Congress “ಹಳಿ ತಪ್ಪಿದ ಸಮನ್ವಯ’ ಕಾಂಗ್ರೆಸ್‌ಗೆ 2028ಕ್ಕೆ 2018ರ ಫ‌ಲಿತಾಶ!


Team Udayavani, Jul 12, 2024, 6:50 AM IST

“ಹಳಿ ತಪ್ಪಿದ ಸಮನ್ವಯ’ ಕಾಂಗ್ರೆಸ್‌ಗೆ 2028ಕ್ಕೆ 2018ರ ಫ‌ಲಿತಾಶ!

ಬೆಂಗಳೂರು: ಅಧಿಕಾರಕ್ಕೆ ಬಂದಾಗಿನಿಂದಲೂ ಸರಕಾರ ಮತ್ತು ಪಕ್ಷದ ನಡುವೆ ಸಮನ್ವಯ ಇಲ್ಲ. ಕಾರ್ಯಕರ್ತರನ್ನು ಸಂಪೂರ್ಣವಾಗಿ ಅವಗಣಿಸಲಾಗಿದೆ. ಇದೇ ಧೋರಣೆ ಮುಂದುವರಿದರೆ, 2018ರ ವಿಧಾನಸಭಾ ಚುನಾವಣ ಫ‌ಲಿತಾಂಶ ಮುಂಬರುವ 2028ರ ಚುನಾವಣೆಗಳಲ್ಲಿ ಪುನರಾವರ್ತನೆ ಆಗಲಿದೆ.

– ಇದು ಕಾಂಗ್ರೆಸ್‌ ಜಿಲ್ಲಾ ಘಟಕದ ಅಧ್ಯಕ್ಷರು ಎಐಸಿಸಿ ನೇಮಿಸಿದ ಸತ್ಯಶೋಧನ ಸಮಿತಿಗೆ ನೀಡಿದ ದೂರು.

ಲೋಕಸಭಾ ಚುನಾವಣೆ ಪೂರ್ವ ಮತ್ತು ಫ‌ಲಿತಾಂಶದ ಅನಂತರ ಆಡಳಿತಾರೂಢ ಕಾಂಗ್ರೆಸ್‌ನ ಬಣಗಳ ಬಡಿದಾಟ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿರುವ ಸಂದರ್ಭದಲ್ಲೇ ಗುರುವಾರ ಸ್ವತಃ ಸಮಿತಿ ಆಹ್ವಾನದ ಮೇರೆಗೆ ಭೇಟಿ ನೀಡಿದ ಶೇ. 70ಕ್ಕೂ ಅಧಿಕ ಜಿಲ್ಲಾ ಘಟಕಗಳ ಅಧ್ಯಕ್ಷರು, ಸರಕಾರ ಮತ್ತು ಪಕ್ಷದ ನಡುವಿನ “ಸಮನ್ವಯ ಕೊರತೆ’ ಬಗ್ಗೆ ಗಮನಸೆಳೆದರು. ಆ ಮೂಲಕ ಹೈಕಮಾಂಡ್‌ಗೆ ತಮ್ಮ ಸಂದೇಶ ತಲುಪಿಸುವ ಪ್ರಯತ್ನ ಮಾಡಿದರು.

ಒಂದೆಡೆ ಪಕ್ಷದ ರಾಷ್ಟ್ರೀಯ ನಾಯಕ ರಾಹುಲ್‌ ಗಾಂಧಿ ಅವರು, ಪಕ್ಷದ ಕಾರ್ಯಕರ್ತರನ್ನು ಯಾವುದೇ ಕಾರಣಕ್ಕೂ ನಿರ್ಲಕ್ಷಿಸಬೇಡಿ. ನಿಯಮಿತವಾಗಿ ಅವರ ಅಹವಾಲು ಆಲಿಸಬೇಕು ಎನ್ನುತ್ತಾರೆ. ಆದರೆ ಇಲ್ಲಿ ಸ್ಥಿತಿ ತದ್ವಿರುದ್ಧವಾಗಿದೆ. 2013- 2017ರಲ್ಲಿನ ವಾತಾವರಣವೇ ಕಂಡುಬರುತ್ತಿದೆ. ಸಚಿವರು ತಮಗೆ ಬೇಕಾದವರ ಕೆಲಸಗಳನ್ನು ಮಾಡಿಕೊಡುತ್ತಾರೆ ಎಂದು ದೂರಿದರು ಎನ್ನಲಾಗಿದೆ.

