ಅಂದು ಜನೋತ್ಸವ ಪ್ರಶ್ನಿಸಿದವರು, ಇಂದು ಸೂತಕದ ಮನೆಯಲ್ಲಿ ಸಂಭ್ರಮ ಮಾಡುತ್ತಿದ್ದಾರೆ: ಸಿಟಿ ರವಿ


Team Udayavani, Aug 3, 2022, 6:04 PM IST

tdy-15

ಚಿಕ್ಕಮಗಳೂರು: ದೇವರು ಸಿದ್ದರಾಮಯ್ಯನವರಿಗೆ ಆಯಸ್ಸು-ಆರೋಗ್ಯ ಕೊಟ್ಟು ಕಾಪಾಡಲಿ. ಎರಡ್ಮೂರು ದಿನದ ಮಳೆಗೆ 13 ಜನ ಮಳೆಗೆ ಮೃತಪಟ್ಟಿದ್ದಾರೆ.  ಸೂತಕದ ಮನೆಯಲ್ಲಿ ಸಂಭ್ರಮ ಎಷ್ಟು ಸರಿ.  ಕಾಂಗ್ರೆಸ್ ಸಂವೇದನಾಶೀಲತೆ ಕಳೆದುಕೊಳ್ಳುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಹೇಳಿದರು.

ನಗರದಲ್ಲಿ ಮಾತಾನಾಡಿದ ಅವರು, ಸಿದ್ದರಾಮಯ್ಯ ಅವರ ಕಾರ್ಯಕ್ರಮಕ್ಕೆ ರಾಷ್ಟ್ರೀಯ ನಾಯಕರೆಲ್ಲಾ ಬಂದಿದ್ದಾರೆ.  ಸಂಕಷ್ಟದಲ್ಲಿದ್ದಾಗ ಹಾಡಿ-ಹೊಗಳುವುದು ಮಾನವೀಯತೆ ಇರುವವರಿಗೆ ಶೋಭೆ ತರುವುದಲ್ಲ.  ಬಿಜೆಪಿ ಸರ್ಕಾರವೂ 3 ವರ್ಷದ ತುಂಬಿದ್ದಕ್ಕೆ ಜನೋತ್ಸವ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಕಾರ್ಯಕರ್ತ ಪ್ರವೀಣ್ ಸಾವನ್ನಪ್ಪಿದ್ದಕ್ಕೆ ಎಲ್ಲರೂ ಒಮ್ಮತದ ನಿರ್ಧಾರ ಮಾಡಿ ರದ್ದು ಮಾಡಿದ್ವಿ. ಅಂದು ನಮಗೆ ಪ್ರಶ್ನಿಸಿದರು, ಇಂದು ಸೂತಕದ ಮನೆಯಲ್ಲಿ ಸಂಭ್ರಮ ಅಂತ ಕೆಲವರಿಗಾದರೂ ಅನ್ನಿಸಬೇಕಿತ್ತು ಎಂದು ವಾಗ್ದಾಳಿ ನಡೆಸಿದರು.

ಒಗ್ಗಟ್ಟು ಎಷ್ಟು ದಿನ ಇರುತ್ತದೆ ಎನ್ನುವುದು ಪ್ರಶ್ನಾರ್ಥಕ ಸಂಗತಿ. ಇವತ್ತು ಕೈಹಿಡಿದು ಒಗ್ಗಟ್ಟು ತೋರಿಸಿದರು. ಇದೇ ಜನ ಪರಮೇಶ್ವರ್ ರನ್ನು ಸೋಲಿಸಿದರು.  ಒಗ್ಗಟ್ಟು ಎಷ್ಟು ದಿನ ಇರುತ್ತೆ ಅನ್ನೋದನ್ನು ನೋಡೋಣ ಎಂದರು.

