Drought: ಬರ ಘೋಷಣೆಗೆ ಹಾಲಿ ನಿಯಮವೇ ಗತಿ


Team Udayavani, Aug 18, 2023, 6:08 AM IST

DROUGHT 2

ಬೆಂಗಳೂರು: ಬರ ಘೋಷಣೆಗೆ ಈಗಿರುವ ಎನ್‌ಡಿಆರ್‌ಎಫ್ ಮಾನದಂಡಗಳು ರಾಜ್ಯ ಸರಕಾರದ ಕೈಗಳನ್ನು ಕಟ್ಟಿ ಹಾಕಿದ್ದು, ಬರ ನಿರ್ವಹಣೆ ಕೈಪಿಡಿಯ ಮಾರ್ಗಸೂಚಿಗಳನ್ನು ಬದಲಿಸಲು ಕೇಂದ್ರವನ್ನು ಕೋರಿದ್ದರೂ ತತ್‌ಕ್ಷಣಕ್ಕೆ ಅದು ಸಾಧ್ಯವಿಲ್ಲ.

ಇಡೀ ದೇಶಕ್ಕೆ ಅನ್ವಯ ಆಗುವ ರೀತಿಯಲ್ಲಿ ಜಾರಿಯಲ್ಲಿರುವ ಮಾರ್ಗಸೂಚಿಯನ್ನು ಕರ್ನಾಟಕಕ್ಕೆ ಸೀಮಿತವಾಗಿ ಬದಲಿಸಲು ನಿಯಮಗಳಲ್ಲಿ ಅವಕಾಶಗಳಿಲ್ಲ. ಹಾಗೊಂದು ವೇಳೆ ಪರಿಷ್ಕರಿಸಿದರೂ ಪ್ರಸಕ್ತ ಮುಂಗಾರು ಹಂಗಾಮಿನಿಂದಲೇ ಪರಿಷ್ಕೃತ ಮಾರ್ಗಸೂಚಿ ಜಾರಿಯಾಗುವುದೂ ಇಲ್ಲ. ಹೀಗಾಗಿ ಈಗಿರುವ ಮಾನದಂಡಗಳನ್ನು ಅನುಸರಿಸಿಯೇ ತೀರ್ಮಾನ ಕೈಗೊಳ್ಳುವ ಅನಿವಾರ್ಯ ಎದುರಾಗಿದೆ.

2009ರ ನವೆಂಬರ್‌ನಲ್ಲಿ ಬರ ನಿರ್ವಹಣ ಕೈಪಿಡಿ ಸಿದ್ಧವಾಗಿತ್ತು. 2016ರಲ್ಲಿ ಪರಿಷ್ಕೃತ ಮಾರ್ಗಸೂಚಿ ಪ್ರಕಟಿಸಲಾಗಿತ್ತು. ಅದಾದ ಅನಂತರ ಮಾನದಂಡಗಳ ಪರಿಷ್ಕರಣೆ ಆಗಿಲ್ಲ. ರಾಷ್ಟ್ರೀಯ ವಿಪತ್ತು ನಿರ್ವಹಣೆಯ ಕ್ರಿಯಾಯೋಜನೆಯಲ್ಲಿ ಬದಲಾವಣೆಗಳನ್ನು ಮಾಡಬಹುದೇ ವಿನಾ ಬರ ನಿರ್ವಹಣ ಕೈಪಿಡಿಯ ಮಾರ್ಗಸೂಚಿಗಳನ್ನು ಪರಿಷ್ಕರಿಸಲು ಅದರದ್ದೇ ಆದ ಮಾನದಂಡಗಳಿವೆ.

