ನಿಗಮ-ಮಂಡಳಿ ಅಧ್ಯಕ್ಷರಿಗೆ ಡಿಸಿಎಂ ಶಿವಕುಮಾರ್ ಕ್ಲಾಸ್
ವಾಲ್ಮೀಕಿ ನಿಗಮದ ಅವಾಂತರ ಪುನರಾವರ್ತನೆ ಆಗದಂತೆ ಎಚ್ಚರಿಕೆ ;ಅಧಿಕಾರಿಗಳು ಮಾಡಿದ ಎಡವಟ್ಟಿಗೆ ಬೆಲೆ ತೆರಬೇಕಾಗಿದೆ
Team Udayavani, Jun 15, 2024, 6:50 AM IST
ಬೆಂಗಳೂರು: ನಿಗಮ-ಮಂಡಳಿಗಳಲ್ಲಿ ಕಣ್ತಪ್ಪಿನಿಂದಾಗುವ ಅವಾಂತರಗಳಿಂದ ನೀವೂ ಕಳೆದು ಹೋಗುವುದಲ್ಲದೆ, ಪಕ್ಷಕ್ಕೂ ಮುಜುಗರ ಉಂಟಾಗುತ್ತದೆ. ಆದ್ದರಿಂದ ಹಣ ವರ್ಗಾವಣೆ ಸಹಿತ ಯಾವುದೇ ವಿಚಾರಗಳಲ್ಲಿ ಸಾಧ್ಯವಾದಷ್ಟು ಎಚ್ಚರಿಕೆಯಿಂದ ಇರಬೇಕು. ಮುಂದೆ ಯಾವುದೇ ಗೊಂದಲಗಳು ಅಥವಾ ಅವಾಂತರಗಳು ಆಗದಂತೆ ನೋಡಿಕೊಳ್ಳಬೇಕು…
ಇದು ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರದಿಂದ ಮಾಜಿ ಸಚಿವ ನಾಗೇಂದ್ರ ಅವರ ತಲೆದಂಡದ ಬೆನ್ನಲ್ಲೇ ಉಳಿದ ನಿಗಮ-ಮಂಡಳಿಗಳ ಅಧ್ಯಕ್ಷರಿಗೆ ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೀಡಿದ ಎಚ್ಚರಿಕೆ.
ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ನಿಗಮ-ಮಂಡಳಿಗಳ ಅಧ್ಯಕ್ಷರೊಂದಿಗೆ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಎಚ್ಚರಿಕೆ ನೀಡಲಾಯಿತು.
ಭೋವಿ ಅಭಿವೃದ್ಧಿ ನಿಗಮ, ವಾಲ್ಮೀಕಿ ಅಭಿವೃದ್ಧಿ ನಿಗಮದ ಪ್ರಕರಣಗಳಲ್ಲಿ ರಾಜಕೀಯವಾದ ಪ್ರಮಾದಗಳಾವುದೂ ಇರಲಿಲ್ಲ. ಅಧಿಕಾರಿಗಳು ಮಾಡಿದ ಎಡವಟ್ಟಿಗೆ ಬೆಲೆ ತೆರಬೇಕಾಯಿತು. ಸಾಧ್ಯವಾದಷ್ಟು ಎಚ್ಚರಿಕೆಯಿಂದ, ಅದರಲ್ಲೂ ಹಣ ವರ್ಗಾವಣೆಯಂತಹ ವಿಚಾರಗಳಲ್ಲಿ ಮೈಯೆಲ್ಲ ಕಣ್ಣಾಗಿರಬೇಕು. ಸ್ವಲ್ಪ ಯಾಮಾರಿದರೂ ಕಳೆದು ಹೋಗುತ್ತೀರಿ ಎಂದರು.
