DK Sivakumar: ಪ್ರಜ್ವಲ್ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ
Team Udayavani, May 3, 2024, 6:30 AM IST
ಕಲಬುರಗಿ: ಪ್ರಧಾನಿ ಮೋದಿ ಇತ್ತೀಚೆಗೆ ಪ್ರಜ್ವಲ್ ರೇವಣ್ಣ ಕೈ ಹಿಡಿದು ಅವರ ಪರ ಮತಯಾಸಿದ್ದಕ್ಕೆ ನಾವು ಪೆನ್ಡ್ರೈವ್ ವಿಚಾರದಲ್ಲಿ ಪಿಎಂಗೆ ಪ್ರಶ್ನೆ ಮಾಡುತ್ತಿದ್ದೇವೆ. ಪೆನ್ಡ್ರೈವ್ ವಿಚಾರದಲ್ಲಿ ಪ್ರಧಾನಿಯನ್ನು ಏಕೆ ಎಳೆದು ತರುತ್ತೀರಿ ಎನ್ನುವ ಕುಮಾರಸ್ವಾಮಿ ಇದನ್ನು ಅರಿತುಕೊಳ್ಳಲಿ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್. ಅಶೋಕ್ ಸಂವಿಧಾನದ ಹುದ್ದೆಯಲ್ಲಿದ್ದವರು. ಬೇರೆ ವಿಚಾರಗಳಲ್ಲಿ ವಾಗ್ಧಾಳಿ ಮಾಡುತ್ತಿದ್ದವರು ಈ ಪ್ರಕರಣದಲ್ಲಿ ಏಕೆ ಮಾತನಾಡುತ್ತಿಲ್ಲ. ಏಕೆ ಬಂಧಿಸಲಿಲ್ಲವೆಂದರೆ ಹೇಗೆ? ಮೊದಲು ತಮ್ಮ ಪಕ್ಷದ ಅಧ್ಯಕ್ಷರಾದ ವಿಜಯೇಂದ್ರ, ಶೋಭಕ್ಕ, ಸಿ.ಟಿ.ರವಿ, ಸುನೀಲ್ ಕುಮಾರ್ ಸೇರಿದಂತೆ ಪ್ರಮುಖ ನಾಯಕರನ್ನು ಕರೆದುಕೊಂಡು ಹೋಗಿ ಸಂತ್ರಸ್ತರಿಗೆ ಧೈರ್ಯ ತುಂಬುವ ಕೆಲಸ ಮಾಡಲಿ. ಮಹಿಳೆಯರ ಬಗ್ಗೆ ಗೌರವ ಇದೆ ಎನ್ನುವ ಕುಮಾರಸ್ವಾಮಿ ಹಾಗೂ ದೇವೇಗೌಡರು ಕೂಡ ಸಂತ್ರಸ್ತರ ಮನೆಗೆ ಹೋಗಿ ಧೈರ್ಯ ತುಂಬಲಿ. ಆರ್.ಅಶೋಕ್, ಪ್ರಜ್ವಲ್ ನಮ್ಮ ಬೆಂಬಲದಲ್ಲಿ ಗೆದ್ದ ಸಂಸದ ಎಂದಿದ್ದಾರೆ. ಹೌದು, ಅವರು ನಮ್ಮ ಬೆಂಬಲದಲ್ಲಿ ಗೆದ್ದ ಸಂಸದ. ಹೀಗಾಗಿ ನಾವು ಪ್ರಶ್ನೆ ಮಾಡುತ್ತಿದ್ದೇವೆ. ಈಗ ನಿಮ್ಮ ಬೆಂಬಲದೊಂದಿಗೆ ಅಭ್ಯರ್ಥಿಯಾಗಿದ್ದಾರಲ್ಲ, ನೀವೇಕೆ ಮೌನವಾಗಿದ್ದೀರಿ ಎಂದರು.
