ಕೋವಿಡ್ ಅಕ್ರಮ: ಆಯೋಗದ ವ್ಯಾಪ್ತಿ ನಿಗದಿಪಡಿಸಿ ಸರಕಾರ ಆದೇಶ
Team Udayavani, Oct 9, 2023, 11:29 PM IST
ಬೆಂಗಳೂರು: ಕೋವಿಡ್ ಅಕ್ರಮಗಳ ಕುರಿತಂತೆ ನ್ಯಾ| ಮೈಕಲ್ ಡಿ. ಕುನ್ಹಾ ನೇತೃತ್ವದಲ್ಲಿ ರಚನೆಯಾಗಿರುವ ವಿಚಾರಣ ಆಯೋಗಕ್ಕೆ ತನಿಖೆಯ ವ್ಯಾಪ್ತಿಯನ್ನು ನಿಗದಿಪಡಿಸಿ ಸರಕಾರ ಅಧಿಸೂಚನೆ ಹೊರಡಿಸಿದೆ.
ಪ್ರಮುಖವಾಗಿ ಮೊದಲ ಲಾಕ್ಡೌನ್ ಆರಂಭವಾದ ದಿನದಿಂದ ಹಿಡಿದು 2022ರ ಡಿ.31ರ ವರೆಗಿನ ಆರೋಪಗಳು, ನಿಯಮ ಉಲ್ಲಂಘನೆ, ಲೋಪಗಳು ಹಾಗೂ ಇನ್ನಿತರ ಅಂಶಗಳನ್ನು ಒಳಗೊಂಡು ವಿಚಾರಣೆ ನಡೆಸಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಿದೆ.
ಕೋವಿಡ್ ನಿರ್ವಹಣೆ ವೇಳೆ ಅಕ್ರಮಗಳು ನಡೆದಿರುವ ಬಗ್ಗೆ ಹಾಗೂ ಸಾವುಗಳು ಸಂಭವಿಸಿರುವುದಕ್ಕೆ ಸಂಬಂಧಿಸಿ ಸಾರ್ವಜನಿಕ ಲೆಕ್ಕಪತ್ರ ಸಮಿತಿ ವರದಿ ನೀಡಿತ್ತು. ಇದನ್ನು ಆಧರಿಸಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲ ಸಂಸ್ಥೆಗಳಲ್ಲೂ ಔಷಧ, ಉಪಕರಣ ಖರೀದಿ, ಆಮ್ಲಜನಕ ಕೊರತೆ, ಆಮ್ಲಜನಕ ಕೊರತೆಯಿಂದ ಉಂಟಾದ ಸಾವು ಹಾಗೂ ಇತ್ಯಾದಿ ವಿಷಯಗಳ ಕುರಿತು ಸಮಗ್ರ ತನಿಖೆ ನಡೆಸಲು ನ್ಯಾ| ಮೈಕಲ್ ಡಿ. ಕುನ್ಹಾ ನೇತೃತ್ವದ ವಿಚಾರಣ ಆಯೋಗ ರಚಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka Police ಸುಳ್ಳು ಸುದ್ದಿ ತಡೆಗೆ ಎಐ ಬಳಸಿ: ಸಿಎಂ ಸಿದ್ದರಾಮಯ್ಯ ಸೂಚನೆ
MUDA Scam ತನಿಖೆ ಸಿಬಿಐಗೆ ವಹಿಸಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ
“140ಕ್ಕೂ ಹೆಚ್ಚು ಮುಡಾ ಕಡತ ಕದ್ದೊಯ್ದ ಅಧಿಕಾರಿಗಳು’ʼ: ಶಾಸಕ ಟಿ.ಎಸ್. ಶ್ರೀವತ್ಸ
Earthquake: ತಿಕೋಟಾ ಭಾಗದಲ್ಲಿ ಲಘು ಭೂಕಂಪ… ಮನೆಯಿಂದ ಹೊರ ಓಡಿಬಂದ ಜನ
Karnataka New Incharge: ಬಿಜೆಪಿ ನಾಯಕರಿಗೆ ಡಾ.ಅಗರ್ವಾಲ್ “ಇಂಜೆಕ್ಷನ್’
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.