DK Shivkumar: ಕುಮಾರಸ್ವಾಮಿ ಆದಾಯ ತೆರಿಗೆ ಇಲಾಖೆ ಪ್ರತಿನಿಧಿಯೇನೂ ಅಲ್ಲ: ಡಿಕೆಶಿ ತಿರುಗೇಟು
Team Udayavani, Oct 14, 2023, 3:43 PM IST
ಬೆಂಗಳೂರು: ಐಟಿ ದಾಳಿ ವಿಚಾರವಾಗಿ ನನ್ನ ಹೆಸರು ತಳುಕು ಹಾಕಿ ಟೀಕೆ ಮಾಡುತ್ತಿರುವ ಕುಮಾರಸ್ವಾಮಿ ಆದಾಯ ತೆರಿಗೆ ಇಲಾಖೆಯ ಪ್ರತಿನಿಧಿಯೇನೂ ಅಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ.
ಐಟಿ ದಾಳಿ ಸಂಬಂಧ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಮಾಡುತ್ತಿರುವ ಆರೋಪದ ಬಗ್ಗೆ ಮಾತನಾಡಿದ ಅವರು “ಯಾರು ಏನು ಆರೋಪ ಮಾಡುತ್ತಾರೋ ಮಾಡಲಿ. ಆದಾಯ ಇಲಾಖೆ ಅಧಿಕಾರಿಗಳ ದಾಳಿ, ತನಿಖೆ ಮುಗಿದ ನಂತರ ತಮ್ಮ ಹೇಳಿಕೆಯನ್ನು ಪ್ರಕಟಿಸಲಿ. ಆನಂತರ ನಾನು ಪ್ರತಿಕ್ರಿಯೆ ನೀಡುತ್ತೇನೆ. ನನ್ನ ವಿರುದ್ಧ ಆರೋಪ ಮಾಡುತ್ತಿರುವ ಕುಮಾರಸ್ವಾಮಿ ಆಗಲಿ, ಬಿಜೆಪಿ ನಾಯಕರಾಗಲಿ ಆದಾಯ ಇಲಾಖೆ ಪ್ರತಿನಿಧಿಗಳೇನೂ ಅಲ್ಲ ಎಂದು ಕಿಡಿಕಾರಿದ್ದಾರೆ.
ಇನ್ನು ಮುಂದೆ ರಾಜ್ಯದಲ್ಲಿ ನಡೆಯಲಿರುವ ಐಟಿ ದಾಳಿಗಳು ಕುಮಾರಸ್ವಾಮಿ ಹಾಗೂ ಬಿಜೆಪಿ ಪ್ರೇರಿತ ದಾಳಿಯಾಗಲಿವೆಯೇ ಎಂದು ಕೇಳಿಡಾ ಪ್ರಶ್ನೆಗೆ ಉತ್ತರಿಸಿದ ಅವರು ಈ ವಿಚಾರವಾಗಿ ನಾನು ಈಗ ಏನನ್ನೂ ಹೇಳುವುದಿಲ್ಲ. ಈ ಹಿಂದೆ ಯಡಿಯೂರಪ್ಪ ಅವರ ಕಾಲದಲ್ಲಿ ಏನಾಯ್ತು? ಆಗ ಅವರಿಗೆ ಏನು ಸಿಕ್ಕಿದೆ? ಎಲ್ಲವೂ ದಾಖಲೆಗಳಲ್ಲಿ ಇವೆ. ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಖಲೆ ಬಿಡುಗಡೆ ಮಾಡಿದ ನಂತರ ಮಾತನಾಡೋಣ” ಎಂದರು.
ಇದನ್ನೂ ಓದಿ: Leo Movie: ಲಿಯೋದಿಂದ ಬಂತು ಪ್ರೀತಿಯ ಆಯುಧ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
ICC Womens T20 World Cup; ಪಾಕಿಸ್ಥಾನ ವಿರುದ್ಧ ಗೆಲುವಿನ ನಗೆ ಬೀರಿದ ಭಾರತ
Ambewadi ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಬೀಟೆ ಮರ ಕಡಿಯುತ್ತಿದ್ದ ಓರ್ವನ ಬಂಧನ
Cycle Ride: ಸಾಗುತ ದೂರ ದೂರ… ಬೆಂಗಳೂರು ಟು ಗೋವಾ ಸೈಕಲ್ ಸವಾರಿ
Kamanur village: ದಾರಿ ತೋರುವ ಮಾದರಿ ಗ್ರಾಮ
Bigg Boss: ಬಿಗ್ ಬಾಸ್ ಮಾಜಿ ಸ್ಪರ್ಧಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.