ಎಫ್ಎಸ್‌ಎಲ್‌ ವರದಿ ವಿಳಂಬದಿಂದ ತನಿಖೆಗೆ ತೊಡಕು


Team Udayavani, Oct 10, 2022, 1:18 PM IST

tdy-3

ಬೆಂಗಳೂರು: ರಾಜ್ಯದಲ್ಲಿ ಅಪರಾಧ ಪ್ರಕರಣಗಳ ಕುರಿತು ಸಾಕ್ಷ್ಯಾಧಾರ ಮಾಹಿತಿ ಕಲೆ ಹಾಕಲು ಮಹತ್ವದ ಪಾತ್ರ ವಹಿಸುವ ವಿಧಿ ವಿಜ್ಞಾನ ಪ್ರಯೋಗಾಲಯ ವರದಿ ವಿಳಂಬದಿಂದ ಶೇ.30 ಪ್ರಕರಣಗಳ ತನಿಖೆ ಕುಂಟುತ್ತಾ ಸಾಗುವಂತಾಗಿದೆ.

ಆಪರಾಧ ಪ್ರಕರಣಗಳಿಗೆ ತಕ್ಕಂತೆ ಪೊಲೀಸರು ನೀಡುವ ಸಾಕ್ಷ್ಯಾಧಾರದ ನೈಜತೆ ಪರಿಶೀಲಿಸಿ ತ್ವರಿತವಾಗಿ ವರದಿ ನೀಡಬೇಕಾಗಿರುವ ವಿಧಿ ವಿಜ್ಞಾನ ಪ್ರಯೋಗಾಲಯ (ಎಫ್ಎಸ್‌ಎಲ್‌) ಸಿಬ್ಬಂದಿ ಹಾಗೂ ಆಧುನಿಕ ತಂತ್ರಜ್ಞಾನದ ಕೊರತೆಯಿಂದ ವಿಳಂಬ ಮಾಡುತ್ತಿದೆ. ಹೀಗಾಗಿ, ಕೊಲೆ, ಅತ್ಯಾಚಾರ, ಅನುಮಾನಾಸ್ಪದ ಸಾವು, ರಸ್ತೆ ಅಪಘಾತ, ಮರಣೋತ್ತರ ಪರೀಕ್ಷಾ ವರದಿಗಳು, ನಕಲಿ ದಾಖಲೆ ಸೃಷ್ಟಿ, ಡಿಎನ್‌ಎ, ಮಾದಕ ವಸ್ತು ಸೇವನೆ, ಮೊಬೈಲ್‌ ದಾಖಲೆ, ವಿಡಿಯೋ- ಆಡಿಯೋ, ಸಿಸಿ ಕ್ಯಾಮರಾದಲ್ಲಿ ಸೆರೆಯಾಗುವ ದೃಶ್ಯಗಳಿಗೆ ಸಂಬಂಧಿಸಿದ ಗಂಭೀರ ಪ್ರಕರಣಗಳ ಪೈಕಿ ರಾಜಧಾನಿಯಲ್ಲೇ 5,052 ಕೇಸ್‌ಗಳು ಎಫ್ಎಸ್‌ ಎಲ್‌ ವರದಿಗಾಗಿ ಕಾದು ಕುಳಿತಿವೆ.

ಉಳಿದಂತೆ ಜಿಲ್ಲೆಗಳಲ್ಲಿ 1,300ಕ್ಕೂ ಅಧಿಕ ಪ್ರಕರಣಗಳಲ್ಲಿ ವರದಿ ನೀಡುವುದು ಬಾಕಿ ಇವೆ. ಎಫ್ ಎಸ್‌ಎಲ್‌ ವರದಿಯೇ ಈ ಪ್ರಕರಣಗಳಿಗೆ ಬಲವಾದ ಸಾಕ್ಷ್ಯಾಧಾರಗಳಾಗಿದ್ದು, ಇವುಗಳನ್ನು ಉಲ್ಲೇಖೀಸದಿದ್ದರೆ ನ್ಯಾಯಾಲಯದಲ್ಲಿ ಪ್ರಕರಣ ಖುಲಾಸೆಗೊಳ್ಳುವ ಸಾಧ್ಯತೆ ಹೆಚ್ಚಾಗಿವೆ. ಎಫ್ಎಸ್‌ಎಲ್‌ನಿಂದ ವಿಳಂಬವಾಗಿ ವರದಿ ಬರುತ್ತಿರುವ ಪರಿಣಾಮ ರಾಜ್ಯದಲ್ಲಿ ತನಿಖಾ ಹಂತದಲ್ಲಿರುವ ಶೇ.30 ಪ್ರಕರಣಗಳು ಮುಚ್ಚಿ ಹೋಗುತ್ತಿವೆ ಎಂದು ಪೊಲೀಸ್‌ ಅಧಿಕಾರಿಗಳು ಅಸಹಾಯಕತೆ ವ್ಯಕ್ತಪಡಿಸುತ್ತಾರೆ.

