ಈ ಬಾರಿ ಅದ್ಧೂರಿ ದಸರಾ ಆಚರಣೆಗೆ ನಿರ್ಧಾರ; ಮೈಸೂರು ದಸರಾ ಬ್ರ್ಯಾಂಡ್ ಸೃಜನೆ; ಸಿಎಂ ಬೊಮ್ಮಾಯಿ


Team Udayavani, Jul 19, 2022, 7:31 PM IST

ಈ ಬಾರಿ ಅದ್ಧೂರಿ ದಸರಾ ಆಚರಣೆಗೆ ನಿರ್ಧಾರ; ಮೈಸೂರು ದಸರಾ ಬ್ರ್ಯಾಂಡ್ ಸೃಜನೆ; ಸಿಎಂ ಬೊಮ್ಮಾಯಿ

ಬೆಂಗಳೂರು: ಮೈಸೂರು ದಸರಾ ಕುರಿತು ಬ್ರ್ಯಾಂಡ್ ಸೃಜಿಸಿ ಅಂತರ ರಾಷ್ಟ್ರೀಯ ಮಟ್ಟದಲ್ಲಿ ಪ್ರಚಾರ ಮಾಡಲು ನಿರ್ಧರಿಸಲಾಗಿದೆ  ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಅವರ ಅಧ್ಯಕ್ಷತೆಯಲ್ಲಿ ನಡೆದ ನಾಡಹಬ್ಬ ಮೈಸೂರು ದಸರಾ ಮಹೋತ್ಸವ- 2022 ರ ಉನ್ನತ ಮಟ್ಟದ ಸಮಿತಿ ಸಭೆಯ ನಂತರ ಅವರು ಪತ್ರಿಕಾಗೋಷ್ಠಿ ನಡೆಸಿದರು.

ಪ್ರಚಾರ:

ಸರ್ಕಾರದ ಎಲ್ಲಾ ಜಾಹೀರಾತು, ಪ್ರಕಟಣೆಗಳು, ವೆಬ್ ಸೈಟ್, ಸಾಮಾಜಿಕ ಮಾಧ್ಯಮಗಳಲ್ಲಿ  ಮೈಸೂರು ದಸರಾ ಲಾಂಛನವನ್ನು ಪ್ರಕಟಿಸಬೇಕು.  ಮುಂಬೈ, ದೆಹಲಿ ಹಾಗೂ ಚನ್ನೈ ವಿಮಾನನಿಲ್ದಾಣಗಳಲ್ಲಿ  ಹಾಗೂ ಇತರೆ ಸಾವಾಜನಿಕ ಸ್ಥಳಗಳಲ್ಲಿ ಮೈಸುರು ದಸರಾ ಕುರಿತು ಪ್ರಚಾರ ಮಾಡಬೇಕೆಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಿಗೆ ಸೂಚಿಸಲಾಗಿದೆ ಎಂದರು.

ಒಂದು ವಾರದೊಳಗೆ ಮೈಸೂರು ಟೂರಿಸಂ ಸರ್ಕಿಟ್ ಕುರಿತ ಆದೇಶ:  ಒಂದು ವಾರದೊಳಗೆ ಮೈಸೂರು ಟೂರಿಸಂ ಸರ್ಕಿಟ್ ಬಗ್ಗೆ ಸರ್ಕಾರಿ ಆದೇಶ ಹೊರಡಿಸಲಾಗುವುದು. ಪ್ರವಾಸೋದ್ಯಮ ಇಲಾಖೆ ಹಾಗೂ ಖಾಸಗಿ ವಲಯದ ಸಹಯೋಗದೊಂದಿಗೆ ಕಾರ್ಯಕ್ರಮ ರೂಪಿಸಲಾಗುವುದು.  ಸರ್ಕಿಟ್ ನಲ್ಲಿ ಬೇಲೂರು, ಹಳೇಬೀಡು ಮುಂತಾದ ಪ್ರದೇಶಗಳಿಗೆ ಪ್ರವಾಸದ ಯೋಜನೆ, ಪ್ರಯಾಣ ಹಾಗೂ ವಸತಿ ಎಲ್ಲವೂ ಒಂದೇ ಟಿಕೆಟ್‍ನಲ್ಲಿ ಸಾಧ್ಯವಾಗಲಿದೆ.  ಇದಕ್ಕೆ ವೆಬ್‍ಸೈಟ್ ಕೂಡ ಅಭಿವೃದ್ಧಿಪಡಿಸಲಾಗುತ್ತಿದೆ. ಮೈಸೂರು ದಸರಾಕ್ಕೆ ಇದು ಪೂರಕವಾಗಲಿದೆ ಎಂದರು.

