![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Jun 2, 2019, 3:00 AM IST
ಬೆಂಗಳೂರು: ಮಾಜಿ ಸಚಿವೆ ಉಮಾಶ್ರೀ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದ ಪ್ರಕರಣ ಸಂಬಂಧ ಶಾಸಕ ಹರತಾಳು ಹಾಲಪ್ಪ ಅವರು ಶನಿವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರಾಗಿ, ತಮ್ಮ ಹೇಳಿಕೆ ದಾಖಲಿಸಿದರು.
ಶಾಸಕ ಹಾಲಪ್ಪ ಅವರು ಉಮಾಶ್ರೀ ವಿರುದ್ಧ ಮಾನನಷ್ಟ ಮೊಕದ್ದಮೆ ಪ್ರಕರಣ ದಾಖಲಿಸಿದ್ದ ಸಂಬಂಧ ಶನಿವಾರ ವಿಚಾರಣೆಗೆ ಹಾಜರಾಗಿ ನ್ಯಾಯಾಧೀಶರ ಎದುರು ತಮ್ಮ ಹೇಳಿಕೆ ದಾಖಲಿಸಿದರು. ನಂತರ ವಿಚಾರಣೆಯನ್ನು ಜೂ.22ಕ್ಕೆ ಮುಂದೂಡಲಾಯಿತು. ನ್ಯಾಯಾಲಯದ ಸೂಚನೆ ಮೇರೆಗೆ ನಟಿ ಉಮಾಶ್ರೀ ಕೂಡ ವಿಚಾರಣೆಗೆ ಹಾಜರಾಗಿದ್ದರು.
ಏನಿದು ಪ್ರಕರಣ?: 2014ರಲ್ಲಿ ಸುದ್ದಿಗೋಷ್ಠಿಯೊಂದರಲ್ಲಿ ಉಮಾಶ್ರೀಯವರು, ಬಿಜೆಪಿಯವರನ್ನು ಮನೆಗೆ ಸೇರಿಸಬಾರದು. ಹಾಲಪ್ಪ ಅವರನ್ನು ಸ್ನೇಹಿತ ತನ್ನ ಮನೆಗೆ ಸೇರಿಸಿದ್ದಕ್ಕೆ ಅವರ ಪತ್ನಿ ಮೇಲೆಯೇ ಅತ್ಯಾಚಾರ ಮಾಡಿದ್ದಾರೆಂದು ಆರೋಪಿಸಿದ್ದರು.
ಈ ಹಿನ್ನೆಲೆಯಲ್ಲಿ ಉಮಾಶ್ರೀ ವಿರುದ್ಧ ಹಾಲಪ್ಪ ಅವರು ಸೊರಬದ ಜಿಲ್ಲಾ ಸತ್ರ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ನಂತರ ಈ ಪ್ರಕರಣ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವರ್ಗಾವಣೆಯಾಗಿತ್ತು.
You seem to have an Ad Blocker on.
To continue reading, please turn it off or whitelist Udayavani.