ಮತಾಂತರ ನಿಷೇಧ ಕಾಯ್ದೆ : ವಿಧಾನಸಭೆಯಲ್ಲಿ  ರಾಜ್ಯ ಸರಕಾರದಿಂದ ಘೋಷಣೆ


Team Udayavani, Sep 22, 2021, 7:10 AM IST

Untitled-2

ಬೆಂಗಳೂರು: ಬಲವಂತ ಮತ್ತು ಆಮಿಷ ವೊಡ್ಡಿ ಮತಾಂತರ ಪ್ರಕರಣಗಳು ಹೆಚ್ಚುತ್ತಿರುವುದು ಸರಕಾರದ ಗಮನಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಉತ್ತರಪ್ರದೇಶ ಮಾದರಿ ಯಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರುವ ಇರಾದೆ ಇದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ವಿಧಾನಸಭೆಯಲ್ಲಿ ಮಂಗಳವಾರ ಶೂನ್ಯವೇಳೆ ಯಲ್ಲಿ ಹೊಸದುರ್ಗ ಶಾಸಕ ಗೂಳಿಹಟ್ಟಿ ಶೇಖರ್‌ ಮಾತನಾಡಿ, ತನ್ನ ತಾಯಿಯನ್ನು ಕ್ರೈಸ್ತ ಧರ್ಮಕ್ಕೆ ಮತಾಂತರ ಮಾಡ ಲಾಗಿದೆ. ತನ್ನ ಚಿತ್ರದುರ್ಗ ಜಿಲ್ಲೆ, ತನ್ನ ಕ್ಷೇತ್ರದಲ್ಲಿ ಕ್ರೈಸ್ತ ಮಿಷನರಿ ಗಳು ಮತ್ತು ಸಂಘಟನೆಗಳು ಬಲವಂತವಾಗಿ ಬಡವ ರನ್ನು, ಮುಗ್ಧರನ್ನು ಮತಾಂತರಗೊಳಿಸುತ್ತಿವೆ. ಉಡುಪಿ,  ಚಿತ್ರದುರ್ಗ ಜಿಲ್ಲೆಗಳಲ್ಲೂ ಇಂಥ ಘಟನೆ ನಡೆದಿವೆ ಎಂದು ಹೇಳಿ, ಸರಕಾರ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ಈ ಸಂಬಂಧ ಉತ್ತರಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ, ಬಲವಂತದ ಮತಾಂತರಕ್ಕೆ ಅವಕಾಶವಿಲ್ಲ. ಆಮಿಷವೊಡ್ಡಿ ಮತಾಂತರ ನಡೆಸುವುದು ಕಾನೂನಿಗೆ ವಿರುದ್ಧ ವಾಗಿದೆ. ಪೊಲೀಸರಿಗೆ ಈ ಕುರಿತು ಸ್ಪಷ್ಟ ನಿರ್ದೇಶನ ನೀಡಿದ್ದು, ಸೂಕ್ತ ಕ್ರಮ ತೆಗೆದು ಕೊಳ್ಳಲು ತಿಳಿಸಲಾಗಿದೆ ಎಂದರು.

ಜನರ ಮುಗ್ಧತೆ, ದೌರ್ಬಲ್ಯ ಅಥವಾ ಇನ್ನಿತರ ಸನ್ನಿವೇಶಗಳನ್ನು ಬಳಸಿ ಕೊಂಡು ಮತಾಂತರ ಮಾಡು ವುದರಿಂದ ಸಮಾಜದಲ್ಲಿ ಶಾಂತಿ ಕದಡುವ ಸಂಭವ ಇದೆ ಎಂದು ಹೇಳಿದ ಸಚಿವರು, ಈ ಕುರಿತು ರಾಜ್ಯ ಸರಕಾರ ಸೂಕ್ತ ಕಾನೂನನ್ನು ಜಾರಿಗೆ ತರಲು ಚಿಂತನೆ ನಡೆಸಿದೆ ಎಂದು ತಿಳಿಸಿದರು.