ಇದನ್ನೂ ಓದಿ: ವಿಷಪೂರಿತ ನಾಗರಹಾವಿಗೆ ಚಿಕಿತ್ಸೆ ನೀಡಿ ಗಮನ ಸೆಳೆದ ಪಶುವೈದ್ಯ ಇಲಾಖೆಯ ಸಹಾಯಕ ನಿರ್ದೇಶಕ

ಪಾರಂಪರಿಕ ಪದ್ದತಿಗಳ ಪುನರಾರಂಭ:  ನಾಡಹಬ್ಬಕ್ಕೆ ಸಂಬಂಧಿಸಿದಂತೆ ಹಿಂದೆ ಅನುಸರಿಸುತ್ತಿದ್ದ ಗಜಪಯಣ ಸೇರಿದಂತೆ ಪಾರಂಪರಿಕ ಪದ್ದತಿಗಳನ್ನು ಪುನ: ಪ್ರಾರಂಭಿಸಲಾಗುವುದು ಎಂದರು. ಇದರಿಂದ ಸ್ಥಳೀಯ ಹಾಗೂ ಗ್ರಾಮೀಣ ಭಾಗದ ಜನರು ತೊಡಗಿಕೊಂಡಂತಾಗುತ್ತದೆ ಎಂದು ತಿಳಿಸಿದರು.

ವಸ್ತುಪ್ರದರ್ಶನ: ದಸರಾ ಹಬ್ಬಕ್ಕೆ 15 ದಿನಗಳ ಮುನ್ನವೇ ವಸ್ತು ಪ್ರದರ್ಶನ ಉದ್ಘಾಟಿಸಲು ಸೂಚಿಸಲಾಗಿದೆ ಎಂದರು.

ಶ್ರೀರಂಗಪಟ್ಟಣ ಹಾಗೂ ಚಾಮರಾಜನಗರ ದಸರಾಕ್ಕೆ ತಲಾ 1.00 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲು ತೀರ್ಮಾನಿಸಿದೆ.

ಅನುದಾನ: ಅರಮನೆ ಆಡಳಿತ ಮಂಡಳಿಯು ಅರಮನೆ ವ್ಯಾಪಿಯೊಳಗಿನ ವೆಚ್ಚವನ್ನು ಭರಿಸಲಿದೆ. ಮೂಡಾ ವತಿಯಿಂದ 10 ಕೋಟಿ ರೂ.ಗಳನ್ನು ಒದಗಿಸಲಾಗುತ್ತಿದೆ. ಈ ಬಾರಿ ಕಾರ್ಪೋರೇಟ್ ಸಾಮಾಜಿಕ ಹೊಣೆಗಾರಿಕೆಯಡಿಯಲ್ಲಿ ಅನುದಾನ ಬಳಕೆ ಮಾಡುವ  ಬಗ್ಗೆ  ತೀರ್ಮಾನಿಸಲಾಗಿದೆ. ಉಳಿದ ಮೊತ್ತವನ್ನು ಸರ್ಕಾರ ಭರಿಸಲಿದೆ ಎಂದರು.

ಸ್ಥಳೀಯ ಮತ್ತು ರಾಷ್ಟ್ರಮಟ್ಟದ ಕಲಾವಿದರಿಗೆ ಪ್ರೋತ್ಸಾಹ: ಸ್ಥಳೀಯ ಕಲಾವಿದರಿಗೆ  ಅವಕಾಶ ನೀಡುವುದರ ಜೊತೆ ಪ್ರತಿನಿತ್ಯ ಒಬ್ಬ ರಾಷ್ಟ್ರಮಟ್ಟದಲ್ಲಿ ಖ್ಯಾತಿಯಳ್ಳ ಕಲಾವಿದರಿಂದ  ಕಾರ್ಯಕ್ರಮ ಆಯೋಜಿಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.

ಅದ್ಧೂರಿ ದಸರಾ:

ಎರಡು ವರ್ಷಗಳಿಂದ ಸಾಂಪ್ರದಾಯಿಕ ಸರಳ ದಸರಾ ಆಚರಿಸಲಾಗಿದೆ. ಈ ಬಾರಿ ವಿಜೃಂಭಣೆಯಿಂದ ದಸರಾ ಆಚರಿಸಬೇಕೆಂಬ ಎಲ್ಲರ ಅಭಿಪ್ರಾಯವನ್ನು  ಸರ್ಕಾರ ಮನ್ನಿಸಿದೆ. ಸೆಪ್ಟೆಂಬರ್ 26, 2022 ರಂದು ನವರಾತ್ರಿ   ನವರಾತ್ರಿ ದಸರಾ ಪ್ರಾರಂಭ. ಅಕ್ಟೋಬರ್  5 ವಿಜಯದಶಮಿಯಂದು ನಂದಿಧ್ವಜ ಪೂಜೆ, ಪುಷ್ಪಾರ್ಚನೆ, ಏಳು ಮತ್ತು ಎಂಟರಂದು ವೀರಹೊಸಹಳ್ಳಯಿಂದ ಗಜಪಯಣ ಪ್ರಾರಂಭ, ಗಜಪಡೆಯ ನಿರ್ಗಮನದ  ಬಗ್ಗೆ ತೀರ್ಮಾನಿಸಲಾಗಿದೆ ಎಂದರು.

ಟಾಪ್ ನ್ಯೂಸ್

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

Devegowda

Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್‌.ಡಿ.ದೇವೇಗೌಡ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.