ಕಾರ್ತಿಕ್ನನ್ನು ವಿದೇಶಕ್ಕೆ ಕಳುಹಿಸಲು ನನಗೇನು ತಲೆ ಕೆಟ್ಟಿದೆಯಾ?: ಡಿಕೆಶಿ
ಕಲಬುರಗಿ: ಕಾರ್ತಿಕ್ ಅವರನ್ನು ಮಲೇಷ್ಯಾದಲ್ಲಿ ಇಟ್ಟವರು ಯಾರು ಎಂಬುದನ್ನು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಕೇಂದ್ರ ಸರ್ಕಾರಕ್ಕೆ ಕೇಳಿ ಮಾಹಿತಿ ಪಡೆಯಲಿ. ಅವರನ್ನು ವಿದೇಶಕ್ಕೆ ಕಳುಹಿಸಲು ನನಗೆ ತಲೆ ಕೆಟ್ಟಿದೆಯಾ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ನೇರವಾಗಿ ಹೋರಾಟ ಮಾಡುತ್ತೇನೆ. ಯಾರನ್ನೋ ತೋಟದಲ್ಲಿ ಬಚ್ಚಿಟ್ಟು ರಾಜಕಾರಣ ಮಾಡುವ ಅಗತ್ಯ ನನಗಿಲ್ಲ. ಅವರಿಗೆ ಆ ಅವಶ್ಯಕತೆ ಇದೆ. ಬಿಜೆಪಿ ನಾಯಕರಿಗೆ ಪೆನ್ಡ್ರೈವ್ ನೀಡಿರುವುದಾಗಿ ಆ ಹುಡುಗ ಹೇಳಿದ್ದಾನೆ. ಪೆನ್ಡ್ರೈವ್ ಯಾರು ಬಿಟ್ಟಿದ್ದಾರೆ ಎಂಬುದನ್ನು ಮುಂದೆ ಚರ್ಚೆ ಮಾಡೋಣ. ಈಗ ವಿಚಾರ ವಿಷಯಾಂತರ ಮಾಡುವುದು ಬೇಡ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸವಿದೆ ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ
ನನ್ನಂತ ದಲಿತರಿಗೆ ಒಳ್ಳೆಯದಾಗದಿದ್ದರೆ ಮುಂದೆ ಯಾವ ದಲಿತರಿಗೂ ಒಳ್ಳೆದಾಗಲ್ಲ: ಜಿಗಜಿಣಗಿ ಭಾವುಕ
ಅ*ತ್ಯಾಚಾರ ಪ್ರಕರಣ:ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ-14 ದಿನ ನ್ಯಾಯಾಂಗ ಬಂಧನ
ಕೇಂದ್ರದಿಂದ ರಾಜ್ಯ ಸರ್ಕಾರದ ಅಸ್ಥಿರ ಪ್ರಯತ್ನ ಎಂಬುದು ಕಾಂಗ್ರೆಸ್ ನ ಭ್ರಮೆ: ಸಂಸದ ಜಿಗಜಿಣಗಿ
Raichur: ಜಾತಿಗಣತಿ ತಕ್ಷಣಕ್ಕೆ ಜಾರಿಯಿಲ್ಲ, ಬರೀ ಚರ್ಚೆಯಷ್ಟೇ: ಸಿಎಂ ಸಿದ್ದರಾಮಯ್ಯ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
IFFI: ನವೆಂಬರ್ 20ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ
Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್ ಹಾದಿ ಹೀಗಿದೆ
Bengaluru: ಕೆಎಸ್ಆರ್ಟಿಸಿಯಿಂದ ದಸರಾಗೆ 2000 ಹೆಚ್ಚುವರಿ ಬಸ್ ಸಂಚಾರ
Women’s T20 World Cup: ಮತ್ತೆ ವಿವಾದಕ್ಕೆ ಸಿಲುಕಿದ ಕಾಮೆಂಟೇಟರ್ ಸಂಜಯ್ ಮಾಂಜ್ರೇಕರ್
Bengaluru: ಆನ್ಲೈನ್ನಲ್ಲೇ ಆಸ್ತಿ ಇ-ಖಾತಾ ಪಡೆಯಿರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.