ವಿಜಯಪುರ: ಕೋವಿಡ್ ನಿಗ್ರಹಕ್ಕಾಗಿ ಹಿಂಗಣಿ ಬ್ಯಾರೇಜ್ ನಿರ್ಬಂಧ : ಮುಳ್ಳುಕಂಟಿ ಮೀರಿ ಜನರ ಓಡಾಟ


Team Udayavani, Aug 3, 2021, 4:40 PM IST

hgjjghhjg

ವಿಜಯಪುರ: ಮಹಾರಾಷ್ಟ್ರ ರಾಜ್ಯದಲ್ಲಿ ಕೋವಿಡ್ ಸೋಂಕು ಹೆಚ್ಚಾಗಿರುವ ಕಾರಣ ವಿಜಯಪುರ ಜಿಲ್ಲಾಡಳಿತ ಕರ್ನಾಟಕದಿಂದ ಭೀಮಾ ನದಿಯ ಮೂಲಕ ಮಹಾರಾಷ್ಟ್ರ ಪ್ರವೇಶಿಸುವ ಹಿಂಗಣಿ ಬ್ಯಾರೇಜ್ ನಿರ್ಬಂಧಿಸಿದೆ. ಆದರೆ ಜನರು ಮಾತ್ರ ನಿರ್ಬಂಧ‌ ಮೀರಿ ಓಡಾಟ ನಡೆಸಿದ್ದಾರೆ.

ವಿಜಯಪುರ ಜಿಲ್ಲೆಯಲ್ಲಿ ಅಧಿಕಾರಿಗಳ ಸತತ ಪರಿಶ್ರಮದ ಫಲವಾಗಿ ಸದ್ಯ ಕೋವಿಡ್ ಸಂಪೂರ್ಣ ಹತೋಟಿಯಲ್ಲಿದೆ. ಆದರೆ ನೆರೆಯ ಮಹಾರಾಷ್ಟ್ರ ರಾಜ್ಯದಲ್ಲಿ ಕೋವಿಡ್, ಡೆಲ್ಟಾ ರೋಗದ ಹಾವಳಿ ಜೋರಾಗಿದೆ. ಮತ್ತೊಂದೆಡೆ ಸಂಭವನೀಯ ಕೋವಿಡ್ ಮೂರನೇ ಅಲೆಯ ಭೀತಿಯೂ ಎದುರಾಗಿದೆ.

ಈ ಹಿನ್ನೆಲೆಯಲ್ಲಿ ಜಿಲ್ಲೆಯ ಇಂಡಿ ತಾಲೂಕಿನ ಹಿಂಗಣಿ ಬ್ಯಾರೇಜ್ ಎರಡೂ ರಾಜ್ಯಗಳ ಸಂಚಾರದ ಪ್ರಮುಖ ರಸ್ತೆಗಳಲ್ಲಿ ಒಂದಾಗಿದೆ. ಹೀಗಾಗಿ ಈ ಮಾರ್ಗದ ಸಂಪರ್ಕ ಬಂದ್ ಮಾಡಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ವಿಜಯಪುರ ಜಿಲ್ಲಾಡಳಿತ ಮಹಾರಾಷ್ಟ್ರ ರಾಜ್ಯದ ಸೋಲಾಪುರ, ಕರ್ನಾಟಕದ ವಿಜಯಪುರ ಜಿಲ್ಲೆಯ ಮಧ್ಯೆ ಭೀಮಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಹಿಂಗಣಿ ಬ್ಯಾರೇಜ್ ಮಾರ್ಗದ ಸಂಚಾರವನ್ನು ಸಂಪೂರ್ಣ ಬಂದ್ ಮಾಡಿದೆ.

ಇದರ ಮುಂದುವರೆದ ಭಾಗವಾಗಿ ಪೋಲಿಸ್ ಭದ್ರತೆಯಲ್ಲಿ ಹಿಂಗಣಿ ಬ್ಯಾರೇಜ್ ಕರ್ನಾಟಕ ಪರಿಸರದಲ್ಲಿ ಜೆಸಿಬಿ ಬಳಸಿ ರಸ್ತೆಯನ್ನು ಆರೇಳು ಆಳಕ್ಕೆ ಗುಂಡಿ ತೋಡಿ ಕಂದಕ ನಿರ್ಮಿಸಿ, ಮುಳ್ಳು ತುಂಬಲಾಗಿದೆ. ಆದರೆ ವಿಜಯಪುರ ಜಿಲ್ಲಾಡಳಿತದ ಆಶಯ ಹಾಗೂ ನಿರ್ಬಂಧ ಮೀರಿ ಕರ್ನಾಟಕ, ಮಹಾರಾಷ್ಟ್ರ ರಾಜ್ಯಗಳ ಜನರು ಅಡ್ಡ ದಾರಿಯಲ್ಲಿ ನದಿಗೆ ಇಳಿದು, ನೇರವಾಗಿ ಸೇತುವೆ ಮೇಲೆ ದ್ವಿಚಕ್ರ ವಾಹನಗಳನ್ನೇ ಎತ್ತಿಟ್ಟು ಸಂಚಾರ ಆರಂಭಿಸಿದ್ದಾರೆ.

ಮತ್ತೂ ಕೆಲವರು ಕಂದಕಕ್ಕೆ ತುಂಬಿರುವ ಮುಳ್ಳು-ಕಂಟಿಗಳ ಮೇಲೆ ಕಲ್ಲುಗಳನ್ನು ಇರಿಸಿ, ವಾಹನಗಳ ಸಂಚಾರ ಆರಂಭಿಸಿದ್ದಾರೆ. ರಸ್ತೆ ನಿರ್ಬಂಧಕ್ಕಾಗಿ ರಸ್ತೆ ಅಗೆದು, ಮುಳ್ಳು ಹಾಕಿರುವ ತಮ್ಮ ಸಮ್ಮುಖದಲ್ಲೇ  ಜನರು ನಿರ್ಬಂಧ ಮೀರಿ ಅಡ್ಡ ದಾರಿಯಲ್ಲಿ ಓಡಾಡುವವರ ವಿರುದ್ದ ಪೊಲೀಸರು ಕ್ರಮ ಕೈಗೊಳ್ಳುವ ಬದಲು, ಜಾಣ ಕುರುಡುತನ ಪ್ರದರ್ಶನ ಮಾಡುತ್ತಿದ್ದಾರೆ. ಮೇಲಾಧಿಕಾರಿಗಳ ಆದೇಶ ಪಾಲನೆಯ ಪ್ರಕ್ರಿಯೆ ಮುಗಿಸಲು ರಸ್ತೆಗೆ ಕಂದಕ ತೋಡಿ, ಮುಳ್ಳುಹಾಕಿ  ಕರ್ತವ್ಯ ವಿಮುಖರಾಗಿದ್ದಾರೆ ಎಂದು ಸಾರ್ವಜನಿಕ ಆಕ್ರೋಶ ವ್ಯಕ್ತವಾಗಿದೆ.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.