![1-sidda](https://www.udayavani.com/wp-content/uploads/2025/02/1-sidda-415x281.jpg)
![1-sidda](https://www.udayavani.com/wp-content/uploads/2025/02/1-sidda-415x281.jpg)
Team Udayavani, Aug 27, 2022, 9:32 PM IST
ಬೆಂಗಳೂರು: ರಾಜ್ಯದಲ್ಲಿ ಶನಿವಾರ 1,186 ಮಂದಿ ಕೊರೊನಾ ಸೋಂಕಿಗೆ ತುತ್ತಾಗಿದ್ದು, ಅನಾರೋಗ್ಯದಿಂದ ಬಳಲುತ್ತಿದ್ದ ಇಬ್ಬರು ಸೋಂಕಿತರು ಮೃತಪಟ್ಟಿದ್ದಾರೆ.
ಬೆಂಗಳೂರು ನಗರ 635, ಮೈಸೂರು 121, ಹಾಸನ 62, ಚಿಕ್ಕಮಗಳೂರು 40, ಧಾರವಾಡ 28, ಕೊಡಗು, ಚಾಮರಾಜನಗರ, ಬಳ್ಳಾರಿ 27, ದಕ್ಷಿಣಕನ್ನಡ 23, ತುಮಕೂರು, ರಾಯಚೂರು 19, ಉಡುಪಿ 15, ಉತ್ತರಕನ್ನಡ 14, ಬೆಂಗಳೂರು ಗ್ರಾಮಾಂತರ, ಕೋಲಾರ 13, ಕಲಬುರಗಿ 12, ಮಂಡ್ಯ 10, ರಾಮನಗರ 8, ದಾವಣಗೆರೆ, ಬೆಳಗಾವಿ 6, ವಿಜಯಪುರ 5, ಕೊಪ್ಪಳ, ಶಿವಮೊಗ್ಗ 4, ಚಿಕ್ಕಬಳ್ಳಾಪುರ 3, ಚಿತ್ರದುರ್ಗ, ಹಾವೇರಿ, ಯಾದಗಿರಿ ಜಿಲ್ಲೆಯಲ್ಲಿ ತಲಾ ಎರಡು ಪಾಸಿಟಿವ್ ವರದಿಯಾಗಿದೆ.
ಶಿವಮೊಗ್ಗ ಹಾಗೂ ಬಳ್ಳಾರಿಯಲ್ಲಿ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ಇಬ್ಬರು ಮೃತಪಟ್ಟಿದ್ದಾರೆ. 27,562 ಮಂದಿಯನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿತ್ತು. ಅವರಲ್ಲಿ ಶೇ.4.30ರಷ್ಟು ಮಂದಿಯಲ್ಲಿ ಸೋಂಕು ದೃಢವಾಗಿದೆ. ವಾರದ ಪಾಸಿಟಿವ್ ದರ ಶೇ. 2.67 ಹಾಗೂ ಗುಣಮುಖರಾಗುವವರ ಪ್ರಮಾಣ ಶೇ 98.74 ಇದೆ.
242 ಮಂದಿಗೆ ಚಿಕಿತ್ಸೆ
ರಾಜ್ಯದ ಸರ್ಕಾರಿ ಆಸ್ಪತ್ರೆಯಲ್ಲಿ ಒಟ್ಟು 242 ಮಂದಿ ಕೊರೊನಾಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಜನರಲ್ ಬೆಡ್ನಲ್ಲಿ 196, ಆಕ್ಸಿಜನ್ ಬೆಡ್ 12, ಐಸಿಯು ಬೆಡ್ನಲ್ಲಿ 34 ಮಂದಿ ಸೋಂಕಿತರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ ಕೋವಿಡ್ ಸೋಂಕಿಗೆ ಸಂಬಂಧಿಸಿದಂತೆ ಚಿಕಿತ್ಸೆ ಪಡೆಯುವವರ ಸಂಖ್ಯೆ ಶೂನ್ಯವಿದೆ.
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
You seem to have an Ad Blocker on.
To continue reading, please turn it off or whitelist Udayavani.