ಮಳೆ ಅಬ್ಬರಕ್ಕೆ ಜಮೀನಲ್ಲೇ ಕೊಳೆಯುತ್ತಿರುವ ಬೆಳೆಗಳು!

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಬೆಳೆ ಹಾನಿ: ಇಳುವರಿ ಕುಸಿತ ಭೀತಿ

Team Udayavani, Oct 21, 2024, 7:00 AM IST

ಮಳೆ ಅಬ್ಬರಕ್ಕೆ ಜಮೀನಲ್ಲೇ ಕೊಳೆಯುತ್ತಿರುವ ಬೆಳೆಗಳು!

ಬೆಂಗಳೂರು/ಹುಬ್ಬಳ್ಳಿ/ಮಣಿಪಾಲ: ಉತ್ತರಕರ್ನಾಟಕ ಹಾಗೂ ಮಧ್ಯಕರ್ನಾಟಕ, ಮಲೆನಾಡು, ಹಳೇ ಮೈಸೂರು ಹಾಗೂ ಕರಾವಳಿ ಭಾಗದ ಬಹುತೇಕ ಜಿಲ್ಲೆಗಳಲ್ಲಿ ಕೆಲವು ದಿನಗಳಿಂದ ಸುರಿಯುತ್ತಿರುವ ಚಿತ್ರಾ ನಕ್ಷತ್ರದ ಮಳೆ ಕೃಷಿಕರಿಗೆ ಭಾರೀ ಆಘಾತ ನೀಡಿದೆ. ಕೃಷಿ ಭೂಮಿಯಲ್ಲೇ ಬೆಳೆ ಕೊಳೆಯುತ್ತಿದ್ದು, ಇಳುವರಿ ಕುಸಿತದ ಜತೆಗೆ ಭಾರೀ ನಷ್ಟದ ಭೀತಿ ಎದುರಾಗಿದೆ.

ವಾಡಿಕೆಗಿಂತ ಹೆಚ್ಚು ಮಳೆ ಸುರಿದಿದ್ದು, ಹಿಂಗಾರು ಬಿತ್ತನೆಗೆ ಅಡ್ಡಿಯಾಗಿರುವುದಲ್ಲದೆ ಕೃಷಿ ಹಾಗೂ ತೋಟಗಾರಿಕೆ ಬೆಳೆಗಳಿಗೂ ಹಾನಿ ಉಂಟುಮಾಡಿದೆ. ಭತ್ತ, ಮೆಕ್ಕೆಜೋಳ, ತೊಗರಿ, ಈರುಳ್ಳಿ, ಹತ್ತಿ, ಕಬ್ಬು, ಅಡಿಕೆ, ಶೇಂಗಾ, ಸೋಯಾಬೀನ್‌, ಮೆಣಸಿನಕಾಯಿ, ಸೂರ್ಯಕಾಂತಿ, ಅರಿಶಿನ, ಕಾಫಿ, ಕಾಳುಮೆಣಸು, ರಾಗಿ ಬೆಳೆಗಳ ಉತ್ತಮ ಇಳುವರಿ ನಿರೀಕ್ಷೆಯಲ್ಲಿದ್ದ ರೈತರಿಗೆ ಬೆಳೆ ಕೊಳೆಯುವ ಆತಂಕ ಉಂಟಾವಾಗಿದೆ. ಮಳೆ ಹೀಗೆ ಮುಂದುವರಿದರೆ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗುತ್ತದೆ.
ಉತ್ತರ ಕರ್ನಾಟಕ ಹಾಗೂ ಮಧ್ಯ ಕರ್ನಾಟಕ ಭಾಗಗಳಲ್ಲಿ ಕಟಾವಿಗೆ ಬಂದಿದ್ದ ಬೆಳೆ ನೀರು ಪಾಲಾಗಿದ್ದು, ರೈತರು ಆತಂಕದಲ್ಲಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ 407 ಹೆಕ್ಟೇರ್‌ ಪ್ರದೇಶದ ಮೆಕ್ಕೆಜೋಳ, ಜೋಳ, ಭತ್ತದ ಬೆಳೆಗಳು ಹಾನಿಗೀಡಾಗಾಗಿವೆ. ಧಾರವಾಡ ಜಿಲ್ಲೆಯಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಸುರಿದಿದ್ದು, ಹಿಂಗಾರು ಬಿತ್ತನೆಗೆ ಅಡ್ಡಿಯಾಗಿದೆ.

