CM ಕಾರ್ಯಕ್ರಮದಲ್ಲಿ ಕರ್ತವ್ಯ ಲೋಪ: ಸೆಸ್ಕ್ ಎಂಡಿ ಅಮಾನತು!
ಮುಖ್ಯಮಂತ್ರಿ ಆದಿಯಾಗಿ ಎಲರೂ ಮುಜಗರ ಅನುಭವಿಸಬೇಕಾಗಿತ್ತು...
Team Udayavani, Jan 24, 2024, 11:24 PM IST
ಮೈಸೂರು: ಪಿರಿಯಾಪಟ್ಟಣ ತಾಲೂಕು ಮುತ್ತಿನಮುಳಸೋಗೆ ಗ್ರಾಮದಲ್ಲಿ ಆಯೋಜಿಸಿದ್ದ ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಮರ್ಪಕ ವಿದ್ಯುತ್ ಪೂರೈಕೆಯಾಗುವಂತೆ ನೋಡಿಕೊಳ್ಳದ ಹಾಗೂ ಸ್ಥಳದಲ್ಲಿ ಹಾಜರಿಲ್ಲದ ಸೆಸ್ಕ್ ಎಂಡಿ ಸಿ.ಎನ್. ಶ್ರೀಧರ್ ಅವರನ್ನು ಅಮಾನತು ಮಾಡಲಾಗಿದೆ.
ಕಾರ್ಯಕ್ರಮದಲ್ಲಿ ಸ್ವಿಚ್ ಬಟನ್ ಒತ್ತುವ ಮೂಲಕ ಮೋಟರ್ ಆನ್ ಆಗುವ ವ್ಯವಸ್ಥೆ ಮಾಡಲಾಗಿತ್ತು. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ವಿಚ್ ಬಟನ್ ಒತ್ತಿದರೂ ಕಾರ್ಯನಿರ್ವಹಿಸಲಿಲ್ಲ. ಬಳಿಕ ಡಿಸಿಎಂ ಸ್ವಿಚ್ ಒತ್ತಿದರೂ ಆಗಲೂ ಕಾರ್ಯನಿರ್ವಹಿಸಲಿಲ್ಲ. ನಂತರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪನವರೂ ಪ್ರಯತ್ನಿಸಿದಾಗಲೂ ಆಗಲಿಲ್ಲ. ಇದರಿಂದ ಕೆಲಕಾಲ ಮುಖ್ಯಮಂತ್ರಿ ಆದಿಯಾಗಿ ಎಲರೂ ಮುಜಗರ ಅನುಭವಿಸುವಂತಾಯಿತು.
ಕೊನೆಗೆ ಸ್ಥಳದಲ್ಲಿದ್ದ ಇಂಜಿನಿಯರ್ಗಳು ತಾಂತ್ರಿಕ ಸಮಸ್ಯೆ ನಿವಾರಿಸಿದ ಬಳಿಕ ಸಿಎಂ ಯೋಜನೆಗೆ ಚಾಲನೆ ನೀಡಿದರು. ಬಳಿಕ ಅಲ್ಲಿಯೇ ಇದ್ದ ಜಿಲ್ಲಾಧಿಕಾರಿಗಳಲ್ಲಿ ಅವ್ಯವಸ್ಥೆ ಬಗ್ಗೆ ಮುಖ್ಯಮಂತ್ರಿಗಳು ಅಸಮಾಧಾನ ವ್ಯಕ್ತಪಡಿಸಿದ್ದರು. ಘಟನೆಯಾಗಿ ನಾಲ್ಕೈದು ಗಂಟೆಯ ಹೊತ್ತಿಗೆ ಕರ್ತವ್ಯ ಲೋಪ ಹಾಗೂ ಮುಖ್ಯಮಂತ್ರಿಗಳು ಭಾಗವಹಿಸಿರುವ ಕಾರ್ಯಕ್ರಮಕ್ಕೆ ಹಾಜರಾಗದ ಸೆಸ್ಕ್ ಎಂಡಿ ವಿರುದ್ಧ ಕ್ರಮಕೈಗೊಂಡಿದ್ದು, ಸಿಬಂದಿ ಮತ್ತು ಆಡಳಿತ ಸುಧಾರಣ ಇಲಾಖೆಯ ಸರ್ಕಾರದ ಅದೀನ ಕಾರ್ಯದರ್ಶಿ ಅಮಾನತು ಮಾಡಿ ಆದೇಶಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.