ಎನ್‌ಡಿಆರ್‌ಎಫ್ ನೆರವು
ಪ್ರಸ್ತುತ ಪರಿಸ್ಥಿತಿಯಲ್ಲಿ ಕರ್ನಾಟಕದಲ್ಲಿ ಮಾತ್ರವಲ್ಲದೆ ಮಹಾರಾಷ್ಟ್ರ, ಆಂಧ್ರಪ್ರದೇಶ, ಕೇರಳದಲ್ಲೂ ಮಳೆ ಕೈಕೊಟ್ಟಿದೆ. ಮುಂಗಾರು ಅವಧಿ ಮುಗಿಯುವ ವೇಳೆಗೆ ಬರಪೀಡಿತ ರಾಜ್ಯಗಳ ಸಂಖ್ಯೆ ಇನ್ನಷ್ಟು ಏರಲಿದೆ. ಕೇಂದ್ರ ಸರಕಾರವು ತನ್ನ ಖಜಾನೆಯಲ್ಲಿರುವ ಸಂಪನ್ಮೂಲವನ್ನು ಒಂದೇ ರಾಜ್ಯಕ್ಕೆ ಹಂಚಿಕೆ ಮಾಡಲು ಸಾಧ್ಯವಿಲ್ಲ. ಎನ್‌ಡಿಆರ್‌ಎಫ್ ಮೂಲಕ ತನ್ನ ಪಾಲಿನ ಪರಿಹಾರ ಕೂಡ ನೀಡಬೇಕಾಗುತ್ತದೆ. ಇದನ್ನೆಲ್ಲ ಗಮನದಲ್ಲಿ ಇರಿಸಿಕೊಂಡು ಇಡೀ ದೇಶಕ್ಕೆ ಅನ್ವಯ ಆಗುವ ರೀತಿಯಲ್ಲಿ ಮಾನದಂಡಗಳನ್ನು ನಿಗದಿಪಡಿಸುತ್ತದೆ. ಹವಾಮಾನ ಆಧಾರಿತ ಕೃಷಿ ವಲಯ ಅಥವಾ ಒಂದೊಂದು ರಾಜ್ಯಕ್ಕೆ ಒಂದೊಂದು ರೀತಿಯ ಮಾನದಂಡ ಮಾಡಲು ಸಾಧ್ಯವಿಲ್ಲ. ಬರಪೀಡಿತ ಪ್ರದೇಶಗಳನ್ನಾಗಲೀ, ನೆರೆಪೀಡಿತ ಪ್ರದೇಶಗಳನ್ನಾಗಲೀ ರಾಜ್ಯ ಸರಕಾರ ಘೋಷಣೆ ಮಾಡುವುದಾದರೂ ಕೇಂದ್ರ ಸರಕಾರದ ಮಾರ್ಗಸೂಚಿ ಅನುಸರಿಸಿಯೇ ಮಾಡಬೇಕು. ಅದನ್ನು ಮೀರಿ ಘೋಷಿಸಲು ನಿಯಮಗಳು ಒಪ್ಪುವುದಿಲ್ಲ.

ಉಳಿದ ರಾಜ್ಯಗಳೂ ಬರ ನಿರ್ವಹಣ ಕೈಪಿಡಿಯ ಮಾನದಂಡಗಳ ಪರಿಷ್ಕರಣೆಗೆ ಒತ್ತಡ ಹಾಕಬೇಕು. ರಾಷ್ಟ್ರೀಯ ವಿಪತ್ತು ನಿರ್ವಹಣ ಸಂಸ್ಥೆಯಿಂದ ಅಧ್ಯಯನ ನಡೆಸಿ ಶಿಫಾರಸುಗೊಳ್ಳಬೇಕು. ಅದನ್ನು ಕೇಂದ್ರದ ಕೃಷಿ ಮತ್ತು ರೈತರ ಕಲ್ಯಾಣ ಹಾಗೂ ಸಹಕಾರ ಇಲಾಖೆಗಳು ಪರಿಶೀಲಿಸಿ ಸಂಪುಟ ಉಪಸಮಿತಿ ಮುಂದಿಟ್ಟು ಚರ್ಚಿಸಬೇಕು. ಬಳಿಕ ಸಚಿವ ಸಂಪುಟ ಸಭೆಯಲ್ಲಿ ಸಮಾಲೋಚನೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳಬೇಕಾಗುತ್ತದೆ. ಈ ಪ್ರಕ್ರಿಯೆಗಳಿಗೆ ಸಮಯಾವಕಾಶ ಬೇಕಾಗುತ್ತದೆ. ಹೀಗಾಗಿ ಮಾನದಂಡ ಬದಲಿಸಲು ತತ್‌ಕ್ಷಣಕ್ಕಂತೂ ಸಾಧ್ಯವಿಲ್ಲ ಎನ್ನುವುದು ತಜ್ಞರ ಅಭಿಪ್ರಾಯ.