ಬಾಗಲಕೋಟೆ ಜಿಲ್ಲೆಯಲ್ಲಿ ಈರುಳ್ಳಿ ಬೆಳೆಗೆ ತೀವ್ರ ಹಾನಿಯಾಗಿದೆ. ಹಾವೇರಿ ಜಿಲ್ಲೆಯಲ್ಲಿ 1,338 ಹೆಕ್ಟೇರ್‌ ಕೃಷಿ ಬೆಳೆ ಹಾಗೂ 30.25 ಹೆಕ್ಟೇರ್‌ ತೋಟಗಾರಿಕೆ ಬೆಳೆ ಹಾನಿಯಾಗಿದ್ದು, ರೈತರ ಪಾಲಿಗೆ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ. ಕೊಪ್ಪಳ ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆ ಹಾಗೂ ನದಿ ನೀರಿನ ಹರಿವಿನಿಂದ 440 ಹೆಕ್ಟೇರ್‌ ಪ್ರದೇಶದಷ್ಟು ಬೆಳೆ ಹಾನಿಯಾಗಿದೆ.

ಗದಗ ಜಿಲ್ಲೆಯಲ್ಲಿ 3 ಸಾವಿರಕ್ಕೂ ಅಧಿಕ ಹೆಕ್ಟೇರ್‌ ಪ್ರದೇಶದಲ್ಲಿ ಕೃಷಿ ಹಾಗೂ ತೋಟಗಾರಿಕೆ ಬೆಳೆಗಳು ನಾಶವಾಗಿವೆ. ಬಳ್ಳಾರಿ ಜಿಲ್ಲೆಯಲ್ಲಿ ತೋಟಗಾರಿಕೆ ಹಾಗೂ ಕೃಷಿ ಬೆಳೆಗಳು ಹಾನಿಯಾಗಿವೆ. ದಾವಣಗೆರೆ ಜಿಲ್ಲೆಯಲ್ಲಿ ಕಟಾವು ಹಂತದಲ್ಲಿರುವ ಮೆಕ್ಕೆಜೋಳ ದೊಡ್ಡ ಪ್ರಮಾಣದಲ್ಲಿ ಹಾನಿಗೊಳಗಾಗಿದ್ದು, ಈ ಬಾರಿ ಶೇ. 20-30ರಷ್ಟು ಇಳುವರಿ ಕುಸಿತವಾಗುವ ಸಾಧ್ಯತೆಯಿದೆ.

