![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Dec 31, 2021, 6:56 AM IST
ಬೆಂಗಳೂರು: ರಾಜ್ಯ ಒಕ್ಕಲಿಗರ ಸಂಘಕ್ಕೆ ಡಿ. 12ರಂದು ನಡೆದಿದ್ದ ಚುನಾವಣೆಯಲ್ಲಿ ಚಲಾವಣೆಗೊಂಡಿರುವ ಎಲ್ಲ ಮತಗಳ ಮರು ಎಣಿಕೆ ನಡೆಸಲು ನಿರ್ದೇಶಿಸುವಂತೆ ಕೋರಿ ಸಲ್ಲಿಕೆಯಾಗಿರುವ ತಕರಾರು ಅರ್ಜಿ ಸಂಬಂಧ ಸಂಘದ ಆಡಳಿತಾಧಿಕಾರಿ ಹಾಗೂ ಚುನಾವಣಾಧಿಕಾರಿಗೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ಮತ ಎಣಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಹೆಸರಘಟ್ಟ ಹೋಬಳಿಯ ಕಡತನಮಲೆ ಗ್ರಾಮದ ಕೆ.ಆರ್. ಸತೀಶ್ ಸೇರಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಮೂವರು ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಬಿ.ಎಂ. ಶ್ಯಾಮ್ ಪ್ರಸಾದ್ ಅವರಿದ್ದ ರಜಾಕಾಲದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತು.
ವಾದ ಆಲಿಸಿದ ನ್ಯಾಯಪೀಠ, ಅರ್ಜಿ ಸಂಬಂಧ ರಾಜ್ಯ ಒಕ್ಕಲಿಗರ ಸಂಘದ ಚುನಾವಣಾಧಿಕಾರಿ ಹಾಗೂ ಆಡಳಿತಾಧಿಕಾರಿಗೆ ನೋಟಿಸ್ ಜಾರಿಗೊಳಿತು. ಅಲ್ಲದೆ, ಸಂಘದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗೆ ತುರ್ತು ನೋಟಿಸ್ ಜಾರಿಗೊಳಿಸಿ ವಿಚಾರಣೆ ಮುಂದೂಡಿತು.
You seem to have an Ad Blocker on.
To continue reading, please turn it off or whitelist Udayavani.