ಸಿದ್ದರಾಮಯ್ಯರನ್ನು ದಲಿತ ಕಾಲನಿಗೆ ಸೇರಿಸ್ಬೇಡಿ


Team Udayavani, Mar 26, 2017, 10:41 AM IST

bsy.jpg

ಮೈಸೂರು/ ನಂಜನಗೂಡು: ಪ್ರಾಮಾಣಿಕ ರಾಜಕಾರಣಿ ವಿ.ಶ್ರೀನಿವಾಸಪ್ರಸಾದ್‌ ಅವರನ್ನು ವಿನಾಕಾರಣ ಮಂತ್ರಿಮಂಡಲದಿಂದ ಕೈಬಿಟ್ಟು ಅಪಮಾನ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತವರ ಸಂಪುಟದ ಮಂತ್ರಿಗಳನ್ನು ದಲಿತ ಕಾಲನಿಗಳಿಗೆ ಬಿಟ್ಟು ಕೊಳ್ಳಬೇಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿ ಯೂರಪ್ಪಮನವಿ
ಮಾಡಿದರು. ಉಪ ಚುನಾವಣೆ ಹಿನ್ನೆಲೆಯಲ್ಲಿ ನಂಜನಗೂಡು ಕ್ಷೇತ್ರದ ದೇಬೂರು, ಶಿರಮಳ್ಳಿ, ಕುರಿಹುಂಡಿ, ಚಂದ್ರವಾಡಿ, ಹಾಡ್ಯ, ಹಂಚೀಪುರ ಗ್ರಾಮಗಳಲ್ಲಿ ಪಕ್ಷದ ಅಭ್ಯರ್ಥಿ ಶ್ರೀನಿವಾಸಪ್ರಸಾದ್‌ ಪರ ಚುನಾವಣಾ ಪ್ರಚಾರ ಸಭೆಗಳಲ್ಲಿ ಅವರು ಮಾತನಾಡಿದರು. ಚುನಾವಣಾ ಬಿಸಿ ಇನ್ನೂ ಶುರುವಾಗಿಲ್ಲ. ವಿಧಾನಮಂಡಲ ಅಧಿವೇಶನ ಮುಗಿದ ಮೇಲೆ ಸಿದ್ದರಾಮಯ್ಯ ಮತ್ತವರ ಇಡೀ ಸಂಪುಟವೇ ಎರಡೂ ಕ್ಷೇತ್ರಗಳಲ್ಲಿ ಠಿಕಾಣಿ ಹೂಡುತ್ತಾರೆ. ಹಣಬಲ, ಜಾತಿಯ ವಿಷಬೀಜ
ಬಿತ್ತಿ ಚುನಾವಣೆಯಲ್ಲಿ ಗೆಲ್ಲಲು ಸಿದ್ದರಾಮಯ್ಯ ಪ್ರಯತ್ನ ಮಾಡುತ್ತಿದ್ದಾರೆ ಎಂದು ವಾಗ್ಧಾಳಿ ನಡೆಸಿದರು.

ಬೆಂಕಿ ಮಹದೇವುಗೆ ಕಪಾಳಕ್ಕೆ ಹೊಡೆದು ಅಪಮಾನ ಮಾಡಿದ್ದ ಸಿದ್ದರಾಮಯ್ಯ ಈಗ ಅನುಕಂಪದ ಮೇಲೆ ಮತಕೇಳಲು
ಬರುತ್ತಿದ್ದಾರೆ. ಹಿರಿಯ ದಲಿತ ನಾಯಕರಾದ ಪ್ರಸಾದ್‌ ನಮ್ಮ ಜತೆ ಬಂದಿರುವಾಗ ಅವರನ್ನು ಗೆಲ್ಲಿಸದಿದ್ದರೆ, ರಾಜ್ಯದಲ್ಲಿ ಯಾವ ರೀತಿ ತಲೆ ಎತ್ತಿಕೊಂಡು ಓಡಾಡಲಿ, ಸಣ್ಣಪುಟ್ಟ ಬೇಸರಗಳನ್ನು ಬದಿಗಿಟ್ಟು ಪ್ರಸಾದ್‌ ಅವರನ್ನು ಗೆಲ್ಲಿಸಿ ಎಂದು ಮನವಿ ಮಾಡಿದರು.