ಶಿವಮೊಗ್ಗ ಜಿಲ್ಲೆಯ ಭತ್ತಕ್ಕೆ ಕೀಟಬಾಧೆ, ಅಡಕೆಗೆ ಕೊಳೆ ಬಾಧೆ, ಮೆಕ್ಕೆಜೋಳ ಕಟಾವಿಗೆ ತೊಂದರೆಯಾಗಿದೆ. ಮಳೆ ಆಶ್ರಿತ ಭತ್ತಕ್ಕೆ ಅತಿಯಾದ ಮಳೆ, ಅತಿಯಾದ ಬಿಸಿಲಿನಿಂದ ಕೀಟಬಾಧೆ ಹೆಚ್ಚಾಗಿದ್ದು, ರೈತರು ಎಷ್ಟೇ ಔಷಧ ಹೊಡೆದರೂ ಕಡಿಮೆಯಾಗುತ್ತಿಲ್ಲ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಅಡಿಕೆ, ಕಾಫಿ, ಕಾಳುಮೆಣಸು, ಭತ್ತದ ಇಳುವರಿ ಕಡಿಮೆಯಾಗುವ ಆತಂಕ ಎದುರಾಗಿದೆ.
ಚಿತ್ರದುರ್ಗ ಜಿಲ್ಲೆಯಲ್ಲಿ 90,385 ಹೆಕ್ಟೇರ್‌ನಲ್ಲಿ ಮೆಕ್ಕೆಜೋಳ ಬಿತ್ತನೆಯಾಗಿದ್ದು, ಇಳುವರಿ ಕುಸಿತವಾಗಿ ರೈತರಿಗೆ ನಷ್ಟದ ಸಾಧ್ಯತೆ ಹೆಚ್ಚಾಗಿದೆ. ಮೆಕ್ಕೆಜೋಳ, ಹತ್ತಿ, ಶೇಂಗಾ, ಸೂರ್ಯಕಾಂತಿ, ಈರುಳ್ಳಿ, ರಾಗಿ ಪ್ರಮುಖ ಬೆಳೆಗಳಾಗಿದ್ದು, ಕಟಾವಿಗೆ ಬಂದಿರುವ ಮೆಕ್ಕೆಜೋಳ ಪದೇಪದೆ ಒದ್ದೆಯಾಗಿ, ತೆನೆಯಲ್ಲೇ ಮೊಳಕೆಯಾಗುವ ಆತಂಕ ಕಾಡುತ್ತಿದೆ. ಕಲಬುರಗಿ ಜಿಲ್ಲೆಯಲ್ಲಿ ವಾಣಿಜ್ಯ ಬೆಳೆ ತೊಗರಿಗೆ ಕಂಟಕ ತಂದೊಡ್ಡಿದೆ.

ರಾಯಚೂರು ಜಿಲ್ಲೆಯಲ್ಲಿ ಬೆಳೆದ ಈರುಳ್ಳಿ ಕೊಳೆತು ಹೋಗಿದೆ. ಹಾಸನ ಜಿಲ್ಲೆಯಲ್ಲಿ ಕಾಫಿ ಬೆಳೆ ಹಾಗೂ ಮೆಕ್ಕೆಜೋಳದ ಬೆಳೆಗೆ ಹಾನಿಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 61.948 ಹೆಕ್ಟೆರ್‌ ಭತ್ತ ಕೃಷಿಗೆ ಮತ್ತು 24.612 ಹೆಕ್ಟೇರ್‌ ತೋಟಗಾರಿಕೆ ಬೆಳೆಗಳಿಗೆ ಹಾನಿ ಉಂಟಾಗಿದೆ.

ತುಮಕೂರು ಜಿಲ್ಲೆಯಲ್ಲಿ ರಾಗಿ ಹಾಗೂ ಹತ್ತಿ ಬೆಳೆಗೆ ಹಾನಿಯಾಗಿದೆ ಜತೆಗೆ ಶೇಂಗಾ ಬೆಳೆಗೆ ತೀವ್ರ ಮಳೆಯಿಂದ ತೊಂದರೆ ಉಂಟಾಗುತ್ತಿದೆ. ಕೋಲಾರ ಜಿಲ್ಲೆಯ ಕೃಷಿ ಹಾಗೂ ತೋಟಗಾರಿಕೆ ಬೆಳೆಗಳು ಸಂಪೂರ್ಣವಾಗಿ ನೆಲಕಚ್ಚುವಂಥ ವಾತಾವರಣ ನಿರ್ಮಾಣವಾಗಿದೆ. ಚಾಮರಾಜನಗರ ಜಿಲ್ಲೆಯಲ್ಲಿ ಅರಿಶಿನ, ತರಕಾರಿಗಳು, ಹೂವಿನ ಬೆಳೆಗಳಿಗೆ ತೊಂದರೆಯಾಗಿದೆ.