ಇದನ್ನೂ ಓದಿ: ಕಾಂಗ್ರೆಸ್ ಇಂದಿರಾ ಕಾಲದಲ್ಲಿದ್ದಂತೆ ಇನ್ನು ಅಧಿಕಾರದಲ್ಲಿ ಇರಲ್ಲ:ಶಾಸಕ ಕುಲ್ ದೀಪ್ ರಾಜೀನಾಮೆ

ರಾಮಮಂದಿರ ಕಟ್ಟುವಾಗ ಶಾಲೆ ಕಟ್ಟಿ ಎಂದು ಹೇಳುತ್ತಿದ್ದರು.  ಗುಡ್ಡ ಕುಸಿದು, ಅತಿವೃಷ್ಟಿಯಿಂದ ಹತ್ತಾರು ಜನ ಪ್ರಾಣ ಕಳೆದುಕೊಂಡಿದ್ದಾರೆ. ಕಾರ್ಯಕ್ರಮಕ್ಕಾಗಿ ಹತ್ರತ್ರ 100 ಕೋಟಿ ಖರ್ಚು ಮಾಡಿದ್ದಾರೆ. ಇದರಲ್ಲಿ ಜನರಿಗೆ ಬದುಕು ಕಟ್ಟಿಕೊಡಬಹುದಿತ್ತು. ಯಾರಿಗೂ ವಿವೇಚನೆಯೇ ಇಲ್ಲದಿರುವುದು ಆ ಪಕ್ಷದ ಅವನತಿಗೆ ಸಾಕ್ಷಿಯಾಗಿದೆ ಎಂದರು.

ಪಿ.ಎಫ್.ಐ. ಎಸ್.ಡಿ.ಪಿ.ಐನ ಬಿಜೆಪಿ ಬೆಳೆಸಿದರೆ, ನೀವ್ಯಾಕೆ 2500 ಜನರ ಕೇಸ್ ಹಿಂಪಡೆದ್ರಿ . ನಿಮಗೂ ಪಿ.ಎಫ್.ಐಗೂ ಇರುವ ನೆಂಟಸ್ಥನ ಏನು, ಕೇಸ್ ಏಕೆ ವಾಪಸ್ ಪಡೆದ್ದೀರಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯರಿಗೆ ಸಿ.ಟಿ.ರವಿ ಪ್ರಶ್ನಿಸಿದರು.

ಪಿ.ಎಫ್.ಐ. ಕೇಸ್ ಹಿಂಪಡೆಯಿರಿ ಎಂದು ನಾವೇನು ನಿಮಗೆ ಅರ್ಜಿ ಕೊಟ್ಟಿರಲಿಲ್ಲ.ಬಜರಂಗದಳ, ರೈತಸಂಘ, ಕನ್ನಡಪರ ಸಂಘಟನೆಗಳ ಮೇಲಿನ ಕೇಸ್ ಹಿಂಪಡೆಯಿರಿ ಎಂದು ಅರ್ಜಿ ಹಾಕಿದ್ದು. ಪಿ.ಎಫ್.ಐ. ಕ್ರಿಮಿನಲ್ ಎಂದು ಸಿಎಂ ಆದ ನಿಮಗೆ ಗೊತ್ತಿರಲಿಲ್ಲವಾ…? ಹೇಳಿ, ನಿಮ್ಮ ಹಾಗೂ ಪಿ.ಎಫ್.ಐ ಹಾಗೂ ಎಸ್.ಡಿ.ಪಿ.ಐ ಎನ್ ನೆಂಟಸ್ತನ ಅಂತ ಜಗತ್ತಿಗೆ ಗೊತ್ತಾಗುತ್ತದೆ ಎಂದು ಗುಡುಗಿದರು.

ಪಿ.ಎಫ್.ಐ. ಟಾರ್ಗೆಟ್ ಮಾಡುತ್ತಾ ಇರುವುದು ಬಜರಂಗದಳ, ಆರ್.ಎಸ್.ಎಸ್. ರಾಷ್ಟ್ರೀಯವಾದಿ ಸಂಘಟನೆಗಳನ್ನು. ಇಬ್ಬರ ಉದ್ದೇಶ ಆರ್.ಎಸ್.ಎಸ್. ಟಾರ್ಗೆಟ್ ಮಾಡುವುದು, ನೆಂಟಸ್ತನ ಇದ್ರೆ ನಿಮ್ಮಿಬ್ಬರಿಗೆ ಇರುವುದು. ರಾಜ್ಯದಲ್ಲಿ ಕೋಮು ಗಲಭೆ ಹೆಚ್ಚಾಗಿದ್ರೆ, ವೈಚಾರಿಕ ಕಾರಣಕ್ಕೆ ಹತ್ಯೆಯಾಗಿದ್ರೆ ಸಿದ್ದರಾಮಯ್ಯ ಸರ್ಕಾರ ಕಾರಣ ಎಂದು ವಾಗ್ದಾಳಿ ನಡೆಸಿದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.