ಮೇ 14ರ ವರೆಗೆ ರಾಜ್ಯಕ್ಕೆ ಅಸಾನಿ ಮಳೆ; ಹಗುರದಿಂದ ಸಾಮಾನ್ಯ ವರ್ಷಧಾರೆ
Team Udayavani, May 10, 2022, 2:00 AM IST
ಬೆಂಗಳೂರು: ಬಂಗಾಲ ಕೊಲ್ಲಿಯಲ್ಲಿ ಉದ್ಭವಿಸಿರುವ ಅಸಾನಿ ಚಂಡ ಮಾರುತದಿಂದಾಗಿ ರಾಜ್ಯದಲ್ಲಿ ಮುಂದಿನ
ನಾಲ್ಕು ದಿನ, ಮೇ 14ರ ವರೆಗೆ ಮಳೆ ಯಾಗುವ ಸಾಧ್ಯತೆಗಳಿವೆ ಎಂದು ಹವಾ ಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆದರೆ ನೆರೆಯ ರಾಜ್ಯಗಳಂತೆ ಭಾರೀ ಮಳೆಯಾಗದು ಎಂದು ಇಲಾಖೆ ತಿಳಿಸಿದೆ.
ಒಂದು ವಾರದಿಂದ ರಾಜ್ಯದ ಕರಾವಳಿ, ದಕ್ಷಿಣ ಮತ್ತು ಉತ್ತರ ಒಳನಾಡು ಪ್ರದೇಶದಲ್ಲಿ ಮಳೆಯಾಗುತ್ತಿದೆ. ಇದು ಮುಂದಿನ ನಾಲ್ಕು ದಿನ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಒಳನಾಡು ಜಿಲ್ಲೆಗಳಲ್ಲಿ ಬಿಸಿಲು, ಚಂಡಮಾರುತದ ಪರಿಣಾಮ ದಿಂದ ಮಳೆಯಾದರೆ ದಕ್ಷಿಣ ಒಳನಾಡು, ಕರಾವಳಿ ಮತ್ತು ಪಶ್ಚಿಮಘಟ್ಟ ಪ್ರದೇಶದಲ್ಲಿ ಚಂಡಮಾರುತದ ಪ್ರಭಾವ ಇರಲಿದೆ. ಈ ಪ್ರದೇಶಗಳಲ್ಲಿ ಹೆಚ್ಚಿನ ಮಳೆಯಾಗಲಿದೆ.
ರಾಜ್ಯದಲ್ಲಿ ಮೇ 14ರ ವರೆಗೆ ಗುಡುಗು ಸಹಿತ ಗಾಳಿ-ಮಳೆಯಾಗುವ ಸಾಧ್ಯತೆ ಗಳಿವೆ ಎಂದು ಹವಾಮಾನ ಇಲಾಖೆಯ ಬೆಂಗಳೂರು ಕೇಂದ್ರದ ವಿಜ್ಞಾನಿ ಎ. ಪ್ರಸಾದ್ ತಿಳಿಸಿದ್ದಾರೆ.
ದೊಡ್ಡ ಮಟ್ಟದ ಪರಿಣಾಮವಿಲ್ಲ
ರಾಜ್ಯಕ್ಕೆ ಚಂಡಮಾರುತದ ಪರಿಣಾಮ ದೊಡ್ಡ ಮಟ್ಟದಲ್ಲಿ ಇರುವುದಿಲ್ಲ. ಆದರೆ ಸಾಧಾರಣ ಮಳೆಯಾಗಲಿದೆ. ಮೋಡ ಕವಿದ ವಾತಾವರಣ ಇರಲಿದೆ, ಗರಿಷ್ಠ 5 ಸೆಂ.ಮೀ.ವರೆಗೆ ಮಳೆಯಾಗಬಹುದು ಎಂದು ತಿಳಿಸಿದ್ದಾರೆ.
ಮುಂಗಾರು ಆಗಮನಕ್ಕೆ ಪೂರಕ
ಬೇಸಗೆಯ ಕೊನೆಯ ಅವಧಿಯಲ್ಲಿ ಬಂಗಾಲಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದರೆ ಅದರಿಂದ ಮುಂಗಾರು ಮಾರುತಗಳ ಆಗಮನಕ್ಕೆ ಪೂರಕ ವಾತಾವರಣ ನಿರ್ಮಾಣವಾಗುತ್ತದೆ. ಈಗ ವಾಯುಭಾರ ಕುಸಿತವಾಗಿ ಅಸಾನಿ ಚಂಡಮಾರುತ ಉದ್ಭವಿಸಿರುವುದರಿಂದ ಮುಂಗಾರು ಮಳೆ ತರುವ ಮೋಡಗಳು ಆಗಮಿಸಲು ಉತ್ತಮ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Kuloor: ಮೊಯ್ದೀನ್ ಬಾವಾ ಸೋದರ ಮಮ್ತಾಜ್ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ
Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?
Martin: ಇಂದು ಧ್ರುವ ಸರ್ಜಾ ಬರ್ತ್ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್ ಇವೆಂಟ್
New Guideline For Trekkers: ಇಂದಿನಿಂದ ಕುಮಾರ ಪರ್ವತ ಚಾರಣಕ್ಕೆ ಅವಕಾಶ
Tender Open: ತುರ್ತು ಸೇವೆಗೆ ಬರಲಿದೆ ಮೂರು ಸೀ ಆ್ಯಂಬುಲೆನ್ಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.