ಅಕ್ಟೋಬರ್‌ ಆರಂಭದವರೆಗೂ ಮುಂಗಾರು ಅವಧಿ ಇರಲಿದೆ. ವಿಪತ್ತು ನಿರ್ವಹಣೆಗೆ ಸಂಬಂಧಿಸಿ ಕಾಲಕಾಲಕ್ಕೆ ಕೇಂದ್ರ ಹಾಗೂ ರಾಜ್ಯ ಸರಕಾರಗಳಿಗೆ ಮಾಹಿತಿ ರವಾನಿಸಲಾಗುತ್ತಿದೆ. ಹವಾಮಾನ ವೀಕ್ಷಣ ಸಮಿತಿಗಳು ನಿಗಾ ಇಟ್ಟಿವೆ. ರಾಜ್ಯ ಕಾರ್ಯಕಾರಿ ಸಮಿತಿಯೂ ಸಭೆ ನಡೆಸಿ ಪರಿಸ್ಥಿತಿಯನ್ನು ಅವಲೋಕಿಸುತ್ತಿದೆ.
– ರಶ್ಮಿ ಮಹೇಶ್‌, ಕಂದಾಯ ಇಲಾಖೆ (ವಿಪತ್ತು ನಿರ್ವಹಣೆ) ಪ್ರಧಾನ ಕಾರ್ಯದರ್ಶಿ

ರಾಜ್ಯದಲ್ಲಿ ಮಳೆ ಕೊರತೆ ಆಗಿದ್ದರೂ ಎನ್‌ಡಿಆರ್‌ಎಫ್ ಮಾನದಂಡಗಳ ಪ್ರಕಾರವೇ ಬರಪೀಡಿತ ಪ್ರದೇಶಗಳನ್ನು ಘೋಷಿಸಬೇಕಾಗುತ್ತದೆ. ಮುಂಗಾರು ಅವಧಿಯ ವಾಡಿಕೆ ಮಳೆ, ಸರಾಸರಿ ಮಳೆ ಹಾಗೂ ಕೊರತೆ, ಅಂತರ್ಜಲ ಮಟ್ಟ, ಒಣಹವೆ, ತೇವಾಂಶ, ಬೆಳೆನಷ್ಟ ಎಲ್ಲವನ್ನೂ ಪರಿಗಣನೆಗೆ ತೆಗೆದುಕೊಳ್ಳಬೇಕಾಗುತ್ತದೆ. ಎಲ್ಲದರ ಪ್ರಕ್ರಿಯೆ ನಡೆಯುತ್ತಿದ್ದು, ತಿಂಗಳಾಂತ್ಯಕ್ಕೆ ರಾಜ್ಯ ಸರಕಾರವು ಬರಪೀಡಿತ ಪ್ರದೇಶಗಳ ಘೋಷಣೆ ಮಾಡಬಹುದು.
– ಶ್ರೀನಿವಾಸ ರೆಡ್ಡಿ, ಕೆಎಸ್‌ಎನ್‌ಡಿಎಂಸಿ ಹಿರಿಯ ಸಲಹೆಗಾರ

ಶೇಷಾದ್ರಿ ಸಾಮಗ

ಟಾಪ್ ನ್ಯೂಸ್

Vijayendra (2)

BJP; ಬೇಗುದಿಗೆ ವರಿಷ್ಠರ ಸೂತ್ರ : ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆ ಇಲ್ಲ

Thavar chand gehlot

Karnataka Govt; ರಾಜ್ಯಪಾಲ ಅರ್ಕಾವತಿ ಬಾಣ :ಕಾಳಗ ಈಗ ಮತ್ತೊಂದು ಸುತ್ತಿಗೆ!