ಯಾವೆಲ್ಲ ಬೆಳೆ ಹಾನಿ?
ಭತ್ತ, ಮೆಕ್ಕೆಜೋಳ, ತೊಗರಿ, ಈರುಳ್ಳಿ, ಹತ್ತಿ, ಕಬ್ಬು, ಅಡಿಕೆ, ಶೇಂಗಾ, ಸೋಯಾಬೀನ್‌, ಮೆಣಸಿನಕಾಯಿ, ಸೂರ್ಯಕಾಂತಿ, ಅರಿಶಿಣ, ಕಾಫಿ, ಕಾಳುಮೆಣಸು, ರಾಗಿ

ಉತ್ತರ ಕರ್ನಾಟಕದಲ್ಲಿ
ಭಾರೀ ನಷ್ಟ ಸಾಧ್ಯತೆ
ಉತ್ತರ ಕರ್ನಾಟಕ ಹಾಗೂ ಮಧ್ಯ ಕರ್ನಾಟಕ ಭಾಗಗಳಲ್ಲಿ ಕಟಾವಿಗೆ ಬಂದಿದ್ದ ಬೆಳೆಗಳು ನೀರು ಪಾಲಾಗಿದ್ದು, ರೈತರು ಆತಂಕದಲ್ಲಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ 407 ಹೆಕ್ಟೇರ್‌ ಪ್ರದೇಶದ ಮೆಕ್ಕೆಜೋಳ, ಜೋಳ, ಭತ್ತದ ಬೆಳೆಗಳು ಹಾನಿಗೀಡಾಗಿವೆ. ಧಾರವಾಡ ಜಿಲ್ಲೆಯಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಸುರಿದಿದ್ದು, ಹಿಂಗಾರು ಬಿತ್ತನೆಗೆ ಅಡ್ಡಿಯಾಗಿದೆ.

ಟಾಪ್ ನ್ಯೂಸ್

ಕ್ಷುಲ್ಲಕ ವಿಚಾರಕ್ಕೆ ಮೂವರು ಮಕ್ಕಳಿಗೆ ವಿಷ ಉಣಿಸಿ ತಾನು ಆತ್ಮಹತ್ಯೆಗೆ ಯತ್ನಿಸಿದ ತಾಯಿ

ಕ್ಷುಲ್ಲಕ ವಿಚಾರಕ್ಕೆ ಮೂವರು ಮಕ್ಕಳಿಗೆ ವಿಷ ಉಣಿಸಿ ತಾನು ಆತ್ಮಹತ್ಯೆಗೆ ಯತ್ನಿಸಿದ ತಾಯಿ

012

Jayarama Acharya: ತೆಂಕುತಿಟ್ಟಿನ ಪ್ರಸಿದ್ಧ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ನಿಧನ

Paduvari-Someshwara-beach

Tourism: ರಾಜ್ಯದ 7 ಐತಿಹಾಸಿಕ ತಾಣಗಳ ಅಭಿವೃದ್ಧಿಗೆ ಮುನ್ನುಡಿ

Heavy Rain: ಅನ್ನದಾತರಿಗೆ ಚಿತ್ರಾ ಮಳೆ ತಂದ ಚಿಂತೆ! ಹಿಂಗಾರು ಬಿತ್ತನೆಗೂ ಅಡ್ಡಿ

Heavy Rain: ಅನ್ನದಾತರಿಗೆ ಚಿತ್ರಾ ಮಳೆ ತಂದ ಚಿಂತೆ! ಹಿಂಗಾರು ಬಿತ್ತನೆಗೂ ಅಡ್ಡಿ

Salmana

Baba Siddiqui Case: ಸಲ್ಮಾನ್‌ ಹತ್ಯೆಗೆ ಸಂಚು ಆರೋಪಿಗೆ ಪೊಲೀಸರಿಂದ ಹನಿಟ್ರ್ಯಾಪ್‌ ಬಲೆ!