ನಂಜನಗೂಡು ಸುತ್ತಮುತ್ತ ಪ್ರಚಾರ ಸಭೆಯಲ್ಲಿ ಮಾತನಾಡಿದ ಬಿಎಸ್‌ವೈ, ದಲಿತರು ಕಾಂಗ್ರೆಸ್‌ ಸೇರುವುದು ಒಂದೇ, ಆತ್ಮಹತ್ಯೆ ಮಾಡಿಕೊಳ್ಳುವುದೂ ಒಂದೇ ಎಂದು ಹೇಳಿದರು. ಈ ಮಾತನ್ನು ಸ್ವಾತಂತ್ರ್ಯ ಬಂದ ಕೆಲವೇ ವರ್ಷಗಳಲ್ಲಿ ಡಾ. ಬಿ. ಆರ್‌. ಅಂಬೇಡ್ಕರ್‌ ಅವರೇ ಹೇಳಿದ್ದರು. ಅಂಬೇಡ್ಕರರನ್ನು ಅಂದು ಬಳಸಿಕೊಂಡ ಕಾಂಗ್ರೆಸ್‌ ನಂತರ ಅವರ ವಿರುದ್ಧ ಪಿತೂರಿ ಮಾಡಿ ಅವರನ್ನು ಹೊರಹಾಕಿತು. ಕೊನೆಗೆ ಅವರ ಸೋಲಿಗೂ ಕಾರಣವಾಯಿತು ಎಂದು ಟೀಕಿಸಿದರು. 

ಸಿದ್ದು ಸಂಪುಟದ ಹಲವರು ಬಿಜೆಪಿ ಸಂಪರ್ಕದಲ್ಲಿದ್ದಾರೆ

ಮೈಸೂರು: ಕಾಂಗ್ರೆಸ್‌ ಆಡಳಿತ ತೊಲಗಬೇಕು, ಮೋದಿ ಶೈಲಿಯ ಆಡಳಿತವನ್ನು ರಾಜ್ಯದಲ್ಲೂ ಕಾಣಬೇಕೆಂಬ ಅಪೇಕ್ಷೆಗೆ ಪೂರಕವಾಗಿ ರಾಜ್ಯದಲ್ಲೂ ಬಿಜೆಪಿ ಪರ ರಾಜಕೀಯ ಧ್ರುವೀಕರಣ ಆಗುತ್ತಿದೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ತಿಳಿಸಿದರು. ನಂಜನಗೂಡು ಪಟ್ಟಣದ ದೊಡ್ಡ ಒಕ್ಕಲಗೇರಿಯಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀನಿವಾಸಪ್ರಸಾದ್‌ ಪರ ಮನೆ ಮನೆಗೆ ತೆರಳಿ ಮತಯಾಚಿಸಿದ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಎಸ್‌.
ಎಂ.ಕೃಷ್ಣ ಅವರಂಥ ನಾಯಕರು ಕಾಂಗ್ರೆಸ್‌ ಪಕ್ಷದ ವಿದ್ಯಮಾನಗಳಿಂದ ರೋಸಿ ಬಿಜೆಪಿ ಸೇರಿದ್ದಾರೆ.
ಅದೇ ಹಾದಿಯಲ್ಲಿ ಸಿದ್ದರಾಮಯ್ಯ ಸಂಪುಟದ ಹಲವರು ನಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆ. ಆದರೆ, ಇನ್ನೂ ಒಂದು ವರ್ಷ ಅಧಿಕಾರಾವಧಿ ಇರುವುದರಿಂದ ಈಗಲೇ ಪಕ್ಷ ಬಿಡಲಾಗದೆ ಸುಮ್ಮನಿದ್ದಾರೆ. ಜೆಡಿಎಸ್‌ನಿಂದಲೂ ಹಲವರು ಬಿಜೆಪಿಗೆ ಬರುವವರಿದ್ದಾರೆ. ಆದರೆ, ರಾಜಕೀಯ ಸೂಕ್ಷ್ಮತೆಗಳ ಕಾರಣಕ್ಕೆ ನಮ್ಮ ಸಂಪರ್ಕದಲ್ಲಿರುವವರ ಹೆಸರನ್ನು ಈಗಲೇ ಬಹಿರಂಗಪಡಿಸುವುದಿಲ್ಲ ಎಂದರು. ಬಿಜೆಪಿ ತೊರೆಯುವವರ ಪಟ್ಟಿ ನಮ್ಮ ಬಳಿ ಇದೆ ಎಂಬ ಗೃಹ ಸಚಿವ ಪರಮೇಶ್ವರ್‌ ಹೇಳಿಕೆಗೆ ತಿರುಗೇಟು ನೀಡಿದ ಸದಾನಂದಗೌಡ, ಗೃಹ ಸಚಿವರಾಗಿರುವ ನಿಮ್ಮ ಬಳಿಯೇ ಇಂಟಲಿಜೆನ್ಸ್‌
ಕೂಡ ಇದೆ. ಹಾಗಿದ್ದರೆ, ನಿಮ್ಮ ಪಟ್ಟಿಯಲ್ಲಿ ಎಸ್‌.ಎಂ.ಕೃಷ್ಣ, ಜಯಪ್ರಕಾಶ್‌ ಹೆಗ್ಡೆ, ದಿನಕರ ಶೆಟ್ಟಿ ಅವರ ಹೆಸರು ಕೂಡ ಇತ್ತಾ ಎಂದು ಪ್ರಶ್ನಿಸಿದರು.

