.
ಅರ್ಜಿ ಏನು?
ಗುತ್ತಿಗೆದಾರ ಸಂತೋಷ್ ಪಾಟೀಲ್ ನಡೆಸಿರುವ ಕಾಮಗಾರಿಗಳು ಹಾಗೂ ಈ ಸಂಬಂಧ ಈಶ್ವರಪ್ಪ ಜತೆ ನಡೆಸಿರುವ ಮಾತುಕತೆಗೆ ಸಂಬಂಧಿಸಿದಂತೆ ಹಲವು ದಾಖಲೆಗಳಿವೆ. ಸಂತೋಷ್ ಆತ್ಮಹತ್ಯೆಗೆ ಈಶ್ವರಪ್ಪ ಅವರೇ ನೇರ ಹೊಣೆ ಎಂಬುದನ್ನು ಸಾಬೀತುಪಡಿಸುವ ಸಾಕಷ್ಟು ದಾಖಲೆಗಳು ಇದೆ. ಆದರೂ ತನಿಖಾಧಿಕಾರಿಗಳು ಮಾಜಿ ಸಚಿವರ ವಿರುದ್ಧ ಬಿ-ರಿಪೋರ್ಟ್ ಸಲ್ಲಿಸಿದ್ದಾರೆ. ಸಂತೋಷ್ ಪಾಟೀಲ್ ಆತ್ಮಹತ್ಯೆಯ ಹಿಂದೆ ಹಲವು ಪ್ರಭಾವಿಗಳ ಕೈವಾಡವಿದೆ. ಎಸ್ಐಟಿ ಅಧಿಕಾರಿಗಳು ಸೂಕ್ತ ರೀತಿಯಲ್ಲಿ ತನಿಖೆ ನಡೆಸದೆ, ರಾಜಕೀಯ ಪ್ರಭಾವಕ್ಕೊಳಗಾಗಿ ಈಶ್ವರಪ್ಪಗೆ ಕ್ಲೀನ್ಚಿಟ್ ನೀಡಿದ್ದು, ತನಿಖಾಧಿಕಾರಿಗಳ ಬಿ-ರಿಪೋರ್ಟ್ ವಜಾಗೊಳಿಸಬೇಕು ಎಂದು ಪ್ರಶಾಂತ್ ಪಾಟೀಲ್ ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೇಂದ್ರದಿಂದ ರಾಜ್ಯ ಸರ್ಕಾರದ ಅಸ್ಥಿರ ಪ್ರಯತ್ನ ಎಂಬುದು ಕಾಂಗ್ರೆಸ್ ನ ಭ್ರಮೆ: ಸಂಸದ ಜಿಗಜಿಣಗಿ
Raichur: ಜಾತಿಗಣತಿ ತಕ್ಷಣಕ್ಕೆ ಜಾರಿಯಿಲ್ಲ, ಬರೀ ಚರ್ಚೆಯಷ್ಟೇ: ಸಿಎಂ ಸಿದ್ದರಾಮಯ್ಯ
Gadaga: ಹುರಿಗಡಲೆ ಚೀಲದಲ್ಲಿ ಪಡಿತರ ಅಕ್ಕಿ ಅಕ್ರಮ ಸಾಗಾಟ… ಕಣ್ಮುಚ್ಚಿ ಕುಳಿತ ಅಧಿಕಾರಿಗಳು
ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ… ನಾವು ಆ ರೀತಿ ರಾಜಕಾರಣ ಮಾಡಲ್ಲ: ಜಿ. ಪರಮೇಶ್ವರ್
Dasara: ಶ್ರೀರಂಗಪಟ್ಟಣ ದಸರಾಗೆ ಆರಂಭದಲ್ಲೇ ವಿಘ್ನ: ಅಡ್ಡಾದಿಡ್ಡಿ ಓಡಾಡಿದ ಆನೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.