ಡಿಸಿಸಿಗಳನ್ನು ಪರಿಗಣಿಸಿ
ನಿಗಮ- ಮಂಡಳಿಗಳ ಅಧ್ಯಕ್ಷರು/ ಉಪಾಧ್ಯಕ್ಷರ ನೇಮಕ ಮಾಡುವಾಗ ಜಿಲ್ಲಾ ಕಾಂಗ್ರೆಸ್‌ ಸಮಿತಿಗಳನ್ನು ಪರಿಗಣಿಸಲೇ ಇಲ್ಲ. ನಾಯಕರೇ ತಮ್ಮ ಬಣಗಳಿಗೆ ಹಂಚಿಕೆ ಮಾಡಿಕೊಂಡರು. ಗ್ಯಾರಂಟಿ ಅನುಷ್ಠಾನ ಸಮಿತಿಗಳಲ್ಲೂ ಇದನ್ನು ಕಾಣಬಹುದು. ಗ್ಯಾರಂಟಿ ಫ‌ಲಾನುಭವಿ ಕುಟುಂಬಗಳಿಗೆ ಯೋಜನೆಗಳಿಂದಾದ ಅನುಕೂಲಗಳೇನು ಎಂಬ ಬಗ್ಗೆ ಜನರಿಗೆ ಮನ ದಟ್ಟು ಮಾಡುವ ಕೆಲಸ ಆಗಿಲ್ಲ. ಜಿಲ್ಲಾ ಕಾಂಗ್ರೆಸ್‌ ಸಮಿತಿಗಳಿಗೆ ಮನ್ನಣೆ ನೀಡುವ ಆವಶ್ಯಕತೆ ಇದೆ ಎಂದು ಜಿಲ್ಲಾಧ್ಯಕ್ಷರು ಆಗ್ರಹಿಸಿದರು.

ಹಲವು ನಾಯಕರ ಗೈರು
ಸ್ವತಃ ಎಐಸಿಸಿ ನೇಮಿಸಿದ ಸತ್ಯಶೋಧನ ಸಮಿತಿ ಕರೆದಿದ್ದ ಸಭೆಗೆ ಅರ್ಧಕ್ಕರ್ಧ ಸಚಿವರು, ಕೆಲವು ನಾಯಕರು ಗೈರುಹಾಜರಾಗಿದ್ದರು. ಜಿಲ್ಲಾ ಘಟಕಗಳ ಅಧ್ಯಕ್ಷರಲ್ಲಿಯೂ ಹಲವರು ಬಂದಿರಲಿಲ್ಲ. ಪೂರ್ವನಿಗದಿತ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಕೆಲವು ಸಚಿವರು, ಶಾಸಕರು ಗೈರುಹಾಜರಾಗಿದ್ದರು. ಇದನ್ನು ಕೆಪಿಸಿಸಿ ಗಮನಕ್ಕೂ ತಂದಿದ್ದರು ಎನ್ನಲಾಗಿದೆ. ಅವಕಾಶ ಸಿಕ್ಕರೆ, ಈ ಪೈಕಿ ಹಲವರು ಶುಕ್ರವಾರ ಸಮಿತಿಯನ್ನು ಭೇಟಿಯಾಗಿ ಅಭಿಪ್ರಾಯಗಳನ್ನು ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

 

ಟಾಪ್ ನ್ಯೂಸ್

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

Devegowda

Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್‌.ಡಿ.ದೇವೇಗೌಡ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1sadgu

Pariksha Pe Charcha: ಸಾರ್ಟ್‌ಫೋನ್‌ಗಿಂತಲೂ ನೀವು ಸಾರ್ಟ್‌ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.