ಅತ್ಯಾಚಾರ ಮತ್ತಿತರ ಸುಳ್ಳು ಪ್ರಕರಣಗಳನ್ನು ದಾಖಲಿ ಸಿದ್ದು ಕಂಡುಬಂದಲ್ಲಿ ಪೊಲೀಸ್‌ ಅಧಿಕಾರಿಗಳ ವಿರುದ್ಧ ಕಠಿನ ಕ್ರಮ ಕೈಗೊಳ್ಳುವುದಾಗಿ ಸಚಿವರು ತಿಳಿಸಿದರು. ಮತಾಂತರದ ಹಿಂದೆ ವ್ಯವಸ್ಥಿತ ಜಾಲವೇ ಇದೆ. ಅದನ್ನು ಹೇಗೆ ತಡೆಗಟ್ಟಲು ಸಾಧ್ಯ ಎಂಬ ಚರ್ಚೆ ಆಗುತ್ತಿದೆ. ಸದ್ಯವೇ ಸೂಕ್ತ ಕಾನೂನನ್ನು ತರಲಾಗುವುದು. ಶಾಂತಿಭಂಗಕ್ಕೆ ಕಾರಣವಾಗುವ ಸಂಘಟನೆ ಅಥವಾ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದರು.

ಎಲ್ಲೆಲ್ಲಿ ಮತಾಂತರ ನಿಷೇಧ ಕಾಯ್ದೆ? : ಒಡಿಶಾ, ಮಧ್ಯಪ್ರದೇಶ, ಅರುಣಾಚಲ ಪ್ರದೇಶ, ಉತ್ತರಾಖಂಡ, ಹಿಮಾಚಲ ಪ್ರದೇಶ, ಗುಜರಾತ್‌,  ಛತ್ತೀಸ್‌ ಗಢ, ಉತ್ತರ ಪ್ರದೇಶ.

ಎಸ್‌ಸಿ, ಎಸ್‌ಟಿ ಸೌಲಭ್ಯ ಯಾಕೆ? :

ಮತಾಂತರದ ಬಗ್ಗೆ ವಿವರ ನೀಡಿದ ಗೂಳಿಹಟ್ಟಿ ಶೇಖರ್‌, ಪರಿಶಿಷ್ಟ ಜಾತಿ, ವರ್ಗ, ಹಿಂದುಳಿದ ವರ್ಗ ಗಳನ್ನು ಗುರಿ ಮಾಡಲಾಗುತ್ತಿದೆ. ಮುಸ್ಲಿಂ ಸಮುದಾಯ ದವರನ್ನೂ ಮತಾಂತರಗೊಳಿಸಲಾಗುತ್ತಿದೆ. ಇದರಿಂದ ಕೆಲವು ಕುಟುಂಬ  ಗಳು ಸಮಸ್ಯೆ ಅನುಭವಿಸಿವೆ. ವಿರೋಧಿಸಿದರೆ ಅತ್ಯಾಚಾರದಂಥ ಸುಳ್ಳು ಪ್ರಕರಣ ದಾಖಲಿಸ ಲಾಗುತ್ತಿದೆ ಎಂದು ಆರೋಪಿಸಿದರು. ಸ್ವಂತ ಇಚ್ಛೆ ಇದ್ದರೆ ಮತಾಂತರಗೊಳ್ಳಲಿ, ಆದರೆ ಬಲವಂತದ ಮತಾಂತರ ಸಲ್ಲದು. ಹಾಗೆ ಮತಾಂತರಗೊಳ್ಳುವವರು ಎಸ್‌ಸಿ, ಎಸ್‌ಟಿ ಸೌಲಭ್ಯಗಳನ್ನು ಪಡೆಯುವುದನ್ನು ನಿಲ್ಲಿಸಲಿ ಎಂದು ಸವಾಲೆಸೆದರು.

