ಕರಾವಳಿ ರೈತರಿಗೆ ಸಾಗುವಳಿ ಚೀಟಿ: ಅಶೋಕ್ ಕುಮಾರ್ ರೈ ಆಗ್ರಹ
Team Udayavani, Feb 19, 2024, 11:02 PM IST
ಬೆಂಗಳೂರು: ಸರಕಾರಿ ಜಾಗದ ಪಕ್ಕದ ಕುಮ್ಕಿ ಜಮೀನಿನಲ್ಲಿ ಸಾಗುವಳಿ ಮಾಡುತ್ತಿರುವವರಿಗೆ ಅಕ್ರಮ-ಸಕ್ರಮ ಅನ್ವಯಿಸಿ, ಸಾಗುವಳಿ ಚೀಟಿ ನೀಡಬೇಕೆಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಆಗ್ರಹಿಸಿದರು.
ಗಮನ ಸೆಳೆಯುವ ಸೂಚನೆ ವೇಳೆ ವಿಷಯ ಪ್ರಸ್ತಾವಿಸಿದ ಅವರು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಬಹಳ ರೈತರು ಈ ರೀತಿ ಸಾಗುವಳಿ ಮಾಡುತ್ತಿದ್ದು, ಕುಮ್ಕಿ ಜಮೀನಿನ ವಿಚಾರವು ಸುಪ್ರೀಂ ಕೋರ್ಟ್ನಲ್ಲಿದೆ. ಇದನ್ನೇ ನೆಪ ಮಾಡಿಕೊಂಡು ಅಕ್ರಮ-ಸಕ್ರಮ ಕಡತಗಳು ಬಾಕಿ ಉಳಿಯುತ್ತಿವೆ. ಪಹಣಿಯಲ್ಲಿ ಸರಕಾರಿ ಜಾಗ ಎಂದು ಇರುತ್ತದೆಯೇ ಹೊರತು ಕುಮ್ಕಿ ಎಂದು ಇರುವುದಿಲ್ಲ. ಇಂತಹ ಜಾಗಗಳಿಗೆ ಸಾಗುವಳಿ ಚೀಟಿ ಕೊಡಬೇಕು ಎಂದು ಆಗ್ರಹಿಸಿದರು. ಇದಕ್ಕೆ ಬಿಜೆಪಿಯ ಶಿವರಾಂ ಹೆಬ್ಬಾರ್ ಕೂಡ ಧ್ವನಿಗೂಡಿಸಿದರು.
ಈ ಬಗ್ಗೆ ಪರಿಶೀಲನೆ ನಡೆಸುವುದಾಗಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.