MVA-Agadi

Maharashtra: ಸೀಟು ಹಂಚಿಕೆ ಬಿಕ್ಕಟ್ಟು; ಶರದ್‌ ನೆರವು ಕೋರಿದ ಕಾಂಗ್ರೆಸ್‌, ಉದ್ಧವ್‌ ಪಕ್ಷ

Isreal-Meet

leaked letter: ಇರಾನ್‌ ಮೇಲೆ ದಾಳಿಗೆ ಇಸ್ರೇಲ್‌ ಸಿದ್ಧವಾಗಿತ್ತು: ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕ್ಷುಲ್ಲಕ ವಿಚಾರಕ್ಕೆ ಮೂವರು ಮಕ್ಕಳಿಗೆ ವಿಷ ಉಣಿಸಿ ತಾನು ಆತ್ಮಹತ್ಯೆಗೆ ಯತ್ನಿಸಿದ ತಾಯಿ

ಕ್ಷುಲ್ಲಕ ವಿಚಾರಕ್ಕೆ ಮೂವರು ಮಕ್ಕಳಿಗೆ ವಿಷ ಉಣಿಸಿ ತಾನು ಆತ್ಮಹತ್ಯೆಗೆ ಯತ್ನಿಸಿದ ತಾಯಿ

Paduvari-Someshwara-beach

Tourism: ರಾಜ್ಯದ 7 ಐತಿಹಾಸಿಕ ತಾಣಗಳ ಅಭಿವೃದ್ಧಿಗೆ ಮುನ್ನುಡಿ

Server Problem: ಸಿಗದ ಅನ್ನಭಾಗ್ಯ! ವಿಳಂಬದ ಜತೆಗೆ ಮಂದಗತಿಯಲ್ಲಿದೆ ಪಡಿತರ ವಿತರಣೆ

Server Problem: ಸಿಗದ ಅನ್ನಭಾಗ್ಯ! ವಿಳಂಬದ ಜತೆಗೆ ಮಂದಗತಿಯಲ್ಲಿದೆ ಪಡಿತರ ವಿತರಣೆ

C P YOgeshwar

C. P. Yogeshwara; ತೆನೆ ಕೊಡುಗೆ ಒಪ್ಪದ ಸೈನಿಕ: ಚನ್ನಪಟ್ಟಣ ಕಗ್ಗಂಟು

siddanna-2

Code of Conduct ಅಡ್ಡಿ: ಜಾತಿಗಣತಿ, ಒಳಮೀಸಲಾತಿಗೆ ಸದ್ಯಕ್ಕೆ ತಡೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

ಕ್ಷುಲ್ಲಕ ವಿಚಾರಕ್ಕೆ ಮೂವರು ಮಕ್ಕಳಿಗೆ ವಿಷ ಉಣಿಸಿ ತಾನು ಆತ್ಮಹತ್ಯೆಗೆ ಯತ್ನಿಸಿದ ತಾಯಿ

ಕ್ಷುಲ್ಲಕ ವಿಚಾರಕ್ಕೆ ಮೂವರು ಮಕ್ಕಳಿಗೆ ವಿಷ ಉಣಿಸಿ ತಾನು ಆತ್ಮಹತ್ಯೆಗೆ ಯತ್ನಿಸಿದ ತಾಯಿ

012

Jayarama Acharya: ತೆಂಕುತಿಟ್ಟಿನ ಪ್ರಸಿದ್ಧ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ನಿಧನ

Paduvari-Someshwara-beach

Tourism: ರಾಜ್ಯದ 7 ಐತಿಹಾಸಿಕ ತಾಣಗಳ ಅಭಿವೃದ್ಧಿಗೆ ಮುನ್ನುಡಿ

Heavy Rain: ಅನ್ನದಾತರಿಗೆ ಚಿತ್ರಾ ಮಳೆ ತಂದ ಚಿಂತೆ! ಹಿಂಗಾರು ಬಿತ್ತನೆಗೂ ಅಡ್ಡಿ

Heavy Rain: ಅನ್ನದಾತರಿಗೆ ಚಿತ್ರಾ ಮಳೆ ತಂದ ಚಿಂತೆ! ಹಿಂಗಾರು ಬಿತ್ತನೆಗೂ ಅಡ್ಡಿ

Salmana

Baba Siddiqui Case: ಸಲ್ಮಾನ್‌ ಹತ್ಯೆಗೆ ಸಂಚು ಆರೋಪಿಗೆ ಪೊಲೀಸರಿಂದ ಹನಿಟ್ರ್ಯಾಪ್‌ ಬಲೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.