MDNL

Kasaragodu: ಎಂಡಿಎಂಎ ಬೆಂಗಳೂರಿನಿಂದ ಪೂರೈಕೆ: ಎಸ್‌ಪಿ ಶಿಲ್ಪಾ

1-qwewqwqe

World Book of Records; ಪ್ರಜಾಪ್ರಭುತ್ವ ಮಾನವ ಸರಪಳಿಗೆ ವಿಶ್ವದಾಖಲೆ ಗರಿ

20

J. B. Shruti Sagar: ಏಕಾಗ್ರತೆಗೆ ಭಂಗ ತರುವ ಏನನ್ನೂ  ಬಳಸಿದರೂ ಸಾಧನೆಗೆ ತೊಡಕೇ

BSYadiyurappa

Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್‌ ಪ್ರಕರಣ: ಲೋಕಾಯುಕ್ತದಿಂದ ಬಿಎಸ್‌ವೈ ವಿಚಾರಣೆ

CM-Mysore

Press Day: ಸುಳ್ಳು ಸುದ್ದಿಯಿಂದ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayendra (2)

BJP; ಬೇಗುದಿಗೆ ವರಿಷ್ಠರ ಸೂತ್ರ : ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆ ಇಲ್ಲ

Thavar chand gehlot

Karnataka Govt; ರಾಜ್ಯಪಾಲ ಅರ್ಕಾವತಿ ಬಾಣ :ಕಾಳಗ ಈಗ ಮತ್ತೊಂದು ಸುತ್ತಿಗೆ!

1-qwewqwqe

World Book of Records; ಪ್ರಜಾಪ್ರಭುತ್ವ ಮಾನವ ಸರಪಳಿಗೆ ವಿಶ್ವದಾಖಲೆ ಗರಿ

BSYadiyurappa

Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್‌ ಪ್ರಕರಣ: ಲೋಕಾಯುಕ್ತದಿಂದ ಬಿಎಸ್‌ವೈ ವಿಚಾರಣೆ

CM-Mysore

Press Day: ಸುಳ್ಳು ಸುದ್ದಿಯಿಂದ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Aranthodu: ವಿದ್ಯಾರ್ಥಿಯ ಮರ್ಮಾಂಗ ಹಿಡಿದೆಳೆದು ಹಲ್ಲೆ

Aranthodu: ವಿದ್ಯಾರ್ಥಿಯ ಮರ್ಮಾಂಗ ಹಿಡಿದೆಳೆದು ಹಲ್ಲೆ

Iceland: 8 ವರ್ಷ ಬಳಿಕ ಐಸ್‌ಲ್ಯಾಂಡ್‌ಗೆ ಹಿಮಕರಡಿ ಭೇಟಿ; ಗುಂಡಿಕ್ಕಿ ಹತ್ಯೆ

Iceland: 8 ವರ್ಷ ಬಳಿಕ ಐಸ್‌ಲ್ಯಾಂಡ್‌ಗೆ ಹಿಮಕರಡಿ ಭೇಟಿ; ಗುಂಡಿಕ್ಕಿ ಹತ್ಯೆ

IPL 2025: ಡೆಲ್ಲಿ ತಂಡದಲ್ಲೇ ಉಳಿಯಲಿದ್ದಾರೆ ಪಂತ್‌

IPL 2025: ಡೆಲ್ಲಿ ತಂಡದಲ್ಲೇ ಉಳಿಯಲಿದ್ದಾರೆ ಪಂತ್‌

Vijayendra (2)

BJP; ಬೇಗುದಿಗೆ ವರಿಷ್ಠರ ಸೂತ್ರ : ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆ ಇಲ್ಲ

Thavar chand gehlot

Karnataka Govt; ರಾಜ್ಯಪಾಲ ಅರ್ಕಾವತಿ ಬಾಣ :ಕಾಳಗ ಈಗ ಮತ್ತೊಂದು ಸುತ್ತಿಗೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.