ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ರಾಜ್ಯ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಪ್ರತಿಭಟನೆ

Team Udayavani, Nov 22, 2024, 6:25 AM IST

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಬೆಂಗಳೂರು: ಕಸ್ತೂರಿ ರಂಗನ್‌ ವರದಿ ತಿರಸ್ಕರಿಸುವಂತೆ ಆಗ್ರಹಿಸಿ ಕೇಂದ್ರ ಸರಕಾರದ ವಿರುದ್ಧ ರಾಜ್ಯ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ “ಬೆಂಗಳೂರು ಚಲೋ’ ಹೋರಾಟದ ಮೂಲಕ ನಗರದ ಫ್ರೀಡಂ ಪಾರ್ಕ್‌ನಲ್ಲಿ ಗುರುವಾರ ಆಗ್ರಹಿಸಿತು.

ಕಸ್ತೂರಿರಂಗನ್‌ ವರದಿ ಸಂಪೂರ್ಣವಾಗಿ ತಿರಸ್ಕರಿಸಬೇಕೆಂದು ಒತ್ತಾಯಿಸಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ ಪ್ರತಿಭಟನಕಾರರು ಕೇಂದ್ರ ಸರಕಾರದ ವಿರುದ್ಧ ಬೃಹತ್‌ ಪ್ರತಿಭಟನೆ ನಡೆಸಿದರು.

ಸಚಿವರಾದ ಎಚ್‌.ಕೆ. ಪಾಟೀಲ್ ಹಾಗೂ ಎಚ್‌.ಸಿ. ಮಹದೇವಪ್ಪ ಪ್ರತಿಭಟನ ಸ್ಥಳಕ್ಕೆ ಭೇಟಿ ಪ್ರತಿಭಟನ ನಿರತರ ಜತೆ ಸಮಾಲೋಚಿಸಿ ಸರಕಾರ ಬೇಡಿಕೆಗಳಿಗೆ ಸ್ಪಂದಿಸುವುದಾಗಿ ಭರವಸೆ ನೀಡಿದರು.

ವರದಿಯನ್ನು ಸಂಪೂರ್ಣವಾಗಿ ತಿರಸ್ಕರಿಸಲು ಕೇಂದ್ರದ ಮೇಲೆ ಒತ್ತಡ ತರಬೇಕು. ಅರಣ್ಯವಾಸಿಗಳ ಭೂಮಿಯ ಹಕ್ಕಿನ ಸಮಸ್ಯೆ ನಿವಾರಿಸಲು ಆಗ್ರಹಿಸುವಂತೆ ಆಗ್ರಹಿಸಿದರು. ಕಸ್ತೂರಿ ರಂಗನ್‌ ವರದಿ ಜಾರಿಯಾದಲ್ಲಿ ಅರಣ್ಯ, ಅರಣ್ಯದಂಚಿನ ನಿವಾಸಿಗಳ ಜೀವನದ ನೆಮ್ಮದಿ ಹಾಳಾಗಲಿದೆ ಎಂದು ಪ್ರತಿಭಟನ ನಿರತರು ಆತಂಕ ವ್ಯಕ್ತಪಡಿಸಿದರು. ಮುಂದೆ ದಿಲ್ಲಿ ಚಲೋ ಹೋರಾಟದ ಕುರಿತು ಪ್ರತಿಭಟನೆಯ ಮುಖಂಡರು ಘೋಷಿಸಿದರು.

ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ಮಾತನಾಡಿ, 33 ವರ್ಷಗಳಿಂದ ಹೋರಾಟ ನಿರಂತರವಾಗಿದೆ. ಮಲೆನಾಡು ಭಾಗದಲ್ಲಿ ಅತೀ ಹೆಚ್ಚು ಮಳೆ ಬೀಳುವುದರಿಂದ ಪ್ರಮುಖ ಬೆಳೆ ಏಲಕ್ಕಿ, ಕಾಫಿ, ಕಾಳು ಮೆಣಸು ಬೆಳೆ ಸಂಕಷ್ಟದಲ್ಲಿದ್ದು, ಬಹುತೇಕ ರೈತರು ಬೆಳೆ ನಷ್ಟ ಅನುಭವಿಸುತ್ತಿದ್ದಾರೆ. ಬಹುತೇಕ ರೈತರು ತಮ್ಮ ಜಮೀನುಗಳಲ್ಲಿ ಬ್ಯಾಂಕ್‌ಗ ಳಿಂದ‌ ಸಾಲ ಪಡೆದು ಹೋಂ ಸ್ಟೇಗಳನ್ನು ನಡೆಸಿ ತಮ್ಮ ಬದುಕು ಕಟ್ಟಿಕೊಂಡಿದ್ದಾರೆ. ಒಂದು ವೇಳೆ ಯೋಜನೆ ಜಾರಿಯಾದರೆ ಕೃಷಿ ಚಟುವಟಿಕೆ, ತೋಟ, ಹೋಂ ಸ್ಟೇಗಳನ್ನು ತೆರವುಗೊಳಿಸಬೇಕಾಗಿ ಬಂದು ಸಂಕಷ್ಟದಲ್ಲಿ ಸಿಲುಕಬೇಕಾಗುತ್ತದೆ ಎಂದರು.

ವರದಿ ಅನುಷ್ಠಾನವಾದರೆ ಪಶ್ಚಿಮ ಘಟ್ಟ ಹಾಗೂ ಮಲೆನಾಡು ಅತಿ ಸೂಕ್ಷ್ಮ ಪರಿಸರ ವಲಯವಾಗಿ ಪರಿವರ್ತನೆಯಾಗುತ್ತದೆ. ಇಲ್ಲಿ ಮಾನವ ಹಸ್ತಕ್ಷೇಪವನ್ನು ಮಾಡುವಂತೆಯೇ ಇಲ್ಲ. ಇಡೀ ಭೂ ಭಾಗ ಕೇಂದ್ರದ ಸುಪರ್ದಿಗೆ ಬರುತ್ತದೆ. ಆದಿವಾಸಿಗಳನ್ನು ಒಕ್ಕಲು ಎಬ್ಬಿಸಬೇಕಾಗುತ್ತದೆ. ಯಾವುದೇ ಕೈಗಾರಿಕೆ ನಡೆಸಲು ಕಷ್ಟ ಸಾಧ್ಯವಾಗಲಿದೆ. ಆದ್ದರಿಂದ ಕಸ್ತೂರಿರಂಗನ್‌ ವರದಿ ತಿರಸ್ಕರಿಸಬೇಕು ಎಂಬುದು ಪ್ರತಿಭಟನ ನಿರತರ ವಾದವಾಗಿದೆ.

ಅಧಿವೇಶನದಲ್ಲಿ ಚರ್ಚೆ
ಪ್ರತಿಭಟನ ಸ್ಥಳಕ್ಕೆ ಭೇಟಿ ನೀಡಿದ ಕಾನೂನು ಸಚಿವ ಎಚ್‌.ಕೆ. ಪಾಟೀಲ್ ಪ್ರತಿಭಟನೆ ನಿರತರನ್ನು ಉದ್ದೇಶಿಸಿ ಮಾತನಾಡಿ, ಕಸ್ತೂರಿ ರಂಗನ್‌ ವರದಿ ತಿರಸ್ಕರಿಸುವ ಹೋರಾಟಕ್ಕೆ ರಾಜ್ಯ ಸರಕಾರದ ಬೆಂಬಲ ವ್ಯಕ್ತಪಡಿಸಿದರು. ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಅರಣ್ಯ ಹಕ್ಕು ಕಾಯಿದೆಯಲ್ಲಿ ಇರುವ ಸಮಸ್ಯೆಗಳ ಕುರಿತು ತಜ್ಞರೊಂದಿಗೆ ಸಭೆ ನಡೆಸಲಾಗುವುದು ಎಂಬ ಭರವಸೆ ನೀಡಿದರು.

ಸಚಿವ ಎಚ್‌.ಸಿ. ಮಹಾದೇವಪ್ಪ ಮಾತನಾಡಿ, ಅರಣ್ಯ ಹಕ್ಕು ನೀಡುವ ವಿಚಾರದಲ್ಲಿ ಸರಕಾರವು ಸಕಾರಾತ್ಮಕ ನಿಲುವನ್ನು ತೆಗೆದುಕೊಳ್ಳಲಿದೆ ಎಂದು ಆಶ್ವಾಸನೆ ನೀಡಿದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.