ಬೆಂಗಳೂರು, ದಾವಣಗೆರೆ, ಮಂಗಳೂರು, ಕಲುºರ್ಗಿ, ಬೆಳಗಾವಿ, ಮೈಸೂರು, ಹುಬ್ಬಳ್ಳಿ ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ತಲಾ 1 ಎಫ್ಎಸ್‌ಎಲ್‌ ಕೇಂದ್ರಗಳಿವೆ. ಆದರೆ, ಇವುಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನಗಳ ಸೌಲಭ್ಯ ಒದಗಿಸಿಲ್ಲ. ಹೀಗಾಗಿ ಕೆಲ ಸೂಕ್ಷ್ಮ ಪ್ರಕರಣಗಳಲ್ಲಿ ಹೈದ್ರಾಬಾದ್‌, ಡೆಹ್ರಡೂನ್‌ ಸೇರಿ ಹೊರ ರಾಜ್ಯಗಳಿಂದ ಎಫ್ಎಸ್‌ಎಲ್‌ ವರದಿ ತರಿಸಿಕೊಳ್ಳುವುದು ಅನಿವಾರ್ಯವಾಗಿದೆ. ಜತೆಗೆ, ಎಫ್ಎಸ್‌ಎಲ್‌ಗೆ 705 ಸಿಬ್ಬಂದಿ ಮಂಜೂರಾತಿ ನೀಡಲಾಗಿದೆ. ಈ ಪೈಕಿ 162 ಹುದ್ದೆಗಳು ಇನ್ನೂ ಖಾಲಿ ಇವೆ.

ಎಫ್ಎಸ್‌ಎಲ್‌ ಕಾರ್ಯ ವಿಧಾನ ಹೇಗೆ ? : ಕರ್ನಾಟದಲ್ಲಿ ಇದುವರೆಗೆ 15 ಸಾವಿರಕ್ಕೂ ಅಧಿಕ ಪ್ರಕರಣಗಳು ತನಿಖಾ ಹಂತದಲ್ಲಿವೆ. ಕೆಲ ಸೂಕ್ಷ್ಮ ಅಪರಾಧ ಪ್ರಕರಣಗಳಲ್ಲಿ ಪತ್ತೆಯಾಗುವ ಸಾಕ್ಷ್ಯಗಳನ್ನು ಪರಿಶೀಲನೆಗಳಿಗಾಗಿ ಎಫ್ಎಸ್‌ಎಲ್‌ಗೆ ಕಳುಹಿಸಲಾಗುತ್ತದೆ. ಸಂಬಂಧಿಸಿದ ಅಧಿಕಾರಿಗಳು ಈ ಸಾಕ್ಷ್ಯವನ್ನು ಪರಿಶೀಲಿಸಿ ಎಫ್ಎಸ್‌ಎಲ್‌ನ ಆಯಾ ವಿಭಾಗಕ್ಕೆ ರವಾನಿಸುತ್ತಾರೆ. ಪ್ರಕರಣದ ತನಿಖಾಧಿಕಾರಿಗಳು ದಾಖಲೆಯಲ್ಲಿ ಉಲ್ಲೇಖೀಸಿದ ಅಂಶಗಳ ಕುರಿತು ಇಲ್ಲಿನ ಸೈಂಟಿಫಿಕ್‌ ಅಧಿಕಾರಿಗಳು ತಂತ್ರಜ್ಞಾನದ ಸಹಾಯದಿಂದ ಕೂಲಂಕಷವಾಗಿ ಸಾಕ್ಷ್ಯಗಳಲ್ಲಿರುವ ಅಂಶಗಳನ್ನು ಪರಿಶೀಲಿಸುತ್ತಾರೆ. ಪರಿಶೀಲನೆ ವೇಳೆ ಕಂಡು ಬರುವ ಅಂಶಗಳ ಬಗ್ಗೆ ವರದಿಯಲ್ಲಿ ಉಲ್ಲೇಖೀಸಿ ಕೆಲ ಪ್ರಕ್ರಿಯೆಗಳ ಮೂಲಕ ತನಿಖಾಧಿಕಾರಿಗಳಿಗೆ ಕಳುಹಿಸುತ್ತಾರೆ. ಈ ವರದಿಯಲ್ಲಿ ಉಲ್ಲೇಖೀಸಿರುವ ಅಂಶಗಳನ್ನು ತೆಗೆದುಕೊಂಡು ತನಿಖಾಧಿಕಾರಿಗಳು ತನಿಖೆ ಮುಂದುವರೆಸುತ್ತಾರೆ.

ಪ್ರತಿ ಕೇಸ್‌ಗಳ ಎಫ್ಎಸ್‌ ಎಲ್‌ ವರದಿಯನ್ನು ತಿಂಗಳೊಳಗೆ ನೀಡಬೇಕೆಂಬುದು ನಮ್ಮ ಗುರಿ. ಈ ನಿಟ್ಟಿನಲ್ಲಿ ಕಳೆದ 2 ವರ್ಷಗಳಲ್ಲಿ ಸಾಕಷ್ಟು ಆಧುನಿಕ ತಂತ್ರಜ್ಞಾನಗಳನ್ನು ಅಳವಡಿಸಿ, ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಕ್ರಮ ನಡೆಯುತ್ತಿದೆ. -ಧರ್ಮೇಂದ್ರ ಕುಮಾರ್‌ ಮೀನಾ, ನಿರ್ದೇಶಕರು, ಎಫ್ಎಸ್‌ಎಲ್ ‌

 

-ಅವಿನಾಶ್‌ ಮೂಡಂಬಿಕಾನ

ಟಾಪ್ ನ್ಯೂಸ್

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

1-japp

Japan ಆ್ಯನಿಮೇಟೆಡ್‌ ರಾಮಾಯಣ ಅ.18ಕ್ಕೆ ಮರು ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.