ತನ್ನ ಸ್ವಂತ ಅನುಭವ ಹೇಳಿಕೊಂಡ ಗೂಳಿ ಹಟ್ಟಿ ಶೇಖರ್‌, ತಾಯಿ ಮತಾಂತರಗೊಂಡ ಬಳಿಕ ಹಳ್ಳಿಯ ಮನೆಯಲ್ಲಿ ನಾವು ಪೂಜೆ  ಮಾಡುವಂತೆಯೂ ಇಲ್ಲ. ಮೌಡ್ಯ ಪ್ರತಿ ಬಂಧಕ ಕಾಯ್ದೆ ಜಾರಿ ಬಳಿಕ  ಇದನ್ನು ದುರ್ಬಳಕೆ ಮಾಡಿಕೊಂಡು ಕ್ರೈಸ್ತ ಮಿಷನರಿ ಗಳು ಮುಗ್ಧ ಜನರನ್ನು ಚರ್ಚ್‌ ಗೆ ಕರೆದೊಯ್ದು ಬ್ರೈನ್‌ ವಾಶ್‌ ಮಾಡುತ್ತಿವೆ. ಚಿತ್ರದುರ್ಗ ಜಿಲ್ಲೆ ಯಲ್ಲೇ 15ರಿಂದ 20 ಸಾವಿರ ಜನರನ್ನು ಮತಾಂತರಗೊಳಿಸಲಾಗಿದೆ ಎಂದರು.

ಈ ಸಂದರ್ಭದಲ್ಲಿ ಕಾಂಗ್ರೆಸ್‌ ಸದಸ್ಯ ಕೆ.ಜೆ. ಜಾರ್ಜ್‌ ಮಧ್ಯಪ್ರವೇಶಿಸಿ, ಬಲವಂತದ ಮತಾಂತರಕ್ಕೆ ತಮ್ಮ ವಿರೋಧ ವಿದೆ. ಆದರೆ ಚರ್ಚ್‌ ಎನ್ನುವ ಮೂಲಕ ಅದನ್ನು ಸಾರ್ವತ್ರಿಕವಾಗಿ ದೂಷಣೆ ಮಾಡುವುದು ಸರಿಯಲ್ಲ ಎಂದರು. ಜೆಡಿಎಸ್‌ ಶಾಸಕ ದೇವಾನಂದ್‌ ಮಾತನಾಡಿ, ವಿಜಯಪುರ ಜಿಲ್ಲೆ ಯಲ್ಲಿಯೂ ಮತಾಂತರ ಹಾವಳಿ ಹೆಚ್ಚಾ ಗಿದೆ. ಬಂಜಾರ ಸಮುದಾಯವನ್ನು ಮತಾಂತರ ಗೊಳಿಸಲಾಗುತ್ತಿದೆ. ಅಲ್ಲಿ ಎರಡು ಬಣ ಗಳಾಗಿದ್ದು, ಸಮಾಜದ ಶಾಂತಿ ಮತ್ತು ಕುಟುಂಬದ ಸದಸ್ಯರ ನಡುವೆ ಸಮನ್ವಯ, ಸೌಹಾರ್ದ ಕದಡಿದೆ ಎಂದು ಸರಕಾರದ ಗಮನ ಸೆಳೆದರು.

ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ದನಿಗೂಡಿಸಿ, ತಾವು ಶಾಸಕರಾಗಿ ವಿಪಕ್ಷದಲ್ಲಿದ್ದಾಗ ಮತಾಂತರದ ಬಗ್ಗೆ ಸದನದಲ್ಲಿ ಚರ್ಚೆ ಯಾಗಿತ್ತು ಎಂದು ಜ್ಞಾಪಿಸಿದರು. ಈ ಬಗ್ಗೆ ಸರಕಾರ ಸೂಕ್ರ ಕ್ರಮ ಕೈಗೊಳ್ಳಬೇಕೆಂದು ಕಾಗೇರಿಯವರು ಸೂಚಿಸಿದರು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.