ಟಾಪ್ ನ್ಯೂಸ್

ಮಮತಾ ಬ್ಯಾನರ್ಜಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ಬಂಗಾಳ ರಾಜ್ಯಪಾಲ

Defamation Case: ಮಮತಾ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ಬಂಗಾಳ ರಾಜ್ಯಪಾಲ ಬೋಸ್

6-honnavar

Tata Steel ಅಖಿಲ ಭಾರತ ವಿಶೇಷ ಚೇತನರ ಚೆಸ್ ಟೂರ್ನಿ; ಹೊನ್ನಾವರದ ಸಮರ್ಥ ಚಾಂಪಿಯನ್

5-kushtagi

Kushtagi: ಕೋತಿ ದಾಳಿಗೆ ಊರಿನ 15 ಜನರಿಗೆ ಗಾಯ; ಕೋತಿ ಸೆರೆಹಿಡಿಯಲು ಮುಂದಾದ ಅರಣ್ಯ ಇಲಾಖೆ

Ballari: ವಾಲ್ಮೀಕಿ ನಿಗಮದ ಪ್ರಕರಣ… ಎರಡನೇ ದಿನವೂ ಮುಂದುವರೆದ ಬಿಜೆಪಿ ಪ್ರತಿಭಟನೆ

Ballari: ವಾಲ್ಮೀಕಿ ನಿಗಮದ ಪ್ರಕರಣ… ಎರಡನೇ ದಿನವೂ ಮುಂದುವರೆದ ಬಿಜೆಪಿ ಪ್ರತಿಭಟನೆ

Mumbai-Nagpur ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 7 ಮಂದಿ ದುರ್ಮರಣ, ನಾಲ್ವರು ಗಂಭೀರ

Mumbai-Nagpur ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 7 ಮಂದಿ ದುರ್ಮರಣ, ನಾಲ್ವರು ಗಂಭೀರ