ಕಾರ್ಯಕರ್ತರಿಗೆ ಮತ್ತು ಸಾರ್ವಜನಿಕರಿಗೆ ಅನುಕೂಲ ಆಗುವ ರೀತಿಯಲ್ಲಿ ಕೆಲಸ ಮಾಡಬೇಕು. ಆಯಾ ನಿಗಮ- ಮಂಡಳಿಗಳಲ್ಲಿ ಸರಕಾ ಲಭ್ಯವಿರುವ ಅವಕಾಶಗಳ ಬಗ್ಗೆ ಒಂದು ಕರಪತ್ರ ಅಥವಾ ಕಿರುಹೊತ್ತಿಗೆ ಮೂಲಕ ಎಲ್ಲ ಜಿಲ್ಲೆ ಮತ್ತು ಬ್ಲಾಕ್ ಮಟ್ಟದಲ್ಲಿ ತಿಳಿವಳಿಕೆ ಮೂಡಿಸಬೇಕು. ತಾವು ಪ್ರವಾಸ ಮಾಡುವಾಗ ಜಿಲ್ಲಾ/ ತಾಲ್ಲೂಕು ಕಾಂಗ್ರೆಸ್ ಸಮಿತಿಗೆ ಭೇಟಿ ನೀಡಿ, ಸ್ಥಳೀಯ ನಾಯಕರು ಹಾಗೂ ಕಾರ್ಯಕರ್ತರನ್ನು ಭೇಟಿ ಮಾಡಬೇಕು. ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ತಮ್ಮ ನಿಗಮ-ಮಂಡಳಿಯ ಸಾಧನೆಗಳ ಜತೆಗೆ ಸೌಲಭ್ಯಗಳ ಬಗ್ಗೆ ಸುದ್ದಿಗೋಷ್ಠಿಗಳ ಮೂಲಕ ಜನರಿಗೆ ತಲುಪಿಸಬೇಕು ಎಂದು ಸೂಚಿಸಿರುವುದಾಗಿ ಪಕ್ಷದ ಮೂಲಗಳು ತಿಳಿಸಿವೆ.
ನಿಗಮ ಮಂಡಳಿ ಅಧ್ಯಕ್ಷರು ಸಭೆಯಲ್ಲಿ ಜನರ ಭಾವನೆ ಅರ್ಥ ಮಾಡಿಕೊಂಡು ಕೆಲಸ ಮಾಡಬೇಕು. ಜನರ ಬಳಿ ವರ್ತನೆ ಹೇಗಿರಬೇಕು, ಕೆಲಸಗಳನ್ನು ಹೇಗೆ ಮುನ್ನಡೆಸಿ ಕೊಂಡು ಹೋಗಬೇಕು ಎಂದು ಸಲಹೆ ನೀಡ ಲಾಯಿತು. ಕೆಲವೊಂದಿಷ್ಟು ಜನ ಟ್ರ್ಯಾಪ್ ಮಾಡಲು ಪ್ರಯತ್ನಿಸುತ್ತಿರುತ್ತಾರೆ. ಬಹಳ ಬುದ್ಧಿವಂತಿಕೆಯಿಂದ ಕೆಲಸ ಮಾಡಬೇಕು ಎಂದು ಸಲಹೆ ನೀಡಲಾಗಿದೆ.
– ಡಿ.ಕೆ. ಶಿವಕುಮಾರ್, ಅಧ್ಯಕ್ಷರು, ಕೆಪಿಸಿಸಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್ ಕೊಟ್ಟ ಸ್ನೇಹಮಯಿ ಕೃಷ್ಣ!
Documents ಬಿಡುಗಡೆಯಾದರೆ 6-7 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ: ಎಚ್ ಡಿಕೆ
Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ
BJP: ಹೈಕಮಾಂಡ್ ಅನುಮತಿಸಿದರೆ ಬಸವಕಲ್ಯಾಣದಿಂದ ಬೆಂಗಳೂರಿಗೆ ಪಾದಯಾತ್ರೆ: ಶಾಸಕ ಯತ್ನಾಳ
Gurudath Kamath: ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ನಿಧನ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್ ಕೊಟ್ಟ ಸ್ನೇಹಮಯಿ ಕೃಷ್ಣ!
Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ
Food street ನಲ್ಲಿ ಅರೆಬಟ್ಟೆಯಲ್ಲಿ ಸುತ್ತಾಡಿದ ಯುವತಿ ವಿರುದ್ಧ ಪ್ರಕರಣ ದಾಖಲು!
BBK11: ಬಿಗ್ ಬಾಸ್ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು
Sullia: ಅಂಗಡಿ, ಹೊಟೇಲ್ನಿಂದ ನಗದು ಕಳವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.