ಬಿಹಾರದಲ್ಲಿ ಕುಸಿದು ಬಿತ್ತು ಮತ್ತೊಂದು ಸೇತುವೆ… ಕಳೆದ 11 ದಿನದಲ್ಲಿ ನಡೆದ 5ನೇ ಪ್ರಕರಣ

Bihar: ಕುಸಿದು ಬಿತ್ತು ಮತ್ತೊಂದು ಸೇತುವೆ… ಕಳೆದ 9 ದಿನದಲ್ಲಿ ನಡೆದ 5ನೇ ಪ್ರಕರಣ

4-belthanagdy

Ujire: ಬೆಳ್ಳಂಬೆಳಗ್ಗೆ ಭೀಕರ ಅಪಘಾತ;ಪ್ರಜ್ವಲ್ ಕಾಂಪ್ಲೆಕ್ಸ್ ಮಾಲೀಕರ ಪುತ್ರ ಪ್ರಜ್ವಲ್ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ballari: ವಾಲ್ಮೀಕಿ ನಿಗಮದ ಪ್ರಕರಣ… ಎರಡನೇ ದಿನವೂ ಮುಂದುವರೆದ ಬಿಜೆಪಿ ಪ್ರತಿಭಟನೆ

Ballari: ವಾಲ್ಮೀಕಿ ನಿಗಮದ ಪ್ರಕರಣ… ಎರಡನೇ ದಿನವೂ ಮುಂದುವರೆದ ಬಿಜೆಪಿ ಪ್ರತಿಭಟನೆ

3-Shivamogga

Shivamogga: ಅಂಬ್ಯುಲೆನ್ಸ್ – ಬೈಕ್ ಅಪಘಾತ ; ಮೂವರು ಬೈಕ್ ಸವಾರರು ಸಾವು

2-gadag

Gadag: ಪೊಲೀಸರ ಮೇಲೆ‌ ಹಲ್ಲೆ ನಡೆಸಿ ಪರಾರಿಯಾದ ದುಷ್ಕರ್ಮಿಗಳು

Renukaswamy Case 5 ತಿಂಗಳಿನಿಂದ ಪವಿತ್ರಾಗೆ ಅಶ್ಲೀಲ ಸಂದೇಶ ಕಳುಹಿಸುತ್ತಿದ್ದ!

Renukaswamy Case 5 ತಿಂಗಳಿನಿಂದ ಪವಿತ್ರಾಗೆ ಅಶ್ಲೀಲ ಸಂದೇಶ ಕಳುಹಿಸುತ್ತಿದ್ದ!

Pen Drive Case: ಪ್ರಜ್ವಲ್‌ ಧ್ವನಿ ಬದಲಾಯಿಸಲು ಯತ್ನ

Pen Drive Case: ಪ್ರಜ್ವಲ್‌ ಧ್ವನಿ ಬದಲಾಯಿಸಲು ಯತ್ನ

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

ಮಮತಾ ಬ್ಯಾನರ್ಜಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ಬಂಗಾಳ ರಾಜ್ಯಪಾಲ

Defamation Case: ಮಮತಾ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ಬಂಗಾಳ ರಾಜ್ಯಪಾಲ ಬೋಸ್

6-honnavar

Tata Steel ಅಖಿಲ ಭಾರತ ವಿಶೇಷ ಚೇತನರ ಚೆಸ್ ಟೂರ್ನಿ; ಹೊನ್ನಾವರದ ಸಮರ್ಥ ಚಾಂಪಿಯನ್

5-kushtagi

Kushtagi: ಕೋತಿ ದಾಳಿಗೆ ಊರಿನ 15 ಜನರಿಗೆ ಗಾಯ; ಕೋತಿ ಸೆರೆಹಿಡಿಯಲು ಮುಂದಾದ ಅರಣ್ಯ ಇಲಾಖೆ

Ballari: ವಾಲ್ಮೀಕಿ ನಿಗಮದ ಪ್ರಕರಣ… ಎರಡನೇ ದಿನವೂ ಮುಂದುವರೆದ ಬಿಜೆಪಿ ಪ್ರತಿಭಟನೆ

Ballari: ವಾಲ್ಮೀಕಿ ನಿಗಮದ ಪ್ರಕರಣ… ಎರಡನೇ ದಿನವೂ ಮುಂದುವರೆದ ಬಿಜೆಪಿ ಪ್ರತಿಭಟನೆ

Mumbai-Nagpur ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 7 ಮಂದಿ ದುರ್ಮರಣ, ನಾಲ್ವರು ಗಂಭೀರ

Mumbai-Nagpur ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 7 ಮಂದಿ ದುರ್ಮರಣ, ನಾಲ್ವರು ಗಂಭೀರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.